ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಭದ್ರತಾ ವ್ಯವಸ್ಥೆಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಜೈಲು ಆವರಣದ ಬ್ಯಾರಕ್ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಯ ನೆರವಿನಿಂದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
- Dattatraya Patil
- Updated on: Jul 14, 2026
- 11:22 am
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ
ಕಲಬುರಗಿಯಲ್ಲಿ ಕುಡಿಯುವ ನೀರಿನ ಯೋಜನೆ ವಿಳಂಬ ಮತ್ತು ರಸ್ತೆಗಳ ದುರಸ್ತಿ ಕಾರ್ಯದ ನಿರ್ಲಕ್ಷ್ಯದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಪ್ರತಿಕ್ರಿಯಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ವ್ಯವಸ್ಥಿತ ನಂಬರ್ಗಳನ್ನು ಒದಗಿಸುವಂತೆ ಕಲಬುರಗಿ ನಗರದ ಜಲಭವನದಲ್ಲಿ ನಡೆದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ.
- Dattatraya Patil
- Updated on: Jul 13, 2026
- 7:13 pm
ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮತ್ತೊಂದು ಅಧ್ವಾನ: ಬಿಸಿಯೂಟದ ಬೇಳೆ, ಅಕ್ಕಿಯಲ್ಲಿ ಹುಳುಗಳದ್ದೇ ರಾಶಿ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದ ಅಕ್ಕಿ ಹಾಗೂ ಬೇಳೆಯಲ್ಲಿ ಹುಳುಗಳ ರಾಶಿ ಪತ್ತೆಯಾಗಿದೆ. ‘ಟಿವಿ9’ ರಿಯಾಲಿಟಿ ಚೆಕ್ ವೇಳೆ ಈ ಕರ್ಮಕಾಂಡ ಬಯಲಾಗಿದೆ. ಇತ್ತೀಚೆಗಷ್ಟೇ ಕಲಬುರಗಿಯಲ್ಲಿ ಕೆಕೆಆರ್ಟಿಸಿ ಬಸ್ ಹೆಡ್ಲೈಟ್ ಕೆಟ್ಟುಹೋಗಿ ಮೊಬೈಲ್ ಟಾರ್ಚ್ ನೆರವಿನಿಂದ ಬಸ್ ಚಲಾಯಿಸಿದ್ದು ವ್ಯಾಪಕ ಚೆರ್ಚೆಗೆ ಗ್ರಾಸವಾಗಿತ್ತು.
- Dattatraya Patil
- Updated on: Jul 10, 2026
- 7:38 am
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕಲಬುರಗಿ ಜನರ ಆರಾಧ್ಯ ದೈವ ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಸಿಎಂ ಭೇಟಿಯಾಗಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಿಎಂಗೆ ಸಾಥ್ ನೀಡಿದ್ದಾರೆ.
- Dattatraya Patil
- Updated on: Jul 7, 2026
- 12:10 pm
ಹುಷಾರ್! ಮಹಿಳೆಯರ ಸುರಕ್ಷತೆಗೆ ಟೊಂಕ ಕಟ್ಟಿದ ‘ಅಕ್ಕ ಪಡೆ’: ಏನಿದು ಯೋಜನೆ?
ಬೀದರ್ನ ಬಸವಕಲ್ಯಾಣದಲ್ಲಿ ಸಿಎಂ ಡಿಕೆ ಶಿವಕುಮಾರ್ ಅಕ್ಕ ಪಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಕ್ಕ ಪಡೆ ಪ್ರತಿ ಪಂಚಾಯಿತಿಗೆ ವಿಸ್ತರಿಸುವಂತೆ ಕರೆ ನೀಡಿದರು. ಹಾಗಾದರೆ ಏನಿದು ಅಕ್ಕ ಪಡೆ, ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಈ ಯೋಜನೆಯ ಉದ್ದೇಶವೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Dattatraya Patil
- Updated on: Jul 6, 2026
- 8:26 pm
ಕಲಬುರಗಿ: ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಚಾಲನೆ, ಮೂವರು ಸಸ್ಪೆಂಡ್
ಸಾರಿಗೆ ಬಸ್ನ ಹೆಡ್ಲೈಟ್ಗಳು ಕಾರ್ಯನಿರ್ವಹಿಸದೆ, ಮೊಬೈಲ್ ಟಾರ್ಚ್ನೊಂದಿಗೆ ಬಸ್ ಚಲಾಯಿಸಿದ ವಿಡಿಯೋವೊಂದು ವೈರಲ್ ಆಗಿದೆ. ಕಲಬುರಗಿಯಲ್ಲಿ ಕೆಕೆಆರ್ಟಿಸಿ ಬಸ್ಸೊಂದರ ಹೆಡ್ಲೈಟ್ ಕೆಟ್ಟುಹೋದಾಗ, ನಿರ್ವಾಹಕ ಮೊಬೈಲ್ ಟಾರ್ಚ್ ಹಿಡಿದು ದಾರಿ ತೋರಿಸುತ್ತಿದ್ದರೆ, ಚಾಲಕ ಕತ್ತಲಲ್ಲೇ ಬಸ್ ಚಲಾಯಿಸಿ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದ್ದಾರೆ. ಈ ಘಟನೆಯು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ನಿರ್ಲಕ್ಷ್ಯ ವಹಿಸಿದ ಚಾಲಕ ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
