AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ಪಾಟೀಲ, ಕಲಬುರಗಿ

ದತ್ತಾತ್ರೇಯ ಪಾಟೀಲ, ಕಲಬುರಗಿ

Author - TV9 Kannada

dattatraya.patil@tv9.com

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್​​​ಗಳಲ್ಲಿ ಸೌದೆ ಒಲೆ ಮೇಲೆ ಅಡುಗೆ ಮಾಡಲಾಗಿದೆ.

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಸ್ಥಾಪಿತವಾದ ಗುಲಬರ್ಗಾ ವಿಶ್ವವಿದ್ಯಾಲಯದ 794 ಎಕರೆ ಜಮೀನು ಈಗ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣಿಗೆ ಬಿದ್ದಿದೆ. 18 ಇಲಾಖೆಗಳು ಬಸ್ ನಿಲ್ದಾಣ, ಕ್ರಿಕೆಟ್ ಮೈದಾನ ಸೇರಿ 374 ಎಕರೆ ಜಾಗಕ್ಕೆ ಬೇಡಿಕೆ ಇಟ್ಟಿವೆ. ಆದರೆ, ವಿವಿಯ ಸಿಂಡಿಕೇಟ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ವಿಶ್ವವಿದ್ಯಾಲಯ ಮತ್ತು ಸರ್ಕಾರ ನಡುವೆ ಭೂ ವಿವಾದ ತೀವ್ರಗೊಂಡಿದೆ.

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಗಂಡ ಹೆಂಡತಿ ತಮ್ಮ ಪಾಡಿಗೆ ತಾವು ಇದ್ದರು. ಆದ್ರೆ, ಗೆಳತಿಯ ಪ್ರಿಯಕರನ ಒಂದು ಫೋನ್ ಕರೆ ಸಂಸಾರವನ್ನೇ ಛಿದ್ರ ಛಿದ್ರ ಮಾಡಿ ಹಾಕಿದೆ. ಹೌದು.. ಹೆಂಡ್ತಿ ತನ್ನ ಫ್ರೆಂಡ್​​ ಲವ್​​ನಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ವಿಚಾರಕ್ಕೆ ಗೆಳತಿಯ ಪ್ರಿಯಕರ ಕಾಲ್ ಮಾಡಿದ್ದಾನೆ. ಬಳಿಕ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಕೊನೆಗೆ ಸಾವಿನಲ್ಲಿ ಅಂತ್ಯವಾಗಿದೆ.

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆ ರಥೋತ್ಸವ ವೇಳೆ ದುರಂತ ಸಂಭವಿಸಿದೆ. ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರ್ಚ್ 8ರಂದು ನಡೆದ ಈ ಘಟನೆಯಲ್ಲಿ ಜನಸಮೂಹ ಹೆಚ್ಚಾಗಿದ್ದರಿಂದ ರಥ ನಿಯಂತ್ರಣ ತಪ್ಪಿ ಚಲಿಸಿದೆ. ಗಾಯಾಳು ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಯನ್ನ ಹೆದರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಲ್ಲಿ 1069 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿಗಳಿಂದ ಅಭಿವೃದ್ಧಿ ಮರೆತಿದೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಲಾಗಿದೆ.

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು

ಕಲಬುರಗಿ ನಿಂಬರ್ಗಾದಲ್ಲಿ ಹೋಳಿ ಹಬ್ಬದಂದು ಹಿಜಾಬ್/ಬುರ್ಖಾ ಧರಿಸಿ ಬಣ್ಣದಾಟ ಆಡಿದ ಪ್ರಕರಣದಲ್ಲಿ ಐವರು ಯುವಕರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸುತ್ತಿದ್ದು, ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಗಿದೆ.

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾದಲ್ಲಿ ಹೋಳಿ ಆಚರಣೆ ವೇಳೆ ಬುರ್ಖಾಗೆ ಅಪಮಾನ ಮಾಡಲಾಗಿದೆ ಎಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ದೂರು ದಾಖಲಿಸಿದ್ದಾರೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿವೆ.

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ:  ಓಡಿದ ವಕೀಲರು 

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು 

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿಗಳ ಇ-ಮೇಲ್ ಐಡಿಗೆ ಬಂದ ಈ ಬೆದರಿಕೆಯಿಂದ ನ್ಯಾಯಾಲಯವನ್ನು ತೆರವುಗೊಳಿಸಿ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂದ ಸಂಪೂರ್ಣ ಪರಿಶೀಲನೆ ನಡೆಸಲಾಯಿತು. ಇನ್ನು ಈ ಬಾಂಬ್​​ ಬೆದರಿಕೆ ಬರುತ್ತಿದ್ದಂತೆ ವಕೀಲರು ಕೋರ್ಟ್​​ನಿಂದ ಹೊರಗೆ ಓಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿ ನೋಡಿ.

ಫೋಕ್ಸೋ ಕೇಸ್:  ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ

ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ

ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ 'ಸುಳ್ಳು' ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು We stand with ಮಲ್ಲಿಕಾರ್ಜುನ ಮುತ್ಯಾ ಎಂದು ಘೋಷಣೆ ಕೂಗುತ್ತ ಮೆರಣಿಗೆ ಮಾಡಿ ಆಕ್ರೋಶ ಹೊರಹಾಕಿದರು.

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ನಡುವೆ ಮಠದಲ್ಲಿ ಭಕ್ತರ ಸಭೆ ನಡೆದಿದ್ದು, ಪ್ರಕರಣ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಡೆಡ್​​ಲೈನ್​​ ನೀಡಲಾಗಿದೆ. ಮತ್ತೊಂದೆಡೆ ಪೊಲೀಸರ ನೋಟಿಸ್​​ ಬಳಿಕವೂ ಮಲ್ಲಿಕಾರ್ಜುನ್​​ ಮುತ್ಯಾ ಈ ವರೆಗೆ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷ ಸದ್ಯ ಇಡೀ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಇತ್ತ ಕಲಬುರಗಿಯಲ್ಲೂ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕಲ್ಲು ತೂರಾಟ ಮಾಡುತ್ತಿರುವ ವಿಡಿಯೋ ವೈರಲ್​ ಆಗಿವೆ.

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