ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿ ಬಳಿ ಮೊಬೈಲ್ ಪತ್ತೆ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಓರ್ವ ಕೈದಿಯ ಬಳಿ ಮೊಬೈಲ್ ಪತ್ತೆಯಾಗಿದೆ. ಡಾ. ಶರಣಪ್ಪ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ನಂತರ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೈಲುಗಳಲ್ಲಿ ಮೊಬೈಲ್ ಪತ್ತೆಯಾಗುವುದು ಗಂಭೀರ ವಿಚಾರವಾಗಿದ್ದು, ಇದು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Dattatraya Patil
- Updated on: Sep 10, 2026
- 11:49 am
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ; ಶಾಂತಾ ಹೊಸಮನಿ-ಮಮಿತಾ ಲಿಂಕ್ ಬಗ್ಗೆಯೂ ತನಿಖೆ
ಪಶು ವೈದ್ಯಾಧಿಕಾರಿ ಹುದ್ದೆ ಅಕ್ರಮದ ತನಿಖೆ ತೀವ್ರಗೊಳಿಸಿರುವ ಸಿಐಡಿ, ಕಲಬುರ್ಗಿಯ ಮಮಿತಾ ಮನೆ ಮೇಲೆ ದಾಳಿ ನಡೆಸಿದೆ. ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಮೂಲಕ ಮಮಿತಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದ್ದು, ನಾಪತ್ತೆಯಾಗಿರುವ ಶಾಂತಾ ಹೊಸಮನಿಗಾಗಿ ಹುಡುಕಾಟ ನಡೆಸಿರುವ ಸಿಐಡಿ, ಈ ಡೀಲ್ನ ಇನ್ನಷ್ಟು ಸುಳಿವುಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.
- Dattatraya Patil
- Updated on: Sep 9, 2026
- 4:48 pm
KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪರಿಂದ ಮತ್ತೊಂದು ಅಕ್ರಮ? ನಕಲಿ ದಾಖಲೆ ಸೃಷ್ಟಿಸಿ 27 ಎಕರೆ ಭೂಮಿ ಗುಳುಂ?
ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಸಂಬಂಧ ಹೈಕೋರ್ಟ್ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಬೆನ್ನಲ್ಲೇ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಬಂಧನದ ಭೀತಿ ಎದುರಾಗಿದೆ. ಮತ್ತೊಂದೆಡೆ ಅಳಿಯನ ಜೊತೆ ಸೇರಿ ನಕಲಿ ದಾಖಲೆ ಸೃಷ್ಟಿಸಿ 27 ಎಕರೆ ಭೂಮಿ ಕಬಳಿಸಿದ ಆರೋಪವೂ ಸಾಹುಕಾರ್ ಕೊರಳಿಗೆ ಸುತ್ತಿಕೊಂಡಿದ್ದು, ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.
- Dattatraya Patil
- Updated on: Sep 8, 2026
- 2:39 pm
RSS ಪಥಸಂಚನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್: ಸರ್ಕಾರಕ್ಕೆ ಹಿನ್ನಡೆ
ಆರ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಅಮಾನತುಗೊಂಡಿದ್ದ ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರ ಅಮಾನತು ರಾಜಕೀಯ ಸ್ವರೂಪ ಪಡೆದುಕೊಂಡು ಕೊನೆಗೆ ಕಾನೂನು ಹೋರಾಟ ನಡೆದಿದ್ದು, ಇದರಲ್ಲಿ ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
- Dattatraya Patil
- Updated on: Sep 3, 2026
- 5:39 pm
ಕಲಬುರಗಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು, 35 ಕ್ವಿಂಟಾಲ್ ಅಕ್ಕಿ ಜಪ್ತಿ: ಮಾಹಿತಿ ನೀಡಿದ್ದವನ ಮೇಲೆ ಹಲ್ಲೆ
ಕಲಬುರಗಿ ಜೇವರ್ಗಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 35 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾಹಿತಿ ನೀಡಿದ್ದರು. ಈ ಕಾರಣಕ್ಕೆ ಅವರ ಮೇಲೆ ಹಲ್ಲೆ ಮಾಡಲಾಗಿದೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಾಗಿದೆ.
- Dattatraya Patil
- Updated on: Sep 3, 2026
- 7:27 am
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ, ಆಗಿದ್ದೇನು?
