ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್ಗೆ ಸಚಿವ ಸ್ಥಾನ, ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು
ಜೇವರ್ಗಿಯ ಶಾಸಕ ಅಜಯ್ ಸಿಂಗ್ಗೆ ಸಚಿವ ಸ್ಥಾನ ಲಭಿಸಿದ್ದು, ತಾಯಿ ಪ್ರಭಾವತಿ ಧರ್ಮಸಿಂಗ್ ಸಂತೋಷದ ಕಣ್ಣೀರನ್ನ ಸುರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರನಿಗೆ ಸಚಿವಗಿರಿ ಸಿಕ್ಕಿದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು ಹೊರತುಪಡಿಸಿದರೆ, ಕಲಬುರಗಿಗೆ ಮೂರು ಸಚಿವ ಸ್ಥಾನಗಳ ಮೂಲಕ ಈ ಬಾರಿ ಬಂಪರ್ ಲಭಿಸಿದೆ.
- Dattatraya Patil
- Updated on: Aug 3, 2026
- 3:18 pm
“ನಮ್ಮ ಶಾಲೆಗೆ ರಸ್ತೆ ಮಾಡಿಸಿಕೊಡಿ”: ಯಡ್ರಾಮಿಯಲ್ಲಿ ಅಧಿಕಾರಿಗಳ ವಿರುದ್ಧ ಶಾಲಾ ಮಕ್ಕಳ ಆಕ್ರೋಶ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ವಸ್ತಾರಿ ಗ್ರಾಮದಲ್ಲಿ ಶಾಲಾ ಮಕ್ಕಳು ಕೆಸರು ರಸ್ತೆಯಲ್ಲೇ ಸಂಕಷ್ಟ ಪಟ್ಟು ಶಾಲೆಗೆ ತೆರಳುತ್ತಿದ್ದಾರೆ. ನೂತನ ಪ್ರೌಢಶಾಲೆ ಕಟ್ಟಡಕ್ಕೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಮಳೆಗಾಲದಲ್ಲಿ ಚಪ್ಪಲಿಗಳನ್ನು ಕೈಯಲ್ಲಿ ಹಿಡಿದು ಕೆಸರಿನಲ್ಲೇ ನಡೆದು ವಿದ್ಯಾರ್ಥಿಗಳು ಶಾಲೆಗೆ ತಲುಪುತ್ತಿದ್ದಾರೆ. ಕೂಡಲೇ ಉತ್ತಮ ರಸ್ತೆ ನಿರ್ಮಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
- Dattatraya Patil
- Updated on: Jul 31, 2026
- 2:40 pm
ಕಲಬುರಗಿ, ರಾಯಚೂರಿನ ವಸತಿ ಶಾಲೆಯಲ್ಲಿ ಪಲಾವ್, ಅವಲಕ್ಕಿ ತಿಂದಿದ್ದ ವಿದ್ಯಾರ್ಥಿಗಳು ಅಸ್ವಸ್ಥ
Food Poisoning: ಕಲಬುರಗಿ ಜಿಲ್ಲೆಯ ಅಫಜಲಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಬೆನ್ನಲ್ಲೇ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಇನ್ನು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲೂ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದ ಘಟನೆ ನಡೆದಿದೆ.
- Dattatraya Patil
- Updated on: Jul 30, 2026
- 10:41 pm
ಶಾಲೆ ಆರಂಭವಾಗಿ ಎರಡು ತಿಂಗಳಾದ್ರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಬರಿಗಾಲಲ್ಲೇ ಶಾಲೆಗೆ ಬರುತ್ತಿರುವ ಮಕ್ಕಳು
Shoe Bhagya Delay: ಕಲಬುರಗಿ ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿ ಎರಡು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ವಿತರಣೆಯಾಗಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಬರಿಗಾಲಿನಲ್ಲಿ ಶಾಲೆಗೆ ಬರುತ್ತಿದ್ದಾರೆ. ಟೆಂಡರ್ ಪ್ರಕ್ರಿಯೆಯ ವಿಳಂಬವೇ ಇದಕ್ಕೆ ಕಾರಣ ಎನ್ನಲಾಗಿದ್ದು, ಕೂಡಲೇ ಶೂ ವಿತರಿಸುವಂತೆ ಒತ್ತಾಯಿ ಕೇಳಿಬಂದಿದೆ.
- Dattatraya Patil
- Updated on: Jul 29, 2026
- 9:06 pm
ಜೀವ ಜಲಕ್ಕಾಗಿ ಹಾಹಾಕಾರ: ಮಾಜಿ ಸಿಎಂ ಪುತ್ರ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಜನರ ಪರದಾಟ!
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದಲ್ಲಿ ಮಳೆಗಾಲದಲ್ಲೂ ತೀವ್ರ ಜಲಕ್ಷಾಮ ತಲೆದೋರಿದ್ದು, ಜಲ ಜೀವನ್ ಮಿಷನ್ ನಲ್ಲಿಗಳು ತೋರ್ಪಡಿಕೆಯಾಗಿದ್ದು ಜನರು ಕುಡಿಯುವ ನೀರಿಗಾಗಿ ಇರುವ ಏಕೈಕ ಬಾವಿಯನ್ನೇ ಆಶ್ರಯಿಸುವಂತಾಗಿದೆ. ಗ್ರಾಮದಲ್ಲಿನ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆಯಾದರೂ ಯಾವುದೇ ಪ್ರಯೋನವಾಗಿಲ್ಲ ಎಂದು ಜನರು ದೂರಿದ್ದು, ಸಂಬಂಧಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ಜಲಕ್ಷಾಮ ಬಗೆಹರಿಸುವತ್ತ ಕ್ರಮ ಕೈಗೊಳ್ಳಬೇಕಿದೆ.
