ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.
ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧಿಗಳ ನಾಶ: ಸರ್ಕಾರಿ ಆಸ್ಪತ್ರೆ ನಡೆಗೆ ಸಾರ್ವಜನಿಕರ ಆಕ್ರೋಶ
ಕಲಬುರಗಿಯ ಅಫಜಲಪುರ ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳನ್ನು ನಾಶಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಡ ರೋಗಿಗಳಿಗೆ ನೀಡದೆ ಔಷಧಿ ಹಾಳುಮಾಡಿದ ವೈದ್ಯರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕಮಿಷನ್ ಆಸೆಗೆ ಬಡವರಿಗೆ ನೀಡಬೇಕಿದ್ದ ಔಷಧಿಗಳು ಹಾಳಾಗಿವೆ ಎಂಬ ಆರೋಪಗಳು ಕೇಳಿಬಂದಿವೆ.
- Dattatraya Patil
- Updated on: Aug 21, 2026
- 1:34 pm
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ! ವಿಡಿಯೋ ವೈರಲ್!
ಏ ಯಾರಲ್ಲಿ ಟಿಕೆಟ್... ಸರ್ಕಾರಿ ಶಾಲೆಯ ವಿದ್ಯಾರ್ಥಿ, ಸಾರಿಗೆ ಬಸ್ನಲ್ಲಿ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ನೀಡಿದ ವಿಡಿಯೋ ವೈರಲ್ ಆಗಿದೆ. ಕಲಬುರಗಿಯ ಸಿಟಿ ಬಸ್ ನಿಲ್ದಾಣದಿಂದ ಕಾಳಗಿ ಕಡೆಗೆ ಚಲಿಸುವ ಕೆಕೆಆರ್ ಟಿಸಿ ಬಸ್ ಕಂಡಕ್ಟರ್, ವಿದ್ಯಾರ್ಥಿಗೆ ಟಿಕೆಟ್ ವಿತರಿಸುವ ಕೆಲಸ ನೀಡಿದ್ದಾರೆ. ಕಾಳಗಿ ತಾಲ್ಲೂಕಿನ ಡಿಪೋಗೆ ಸೇರಿದ KA 28 F 2066 ನಂಬರಿನ ಬಸ್ ನಿರ್ವಾಹಕ ತಾನು ಟಿಕೆಟ್ ನೀಡುವುದು ಬಿಟ್ಟು ವಿದ್ಯಾರ್ಥಿಗೆ ಹಚ್ಚಿದ್ದು, ವಿದ್ಯಾರ್ಥಿಯು ಟಿಕೆಟ್ ಹಂಚಿಕೆ ಮಾಡುತ್ತಿರುವ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಫುಲ್ ವೈಲರ್ ಆಗಿದೆ.
- Dattatraya Patil
- Updated on: Aug 19, 2026
- 3:45 pm
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಕಲಬುರಗಿಯ ಮಾಶಾಳ ಮಠದ ಶ್ರೀ ಮರುಳಾರಾಧ್ಯ ಸ್ವಾಮೀಜಿ ಮದ್ಯದ ಬಾಟಲಿಯೊಂದಿಗೆ ಸಿನಿಮಾ ಹಾಡು ಹಾಡಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೂಜ್ಯ ಮಠದಲ್ಲಿ ಪವಿತ್ರ ಶ್ರಾವಣ ಮಾಸದಲ್ಲಿ ನಡೆದ ಈ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಖಡ್ಗದ ಹೇಳಿಕೆಯಿಂದ ವಿವಾದ ಸೃಷ್ಟಿಸಿದ್ದ ಸ್ವಾಮೀಜಿಯ ನಡೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
- Dattatraya Patil
- Updated on: Aug 17, 2026
- 6:44 pm
ಕಲಬುರಗಿಯಲ್ಲಿ ದೇಶವಿರೋಧಿ ಕೃತ್ಯ ಎಸಗುತ್ತಿದ್ದ ಮಹಮ್ಮದ್ ಸಮೀರ್ ಬಂಧನ: ತನಿಖೆ ವೇಳೆ ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು
ಕಲಬುರಗಿಯಲ್ಲಿ ಮಹಮ್ಮದ್ ಸಮೀರ್ (23) ಎಂಬಾತನನ್ನು ದೇಶವಿರೋಧಿ ಚಟುವಟಿಕೆಗಳಿಗಾಗಿ ಬಂಧಿಸಲಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕ, ವಿದೇಶಿ ಮೊಬೈಲ್ ಸಂಖ್ಯೆಗಳ ಬಳಕೆ ಹಾಗೂ ದೇಶದ ಅಖಂಡತೆಗೆ ಧಕ್ಕೆ ತರುವಂತಹ ವಿಡಿಯೋಗಳನ್ನು ಹಂಚಿಕೊಂಡ ಆರೋಪ ಎದುರಿಸುತ್ತಿದ್ದಾನೆ. ಕಲಬುರಗಿ ಪೊಲೀಸರು ಈ ಜಾಲವನ್ನು ಪತ್ತೆಹಚ್ಚಿ ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ರವಾನಿಸಲಾಗಿದೆ.