- Dattatraya Patil
- Updated on: Jul 6, 2026
- 5:38 pm
ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್ ಖರ್ಗೆ
ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಶೇ.40ರಷ್ಟು ಕಮಿಷನ್ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಆರೋಪಿಸಿದ್ದಾರೆ. ನಿರ್ಮಾಣ ಉಸ್ತುವಾರಿ ಗೋಪಾಲ್ ಜಿ ತಮ್ಮ ಅಳಿಯನಿಗೆ ಗುತ್ತಿಗೆ ನೀಡಿದ್ದಾರೆ. ಬಿಜೆಪಿ ಈ ಕಮಿಷನ್ ಹಗರಣಕ್ಕೆ ಕಾರಣವಾಗಿದೆ ಎಂದು ಹೇಳಿದ ಖರ್ಗೆ, ರಾಮಮಂದಿರ ಟ್ರಸ್ಟ್ ಸದಸ್ಯರು ಆರ್ಎಸ್ಎಸ್ ತರಬೇತಿ ಪಡೆದಿದವರು ಎಂದು ತಿಳಿಸಿದ್ದಾರೆ.
- Dattatraya Patil
- Updated on: Jul 6, 2026
- 12:43 pm
ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
Priyank Kharge: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಸಂಘಟನೆಯ ನೋಂದಣಿ ಹಾಗೂ ದೇಣಿಗೆ ಕುರಿತು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್ ಮಾಡಿ. ಅವಾಗ ಐಟಿ,ಇಡಿಯವರು ಸುಮ್ನೆ ಕೂರುತ್ತಾರಾ? ಎಂದೂ ಅವರು ಪ್ರಶ್ನಿಸಿದ್ದಾರೆ.
- Dattatraya Patil
- Updated on: Jul 6, 2026
- 11:55 am
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್: ಹೆಡ್ಲೈಟ್ ಇಲ್ಲದೆ 90 ಕಿ.ಮೀ ಪ್ರಯಾಣ!
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡ್ರೈವರ್ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿದ್ದಾರೆ. 15 ದಿನಗಳಿಂದ ಹೆಡ್ಲೈಟ್ ಕೆಟ್ಟು ಹೋಗಿದ್ದರೂ ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುವ ಈ ಬಸ್ನಲ್ಲಿ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Dattatraya Patil
- Updated on: Jul 5, 2026
- 9:47 am
ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೊಲೀಸರ ಘೋರ ನಿರ್ಲಕ್ಷ್ಯದಿಂದಾಗಿ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಮಧ್ಯರಾತ್ರಿ ಕೈಕೋಳ ಬಿಚ್ಚಿ, ಠಾಣೆಯಿಂದಲೇ ಪರಾರಿಯಾಗಿದ್ದಾನೆ. ಇಡೀ ಠಾಣೆಯ ಸಿಬ್ಬಂದಿ ನಿದ್ರೆಗೆ ಜಾರಿದ್ದನ್ನು ಗಮನಿಸಿ ಆರೋಪಿ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಪೊಲೀಸರಿಗೆ ತೀವ್ರ ಮುಜುಗರ ಉಂಟುಮಾಡಿದೆ.
- Dattatraya Patil
- Updated on: Jul 3, 2026
- 9:47 am
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು (Kalaburagi) ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ರೌಡಿ ಪರೇಡ್ ನಡೆಸಿದ್ದು, ರೌಡಿಸಂ ಬಿಡಬೇಕು ಇಲ್ಲಾಂದ್ರೆ ನಮ್ಮಿಂದ ಅಕ್ಷನ್ ಆಗಿ ಹೋಗ್ತಿಯಾ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
- Dattatraya Patil
- Updated on: Jul 1, 2026
- 4:47 pm
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಜೀವನಾಡಿ ಭೀಮಾ ನದಿ ಮುಂಗಾರು ಮಳೆ ಇಲ್ಲದೆ ಸಂಪೂರ್ಣ ಬರಿದಾಗಿದೆ. ಕಳೆದ 20 ದಿನಗಳಿಂದ ಮಳೆ ಕೈಕೊಟ್ಟಿದ್ದು, ತೀವ್ರ ಬರಗಾಲದ ಛಾಯೆ ಆವರಿಸಿದೆ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ.
- Dattatraya Patil
- Updated on: Jun 26, 2026
- 1:56 pm