ಮುಂಗಾರು ಕೈ ಕೊಟ್ಟ ಹಿನ್ನಲೆ ರಾಜ್ಯದಲ್ಲಿ ಭೀಕರ ಬರದ ಛಾಯೆ ಆವರಿಸಿದೆ. ಬರದಿಂದ ತತ್ತರಿಸಿದ ಕಲಬುರಗಿ ಜಿಲ್ಲೆಯನ್ನ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನಲೆಯಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಇಂದು (ಸೆಪ್ಟೆಂಬರ್ 02) ಜಿಲ್ಲಾ ಬಿಜೆಪಿ ಕೂಡ ಬರಪೀಡಿತ ಜಿಲ್ಲೆಗಾಗಿ ಆಗ್ರಹಿಸಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೋರಹಾಕಿದ್ದಾರೆ. ಈ ನಡುವೆ ಪ್ರತಿಭಟನೆ ನಡೆಯುವ ಜಾಗಕ್ಕೆ ಬಂದಿದ್ದ ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೊಡೆದು ಬಿಜೆಪಿ ಮಾಜಿ ಶಾಸಕ ಆಕ್ರೋಶ ಹೋರಹಾಕಿದ್ದಾರೆ. ಅಲ್ಲದೇ ಸವಾರನಿಗೆ ಧಮ್ಕಿ ಹಾಕಿ ದರ್ಪ ತೋರಿದ್ದಾರೆ.
- Dattatraya Patil
- Updated on: Sep 2, 2026
- 6:56 pm
ದಂಪತಿ ಕಲಹಕ್ಕೆ 4 ವರ್ಷ ಮಗು ಬಲಿ: ಮಗನನ್ನೇ ಕೊಂದು ಡ್ಯಾಂಗೆ ಬಿಸಾಡಿದ್ದ ತಂದೆ ಅರೆಸ್ಟ್
Kalaburagi Father kills son: ಕಲಬುರಗಿಯಲ್ಲಿ ಹೃದಯ ವಿದ್ರಾವಕ ಘಟನೆವೊಂದು ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ತನ್ನ 4 ವರ್ಷದ ಮಗನನ್ನು ನಾಗರಾಳ ಜಲಾಶಯಕ್ಕೆ ನೂಕಿ ತಂದೆ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಚಿಂಚೋಳಿ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
- Dattatraya Patil
- Updated on: Aug 28, 2026
- 3:54 pm
ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ರಕ್ಷಣೆ: ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ನೇಪಾಳದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಇಬ್ಬರು ಕನ್ನಡಿಗರನ್ನು ರಕ್ಷಣಾಪಡೆ ರಕ್ಷಣೆ ಮಾಡಿದೆ. ಮಲ್ಲಿನಾಥ್ ಕೊಲಕುಂದಿ ಹಾಗೂ ಸಂಗಮೇಶ್ ಕನಕಪುರ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇಬ್ಬರನ್ನೂ ದೆಹಲಿಗೆ ಕರೆತಂದು ಅಲ್ಲಿನ ಕರ್ನಾಟಕ ಭವನದಲ್ಲಿ ತಂಗಲು ವ್ಯವಸ್ಥೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.
- Dattatraya Patil
- Updated on: Aug 27, 2026
- 1:04 pm
ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧಿಗಳ ನಾಶ: ಸರ್ಕಾರಿ ಆಸ್ಪತ್ರೆ ನಡೆಗೆ ಸಾರ್ವಜನಿಕರ ಆಕ್ರೋಶ
ಕಲಬುರಗಿಯ ಅಫಜಲಪುರ ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳನ್ನು ನಾಶಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಡ ರೋಗಿಗಳಿಗೆ ನೀಡದೆ ಔಷಧಿ ಹಾಳುಮಾಡಿದ ವೈದ್ಯರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕಮಿಷನ್ ಆಸೆಗೆ ಬಡವರಿಗೆ ನೀಡಬೇಕಿದ್ದ ಔಷಧಿಗಳು ಹಾಳಾಗಿವೆ ಎಂಬ ಆರೋಪಗಳು ಕೇಳಿಬಂದಿವೆ.
