ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಮೆರವಣಿಗೆಗೆ ಕ್ಷಣಗಣನೆ: ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕಳೆದ ವರ್ಷದ ಕಲ್ಲು ತೂರಾಟ ಘಟನೆ ನಡೆದಿದ್ದ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಗಣೇಶೋತ್ಸವದ ನೆಪದಲ್ಲಿ ಮಂಡ್ಯ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಂದಾಗಿ ತಮ್ಮ ರಾಜಕೀಯ ಶಕ್ತಿಯನ್ನೂ ಪ್ರದರ್ಶಿಸಲು ಸಜ್ಜಾಗಿರುವುದರಿಂದ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.
- Dileep CP
- Updated on: Sep 16, 2026
- 11:28 am
ಮದ್ದೂರಿನಲ್ಲಿ ಕಳೆದ ವರ್ಷದ ಕಲ್ಲೆಸೆತಕ್ಕೆ ದೋಸ್ತಿಗಳ ಉತ್ತರ: ನಾಳೆ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ, ಬೃಹತ್ ಮೆರವಣಿಗೆ
ಮಂಡ್ಯದ ಮದ್ದೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಕಳೆದ ವರ್ಷದ ಗಲಭೆಗೆ ಪ್ರತಿಕ್ರಿಯೆಯಾಗಿ 108 ಗಣೇಶ ಮೂರ್ತಿಗಳ ಬೃಹತ್ ವಿಸರ್ಜನಾ ಕಾರ್ಯಕ್ರಮ ಆಯೋಜಿಸಿದೆ. ಇದು ಮೈತ್ರಿಕೂಟದ ರಾಜಕೀಯ ಶಕ್ತಿ ಪ್ರದರ್ಶನವೂ ಆಗಿದ್ದು, ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
- Dileep CP
- Updated on: Sep 15, 2026
- 12:22 pm
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಊರಿನ ಮೂವರು ದಾರುಣ ಸಾವು
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರಿ-ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ, ಅವರ ಸ್ಕೂಟರ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಸಾವನ್ನಪ್ಪಿದ್ದು, ಕೊಪ್ಪ ಗ್ರಾಮದಲ್ಲಿ ಶೋಕ ಮಡುಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Dileep CP
- Updated on: Sep 15, 2026
- 10:07 am
ಡಿಜೆಗೆ ಪೊಲೀಸರಿಂದ ಅನುಮತಿ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಮಂಡ್ಯ ಜಿಲ್ಲೆಯ ಕೆ.ಬೆಟ್ಟಹಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಗೆ ಡಿಜೆ ಬಳಕೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಭಕ್ತರು ಗಣೇಶ ಮೂರ್ತಿಯನ್ನು ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿಟ್ಟು ಧರಣಿ ನಡೆಸಿದ್ದಾರೆ. ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಪೊಲೀಸರ ನಡೆ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Dileep CP
- Updated on: Sep 14, 2026
- 10:26 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮದ್ದೂರಲ್ಲಿ ಕಲ್ಲುತೂರಾಟ ಕೇಸ್: ವರ್ಷದ ಬಳಿಕ ಬಿಜೆಪಿ, ಹಿಂದೂಪರ ಸಂಘಟನೆಗಳ ಮುಖಂಡರಿಗೆ ಸಮನ್ಸ್
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಳೆದ ವರ್ಷ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ಕಲ್ಲುತೂರಾಟ ಘಟನೆಯನ್ನು ಖಂಡಿಸಿ ಪ್ರತಿಭಟಿಸಿದ್ದ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ 23 ಮುಖಂಡರಿಗೆ ಪೊಲೀಸರು ವರ್ಷದ ಬಳಿಕ ಸಮನ್ಸ್ ಜಾರಿಗೊಳಿಸಿದ್ದಾರೆ. ಈ ನಡೆಗೆ ಮದ್ದೂರಿನ ಬಿಜೆಪಿ ಮುಖಂಡ ಎಸ್.ಪಿ. ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಮತಬ್ಯಾಂಕ್ಗಾಗಿ ಒಂದೇ ಕೋಮಿನ ಓಲೈಕೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
- Dileep CP
- Updated on: Sep 13, 2026
- 1:51 pm
ಮಂಡ್ಯದಲ್ಲಿ ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್ಗೆ ಗಾಯ
ಮಂಡ್ಯದಲ್ಲಿ ಬೃಹತ್ ಗಣಪತಿ ಮೂರ್ತಿ ಅನಾವರಣ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ಗೆ ತಲೆಗೆ ಗಾಯವಾಗಿದೆ. ಮೆರವಣಿಗೆಗೂ ಮುನ್ನ ಮೂರ್ತಿ ರಿವೀಲ್ ಮಾಡುತ್ತಿದ್ದಾಗ ಸ್ಕ್ರೀನ್ ಕೊಂಡಿ ಬಿದ್ದು ಈ ಘಟನೆ ಸಂಭವಿಸಿದೆ. ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
- Dileep CP
- Updated on: Sep 13, 2026
- 7:29 am
ಕೃಷ್ಣ ಜನ್ಮಾಷ್ಟಮಿ: ಮಂಡ್ಯದ ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಮಕ್ಕಳ ಫ್ಯಾನ್ಸಿ ಡ್ರೆಸ್ ಸ್ಪರ್ಧೆ
ಮಂಡ್ಯದ ಶಂಕರನಗರದಲ್ಲಿರುವ ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿತ್ತು. ಈ ಪ್ರಯುಕ್ತ ಆಯೋಜಿಸಲಾದ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪುಟಾಣಿಗಳು ಕೃಷ್ಣ ಮತ್ತು ರಾಧೆಯ ವೇಷಭೂಷಣದಲ್ಲಿ ಮಿಂಚಿದರು. ಮಕ್ಕಳ ವಿಭಿನ್ನ ಹಾಗೂ ಸುಂದರ ವೇಷಭೂಷಣಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾದವು. ಈ ಸ್ಪರ್ಧೆಯು ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ವಿಶೇಷ ಮೆರಗು ನೀಡಿತ್ತು.
