ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಮಹಿಳೆ ಜತೆ ಲಿವಿಂಗ್ ರಿಲೇಶನ್ ಶಿಪ್: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು
ಸಾಮಾನ್ಯವಾಗಿ ಮೋಜು ಮಸ್ತಿಗಾಗಿ ಅದಕ್ಕೂ ಮಿಗಿಲಾಗಿ ಮಾಡಿದ ಸಾಲವನ್ನ ತೀರಿಸಲು ಕಳ್ಳತನ, ಸುಲಿಗೆ ಮಾಡಿದ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಗೆಳೆತಿಯೊಂದಿಗೆ ಲಿವಿಂಗ್ ಟೂಗೆದರ್ಗಾಗಿ ಹಣ ಹೊಂದಿಸಲು ಕೂಲಿ ಕೆಲಸಕ್ಕೆಂದು ಹೋಗ್ತಿದ್ದ ಮಹಿಳೆಯರನ್ನ ಸುಲಿಗೆ ಮಾಡಿ ಖಾಕಿ ಕೈಗೆ ತಗಲಾಕೊಂಡಿದ್ದಾನೆ. ಅಷ್ಟಕ್ಕೂ ಖದೀಮನ ಸುಲಿಗೆ ಕೆಲಸ ಹೇಗಿತ್ತು ಎನ್ನುವ ವಿವರ ಇಲ್ಲಿದೆ.
- Dattatraya Patil
- Updated on: Dec 4, 2025
- 9:07 pm
ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
ಗೋವುಗಳನ್ನ ಸಾಗಿಸುತ್ತಿದ್ದ ಲಾರಿಯನ್ನ ತಡೆದು ಪರಿಶೀಲನೆ ಮಾಡಿದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ನಡೆದಿದೆ. ಅಫಜಲಪುರದಿಂದ ಆಳಂದ ಕಡೆಗೆ ತೆರಳುತ್ತಿದ್ದ ಗೋವು ತುಂಬಿದ್ದ ಲಾರಿಯನ್ನು ರೋಹಿತ್ ಮತ್ತು ಅನೀಲ್ ತಡೆ ನಿಲ್ಲಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿಯಾಗಿದೆ. ದಾಖಲಾತಿ ಜೊತೆಗೆ ಅನುಮತಿ ಪಡೆದು ಗೋವು ಸಾಗಾಟ ಮಾಡುತ್ತಿರುವ ಗಾಡಿಯನ್ನ ತಡೆಯುತ್ತಿರಾ ಎಂದು ರೋಹಿತ್ ಮತ್ತು ಅನೀಲ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ
- Dattatraya Patil
- Updated on: Nov 26, 2025
- 7:46 pm
ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ನೋಡಿ
ಕಲಬುರಗಿಯಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಜೆವರಗಿ ಬೈಪಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಸೇರಿದಂತೆ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ಎಂಬ ವಿಡಿಯೋ ಇಲ್ಲಿದೆ ನೋಡಿ.
- Dattatraya Patil
- Updated on: Nov 26, 2025
- 10:44 am
ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ
ದಕ್ಷ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ್ರಾಮಾಣಿಕ ಮತ್ತು ಸರಳ ವ್ಯಕ್ತಿತ್ವದ ಅಧಿಕಾರಿಯ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ.
- Dattatraya Patil
- Updated on: Nov 25, 2025
- 9:30 pm
ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!
ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
- Dattatraya Patil
- Updated on: Nov 25, 2025
- 8:48 pm
ಬೇರೊಬ್ಬನ ಜತೆ ಲವ್ವಿಡವ್ವಿಗೆ ಗಂಡನ ಹತ್ಯೆ: ಸುಪಾರಿ ಹಣ ಕೊಡದೆ ಕಳ್ಳಾಟ, 9 ವರ್ಷದ ಬಳಿಕ ರಹಸ್ಯ ಬಯಲು
ವೈರಲ್ ಆಗಿರುವ ಅದೊಂದು ವಿಡಿಯೋದಿಂದ 9 ವರ್ಷಗಳ ಹಿಂದೆ ನಡೆದಿದ್ದ ಕೊಲೆಯ ರಹಸ್ಯ ಇದೀಗ ಬಯಲಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಸುಪಾರಿ ನೀಡಿ ಕೊಲೆ ಮಾಡಿಸಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ.
