AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾತ್ರೇಯ ಪಾಟೀಲ, ಕಲಬುರಗಿ

ದತ್ತಾತ್ರೇಯ ಪಾಟೀಲ, ಕಲಬುರಗಿ

Author - TV9 Kannada

dattatraya.patil@tv9.com

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಲಬುರಗಿ: ತೊಗರಿ, ಈರುಳ್ಳಿ ಬೆಳೆಗೆ ‘ಕಸ್ಕೂಟಾ’ ಮಾರಿಯ ಕಾಟ, ಬೆಳೆ ಕಳೆದುಕೊಂಡು ಕಂಗಾಲಾದ ರೈತರು

ಕಲಬುರಗಿ: ತೊಗರಿ, ಈರುಳ್ಳಿ ಬೆಳೆಗೆ ‘ಕಸ್ಕೂಟಾ’ ಮಾರಿಯ ಕಾಟ, ಬೆಳೆ ಕಳೆದುಕೊಂಡು ಕಂಗಾಲಾದ ರೈತರು

ಅತಿವೃಷ್ಟಿಯ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದ ಕಲಬುರಗಿ ಜಿಲ್ಲೆಯ ರೈತರ ಬೆಳೆಗಳಿಗೆ ಈಗ ‘ಕಸ್ಕೂಟಾ’ ಎಂಬ ಪರಾವಲಂಬಿ ರೋಗ ಶಾಪವಾಗಿ ಪರಿಣಮಿಸಿದೆ. ಚಿಂಚೋಳಿ, ಸೇಡಂ ಮತ್ತು ಚಿತ್ತಾಪುರ ಭಾಗದ ಸಾವಿರಾರು ಹೆಕ್ಟೇರ್ ಪ್ರದೇಶದ ತೊಗರಿ ಹಾಗೂ ಈರುಳ್ಳಿ ಬೆಳೆಗಳು ಈ ರೋಗದಿಂದ ನಾಶವಾಗುತ್ತಿವೆ. ವಿದೇಶಿ ಮೂಲದ ಈ ರೋಗಕ್ಕೆ ಸೂಕ್ತ ಮದ್ದಿಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ವ್ಯಕ್ತಿಯೋರ್ವ ಹಾಡಹಗಲೇ ಪತ್ನಿಯ ಕತ್ತು ಕೊಯ್ದು ಬಳಿಕ ಕಾರು ಹಾಯಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕಾರಿನಲ್ಲಿ ಕರೆದುಕೊಂಡು ಬಂದು ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದಿದ್ದಾನೆ. ಬಳಿಕ ರಕ್ತಸಿಕ್ತದಲ್ಲಿ ತಪ್ಪಿಸಿಕೊಂಡು ಜಮೀನಿನಲ್ಲಿ ಓಡುತ್ತಿದ್ದ ಪತ್ನಿಗೆ ಕಾರಿನಿಂದ ಗುದ್ದಿ ಮೇಲೆ ಹಾಯಿಸಿ ಕೊಂದು ವಿಕೃತಿ ಮೆರೆದಿದ್ದಾನೆ. ಅಷ್ಟಕ್ಕೂ ಈ ರೀತಿ ವಿಕೃತವಾಗಿ ಸಾಯಿಸುವಷ್ಟು ಆಗಿದ್ದೇನು? ಎನ್ನುವ ವಿವರ ಇಲ್ಲಿದೆ.

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲೆಕ್ಕಪತ್ರ ಪರಿಶೋಧನೆಯಲ್ಲಿ ಬೆಳಕಿಗೆ ಬಂದರೂ, ಆರಂಭದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಕುಲಪತಿಗಳ ಹೇಳಿಕೆಗಳು ಬದಲಾಗುತ್ತಿರುವುದು ಮತ್ತು ತನಿಖೆಯಲ್ಲಿನ ಅನುಮಾನಗಳು ಪ್ರಕರಣದ ಸುತ್ತ ಮತ್ತಷ್ಟು ಗೊಂದಲ ಮೂಡಿಸಿವೆ.

