AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ಪಾಟೀಲ, ಕಲಬುರಗಿ

ದತ್ತಾತ್ರೇಯ ಪಾಟೀಲ, ಕಲಬುರಗಿ

Author - TV9 Kannada

dattatraya.patil@tv9.com

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ

ಕಲಬುರಗಿಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಅಣ್ಣನ ಅಗಲಿಕೆ ದುಃಖ ತಾಳಲಾರದೆ ತಮ್ಮ ಮೃತಪಟ್ಟ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಣ್ಣನ ಮರಣದ ಮರುದಿನವೇ ತಮ್ಮನೂ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ. ಇದೇ ವೇಳೆ, ದಾವಣಗೆರೆಯಲ್ಲಿ 35 ವರ್ಷದ ಯುವಕ ಹೊಲದಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ನವಜೋಡಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಕಡೆಯವರಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಹೀಗಾಗಿ ಸದ್ಯ ನವದಂಪತಿ ಕಲಬುರಗಿ ಎಸ್‌ಪಿಗೆ ಮನವಿ ಸಲ್ಲಿಸಿದ್ದು, ಪೊಲೀಸ್ ರಕ್ಷಣೆ ಕೋರಿದ್ದಾರೆ.

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ್ತು. ಹಳ್ಳಿ ಜೀವನದಿಂದ ಬೇಸತ್ತು, ಮಾನಸಿಕ ಒತ್ತಡಕ್ಕೊಳಗಾಗಿ ಆಕೆ ಈ ಕಠಿಣ ನಿರ್ಧಾರಕ್ಕೆ ಬಂದಿದ್ದಾಳೆ ಎನ್ನಲಾಗಿದೆ. ಆಜಾದಪುರದಲ್ಲಿ ಈ ಘಟನೆ ನಡೆದಿದ್ದು, ತನಿಖೆ ನಡೆಯುತ್ತಿದೆ.

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್

ನಟ ಶ್ರೀನಾಥ್ ಅವರು ಮಾಡಿದ ಸಿನಿಮಾಗಳು ಸೂಪರ್ ಹಿಟ್ ಆಗಿ ಗಮನ ಸೆಳೆದಿವೆ. ಈಗ ಅವರ ಎನರ್ಜಿ ಕಡಿಮೆ ಆಗಿಲ್ಲ ಎಂಬುದಕ್ಕೆ ವಿಡಿಯೋ ಸಾಕ್ಷಿ. ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆದಿವೆ. ಈ ವಿಡಿಯೋದಲ್ಲಿ ಅವರು ನೀನೆ ಸಾಕಿದ ಗಿಣಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಆ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ

ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ

ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್​ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್​ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್ಥೆ ಇಲ್ಲದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ನೀರಿಲ್ಲದೆ ಪ್ರಯಾಣಿಕರು ಒದ್ದಾಡಿದ ವಿಡಿಯೋ ಇಲ್ಲಿದೆ ನೋಡಿ.

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​

ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀಲ್ದಾರ್ ಆರೋಪಗಳನ್ನು ನಿರಾಕರಿಸಿದ್ದು, 6 ತಿಂಗಳ ಹಿಂದೆ ಅಮಾನತಾದ ವಿಎ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಘಟನೆ ಸರ್ಕಾರಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಪೊಲೀಸ್ ಕಮಿಷನರೇಟ್​ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಆ ಮೂಲಕ ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿನ ಸುಧಾರಣೆಗಳನ್ನ ಎತ್ತಿಹಿಡಿದಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಇಳಿಮುಖವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಸಿಬ್ಬಂದಿಗಳನ್ನು ಅಭಿನಂದಿಸಿ, ಇನ್ನಷ್ಟು ಜನಸ್ನೇಹಿಯಾಗುವಂತೆ ಪ್ರೇರೇಪಿಸಿದರು.

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ

ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು ಎಂದಿದ್ದಾರೆ.

Kalaburagi: ಕಳ್ಳತನ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​; ಜೈಲಿನಲ್ಲಿ ಪತ್ತೆಯಾದ ಆರೋಪಿ!

Kalaburagi: ಕಳ್ಳತನ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​; ಜೈಲಿನಲ್ಲಿ ಪತ್ತೆಯಾದ ಆರೋಪಿ!

ಕಲಬುರಗಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಪತ್ತೆ ಮಾಡಿದ್ದಾರೆ. ತನಿಖೆ ವೇಳೆ ಬೆಂಗಳೂರು ಮೂಲದ ಕಳ್ಳ ಅದಾಗಲೇ ಬೇರೊಂದು ಪ್ರಕರಣದಲ್ಲಿ ಜೈಲು ಸೇರಿರೋದು ಗೊತ್ತಾಗಿದೆ. ಹೀಗಾಗಿ ಬಾಡಿ ವಾರೆಂಟ್​​ ಮೇಲೆ ವಶಕ್ಕೆ ಪಡೆದು ಆತನ ವಿಚಾರಣೆ ನಡೆಸಲಾಗ್ತಿದೆ. ಈತನ ಮೇಲೆ 40ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿವೆ ಎಂಬ ಶಾಕಿಂಗ್​​ ಸತ್ಯವೂ ಬಯಲಾಗಿದೆ.

ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ

ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯವು 2026ರ ಶೈಕ್ಷಣಿಕ ಸಾಲಿಗೆ 15 ಪದವಿ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದೆ. ಜನವರಿ 3 ರಿಂದ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಜನವರಿ 31 ಕೊನೆಯ ದಿನಾಂಕವಾಗಿದೆ. ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ 8 ಪ್ರತಿಶತ ಮೀಸಲಾತಿ ಇದೆ ಎಂದು ಕುಲಪತಿ ತಿಳಿಸಿದ್ದಾರೆ. ಮೇ 2026ರಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದೆ.

ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು?

ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ: ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು?

ಕಲಬುರಗಿಯ ಶಿವಶಕ್ತಿ ಕಾಲೋನಿಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಸದ್ಯ ಚೌಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ತನಿಖೆ ನಡೆಸಿದ್ದಾರೆ.