ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ
ಕಲಬುರಗಿಯ ಬಡ ಜನರಿಗಾಗಿ ಇರುವ ಕಿದ್ವಾಯಿ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ ಎ.ಸಿ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ವೈದ್ಯರೇ ಎ.ಸಿಗಳನ್ನು ತಮ್ಮ ನಿವಾಸಕ್ಕೆ ಬಳಸಿದ್ದಾರೆ. ಅಷ್ಟೇ ಅಲ್ಲದೆ ಔಷಧಿಗಳನ್ನೂ ಕದ್ದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಈ ಕುರಿತು ಬಿಜೆಪಿ ಸಮಗ್ರ ತನಿಖೆಗೆ ಆಗ್ರಹಿಸಿದೆ.
- Dattatraya Patil
- Updated on: Dec 22, 2025
- 6:42 pm
ಮನರೇಗಾ ಯೋಜನೆ ಹೆಸರು ಬದಲಾವಣೆ: ಕೇಂದ್ರದ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಜಿ-ರಾಮ್ ಜಿ ಬಿಲ್ ತಂದಿರುವುದು ದೇಶದ ಬಡ ಜನರಿಗೆ ತೊಂದರೆ ನೀಡಿದೆ. ಕಾರ್ಮಿಕರ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದಿದ್ದಾರೆ.
- Dattatraya Patil
- Updated on: Dec 21, 2025
- 1:43 pm
ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಕಲಬುರಗಿ ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮನೆಯ ಆವರಣದಲ್ಲೇ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ಸಂಬಂಧ ಫರಹತಾಬಾದ್ ಪೊಲೀಸರು ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
- Dattatraya Patil
- Updated on: Dec 20, 2025
- 2:34 pm
ಖರ್ಗೆ ತವರಲ್ಲೇ ಇದೆಂಥಾ ಅಕ್ರಮ? ಟೆಂಡರ್ ಇಲ್ಲದೇ 2 ಕೋಟಿ ರೂ. ರಸ್ತೆ ಕಾಮಗಾರಿ! ಗುತ್ತಿಗೆದಾರರಿಗೆ ಶಾಕ್
ಸಾಮನ್ಯವಾಗಿ ಒಂದು ರಸ್ತೆ ಕಾಮಗಾರಿ ಅಂದರೆ ಅದಕ್ಕೆ ಟೆಂಡರ್ ಆಗಬೇಕು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಪ್ರಕ್ರಿಯೆ ಮುಗಿಯುವ ಮೊದಲೇ ರಸ್ತೆ ನಿರ್ಮಾಣವಾಗಿದೆ. ಇದು, ಅಧಿಕಾರಿಗಳು ಲಂಚದಾಸಗೆ ಗುತ್ತಿಗೆ ನೀಡದೆ ಕಾಮಗಾರಿ ಮಾಡಿಸಿದರಾ ಎಂಬ ಅನುಮಾನಕ್ಕೆ ಕಾರಣವಾಗಿದೆ.
- Dattatraya Patil
- Updated on: Dec 17, 2025
- 7:10 am
ಭರ್ಜರಿ ಕಾರ್ಯಚರಣೆ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ
ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಜಿಲ್ಲೆಯ ಶಹಾಬಾದ್ ಹಾಗೂ ಜೇವರ್ಗಿ ಠಾಣೆಯಲ್ಲಿ ದಾಖಲಾಗಿದ್ದ 4 ಪ್ರತ್ಯೇಕ ಕಳ್ಳತನದಲ್ಲಿ 6 ಆರೋಪಿಗಳನ್ನು ಬಂಧಿಸುವ ಮೂಲಕ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
- Dattatraya Patil
- Updated on: Dec 15, 2025
- 4:35 pm
ಆಳಂದ ಮತಗಳ್ಳತನ ಪ್ರಕರಣ: ಎಸ್ಐಟಿ ಚಾರ್ಜ್ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು ನೋಡಿ
ಆಳಂದ ಮತಗಳ್ಳತನ ಪ್ರಕರಣ ಸಂಬಂಧ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ, ಇದು ಆಡಳಿತಾರೂಢ ಕಾಂಗ್ರೆಸ್ನ ಕುತಂತ್ರ ಎಂದು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹಾಗೂ ಅವರ ಪುತ್ರ ಹರ್ಷಾನಂದ್ ಗುತ್ತೆದಾರ್ ಟೀಕಿಸಿದ್ದಾರೆ. ಇವರಿಬ್ಬರೂ ಸೇರಿದಂತೆ ಒಟ್ಟು 7 ಮಂದಿಯ ಹೆಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
- Dattatraya Patil
- Updated on: Dec 13, 2025
- 10:48 am
ಕಳ್ಳತನದ ದಿಕ್ಕನ್ನೇ ಬದಲಾಯಿಸಿತು ಅದೊಂದು ಘಟನೆ: ಕಲಬುರಗಿಯಲ್ಲಿ ವಿಚಿತ್ರ ಕಳ್ಳ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಕುಡಿತದ ಚಟಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದ ಖತರ್ನಾಕ್ ಕಳ್ಳ ಸದ್ಯ ಕಲಬುರಗಿ ಪೊಲೀಸರ ಕೈಗೆ ಸಿಲುಕಿ ಕಂಬಿ ಎಣಿಸುವಂತಾಗಿದೆ. ಅಸಲಿಗೆ ಬಂಧಿತ ಆಸಾವಿ ಮಹಾರಾಷ್ಟ್ರದಿಂದ ಕನ್ಯಾಕುಮಾರಿಗೆ ಕಳ್ಳತನ ಮಾಡಲು ಹೊರಟಿದ್ದ. ಆದರೆ ದಾರಿ ಮಧ್ಯೆ ನಡೆದ ಅದೊಂದು ಘಟನೆ ಕಳ್ಳತನದ ದಿಕ್ಕನ್ನೇ ಬದಲಾಯಿಸಿತು.