- Dattatraya Patil
- Updated on: Aug 21, 2026
- 1:34 pm
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ! ವಿಡಿಯೋ ವೈರಲ್!
ಏ ಯಾರಲ್ಲಿ ಟಿಕೆಟ್... ಸರ್ಕಾರಿ ಶಾಲೆಯ ವಿದ್ಯಾರ್ಥಿ, ಸಾರಿಗೆ ಬಸ್ನಲ್ಲಿ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ನೀಡಿದ ವಿಡಿಯೋ ವೈರಲ್ ಆಗಿದೆ. ಕಲಬುರಗಿಯ ಸಿಟಿ ಬಸ್ ನಿಲ್ದಾಣದಿಂದ ಕಾಳಗಿ ಕಡೆಗೆ ಚಲಿಸುವ ಕೆಕೆಆರ್ ಟಿಸಿ ಬಸ್ ಕಂಡಕ್ಟರ್, ವಿದ್ಯಾರ್ಥಿಗೆ ಟಿಕೆಟ್ ವಿತರಿಸುವ ಕೆಲಸ ನೀಡಿದ್ದಾರೆ. ಕಾಳಗಿ ತಾಲ್ಲೂಕಿನ ಡಿಪೋಗೆ ಸೇರಿದ KA 28 F 2066 ನಂಬರಿನ ಬಸ್ ನಿರ್ವಾಹಕ ತಾನು ಟಿಕೆಟ್ ನೀಡುವುದು ಬಿಟ್ಟು ವಿದ್ಯಾರ್ಥಿಗೆ ಹಚ್ಚಿದ್ದು, ವಿದ್ಯಾರ್ಥಿಯು ಟಿಕೆಟ್ ಹಂಚಿಕೆ ಮಾಡುತ್ತಿರುವ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಫುಲ್ ವೈಲರ್ ಆಗಿದೆ.
- Dattatraya Patil
- Updated on: Aug 19, 2026
- 3:45 pm
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಕಲಬುರಗಿಯ ಮಾಶಾಳ ಮಠದ ಶ್ರೀ ಮರುಳಾರಾಧ್ಯ ಸ್ವಾಮೀಜಿ ಮದ್ಯದ ಬಾಟಲಿಯೊಂದಿಗೆ ಸಿನಿಮಾ ಹಾಡು ಹಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೂಜ್ಯ ಮಠದಲ್ಲಿ ಪವಿತ್ರ ಶ್ರಾವಣ ಮಾಸದಲ್ಲಿ ನಡೆದ ಈ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಖಡ್ಗದ ಹೇಳಿಕೆಯಿಂದ ವಿವಾದ ಸೃಷ್ಟಿಸಿದ್ದ ಸ್ವಾಮೀಜಿಯ ನಡೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
- Dattatraya Patil
- Updated on: Aug 17, 2026
- 6:44 pm
ಕಲಬುರಗಿಯಲ್ಲಿ ದೇಶವಿರೋಧಿ ಕೃತ್ಯ ಎಸಗುತ್ತಿದ್ದ ಮಹಮ್ಮದ್ ಸಮೀರ್ ಬಂಧನ: ತನಿಖೆ ವೇಳೆ ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು
ಕಲಬುರಗಿಯಲ್ಲಿ ಮಹಮ್ಮದ್ ಸಮೀರ್ (23) ಎಂಬಾತನನ್ನು ದೇಶವಿರೋಧಿ ಚಟುವಟಿಕೆಗಳಿಗಾಗಿ ಬಂಧಿಸಲಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ, ವಿದೇಶಿ ಮೊಬೈಲ್ ಸಂಖ್ಯೆಗಳ ಬಳಕೆ ಹಾಗೂ ದೇಶದ ಅಖಂಡತೆಗೆ ಧಕ್ಕೆ ತರುವಂತಹ ವಿಡಿಯೋಗಳನ್ನು ಹಂಚಿಕೊಂಡ ಆರೋಪ ಎದುರಿಸುತ್ತಿದ್ದಾನೆ. ಕಲಬುರಗಿ ಪೊಲೀಸರು ಈ ಜಾಲವನ್ನು ಪತ್ತೆಹಚ್ಚಿ ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ರವಾನಿಸಲಾಗಿದೆ.
- Dattatraya Patil
- Updated on: Aug 14, 2026
- 9:27 am