- Dattatraya Patil
- Updated on: Nov 23, 2025
- 4:46 pm
ಮಧ್ಯಂತರ ಜಾಮೀನು ಪಡೆದ್ರೂ ಆರ್.ಡಿ ಪಾಟೀಲ್ಗೆ ತಪ್ಪದ ಸಂಕಷ್ಟ: ಮತ್ತೊಂದು FIR
ಪಿಎಸ್ಐ ಹಗರಣದ ಆರೋಪಿ ಆರ್.ಡಿ.ಪಾಟೀಲ್ ಜಾಮೀನಿನ ಮೇಲೆ ಬಿಡುಗಡೆಯಾದ ದಿನವೇ ಕಲಬುರಗಿ ಜೈಲು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೊಸ ಎಫ್ಐಆರ್ ದಾಖಲಾಗಿದೆ. ಆದರೆ, ಪಾಟೀಲ್ ಕೂಡ ಜೈಲು ಸಿಬ್ಬಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರತಿ ದೂರು ನೀಡಿದ್ದಾರೆ. ಹೀಗಾಗಿ, ಪರಸ್ಪರ ದೂರಗಳ ಸತ್ಯಾಸತ್ಯತೆ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
- Dattatraya Patil
- Updated on: Nov 23, 2025
- 2:45 pm
ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ
ಕಲಬುರಗಿಯ ಕಲ್ಲಹಂಗರಗಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ವಿಕಲಚೇತನ ಮಗಳನ್ನು ತಂದೆ ಕೊಲೆ ಮಾಡಿ, ಬಳಿಕ ಅದನ್ನು ಆತ್ಮಹತ್ಯೆಯಂತೆ ಬಿಂಬಿಸಲು ಹೋಗಿ ಕೊನೆಗೆ ಪೊಲೀಸರ ಅತಿಥಿ ಆಗಿರುವಂತಹ ಘಟನೆ ನಡೆದಿದೆ. ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Dattatraya Patil
- Updated on: Nov 21, 2025
- 3:23 pm
ಕಲಬುರಗಿ: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏನಿದು ಪ್ರಕರಣ? ಮಣಿಕಂಠ ರಾಠೋಡ್ ಮಾಡಿದ್ದೇನು? ಅರೆಸ್ಟ್ ಆಗಿದ್ದೇಕೆ? ಎಲ್ಲ ವಿವರ ಇಲ್ಲಿದೆ.
- Dattatraya Patil
- Updated on: Nov 21, 2025
- 10:31 am
ಚಿತ್ತಾಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ಕೇಸ್: ಪ್ರಕರಣ ಹಿಂಪಡೆದಿದ್ದ ಸರ್ಕಾರಕ್ಕೆ ಹಿನ್ನಡೆ
ಕಲಬುರಗಿಯ ಚಿತ್ತಾಪುರದಲ್ಲಿ ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಕಲಬುರಗಿ ಪೀಠ ತಾತ್ಕಾಲಿಕ ತಡೆ ನೀಡಿದೆ. 2019ರ ಬಕ್ರೀದ್ ವೇಳೆ ಗೋವು ಸಾಗಾಟ ವಾಹನ ಸೀಜ್ ಮಾಡಿದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಸಂಬಂಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
- Dattatraya Patil
- Updated on: Nov 19, 2025
- 8:13 am
ಪ್ರಿಯಾಂಕ್ ಖರ್ಗೆ ತವರು ಚಿತ್ತಾಪುರದಲ್ಲಿ RSS ಅದ್ಧೂರಿ ಪಥಸಂಚಲನ: ಹೈಸೆಕ್ಯುರಿಟಿ ನಡುವೆ ಹೆಜ್ಜೆ ಹಾಕಿದ ಗಣವೇಷಧಾರಿಗಳು
ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ, ಇಡೀ ದೇಶದ ಗಮನ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಇಂದು ಯಾವುದೇ ಗದ್ದಲ, ಗಲಾಟೆ ಇಲ್ಲದೆ ಸುಸೂತ್ರವಾಗಿ ಜರುಗಿತು. ಪಥಸಂಚಲನ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆಗೆ ಟಕ್ಕರ್ ಕೊಡಲಾಗಿದೆ. ಜೊತೆಗೆ ಆರ್ಎಸ್ಎಸ್ ಶಕ್ತಿ ಪ್ರದರ್ಶನ ಮಾಡಿದ್ದಂತು ಸುಳ್ಳಲ್ಲ.
- Dattatraya Patil
- Updated on: Nov 16, 2025
- 8:34 pm
ಚಿತ್ತಾಪುರದಲ್ಲಿ ಮೊಳಗಿದ ಆರ್ಎಸ್ಎಸ್ ಗೀತೆ: ವಿಡಿಯೋ ನೋಡಿ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿಗಷ್ಟೇ ಅವಕಾಶ ನೀಡಲಾಗಿತ್ತು. ಪಥಸಂಚಲನ ಆರಂಭಕ್ಕೂ ಮುನ್ನ ಚಿತ್ತಾಪುರದಲ್ಲಿ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು. ವಿಡಿಯೋ ನೋಡಿ.
- Dattatraya Patil
- Updated on: Nov 16, 2025
- 5:11 pm