ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಟೌನ್ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ
ಬಿಡದಿ ಟೌನ್ಶಿಪ್ ಯೋಜನೆ ಪರ, ವಿರುದ್ಧ ರೈತರು ರಣಕಹಳೆ ಮೊಳಗಿಸಿದ್ದಾರೆ. ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಅದರಲ್ಲೂ ಹೆಚ್ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಜಟಾಪಟಿ ಜೋರಾಗಿದೆ. ರೈತರ ಜೊತೆ ಚರ್ಚಿಸೋಣ ಎಂದು ಸವಾಲು ಹಾಕಿದ್ದ ಕುಮಾರಸ್ವಾಮಿ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟಿದ್ದರು. ಈ ವೇಳೆ ಯೋಜನೆ ಪರ ಪ್ರತಿಭಟನಾನಿರತ ರೈತರಿಂದ ಹೈಡ್ರಾಮವೇ ನಡೆದಿದೆ.
- Dileep CP
- Updated on: Jun 27, 2026
- 3:39 pm
ಮುತ್ತತ್ತಿ ಕಾವೇರಿ ನದಿಯಲ್ಲಿ ಐವರು ಜಲಸಮಾಧಿ: ಕೊನೇ ಕ್ಷಣದ ವಿಡಿಯೋ ವೈರಲ್
Mandya News: ಮಂಡ್ಯದ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಜಲಕ್ರೀಡೆಗೆ ಇಳಿದಿದ್ದ ನಾಲ್ವರು ಮಹಿಳೆಯರು ಮತ್ತು ಅವರನ್ನು ರಕ್ಷಿಸಲು ಯತ್ನಿಸಿದ ಚಾಲಕ ಸೇರಿ ಐವರು ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಸಾವಿಗೂ ಮುನ್ನ ಖುಷಿಯಿಂದ ನೀರಿಗೆ ಇಳಿದಿದ್ದ ದೃಶ್ಯಗಳು ವೈರಲ್ ಆಗಿದ್ದು, ಜಿಲ್ಲಾಧಿಕಾರಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
- Dileep CP
- Updated on: Jun 25, 2026
- 2:16 pm
ಕಾವೇರಿ ನದಿಯಲ್ಲಿ ಐವರು ಜಲಸಮಾಧಿ ಕೇಸ್: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
Mandya News: ಮಂಡ್ಯದ ಮುತ್ತತ್ತಿ ಕಾವೇರಿ ನದಿಯಲ್ಲಿ ಕಾಲು ಜಾರಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಜಲಸಮಾಧಿಯಾದ ದಾರುಣ ಘಟನೆ ಮುತ್ತತ್ತಿಯಲ್ಲಿ ನಡೆದಿತ್ತು. ಈ ವೇಳೆ ಸ್ಥಳೀಯರ ಸಮಯಪ್ರಜ್ಞೆಯಿಂದ ಬದುಕುಳಿದ ಏಕೈಕ ವ್ಯಕ್ತಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆ ಕ್ಷಣ ಅಲ್ಲಿ ಆಗಿದ್ದೇನೆಂಬ ಬಗ್ಗೆ ವಿವರಿಸಿದ್ದಾರೆ.
- Dileep CP
- Updated on: Jun 25, 2026
- 11:46 am
ಡೆಡ್ ಸ್ಟೋರೇಜ್ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್ಎಸ್ನಿಂದ ಮಾತ್ರ ನೀರು
ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುತ್ತಿವೆ. ಕಬಿನಿ ಡ್ಯಾಂ ಡೆಡ್ ಸ್ಟೋರೇಜ್ ಹಂತ ತಲುಪಿದ್ದು, ಕೆಆರ್ಎಸ್ನಲ್ಲಿ ಕೇವಲ 6 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಬೆಂಗಳೂರು, ಮೈಸೂರು, ಮಂಡ್ಯ ನಗರಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಬೆಳೆಗಳಿಗೆ ನೀರಾವರಿಗಾಗಿ ಭಾರೀ ಒತ್ತಡ ಎದುರಾಗಿದೆ.
- Dileep CP
- Updated on: Jun 25, 2026
- 9:01 am
ಚನ್ನಪಟ್ಟಣ ಮೂಲದ ಐವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ
Mandya News: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಭಾರಿ ದುರಂತ ಒಂದು ಸಂಭವಿಸಿದೆ. ದೇವಸ್ಥಾನಕ್ಕೆ ತೆರಳಿದ್ದಾಗ ಚನ್ನಪಟ್ಟಣ ಮೂಲದ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಸದ್ಯ ಹಲಗೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
- Dileep CP
- Updated on: Jun 24, 2026
- 7:43 pm
ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ: ಗಣಂಗೂರು ಟೋಲ್ ಪ್ಲಾಜಾ ಬಳಿ ಹೈಡ್ರಾಮ
TV9 Kannada News: ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಮಂಡ್ಯದ ಗಣಂಗೂರು ಟೋಲ್ ಪ್ಲಾಜಾ ಬಳಿ ರೈತರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಟೋಲ್ ಸ್ಟಿಕ್ಗಳನ್ನು ಮುರಿದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Dileep CP
- Updated on: Jun 23, 2026
- 2:01 pm
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ
ಮೇಕೆದಾಟು ಯೋಜನೆಗೆ ತಮಿಳುನಾಡಿನ ನಿರಂತರ ಆಕ್ಷೇಪಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ ಈ ಯೋಜನೆ ನಿರ್ಣಾಯಕವಾಗಿದೆ. ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದರೂ, ತಮಿಳುನಾಡು ಸಹಮತ ನೀಡುತ್ತಿಲ್ಲ. ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಸಹೋದರತ್ವದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
- Dileep CP
- Updated on: Jun 21, 2026
- 11:15 am
ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ
ಮಂಡ್ಯದ ಪಿಇಟಿ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಕಪಾಲಭಾತಿ ಮತ್ತು ಅನುಲೋಮ-ವಿಲೋಮ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಸನಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.