- Dattatraya Patil
- Updated on: Jul 27, 2026
- 2:13 pm
ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು?
Kalaburagi News: ನಗರದ ಆಳಂದ ಚೆಕ್ ಪೋಸ್ಟ್ ಬಳಿಯಿರುವ ಸಿದ್ಧರಾಮೇಶ್ವರ ಕಾಲೋನಿಯ ನಿವಾಸಿಗಳು ಇದೀಗ ತಮ್ಮ ಮನೆಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸರ್ವೆ ನಂಬರ್ 36 ಮತ್ತು 95ರಲ್ಲಿರುವ ಒಟ್ಟು 13 ಎಕರೆ ಜಮೀನು ತನಗೆ ಸೇರಿದ್ದು ಎಂದು ಪಹಣಿ ಆಧಾರದ ಮೇಲೆ ಮಹ್ಮದ್ ಸಲೀಮುದ್ದಿನ್ ಎಂಬುವವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
- Dattatraya Patil
- Updated on: Jul 23, 2026
- 3:44 pm
ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ ಕೇಸ್: 8 ಜೈಲಧಿಕಾರಿಗಳ ಅಮಾನತು
8 Officials Suspended: ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಥೇಟ್ ಸಿನಿಮಾದಂತೆಯೇ ರಿಯಲ್ ಆಗಿ ಮಂಗಳವಾರ ಮಧ್ಯರಾತ್ರಿ ಎಸ್ಕೇಪ್ ಆಗಿದ್ದಾರೆ. ಮೂವರ ಪೈಕಿ ಓರ್ವನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಡ್ರೋನ್ ಬಳಸಿ ತಲಾಶ್ ಮಾಡಲಾಗುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜೈಲಧಿಕಾರಿಗಳ ಅಮಾನತು ಮಾಡಲಾಗಿದೆ.
- Dattatraya Patil
- Updated on: Jul 15, 2026
- 5:50 pm
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳ ಸಿನಿಮೀಯ ಎಸ್ಕೇಪ್: ಇಲ್ಲಿದೆ ನೋಡಿ ಸಿಸಿಟಿವಿ ದೃಶ್ಯ!
ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು.
- Dattatraya Patil
- Updated on: Jul 15, 2026
- 7:18 am
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು: ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನ
Kalaburagi News: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಆತ್ಮರಕ್ಷಣೆಗಾಗಿ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರು ಕೈದಿಗಳಿಗಾಗಿ ಶೋಧ ಮುಂದುವರಿದಿದೆ.
- Dattatraya Patil
- Updated on: Jul 15, 2026
- 7:10 am
ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಭದ್ರತಾ ವ್ಯವಸ್ಥೆಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಜೈಲು ಆವರಣದ ಬ್ಯಾರಕ್ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಯ ನೆರವಿನಿಂದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
- Dattatraya Patil
- Updated on: Jul 14, 2026
- 11:22 am
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ
ಕಲಬುರಗಿಯಲ್ಲಿ ಕುಡಿಯುವ ನೀರಿನ ಯೋಜನೆ ವಿಳಂಬ ಮತ್ತು ರಸ್ತೆಗಳ ದುರಸ್ತಿ ಕಾರ್ಯದ ನಿರ್ಲಕ್ಷ್ಯದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಪ್ರತಿಕ್ರಿಯಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ವ್ಯವಸ್ಥಿತ ನಂಬರ್ಗಳನ್ನು ಒದಗಿಸುವಂತೆ ಕಲಬುರಗಿ ನಗರದ ಜಲಭವನದಲ್ಲಿ ನಡೆದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ.
- Dattatraya Patil
- Updated on: Jul 13, 2026
- 7:13 pm
ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮತ್ತೊಂದು ಅಧ್ವಾನ: ಬಿಸಿಯೂಟದ ಬೇಳೆ, ಅಕ್ಕಿಯಲ್ಲಿ ಹುಳುಗಳದ್ದೇ ರಾಶಿ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದ ಅಕ್ಕಿ ಹಾಗೂ ಬೇಳೆಯಲ್ಲಿ ಹುಳುಗಳ ರಾಶಿ ಪತ್ತೆಯಾಗಿದೆ. ‘ಟಿವಿ9’ ರಿಯಾಲಿಟಿ ಚೆಕ್ ವೇಳೆ ಈ ಕರ್ಮಕಾಂಡ ಬಯಲಾಗಿದೆ. ಇತ್ತೀಚೆಗಷ್ಟೇ ಕಲಬುರಗಿಯಲ್ಲಿ ಕೆಕೆಆರ್ಟಿಸಿ ಬಸ್ ಹೆಡ್ಲೈಟ್ ಕೆಟ್ಟುಹೋಗಿ ಮೊಬೈಲ್ ಟಾರ್ಚ್ ನೆರವಿನಿಂದ ಬಸ್ ಚಲಾಯಿಸಿದ್ದು ವ್ಯಾಪಕ ಚೆರ್ಚೆಗೆ ಗ್ರಾಸವಾಗಿತ್ತು.
- Dattatraya Patil
- Updated on: Jul 10, 2026
- 7:38 am