ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ
ಮನೆಯಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಸಹೋದರಿಯರು ನಾಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಆಘಾತಕಾರಿ ಪತ್ರವೊಂದು ಬರೆದಿಟ್ಟು ಹೋಗಿರುವುದು ಕುಟುಂಬದಲ್ಲಿ ಆತಂಕ ಮನೆ ಮಾಡಿದ್ದು, ಗಾಬರಿಗೊಂಡ ಪೋಷಕರು ಪತ್ರದೊಂದಿಗೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಘಟನೆ ನಡೆದಿದ್ದೆಲ್ಲಿ? ಸಹೋದರಿಯರು ಬರೆದ ಪತ್ರದಲ್ಲೇನಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Dileep CP
- Updated on: May 19, 2026
- 3:13 pm
ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷಗಳ ಬಳಿಕ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್!
ಮಂಡ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಬಾಲಕನೋರ್ವ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಓದಲು ಇಷ್ಟವಿಲ್ಲದೆ ಬೆಂಗಳೂರು ಸೇರಿದ್ದ ಈತ ಹೋಟೆಲ್ಗಳಲ್ಲಿ ಕೆಲಸ ಮಾಡುತ್ತಿದ್ದ. ವಿಶೇಷ ಅಂದರೆ ಆತನ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆ ಹಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕಬಡ್ಡಿ ಟೂರ್ನಮೆಂಟ್ನಲ್ಲಿ ಪರಿಚಿತರ ಕಣ್ಣಿಗೆ ಬಿದ್ದು, ಪೊಲೀಸರು ಆತನನ್ನು ಸುರಕ್ಷಿತವಾಗಿ ಕುಟುಂಬಕ್ಕೆ ಸೇರಿಸಿದ್ದಾರೆ.
- Dileep CP
- Updated on: May 13, 2026
- 3:13 pm
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್ಎಸ್
ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ, ಇದು ಜೀವಜಲದ ಸಂಕಷ್ಟವನ್ನು ಹೆಚ್ಚಿಸಿದೆ. ಕಾವೇರಿ ನದಿಯ ಪ್ರಮುಖ ಜಲಾಶಯವಾದ ಕೆಆರ್ಎಸ್ನಲ್ಲಿ ನೀರಿನ ಮಟ್ಟ ತೀವ್ರ ಕುಸಿದಿದೆ. ಮೈಸೂರಿನ ಆಸ್ಪತ್ರೆಗಳಲ್ಲಿ ನೀರಿನ ಕೊರತೆ, ಬೀದರ್ನಲ್ಲಿ ಗೋಡಂಬಿ ಬೆಳೆಗಾರರಿಗೆ ನಷ್ಟ ಉಂಟಾಗಿದೆ. ಮುಂಗಾರು ಮಳೆ ವಿಳಂಬವಾದರೆ ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಎದುರಾಗಿದೆ.
- Dileep CP
- Updated on: May 12, 2026
- 9:51 pm
ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!
ಮಂಡ್ಯ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲಾಡಳಿತವನ್ನು ಆತಂಕಕ್ಕೀಡು ಮಾಡಿದೆ. ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ನಿಗೂಢತೆ ಮುಂದುವರಿದಿದೆ. ಕೆ.ಆರ್.ಪೇಟೆಯ ಡಯಾಗ್ನೋಸ್ಟಿಕ್ ಸೆಂಟರ್ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ಅಕ್ರಮ ಸ್ಕ್ಯಾನಿಂಗ್ ದಂಧೆ ಬಯಲಾಗಿದೆ.
- Dileep CP
- Updated on: May 1, 2026
- 9:34 am
ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ
ಮಂಡ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮಕ್ಕಾಗಿ ಹಾಕಿದ್ದ ಬೃಹತ್ ವೇದಿಕೆ ಕುಸಿದಿದ್ದು, ಶಾಸಕ ರವಿ ಗಣಿಗ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 20,000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿತ್ತು.
- Dileep CP
- Updated on: Apr 30, 2026
- 12:06 pm
ಬೇಸಿಗೆ ಬೇಗೆ ಬೆನ್ನಲ್ಲೇ ಎಳನೀರಿಗೆ ಭಾರಿ ಬೇಡಿಕೆ, ದರವೂ ಏರಿಕೆ: ಪೂರೈಕೆಯಾಗದೆ ವ್ಯಾಪಾರಿಗಳು ಕಂಗಾಲು
ಭಾರತದಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಎಳನೀರಿಗೆ ಬೇಡಿಕೆ ಏರಿದೆ. ಏಷ್ಯಾದ ಅತಿದೊಡ್ಡ ಎಳನೀರು ಮಾರುಕಟ್ಟೆಯಾದ ಮದ್ದೂರಿನಲ್ಲಿ ಎಳನೀರು ಪೂರೈಕೆ ಕಡಿಮೆಯಾಗಿದ್ದು, ಬೆಲೆ ಗಗನಕ್ಕೇರಿದೆ. ನುಸಿ ರೋಗ ಮತ್ತು ಮರಗಳಿಂದ ಎಳನೀರು ಉದುರುತ್ತಿರುವುದರಿಂದ ಪೂರೈಕೆ ಮತ್ತಷ್ಟು ಕುಗ್ಗಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ ಸೇರಿದಂತೆ ಹಲವು ನಗರಗಳಿಗೆ ಇಲ್ಲಿಂದಲೇ ಎಳನೀರು ಸರಬರಾಜಾಗುತ್ತದೆ.
