ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಇನ್ಸ್ಟಾಗ್ರಾಮ್ ಸುಂದ್ರಿ ಜತೆ ಹೋಗಿದ್ದವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಆತ ತನ್ನ ಹೆಂಡತಿ ಮಕ್ಕಳನ್ನು ಎಲ್ಲರನ್ನು ಬಿಟ್ಟು ಇನ್ಸ್ಟಾಗ್ರಾಮನಲ್ಲಿ ಪರಿಚಯವಾಗಿದ್ದ ಸುಂದರಿ ಹಿಂದೆ ಬಿದ್ದಿದ್ದ. ಅಷ್ಟೇ ಅಲ್ಲದೇ ಆಕೆಯನ್ನು ಮನೆಗೆ ಕರೆದುಕೊಂಡು ಬಂದು ಇಟ್ಟುಕೊಂಡಿದ್ದ. ಆದ್ರೆ, ಆಕೆಯ ಜೊತೆಯಲ್ಲಿ ಇದ್ದಾಗಲೇ ಆತ ಭೀಕರ ಕೊಲೆಯಾಗಿದ್ದು, ಆ ಕೊಲೆಗೆ ಆಕೆಯ ಹಣ ಆಸ್ತಿ ಮೋಹವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದ್ರೆ ಪೊಲೀಸ್ ತನಿಖೆಯಲ್ಲಿ ಕೊಲೆಗೆ ಅಸಲಿ ಕಾರಣ ಬಟಾಬಯಲಾಗಿದೆ.
- Dileep CP
- Updated on: Mar 17, 2025
- 8:59 pm
4 ಎಸೆತಗಳಲ್ಲಿ 20 ರನ್ ಚಚ್ಚಿ ಮ್ಯಾಚ್ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!
ಆತ ಉತ್ತಮ ಟೆನಿಸ್ ಕ್ರಿಕೆಟ್ ಪ್ಲೇಯರ್. ಕೇವಲ 4 ಎಸೆತಗಳಲ್ಲಿ ಬರೋಬ್ಬರಿ 20 ರನ್ ಬಾರಿಸಿ ಸೋಲುವ ತಂಡವನ್ನ ಗೆಲ್ಲಿಸಿದ್ದಾನೆ. ಇದೇ ಖುಷಿಯಲ್ಲಿ ಪಾರ್ಟಿ ಮಾಡಿ ಮನೆಗೆ ಹೊರಟವ ರಸ್ತೆ ಪಕ್ಕದ ಪೊದೆಯಲ್ಲಿ ಕೋಮ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆದ್ರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದು, ಸೋಲುವ ಪಂದ್ಯವನ್ನು ಗೆಲ್ಲಿಸಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಈ ಯುವಕನ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.
- Dileep CP
- Updated on: Mar 15, 2025
- 5:55 pm
ಕಟ್ಟಿಕೊಂಡವಳನ್ನ ಬಿಟ್ಟು ಇನ್ಸ್ಟಾಗ್ರಾಮ್ ಸುಂದ್ರಿ ಜೊತೆ ಹೋಗಿ ಹೆಣವಾದ..!
ವ್ಯಕ್ತಿಯೋರ್ವ ಕಟ್ಟಿಕೊಂಡವಳನ್ನ ಬಿಟ್ಟು ಇಟ್ಟುಕೊಂಡವಳ ಜೊತೆ ಹೋಗಿ ಹೆಣವಾದ್ದಾನೆ. ಹೌದು.. ಶಾಸ್ತ್ರೋಕ್ತವಾಗಿ ಮದುವೆಯಾದ ಪತ್ನಿಯನ್ನ ಬಿಟ್ಟು ಇನ್ಸ್ಟ್ರಾಮ್ನಲ್ಲಿ ಪರಿಚಯವಾದ ಯುವತಿ ಜೊತೆ ಹೋದವನು ಕೊಲೆಯಾಗಿದ್ದಾನೆ. ಅಕ್ರಮ ಸಂಬಂಧ ಬೆಳೆಸಿಕೊಂಡವ ಬರ್ಬರವಾಗಿ ಹತ್ಯೆಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಮೃತ ದೇಹ ಪತ್ತೆಯಾಗಿದ್ದು,ಕೃತ್ಯ ನಡೆದ ನಂತರ ಇನ್ಸ್ಟಾಗ್ರಾಮ್ ಯುವತಿ ನಾಪತ್ತೆಯಾಗಿದ್ದು,ಇದೀಗ ಆಕೆಯ ಸುತ್ತ ಅನುಮಾನದ ಹುತ್ತ ಬೆಳೆದಿದೆ.