- Dattatraya Patil
- Updated on: Aug 14, 2026
- 9:27 am
ಪಾಕಿಸ್ತಾನ, ಐಸಿಸ್ ಜತೆ ನಂಟು: ಕಲಬುರಗಿಯಲ್ಲಿ ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ISIS-Pakistan Terror Link: ಪಾಕ್ ಸಂಘಟನೆಗಳ ಜೊತೆ ನಂಟು ಆರೋಪದಡಿ ಇತ್ತೀಚೆಗೆ ದಾವಣಗೆರೆ ಮತ್ತು ತುಮಕೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪಾಕ್ ಮತ್ತು ಐಸಿಸ್ ಜೊತೆ ನಂಟು ಆರೋಪದಡಿ ಕಲಬುರಗಿಯಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Dattatraya Patil
- Updated on: Aug 13, 2026
- 6:46 pm
ಹಳ್ಳ ಹಿಡಿದ ಕಲಬುರಗಿ ಜನರ ಕನಸಿನ ಕೂಸು: 10 ವರ್ಷದಿಂದ ನೆನೆಗುದಿಗೆ ಬಿದ್ದ ರಾಜೀವ್ ಗಾಂಧಿ ಥೀಮ್ ಪಾರ್ಕ್
kalaburagi Rajiv Gandhi Theme Park: ಕಲಬುರಗಿ ಜನರು ಕನಸಿನ ಯೋಜನೆಯಾದ ರಾಜೀವ್ ಗಾಂಧಿ ಥೀಮ್ ಪಾರ್ಕ್ ನಿರ್ಮಾಣ ಕಾರ್ಯ 10 ವರ್ಷಗಳಿಂದ ಸ್ಥಗಿತಗೊಂಡಿದೆ. 2014ರಲ್ಲಿ ಆರಂಭವಾದ ಈ ಯೋಜನೆ ಕಳಪೆ ಕಾಮಗಾರಿಯಿಂದ ಅರ್ಧಕ್ಕೆ ನಿಂತಿದ್ದು, ಇಂದಿಗೂ ಆರಂಭಗೊಂಡಿಲ್ಲ. ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿರುವ ಪಾರ್ಕ್ ಪೂರ್ಣಗೊಳಿಸುವಂತೆ ಆಗ್ರಹ ಕೇಳಿಬಂದಿದೆ.
- Dattatraya Patil
- Updated on: Aug 9, 2026
- 4:42 pm
ಮುಸ್ಲಿಂ ಎಂಬ ಕಾರಣಕ್ಕೆ ನಿಂದನೆಯೇ? ಬಿಜೆಪಿ ಎಂಎಲ್ಸಿ ರವಿಕುಮಾರ್ಗೆ ಕೋರ್ಟ್ ತರಾಟೆ
ಲಬುರಗಿ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರನ್ನುಮ್ ಅಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿಕುಮಾರ್ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ತಮ್ಮ ವಿರುದ್ದ ದಾಖಲಾಗಿರೋ ಕೇಸ್ ರದ್ದು ಮಾಡುವಂತೆ ಮನವಿ ಮಾಡಿದ್ದ ರವಿಕುಮಾರ್ಗೆ ಕಲಬುರಗಿ ಹೈಕೋರ್ಟ್ ಪೀಠ ತರಾಟಗೆ ತೆಗೆದುಕೊಂಡಿದೆ. ಅಲ್ಲದೇ ಬೇಕಾದ್ರೆ ಸುಪ್ರೀಂಗೆ ಹೋಗಿ ಎಂದು ಛಾಟಿ ಬೀಸಿದೆ.
- Dattatraya Patil
- Updated on: Aug 7, 2026
- 10:33 pm
ನೆರೆಯಲ್ಲಿ ಶವಸಂಸ್ಕಾರದ ಹರಸಾಹಸ: ಹರಿವ ನದಿಯಲ್ಲೇ ಟ್ರ್ಯಾಕ್ಟರ್ ಓಡಿಸಿ ಅಂತ್ಯಕ್ರಿಯೆ ನೆರವೇರಿಸಿದ ಜನರು
Kalaburagi News: ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಶವಸಂಸ್ಕಾರಕ್ಕೆ ಜನರು ತೀವ್ರ ಪರದಾಟ ನಡೆಸಿದ್ದಾರೆ. ಕಮಲಾವತಿ ನದಿ ನೀರಿನಲ್ಲೇ ಗ್ರಾಮಸ್ಥರು ಮೃತದೇಹ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಬೆಳಕಿಗೆ ಬಂದಿದೆ. ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬ ಆರೋಪ ಕೇಳಿಬಂದಿದೆ.