- Dattatraya Patil
- Updated on: Dec 11, 2025
- 8:48 pm
ಕಲಬುರಗಿಯಲ್ಲಿ 2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು
ಕಲಬುರಗಿ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಎರಡು ಸರ್ಕಾರಿ ಬಸ್ ಮತ್ತು ಜೀಪ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
- Dattatraya Patil
- Updated on: Dec 11, 2025
- 5:24 pm
ಮೋಹರಂ ಮುಗಿದ್ರೂ ಗಲಾಟೆ ಮುಗಿದಿಲ್ಲ: ಅಂತಿಮವಾಗಿ ಮೌಲ್ವಿ ಕೊಲೆಯಲ್ಲಿ ಅಂತ್ಯ
ಮೊಹರಂ ಹಬ್ಬ ಇಂದಿಗೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಭಾವೈಕ್ಯತೆ ಸಾರುವ ಹಬ್ಬವನ್ನಾಗಿ ಆಚರಿಸುತ್ತಾರೆ. ಮೋಹರಂ ಹಬ್ಬದಲ್ಲಿ ಪೀರ್ ಹಿಡಿಯುವ ವಿಚಾರದಲ್ಲಿ ಶುರುವಾದ ಗಲಾಟೆ ಹಬ್ಬ ಮುಗಿದು ತಿಂಗಳುಗಳೆ ಕಳೆದ್ರು ಗಲಾಟೆ ಮಾತ್ರ ಮುಗಿದಿರಲಿಲ್ಲ.ಆದ್ರೆ ಈ ಬಾರಿ ಸ್ವಲ್ಪ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮೋಹರಂ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.
- Dattatraya Patil
- Updated on: Dec 7, 2025
- 7:36 pm
ಮಹಿಳೆ ಜತೆ ಲಿವಿಂಗ್ ರಿಲೇಶನ್ ಶಿಪ್: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು
ಸಾಮಾನ್ಯವಾಗಿ ಮೋಜು ಮಸ್ತಿಗಾಗಿ ಅದಕ್ಕೂ ಮಿಗಿಲಾಗಿ ಮಾಡಿದ ಸಾಲವನ್ನ ತೀರಿಸಲು ಕಳ್ಳತನ, ಸುಲಿಗೆ ಮಾಡಿದ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಗೆಳೆತಿಯೊಂದಿಗೆ ಲಿವಿಂಗ್ ಟೂಗೆದರ್ಗಾಗಿ ಹಣ ಹೊಂದಿಸಲು ಕೂಲಿ ಕೆಲಸಕ್ಕೆಂದು ಹೋಗ್ತಿದ್ದ ಮಹಿಳೆಯರನ್ನ ಸುಲಿಗೆ ಮಾಡಿ ಖಾಕಿ ಕೈಗೆ ತಗಲಾಕೊಂಡಿದ್ದಾನೆ. ಅಷ್ಟಕ್ಕೂ ಖದೀಮನ ಸುಲಿಗೆ ಕೆಲಸ ಹೇಗಿತ್ತು ಎನ್ನುವ ವಿವರ ಇಲ್ಲಿದೆ.
- Dattatraya Patil
- Updated on: Dec 4, 2025
- 9:07 pm
ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
ಗೋವುಗಳನ್ನ ಸಾಗಿಸುತ್ತಿದ್ದ ಲಾರಿಯನ್ನ ತಡೆದು ಪರಿಶೀಲನೆ ಮಾಡಿದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ನಡೆದಿದೆ. ಅಫಜಲಪುರದಿಂದ ಆಳಂದ ಕಡೆಗೆ ತೆರಳುತ್ತಿದ್ದ ಗೋವು ತುಂಬಿದ್ದ ಲಾರಿಯನ್ನು ರೋಹಿತ್ ಮತ್ತು ಅನೀಲ್ ತಡೆ ನಿಲ್ಲಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿಯಾಗಿದೆ. ದಾಖಲಾತಿ ಜೊತೆಗೆ ಅನುಮತಿ ಪಡೆದು ಗೋವು ಸಾಗಾಟ ಮಾಡುತ್ತಿರುವ ಗಾಡಿಯನ್ನ ತಡೆಯುತ್ತಿರಾ ಎಂದು ರೋಹಿತ್ ಮತ್ತು ಅನೀಲ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ
- Dattatraya Patil
- Updated on: Nov 26, 2025
- 7:46 pm
ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ನೋಡಿ
ಕಲಬುರಗಿಯಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಜೆವರಗಿ ಬೈಪಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಸೇರಿದಂತೆ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ಎಂಬ ವಿಡಿಯೋ ಇಲ್ಲಿದೆ ನೋಡಿ.
- Dattatraya Patil
- Updated on: Nov 26, 2025
- 10:44 am