- Dileep CP
- Updated on: Mar 14, 2025
- 6:36 pm
ಸ್ನೇಹಕೊಂದ ಕೊಲೆಗಾತಿ: ಮೈಸೂರಿನಲ್ಲಿ ಬೆಚ್ಚಿ ಬೀಳಿಸಿದ ವೃದ್ದೆಯ ಮರ್ಡರ್ ಕಹಾನಿ
ಮೈಸೂರಿನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯಲ್ಲಿ, ಸ್ನೇಹಿತೆಯೊಬ್ಬರು ಸಾಲಕ್ಕಾಗಿ ವೃದ್ಧೆಯನ್ನು ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆಕೆಯೇ ಕೊಲೆ ಮಾಡಿ ಚಿನ್ನಾಭರಣಗಳನ್ನು ಗಿರವಿ ಇಟ್ಟು, ಸಾಲ ತೀರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಘಟನೆಯಿಂದ ಮೈಸೂರು ಜನರು ಬೆಚ್ಚಿಬಿದಿದ್ದಾರೆ.
- Dileep CP
- Updated on: Mar 13, 2025
- 3:57 pm
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೈಸೂರು ಮೃಗಾಲಯದಲ್ಲಿ ಬೇಸಿಗೆಯ ತೀವ್ರ ಬಿಸಿಲಿನಿಂದ ಪ್ರಾಣಿಗಳನ್ನು ರಕ್ಷಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೆಟ್ ಸ್ಪ್ರಿಂಕ್ಲರ್ಗಳು, ನೆರಳಿನ ವ್ಯವಸ್ಥೆ ಮತ್ತು ತಂಪಾದ ಹಣ್ಣುಗಳ ವಿತರಣೆಯ ಮೂಲಕ ಪ್ರಾಣಿಗಳಿಗೆ ತಂಪನ್ನು ಒದಗಿಸಲಾಗುತ್ತಿದೆ. ಹುಲಿ, ಸಿಂಹ, ಆನೆ ಮುಂತಾದ ಪ್ರಾಣಿಗಳಿಗೆ ತಂಪಾದ ವಾತಾವರಣದ ವ್ಯವಸ್ಥೆ ಮಾಡಲಾಗಿದೆ.
- Dileep CP
- Updated on: Mar 12, 2025
- 9:17 pm
ಮೈಸೂರಿನಲ್ಲಿ ನಡೆಯುತ್ತಿದೆಯಾ ಲವ್ ಜಿಹಾದ್? ಮ್ಯಾರೇಜ್ ರಿಜಿಸ್ಟರ್ಗಾಗಿ ತಪ್ಪು ಮಾಹಿತಿ ಕೊಟ್ಟ ಅನ್ಯಕೋಮಿನ ಯುವಕ, ಯುವತಿ
ಮೈಸೂರಿನಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕ ಹಾಗೂ ಹಿಂದು ಯುವತಿ ತಪ್ಪು ವಿಳಾಸ ಕೊಟ್ಟು ಮದುವೆಯಾಗಲು ಮುಂದಾಗಿರುವಂತಹ ಘಟನೆ ನಡೆದಿದೆ. ಹಾಗಾಗಿ ಸಾಂಸ್ಕೃತಿಕ ನಗರಿಯಲ್ಲಿ ಲವ್ ಜಿಹಾದ್ ನಡೆಯುತ್ತಿದ್ದೆಯಾ ಎಂಬ ಅನುಮಾನಗಳು ವ್ಯಕ್ತವಾಗುತ್ತಿದೆ. ಪೊಲೀಸರು ತನಿಖೆ ನಡೆಸಬೇಕೆಂದು ಒತ್ತಾಯ ಕೇಳಿಬಂದಿದೆ.
- Dileep CP
- Updated on: Mar 8, 2025
- 5:03 pm
ಭಯಾನಕ ಬೇಟೆ: ಹುಲಿ ಬೇಟೆಗೆ ಬಲಿಯಾದ ಜಿಂಕೆ ಮರಿ, ಅಪರೂಪದ ವಿಡಿಯೋ ಇಲ್ಲಿದೆ ನೋಡಿ
ಹುಲಿಯೊಂದು ಜಿಂಕೆ ಮರಿಯನ್ನು ಬೇಟೆಯಾಡಿದ ಅಪರೂಪದ ದೃಶ್ಯ ಹೆಚ್ಡಿ ಕೋಟೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದಮ್ಮನಕಟ್ಟೆ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಕಾಣಿಸಿದ್ದು, ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು, ನೀರು ಕುಡಿಯಲು ಬಂದ ಹುಲಿ, ಜಿಂಕೆ ಮರಿಯನ್ನು ಬೇಟೆಯಾಡಿದ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
- Dileep CP
- Updated on: Mar 6, 2025
- 9:38 am
ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ: ಇಡೀ ಮನೆ ಬೆಂಕಿಗಾಹುತಿ
ಮೈಸೂರಿನ ಅಗ್ರಹಾರದಲ್ಲಿ ಒಬ್ಬ ವ್ಯಕ್ತಿ ಕುಡಿದ ನಶೆಯಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬೆಳಗ್ಗೆಯೇ ಕುಡಿದು ಬಂದು ಮತ್ತೆ ಕುಡಿಯಲು ಹಣಕ್ಕಾಗಿ ಮನೆಯವರ ಜೊತೆ ಜಗಳವಾಗಿದೆ. ಈ ವೇಳೆ ಸೇದುತ್ತಿದ್ದ ಬೀಡಿ ಹಾಸಿಗೆ ಮೇಲೆ ಇಟ್ಟಿದ್ದಕ್ಕೆ ಬೆಂಕಿ ಹೊತ್ತುಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ.