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿಯೊಂದು ಬಯಲಾಗಿದೆ. ರೇಷನ್ ಅಂಗಡಿ ಮಾಲೀಕರು ಬಡವರಿಗೆ ಸೇರಬೇಕಾದ ಉಚಿತ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರ, ತೆಲಂಗಾಣಕ್ಕೆ ಸಾಗಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಅಕ್ಕಿ ಸಾಗಣೆ ದೃಶ್ಯ ಸೆರೆಯಾಗಿದೆ. ಈ ದಂಧೆಗೆ ಕೂಡಲೇ ಕಡಿವಾಣ ಹಾಕುವಂತೆ ಒತ್ತಾಯ ಕೇಳಿಬಂದಿದೆ.

ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್​​​ಗಳಲ್ಲಿ ಸೌದೆ ಒಲೆ ಮೇಲೆ ಅಡುಗೆ ಮಾಡಲಾಗಿದೆ.

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಸ್ಥಾಪಿತವಾದ ಗುಲಬರ್ಗಾ ವಿಶ್ವವಿದ್ಯಾಲಯದ 794 ಎಕರೆ ಜಮೀನು ಈಗ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣಿಗೆ ಬಿದ್ದಿದೆ. 18 ಇಲಾಖೆಗಳು ಬಸ್ ನಿಲ್ದಾಣ, ಕ್ರಿಕೆಟ್ ಮೈದಾನ ಸೇರಿ 374 ಎಕರೆ ಜಾಗಕ್ಕೆ ಬೇಡಿಕೆ ಇಟ್ಟಿವೆ. ಆದರೆ, ವಿವಿಯ ಸಿಂಡಿಕೇಟ್ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ವಿಶ್ವವಿದ್ಯಾಲಯ ಮತ್ತು ಸರ್ಕಾರ ನಡುವೆ ಭೂ ವಿವಾದ ತೀವ್ರಗೊಂಡಿದೆ.

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಗಂಡ ಹೆಂಡತಿ ತಮ್ಮ ಪಾಡಿಗೆ ತಾವು ಇದ್ದರು. ಆದ್ರೆ, ಗೆಳತಿಯ ಪ್ರಿಯಕರನ ಒಂದು ಫೋನ್ ಕರೆ ಸಂಸಾರವನ್ನೇ ಛಿದ್ರ ಛಿದ್ರ ಮಾಡಿ ಹಾಕಿದೆ. ಹೌದು.. ಹೆಂಡ್ತಿ ತನ್ನ ಫ್ರೆಂಡ್​​ ಲವ್​​ನಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೇ ವಿಚಾರಕ್ಕೆ ಗೆಳತಿಯ ಪ್ರಿಯಕರ ಕಾಲ್ ಮಾಡಿದ್ದಾನೆ. ಬಳಿಕ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಕೊನೆಗೆ ಸಾವಿನಲ್ಲಿ ಅಂತ್ಯವಾಗಿದೆ.

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆ ರಥೋತ್ಸವ ವೇಳೆ ದುರಂತ ಸಂಭವಿಸಿದೆ. ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರ್ಚ್ 8ರಂದು ನಡೆದ ಈ ಘಟನೆಯಲ್ಲಿ ಜನಸಮೂಹ ಹೆಚ್ಚಾಗಿದ್ದರಿಂದ ರಥ ನಿಯಂತ್ರಣ ತಪ್ಪಿ ಚಲಿಸಿದೆ. ಗಾಯಾಳು ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಯನ್ನ ಹೆದರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಲ್ಲಿ 1069 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿಗಳಿಂದ ಅಭಿವೃದ್ಧಿ ಮರೆತಿದೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಲಾಗಿದೆ.

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು

ಕಲಬುರಗಿ ನಿಂಬರ್ಗಾದಲ್ಲಿ ಹೋಳಿ ಹಬ್ಬದಂದು ಹಿಜಾಬ್/ಬುರ್ಖಾ ಧರಿಸಿ ಬಣ್ಣದಾಟ ಆಡಿದ ಪ್ರಕರಣದಲ್ಲಿ ಐವರು ಯುವಕರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸುತ್ತಿದ್ದು, ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಗಿದೆ.