ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಗ್ರೀನ್ ಸಿಗ್ನಲ್
ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೂ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಹಾಗಾದ್ರೆ, ಪೂಜೆಗೆ ಕೋರ್ಟ್ ನೀಡಿರುವ ಸೂಚನೆಗಳೇನು? ಎನ್ನುವ ವಿವರ ಇಲ್ಲಿದೆ.
- Dattatraya Patil
- Updated on: Feb 11, 2026
- 5:23 pm
ಮದುವೆಯಲ್ಲಿ ಗನ್ ಹಿಡಿದು ಕಾಂಗ್ರೆಸ್ ಮುಖಂಡನ ಡ್ಯಾನ್ಸ್: ವಿಡಿಯೋ ವೈರಲ್
ಅಫಜಲ್ಪುರ ಕಾಂಗ್ರೆಸ್ ನಾಯಕ ಮತಿನ್ ಅಹ್ಮದ್ ಪಟೇಲ್ ಅವರು ಕಲ್ಬುರ್ಗಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ ದುರಂಧರ್ ಹಾಡಿಗೆ ಪಿಸ್ತೂಲ್ ಹಿಡಿದು ಹೆಜ್ಜೆ ಹಾಕಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಸಾರ್ವಜನಿಕವಾಗಿ ಶಸ್ತ್ರಾಸ್ತ್ರ ಪ್ರದರ್ಶನ ಕಾನೂನುಬಾಹಿರವಾಗಿದ್ದು, ವೈರಲ್ ವಿಡಿಯೋ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಿಸ್ತೂಲ್ ನೈಜತೆ ಮತ್ತು ಪರವಾನಿಗೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
- Dattatraya Patil
- Updated on: Feb 10, 2026
- 12:50 pm
ಕಲಬುರಗಿ ಆರ್ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!
ಕಲಬುರಗಿ ಆರ್ಟಿಓ ಕಚೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿ ಲಂಚ ಪಡೆದು ಆರ್ಸಿ ಕಾರ್ಡ್ ಸೇರಿದಂತೆ ಸರ್ಕಾರಿ ದಾಖಲೆಗಳನ್ನು ವಿತರಿಸುತ್ತಿರುವುದನ್ನು ‘ಟಿವಿ9’ ಬಯಲಿಗೆಳೆದಿದೆ. ಪ್ರತಿ ಕಾರ್ಡ್ಗೆ 200-300 ರೂಪಾಯಿ ಲಂಚ ಪಡೆದು ಅನರ್ಹರಿಗೂ ದಾಖಲೆ ನೀಡುವ ಭ್ರಷ್ಟಾಚಾರ ಬಯಲಾಗಿದ್ದು, ಈ ಬಗ್ಗೆ ಸಾರಿಗೆ ಸಚಿವರ ಗಮನಿಸಿ ಕ್ರಮ ಕೈಗೊಳ್ಳಬೇಕಾಗಿದೆ.
- Dattatraya Patil
- Updated on: Feb 5, 2026
- 12:05 pm
Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್ನಲ್ಲಿ ಆರೋಪಿಗಳು ಲಾಕ್
ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಅಂತಾರಾಜ್ಯ ಗ್ಯಾಂಗ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 27 ಲಕ್ಷ ಮೌಲ್ಯದ ವಸ್ತುಗಳು ಮತ್ತು ಪೊಲೀಸ್ ನಕಲಿ ಐಡಿ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ. ಹೆದ್ದಾರಿಗಳಲ್ಲಿ ಜನರನ್ನು ನಂಬಿಸಿ, ನಕಲಿ ಚಿನ್ನ ನೀಡಿ ಅಸಲಿ ಚಿನ್ನವನ್ನು ದೋಚೋದು ಖದೀಮರ ಕಾಯಕ ಎನ್ನಲಾಗಿದ್ದು, ಹಲವು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದ ಈ ಗ್ಯಾಂಗ್ನ ಏಳು ಆರೋಪಿಗಳು ಕೊನೆಗೂ ಲಾಕ್ ಆಗಿದ್ದಾರೆ.
- Dattatraya Patil
- Updated on: Feb 2, 2026
- 4:27 pm
ಜಮೀನು ವಿಚಾರಕ್ಕೆ ದಾಯಾದಿ ಕಲಹ: ಹಿಂಬದಿಯಿಂದ ಚಾಕು ಇರಿದು ಬರ್ಬರವಾಗಿ ವ್ಯಕ್ತಿಯ ಕೊಲೆ
ಜಮೀನು ವಿಚಾರವಾಗಿ ಕುಟುಂಬದ ನಡುವೆ ಉಂಟಾದ ದಾಯಾದಿ ಕಲಹಕ್ಕೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಓರ್ವ ಬಲಿಯಾಗಿದ್ದಾನೆ. ಸೋದರ ಸಂಬಂಧಿಯೇ ಕೃತ್ಯ ಎಸಗಿದ್ದು, ಘಟನೆ ಬಳಿಕ ಆರೋಪಿ ಎಸ್ಕೇಪ್ ಆಗಿದ್ದಾನೆ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
- Dattatraya Patil
- Updated on: Jan 31, 2026
- 7:29 pm
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ವಿಧಿವಶ
ಕಲಬುರಗಿಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಅಣ್ಣನ ಅಗಲಿಕೆ ದುಃಖ ತಾಳಲಾರದೆ ತಮ್ಮ ಮೃತಪಟ್ಟ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಅಣ್ಣನ ಮರಣದ ಮರುದಿನವೇ ತಮ್ಮನೂ ಸಾವನ್ನಪ್ಪಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ. ಇದೇ ವೇಳೆ, ದಾವಣಗೆರೆಯಲ್ಲಿ 35 ವರ್ಷದ ಯುವಕ ಹೊಲದಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
- Dattatraya Patil
- Updated on: Jan 28, 2026
- 3:32 pm
ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ನವಜೋಡಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವತಿ ಕಡೆಯವರಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಹೀಗಾಗಿ ಸದ್ಯ ನವದಂಪತಿ ಕಲಬುರಗಿ ಎಸ್ಪಿಗೆ ಮನವಿ ಸಲ್ಲಿಸಿದ್ದು, ಪೊಲೀಸ್ ರಕ್ಷಣೆ ಕೋರಿದ್ದಾರೆ.
- Dattatraya Patil
- Updated on: Jan 24, 2026
- 4:21 pm
Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!
ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ್ತು. ಹಳ್ಳಿ ಜೀವನದಿಂದ ಬೇಸತ್ತು, ಮಾನಸಿಕ ಒತ್ತಡಕ್ಕೊಳಗಾಗಿ ಆಕೆ ಈ ಕಠಿಣ ನಿರ್ಧಾರಕ್ಕೆ ಬಂದಿದ್ದಾಳೆ ಎನ್ನಲಾಗಿದೆ. ಆಜಾದಪುರದಲ್ಲಿ ಈ ಘಟನೆ ನಡೆದಿದ್ದು, ತನಿಖೆ ನಡೆಯುತ್ತಿದೆ.
- Dattatraya Patil
- Updated on: Jan 23, 2026
- 3:34 pm
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ನಟ ಶ್ರೀನಾಥ್ ಅವರು ಮಾಡಿದ ಸಿನಿಮಾಗಳು ಸೂಪರ್ ಹಿಟ್ ಆಗಿ ಗಮನ ಸೆಳೆದಿವೆ. ಈಗ ಅವರ ಎನರ್ಜಿ ಕಡಿಮೆ ಆಗಿಲ್ಲ ಎಂಬುದಕ್ಕೆ ವಿಡಿಯೋ ಸಾಕ್ಷಿ. ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆದಿವೆ. ಈ ವಿಡಿಯೋದಲ್ಲಿ ಅವರು ನೀನೆ ಸಾಕಿದ ಗಿಣಿ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಆ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.
- Dattatraya Patil
- Updated on: Jan 21, 2026
- 9:04 am
ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್ಥೆ ಇಲ್ಲದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ನೀರಿಲ್ಲದೆ ಪ್ರಯಾಣಿಕರು ಒದ್ದಾಡಿದ ವಿಡಿಯೋ ಇಲ್ಲಿದೆ ನೋಡಿ.
- Dattatraya Patil
- Updated on: Jan 19, 2026
- 12:00 pm
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್ಡಿಎ!
ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
- Dattatraya Patil
- Updated on: Jan 18, 2026
- 2:04 pm
Kalaburagi: ಓಪನ್ ಮೀಟಿಂಗ್ನಲ್ಲೇ ಹಣಕ್ಕೆ ತಹಶೀಲ್ದಾರ್ ಡಿಮ್ಯಾಂಡ್; ಆಡಿಯೋ ವೈರಲ್
ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀಲ್ದಾರ್ ಆರೋಪಗಳನ್ನು ನಿರಾಕರಿಸಿದ್ದು, 6 ತಿಂಗಳ ಹಿಂದೆ ಅಮಾನತಾದ ವಿಎ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಘಟನೆ ಸರ್ಕಾರಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
- Dattatraya Patil
- Updated on: Jan 16, 2026
- 3:12 pm