- Dattatraya Patil
- Updated on: Aug 7, 2026
- 8:35 pm
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್ಗೆ ನುಗ್ಗಿದ ಆಗಂತುಕರು: ಚಾಕು ಹಿಡಿದು ಓಡಾಟ, CCTVಯಲ್ಲಿ ದೃಶ್ಯ ಸೆರೆ
Kalaburagi Crime News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯ ಕೇಂದ್ರಿಯ ವಿಶ್ವವಿದ್ಯಾಲಯದ ಮೂರು ವಸತಿ ಗೃಹಗಳ ಬಾಗಿಲು ಮುರಿದು ಆಗಂತುಕರು ನುಗ್ಗಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ಚಾಕು ಹಿಡಿದು ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Dattatraya Patil
- Updated on: Aug 6, 2026
- 8:30 am
ಆಸ್ತಿ ವರ್ಗಾವಣೆಗೆ 9,950 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್, ಖಾಲಿ ನಿವೇಶನದ ಆಸ್ತಿ ವರ್ಗಾವಣೆಗಾಗಿ ₹9,950 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮೃತ ಕಿಶನ್ ಪವಾರ್ ಅವರ ಕುಟುಂಬದವರಿಂದ ಮರಣ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆದಿದ್ದರೂ, ಕಾರ್ಯದರ್ಶಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಂಜೀವ್ ಎಂಬುವವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಇನ್ಸ್ಪೆಕ್ಟರ್ ರವಿ ಪವಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ರೆಡ್ಹ್ಯಾಂಡ್ ಬಂಧಿಸಲಾಗಿದೆ.
- Dattatraya Patil
- Updated on: Aug 4, 2026
- 10:55 am
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್ಗೆ ಸಚಿವ ಸ್ಥಾನ, ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು
ಜೇವರ್ಗಿಯ ಶಾಸಕ ಅಜಯ್ ಸಿಂಗ್ಗೆ ಸಚಿವ ಸ್ಥಾನ ಲಭಿಸಿದ್ದು, ತಾಯಿ ಪ್ರಭಾವತಿ ಧರ್ಮಸಿಂಗ್ ಸಂತೋಷದ ಕಣ್ಣೀರನ್ನ ಸುರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರನಿಗೆ ಸಚಿವಗಿರಿ ಸಿಕ್ಕಿದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು ಹೊರತುಪಡಿಸಿದರೆ, ಕಲಬುರಗಿಗೆ ಮೂರು ಸಚಿವ ಸ್ಥಾನಗಳ ಮೂಲಕ ಈ ಬಾರಿ ಬಂಪರ್ ಲಭಿಸಿದೆ.
- Dattatraya Patil
- Updated on: Aug 3, 2026
- 3:18 pm
“ನಮ್ಮ ಶಾಲೆಗೆ ರಸ್ತೆ ಮಾಡಿಸಿಕೊಡಿ”: ಯಡ್ರಾಮಿಯಲ್ಲಿ ಅಧಿಕಾರಿಗಳ ವಿರುದ್ಧ ಶಾಲಾ ಮಕ್ಕಳ ಆಕ್ರೋಶ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ವಸ್ತಾರಿ ಗ್ರಾಮದಲ್ಲಿ ಶಾಲಾ ಮಕ್ಕಳು ಕೆಸರು ರಸ್ತೆಯಲ್ಲೇ ಸಂಕಷ್ಟ ಪಟ್ಟು ಶಾಲೆಗೆ ತೆರಳುತ್ತಿದ್ದಾರೆ. ನೂತನ ಪ್ರೌಢಶಾಲೆ ಕಟ್ಟಡಕ್ಕೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಮಳೆಗಾಲದಲ್ಲಿ ಚಪ್ಪಲಿಗಳನ್ನು ಕೈಯಲ್ಲಿ ಹಿಡಿದು ಕೆಸರಿನಲ್ಲೇ ನಡೆದು ವಿದ್ಯಾರ್ಥಿಗಳು ಶಾಲೆಗೆ ತಲುಪುತ್ತಿದ್ದಾರೆ. ಕೂಡಲೇ ಉತ್ತಮ ರಸ್ತೆ ನಿರ್ಮಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
- Dattatraya Patil
- Updated on: Jul 31, 2026
- 2:40 pm