- Dileep CP
- Updated on: Jun 21, 2026
- 9:17 am
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು: ಒಂದೇ ವೇದಿಕೆ ಹಂಚಿಕೊಂಡ BJP-JDS ಮುಖಂಡರು
ಮಂಡ್ಯದಲ್ಲಿ ಮೈತ್ರಿ ಪಕ್ಷದ ನಾಯಕರಾದ ನಾರಾಯಣಗೌಡ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರು ಹಿಂದಿನ ಭಿನ್ನಾಭಿಪ್ರಾಯಗಳನ್ನು ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಸುಧೀರ್ಘ ಆಡಳಿತದ ಸ್ಮರಣೆ ಕಾರ್ಯಕ್ರಮದಲ್ಲಿ ಈ ಬೆಳವಣಿಗೆ ನಡೆದಿರೋದು ಭಾರಿ ಕುತೂಹಲ ಮೂಡಿಸಿದೆ.
- Dileep CP
- Updated on: Jun 14, 2026
- 1:02 pm
ಮಂಡ್ಯ: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಮಧುಸೂದನ್ 10,000 ರೂ.ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ ಪೋಡಿ ಕೆಲಸಕ್ಕಾಗಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 10,000 ರೂ. ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
- Dileep CP
- Updated on: Jun 13, 2026
- 7:14 am
ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ ಶಂಕೆ: ದೇಗುಲದ ಸಿಬ್ಬಂದಿ ವಿರುದ್ಧವೇ ದೂರು ದಾಖಲು
ಮಂಡ್ಯದ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಹುಂಡಿ ಹಣ, ಚಿನ್ನಾಭರಣ ಕಳ್ಳತನ ಶಂಕೆ ಹಿನ್ನೆಲೆಯಲ್ಲಿ ಇಒ ದೂರು ನೀಡಿದ್ದು, ಅರ್ಚಕರು ಹಾಗೂ ಸಿಬ್ಬಂದಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪದೇ ಪದೇ ಸಿಸಿ ಕ್ಯಾಮರಾ ಡಿವಿಆರ್ನ ಕಿಡಿಗೇಡಿಗಳು ಕೆಡಿಸುತ್ತಿದ್ದರು. ದೇವಾಲಯದಲ್ಲಿ ಹಿಂದಿನಿಂದಲೂ ಹುಂಡಿಯಲ್ಲಿನ ಹಣ, ಚಿನ್ನ, ಬೆಳ್ಳಿಯ ವಸ್ತುಗಳು ಕಳ್ಳತನವಾಗುತ್ತಿದ್ದ ಆರೋಪದ ಹಿನ್ನೆಲೆ ರಹಸ್ಯ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿತ್ತು. ಆದರೆ ಅದನ್ನೂ ಕೆಡಿಸಿರೋದು ಗೊತ್ತಾಗಿದೆ.
- Dileep CP
- Updated on: Jun 10, 2026
- 6:20 pm
ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್ ನೋಟ್ನಿಂದ ಸಾವಿನ ರಹಸ್ಯ ಬಯಲಿಗೆ
ಮಂಡ್ಯ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದು ಹೋಗಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ಪ್ರಭಾಕರ್, ಪತ್ನಿ ಜ್ಯೋತಿ, ನವವಿವಾಹಿತ ಮಗ ಸಂತೋಷ್ ಸಾವನ್ನಪ್ಪಿದ್ದು, ಇಡೀ ನಗರವೇ ಬೆಚ್ಚಿಬಿದ್ದಿದೆ. ತಾಯಿ ಮಗನ ಶವ ಮನೆಯಲ್ಲೇ ಪತ್ತೆಯಾಗಿದ್ದರೆ, ಕುಟುಂಬದ ಯಜಮಾನನ ಮೃತದೇಹ ಬಟ್ಟೆ ಅಂಗಡಿಯಲ್ಲಿ ಪತ್ತೆಯಾಗಿದೆ. ಅಷ್ಟಕ್ಕೂ ಆಗಿದ್ದೇನು? ಸಾವಿಗೆ ಕಾರಣ ಏನು ಎನ್ನುವುದು ಡೆತ್ ನೋಟ್ ಬಹಿರಂಗಪಡಿಸಿದೆ.
- Dileep CP
- Updated on: Jun 9, 2026
- 5:33 pm