- Dileep CP
- Updated on: Apr 28, 2026
- 12:36 pm
‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ
ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜೊತೆ ಮದುವೆಯಾಗಿ ಆ ಫೋಟೋಗಳನ್ನು ತನ್ನ ಸ್ಟೇಟಸ್ನಲ್ಲಿ ಹಂಚಿಕೊಂಡಿದ್ದಾಳೆ. ಇದರಿಂದ ವಿಷಯ ತಿಳಿದ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಾಗರ್, ತನ್ನ ಪತ್ನಿ ಬರುವಳೆಂಬ ನಿರೀಕ್ಷೆಯಲ್ಲಿ ಸಾಗರ್ 4 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಸಿದ್ಧಪಡಿಸಿದ್ದೆ. ಆದರೆ, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದಿನೊಂದಿಗೆ ಇಂದ್ರನ ಜೊತೆ ಓಡಿ ಹೋಗಿದ್ದಾಳೆ ಎಂದಿದ್ದಾನೆ.
- Dileep CP
- Updated on: Apr 22, 2026
- 12:01 pm
‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು
ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಪತ್ನಿ ರಕ್ಷಿತಾ, ವಿವಾಹವಾದ ಎರಡೇ ವರ್ಷಕ್ಕೆ ಸಾಗರ್ ಸ್ನೇಹಿತ ಇಂದ್ರ ಎಂಬಾತನ ಜತೆ ಓಡಿಹೋಗಿ ಮದುವೆಯಾಗಿದ್ದಾರೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
- Dileep CP
- Updated on: Apr 22, 2026
- 10:37 am
ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ
ಮಂಡ್ಯದಲ್ಲಿ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ, ಪತಿಯ ಸ್ನೇಹಿತ ಇಂದ್ರನ ಎಂಬಾತನ ಜೊತೆ ಪರಾರಿಯಾದ ವಿಲಕ್ಷಣ ವಿದ್ಯಮಾನ ನಡೆದಿದೆ. ಮನೆಯಿಂದ ಹಣ ಮತ್ತು ಒಡವೆಗಳನ್ನು ಹೊತ್ತೊಯ್ದಿರುವ ಈಕೆ, ದೇವಸ್ಥಾನದಲ್ಲಿ ಮದುವೆಯಾಗಿ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ, ಸಾಗರ್ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
- Dileep CP
- Updated on: Apr 22, 2026
- 9:38 am
ಕ್ರಿಕೆಟ್ ಬಾಲ್ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಇದೀಗ ಹೊಸ ರೀತಿಯ ಕಳ್ಳಾಟವೊಂದು ಬಯಲಾಗಿದೆ. ದುಷ್ಕರ್ಮಿಗಳು ಕ್ರಿಕೆಟ್ ಬಾಲ್ ಒಳಗೆ ಗಾಂಜಾ ಮತ್ತು ಮೊಬೈಲ್ ಫೋನ್ ಇರಿಸಿ, ಅದನ್ನು ಜೈಲಿನ ಕಾಂಪೌಂಡ್ ಒಳಗೆ ಎಸೆದು ಪರಾರಿಯಾಗಿದ್ದಾರೆ.
- Dileep CP
- Updated on: Apr 20, 2026
- 2:47 pm
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಗುದ್ದಿ ಚರಂಡಿಗೆ ನುಗ್ಗಿದ ಖಾಸಗಿ ಸ್ಲೀಪರ್ ಬಸ್!
ಮಂಡ್ಯದ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಚರಂಡಿಗೆ ನುಗ್ಗಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
- Dileep CP
- Updated on: Apr 20, 2026
- 10:16 am
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಮಂಡ್ಯ ಜಿಲ್ಲಾಡಳಿತ: ಕಾರಣ ಇಲ್ಲಿದೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಕಳೆದ ಎರಡು ತಿಂಗಳಲ್ಲಿ ನಾಲ್ಕು ಮತ್ತು ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಹೇರಲಾಗಿದೆ. ಮುಂದಿನ ಆದೇಶದವರೆಗೆ ಈ ಪ್ರದೇಶಗಳಿಗೆ ಪ್ರವೇಶವಿರುವುದಿಲ್ಲ.
- Dileep CP
- Updated on: Apr 19, 2026
- 8:59 am