- Dileep CP
- Updated on: Sep 12, 2026
- 10:41 pm
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
ಮಂಡ್ಯದ ಅಶೋಕ ನಗರದಲ್ಲಿರುವ ಟೀ ಡೇ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಂಗಡಿಯಲ್ಲಿದ್ದ 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ತಿಮ್ಮೇಗೌಡರ ಒಡೆತನದ ಈ ಅಂಗಡಿಯ ಪಕ್ಕದ ಟೈಲ್ಸ್ ಅಂಗಡಿಗೂ ಬೆಂಕಿ ತಗುಲಿತ್ತು. ಘಟನೆಯಿಂದ ವ್ಯಾಪಾರಿಯ ಕನಸುಗಳು ಭಗ್ನಗೊಂಡಿವೆ.
- Dileep CP
- Updated on: Sep 12, 2026
- 12:20 pm
ಸುಪ್ರೀಂಕೋರ್ಟ್ಗೆ ಹೋಗ್ತೀವಿ ಎಂದಿದ್ದ ಸರ್ಕಾರ ಯೂ-ಟರ್ನ್: ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಬಿಡುಗಡೆ!
ಮೊನ್ನೆಯಷ್ಟೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶಿಸಿತ್ತು. ಸುಪ್ರೀಂಕೋರ್ಟ್ಗೆ ಹೋಗ್ತೀವಿ ನೀರು ಬಿಡಲ್ಲ ಎಂದಿದ್ದ ಸರ್ಕಾರ, ಇದೀಗ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. ಸದ್ಯ ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
- Dileep CP
- Updated on: Sep 10, 2026
- 9:44 pm
ರಂಗನತಿಟ್ಟುನಲ್ಲಿ ವಿದೇಶಿ ಮಾದರಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಪ್ರವಾಹದಿಂದ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಹಾಗೂ ಪಕ್ಷಿಗಳ ಗೂಡುಗಳು ಕೊಚ್ಚಿ ಹೋಗುವುದನ್ನು ತಡೆಯಲು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಕೊಂಡಿದೆ. ಗೇಬಿಯನ್ ತಂತ್ರಜ್ಞಾನದ ಮೂಲಕ ತಡೆಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ಇದು ಪಕ್ಷಿಗಳಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಿ, ಅವುಗಳ ಸಂತಾನೋತ್ಪತ್ತಿಗೆ ಸಹಕಾರಿಯಾಗಲಿದೆ. ಈ ಯೋಜನೆಯು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾದ ರಂಗನತಿಟ್ಟನ್ನು ಮುಂದಿನ ಪೀಳಿಗೆಗೂ ಉಳಿಸಲು ನೆರವಾಗಲಿದೆ.
- Dileep CP
- Updated on: Sep 10, 2026
- 5:25 pm
ಮಂಡ್ಯದ ವಸತಿಶಾಲೆಯಲ್ಲಿ ಫುಡ್ ಪಾಯಿಸನ್: 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮಂಡ್ಯದ ಕೆ.ಆರ್.ಪೇಟೆ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಆಹಾರ ವಿಷಯುಕ್ತಗೊಂಡು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಊಟ ಸೇವಿಸಿದ ನಂತರ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಎಲ್ಲರೂ ಚೇತರಿಸಿಕೊಂಡು ವಸತಿಶಾಲೆಗೆ ಮರಳಿದ್ದಾರೆ. ಶಾಸಕ ಹೆಚ್.ಟಿ. ಮಂಜು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- Dileep CP
- Updated on: Sep 10, 2026
- 11:01 am
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್ಸ್
ಕಾಂಗ್ರೆಸ್ ಸರ್ಕಾರ ಅಧಿಕಾರ ಹಸ್ತಾಂತರದ ನಂತರ 100 ದಿನ ಪೂರೈಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಡಳಿತ 100 ದಿನ ಪೂರೈಸಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್ಎಸ್ ಡ್ಯಾಂನಲ್ಲಿ ಭರ್ಜರಿ ಲೈಟಿಂಗ್ಸ್ ಅಲಂಕಾರ ಮಾಡಲಾಗಿದೆ. ಕೆಆರ್ಎಸ್ ಡ್ಯಾಂ ಲೈಟಿಂಗ್ಸ್ ವಿಡಿಯೋ ಇಲ್ಲಿದೆ.
- Dileep CP
- Updated on: Sep 10, 2026
- 9:59 am