ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಗಣಂಗೂರು ಟೋಲ್ನಲ್ಲಿ ಗೂಂಡಾವರ್ತನೆ: ಫಾಸ್ಟ್ಟ್ಯಾಗ್ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!
ಗಣಂಗೂರು ಟೋಲ್ ಸಿಬ್ಬಂದಿ ಮಹೇಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ಸಮಸ್ಯೆಯಿಂದ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಬ್ಬಂದಿ ಯುವಕನ ಮೊಬೈಲ್ ಕಿತ್ತುಕೊಂಡು ಗೂಂಡಾವರ್ತನೆ ತೋರಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.
- Dileep CP
- Updated on: Apr 10, 2026
- 11:04 am
ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಅನುಮಾನಾಸ್ಪದ ಸಾವು!
ಮಂಡ್ಯದ ಯುವ ಕಾಂಟ್ರಾಕ್ಟರ್ ಶವ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪವನ್ ದೇಹದ ಮೇಲೆ ಗಾಯಗಳಿದ್ದು, ಕುಟುಂಬಸ್ಥರು ಇದನ್ನು ಕೊಲೆ ಎಂದು ಶಂಕಿಸಿದ್ದಾರೆ. ಕೋಟ್ಯಾಂತರ ರೂ. ಕಾಮಗಾರಿ ನಿರ್ವಹಿಸುತ್ತಿದ್ದ ಪವನ್ ಸಾವಿನ ಕುರಿತು ಹಲವು ಪ್ರಶ್ನೆಗಳು ಮೂಡಿವೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
- Dileep CP
- Updated on: Apr 7, 2026
- 12:16 pm
ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು
ಮಂಡ್ಯ ಜಿಲ್ಲೆಯಲ್ಲಿ ಏಪ್ರಿಲ್ 6ರಂದು ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿವೆ. ಮದ್ದೂರಿನಲ್ಲಿ ಸಿಗರೇಟ್ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಗಲಾಟೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಇನ್ನೊಂದೆಡೆ ಕೆ.ಆರ್.ಪೇಟೆಯಲ್ಲಿ ಆಸ್ತಿ ವಿವಾದ ರಕ್ತಪಾತಕ್ಕೆ ತಿರುಗಿದೆ. ಎರಡೂ ಘಟನೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
- Dileep CP
- Updated on: Apr 6, 2026
- 9:59 am
ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ
ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.
- Dileep CP
- Updated on: Mar 29, 2026
- 2:29 pm
ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀದೇವಿ ಮತ್ತು ಭೂದೇವಿ ಸಹಿತ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಚಲುವನಾರಾಯಣಸ್ವಾಮಿಯು ಸಹಸ್ರಾರು ಭಕ್ತರಿಗೆ ದರ್ಶನ ನೀಡಿದರು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತರು ನೆರೆದಿದ್ದರು.
- Dileep CP
- Updated on: Mar 29, 2026
- 9:30 am
ಶಾಸಕ ಪ್ರದೀಪ್ ಈಶ್ವರ್ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ
ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಅಸಂವಿಧಾನಿಕ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ, ಪ್ರದೀಪ್ ಈಶ್ವರ್ ಅವರನ್ನು NIMHANS ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಮತ್ತು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ವಿಲಕ್ಷಣ ಬೇಡಿಕೆ ಇಟ್ಟಿದ್ದಾರೆ.
- Dileep CP
- Updated on: Mar 25, 2026
- 3:17 pm
ಮಂಡ್ಯದಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಮಂಡ್ಯ ಜಿಲ್ಲೆಯ ಭೂತನ ಹೊಸೂರು ಗ್ರಾಮದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳು ಪತ್ತೆಯಾಗಿದ್ದ ನಂತರ ತಾಯಿ ಚಿರತೆ ಹಾವಳಿ ಹೆಚ್ಚಾಗಿತ್ತು. ಇದೀಗ ಚಿರತೆ ಸೆರೆಯಿಂದ ಗ್ರಾಮಸ್ಥರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
- Dileep CP
- Updated on: Mar 20, 2026
- 11:59 am
ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸ್ಪಾನ್ಸರ್: ಖಾಲಿ ಆಯ್ತಾ ಸರ್ಕಾರದ ಖಜಾನೆ?
ಮಂಡ್ಯದ ಐತಿಹಾಸಿಕ ಮೇಲುಕೋಟೆಯಲ್ಲಿ ನಡೆಯಲಿರುವ ವೈರಮುಡಿ ಉತ್ಸವದ ಸ್ಪಾನ್ಸರ್ ವಿಚಾರ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಹ್ವಾನ ಪತ್ರಿಕೆಯೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಗಳಿಗೂ ಕಾರಣವಾಗಿದೆ. ಆದರೆ ಅದು ನಕಲಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟನೆ ನೀಡಿದ್ದಾರೆ.