- Dileep CP
- Updated on: Mar 1, 2025
- 4:05 pm
ಮೈಸೂರು: ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಬೆಂಕಿ ಅವಘಡ
ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಡಾಲಿ ಧನಂಜಯ ಅವರ ಮದುವೆ ಸೆಟ್ ಬಳಿ ಈ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಈ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಎರಡು ಮರಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
- Dileep CP
- Updated on: Feb 22, 2025
- 5:27 pm
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೇಸಿಗೆಯಿಂದ ಒಣಗಿರುವ ಕಾಡಿನಲ್ಲಿ ಬೆಂಕಿ ವೇಗವಾಗಿ ಹರಡುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಈ ಘಟನೆಯಿಂದ ಪರಿಸರಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿದೆ.
- Dileep CP
- Updated on: Feb 21, 2025
- 2:58 pm
ಬಸ್ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟುಗಳನ್ನು ಬಿಟ್ಟುಕೊಡಿ: ಕೆಎಸ್ಆರ್ಟಿಸಿ ಮೈಸೂರು ವಿಭಾಗದಿಂದ ಆದೇಶ!
ಮಹಿಳೆಯರಿಗೆ ಬಸ್ಸಿನಲ್ಲಿ ಸೀಟು ಬಿಟ್ಟುಕೊಡಿ ಎಂದು ಹೇಳುವುದನ್ನು ಕೇಳಿರುತ್ತೇವೆ. ಆದರೆ, ಪುರುಷರಿಗೆ ಆಸನ ಕೊಡಿ ಎನ್ನುವುದನ್ನು ಎಲ್ಲಾದರೂ ಕೇಳಿದ್ದೇವೆಯೇ? ಇದೀಗ ಕೆಎಸ್ಆರ್ಟಿಸಿಯ ಮೈಸೂರು ವಿಭಾಗ ಅಂಥದ್ದೊಂದು ಆದೇಶವನ್ನೇ ಹೊರಡಿಸಿದೆ! ಅಚ್ಚರಿ ಆದರೂ ನಂಬಲೇಬೇಕು. ಇದಕ್ಕೆ ಕಾರಣವೇನು? ಆದೇಶದಲ್ಲಿ ಏನಿದೆ? ವಿವರಗಳಿಗೆ ಮುಂದೆ ಓದಿ.
- Dileep CP
- Updated on: Feb 21, 2025
- 10:36 am
ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಲಕ್ಷಾಂತರ ರೂ ಲೂಟಿ ಆರೋಪ: ದಾಖಲೆ ನೀಡಿದ ಕಾನೂನು ವಿದ್ಯಾರ್ಥಿ
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (KSOU) ವ್ಯಾಪಕ ಭ್ರಷ್ಟಾಚಾರ ನಡೆದಿರುವುದಾಗಿ ಒಬ್ಬ ಕಾನೂನು ವಿದ್ಯಾರ್ಥಿ ಆರೋಪಿಸಿದ್ದಾರೆ. ಕೋಟ್ಯಂತರ ರೂ. ಅಕ್ರಮವಾಗಿ ಖರ್ಚು ಮಾಡಲಾಗಿದೆ ಎಂದು ಅವರು ದಾಖಲೆಗಳೊಂದಿಗೆ ಬಹಿರಂಗಪಡಿಸಿದ್ದಾರೆ. ಕಂಪ್ಯೂಟರ್ಗಳು, ಬಟ್ಟೆ ಚೀಲಗಳು, ಕಟ್ಟಡ ದುರಸ್ತಿ ಮತ್ತು ಫೋಟೋಗ್ರಫಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹಣದ ದುರ್ಬಳಕೆಯಾಗಿದೆ ಎಂದು ಆರೋಪಿಸಿದ್ದಾರೆ.
- Dileep CP
- Updated on: Feb 6, 2025
- 8:39 pm