- Dileep CP
- Updated on: Mar 18, 2026
- 10:40 pm
110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?
ಮಂಡ್ಯದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿದಿದ್ದು, ಕುಡಿಯುವ ನೀರಿನ ಕೊರತೆಯ ಆತಂಕ ಸೃಷ್ಟಿಸಿದೆ. ಆದರೆ, ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ಜೂನ್-ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಬೆಳೆಗಳಿಗೆ ನೀರಿನ ಸಮರ್ಪಕ ನಿರ್ವಹಣೆ ಹಾಗೂ ಕಾಲುವೆಗಳಿಗೆ ಕಟ್ಟುಪದ್ಧತಿಯಲ್ಲಿ ನೀರು ಬಿಡಲಾಗುತ್ತಿದೆ. ಆದ್ದರಿಂದ ಮೈಸೂರು ಮತ್ತು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Dileep CP
- Updated on: Mar 16, 2026
- 11:22 am
ಮಂಡ್ಯದಲ್ಲಿ ಮುಂದುವರಿದ ಜೆಡಿಎಸ್-ಬಿಜೆಪಿ ಮೈತ್ರಿ ಮುನಿಸು; ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಬಿಜೆಪಿ ನಾಯಕರ ಫೋಟೋಗೆ ಇಲ್ಲ ಸ್ಥಾನ!
ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುನಿಸು ಮುಂದುವರಿದಿದೆ. ಇತ್ತೀಚೆಗೆ ನಡೆದ ‘ಖೇಲೋ ಇಂಡಿಯಾ ವೈಬ್ರೆಂಟ್ ಮಂಡ್ಯ’ ಕಾರ್ಯಕ್ರಮವು ಮೈತ್ರಿ ಪಕ್ಷಗಳ ನಡುವಿನ ಬಿರುಕನ್ನು ಮತ್ತಷ್ಟು ಎತ್ತಿ ತೋರಿಸಿದೆ. ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಹೊರತುಪಡಿಸಿ ರಾಜ್ಯ ಬಿಜೆಪಿ ನಾಯಕರ ಯಾವುದೇ ಫೋಟೋಗಳನ್ನು ಹಾಕಿರಲಿಲ್ಲ.
- Dileep CP
- Updated on: Mar 15, 2026
- 11:38 am
ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅರ್ಚಕ ಸಿದ್ದಲಿಂಗಪ್ಪ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಶಾಲಿನಿ, ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಹರೀಶ್ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ. ನಾಲೆಗೆ ಬಿಸಾಡಿದ್ದ ಮೃತದೇಹ ಪತ್ತೆಯಾದ ನಂತರ ಪೊಲೀಸರ ತನಿಖೆ ವೇಳೆ ಈ ಘೋರ ಕೃತ್ಯ ಬಯಲಾಗಿದೆ. ಪತ್ನಿ, ಪ್ರಿಯಕರ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಈ ಘಟನೆ ಮಂಡ್ಯದಲ್ಲಿ ಸಂಚಲನ ಮೂಡಿಸಿದೆ.
- Dileep CP
- Updated on: Mar 11, 2026
- 9:35 am
ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
ಅದು ಮುದ್ದಾದ ಸಂಸಾರ. ಮದುವೆಯಾಗಿ ಮೂರು ವರ್ಷವಷ್ಟೇ ಆಗಿತ್ತು. ಆ ಕುಟುಂಬದಲ್ಲಿ ಎಲ್ಲವೂ ಸರಿಯಾಗಿಯೇ ಇದೆ ಅಂದುಕೊಳ್ತಿರುವಾಗಲೇ ಮಾರ್ಚ್ 09 ಬೆಳ್ಳಂಬೆಳಗ್ಗೆ ಶಾಕಿಂಗ್ ನ್ಯೂಸ್ ಬಂದಿದೆ. ಎರಡು ವರ್ಷಗಳ ಹಿಂದಷ್ಟೇ ಪ್ರಪಂಚಕ್ಕೆ ಬಂದು ಈಗಷ್ಟೇ ಕಣ್ತೆರೆಯುತ್ತಿದ್ದ ಕಂದಮ್ಮನನ್ನ ಹೆತ್ತವರೇ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿ ತಾವು ಸಾವಿನ ಮನೆ ಸೇರಿದ್ದಾರೆ.ಆದ್ರೆ, ಪವಾಡಸದೃಶ ರೀತಿಯಲ್ಲಿ ಮಗು ಬದುಕುಳಿದಿದೆ.
- Dileep CP
- Updated on: Mar 9, 2026
- 4:32 pm