ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್ ನೋಟ್ನಿಂದ ಸಾವಿನ ರಹಸ್ಯ ಬಯಲಿಗೆ
ಮಂಡ್ಯ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದು ಹೋಗಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ಪ್ರಭಾಕರ್, ಪತ್ನಿ ಜ್ಯೋತಿ, ನವವಿವಾಹಿತ ಮಗ ಸಂತೋಷ್ ಸಾವನ್ನಪ್ಪಿದ್ದು, ಇಡೀ ನಗರವೇ ಬೆಚ್ಚಿಬಿದ್ದಿದೆ. ತಾಯಿ ಮಗನ ಶವ ಮನೆಯಲ್ಲೇ ಪತ್ತೆಯಾಗಿದ್ದರೆ, ಕುಟುಂಬದ ಯಜಮಾನನ ಮೃತದೇಹ ಬಟ್ಟೆ ಅಂಗಡಿಯಲ್ಲಿ ಪತ್ತೆಯಾಗಿದೆ. ಅಷ್ಟಕ್ಕೂ ಆಗಿದ್ದೇನು? ಸಾವಿಗೆ ಕಾರಣ ಏನು ಎನ್ನುವುದು ಡೆತ್ ನೋಟ್ ಬಹಿರಂಗಪಡಿಸಿದೆ.
- Dileep CP
- Updated on: Jun 9, 2026
- 5:33 pm
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ
ಮಾಜಿ ಪ್ರಧಾನಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಕುರಿತು ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೇವೇಗೌಡರು ಟಿಕೆಟ್ಗೆ ಅರ್ಜಿಯನ್ನೇ ಹಾಕಿರಲಿಲ್ಲ ಎಂದಿರುವ ಅವರು, ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿ ಒಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
- Dileep CP
- Updated on: Jun 9, 2026
- 12:16 pm
ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವುದರಿಂದ ದೇವೇಗೌಡರ ಕುಟುಂಬಕ್ಕೆ ಸೂತಕ ಎಂದಿರುವ ಸಚಿವ ಚಲುವರಾಯಸ್ವಾಮಿ ಹೇಳಿಕೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ಜೆಡಿಎಸ್ನ ಮಾಜಿ ಶಾಸಕ ಸುರೇಶ್ ಗೌಡ ಸಚಿವ ಚಲುವರಾಯಸ್ವಾಮಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.
- Dileep CP
- Updated on: Jun 1, 2026
- 4:24 pm
ಮಂಡ್ಯದಲ್ಲಿ ಆರ್ಸಿಬಿ ಅಭಿಮಾನಿ ಯುವಕರ ಹುಚ್ಚಾಟ: ಪೊಲೀಸರಿಂದ ಲಾಠಿ ಪ್ರಹಾರ!
ಮಂಡ್ಯದ ಸಂಜಯ ವೃತ್ತದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ಅತಿರೇಕಕ್ಕೆ ತಿರುಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಇಲ್ಲದ ಕಾರಣ ಯುವಕರು ಹೆದ್ದಾರಿಯ ಲಾರಿಗಳ ಮೇಲೆ ಹತ್ತಿ ಹುಚ್ಚಾಟ ಆಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಕೊನೆಗೆ ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.
- Dileep CP
- Updated on: Jun 1, 2026
- 8:56 am
ಮಂಡ್ಯ: ಪತ್ನಿಗೆ ಶ್ರೀಮಂತಿಕೆ ತೋರಿಸಲು ಕಳ್ಳತನಕ್ಕಿಳಿದ ಪತಿ! ಕೃತ್ಯ ನಿಲ್ಲಿಸಿದ ವರ್ಷದ ಬಳಿಕ ಮೂವರು ಸಹಚರರೊಂದಿಗೆ ಅಂದರ್
ಪತ್ನಿಯ ಮುಂದೆ ಶ್ರೀಮಂತಿಕೆ ಪ್ರದರ್ಶಿಸಲು ಸರಗಳ್ಳತನದ ದಂಧೆಗಿಳಿದಿದ್ದ ಮಂಡ್ಯದ ಗುರುಪ್ರಸಾದ್ ಎಂಬಾತ ಹಾಗೂ ಆತನ ಮೂವರು ಸಹಚರರನ್ನು ಕಿರುಗಾವಲು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 70 ಲಕ್ಷ ರೂ. ಮೌಲ್ಯದ 475 ಗ್ರಾಂ ಬಂಗಾರದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ವಿಶೇಷವೆಂದರೆ, ಕಳ್ಳತನ ನಿಲ್ಲಿಸಿದ ವರ್ಷದ ಬಳಿಕ ಆರೋಪಿ ಸಿಕ್ಕಿಬಿದ್ದಿದ್ದಾನೆ.
- Dileep CP
- Updated on: May 27, 2026
- 9:37 am
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಮುಕ್ತವಾಗಿ ಬಿಟ್ಟಿದ್ದಾರೆ.
- Dileep CP
- Updated on: May 25, 2026
- 2:56 pm
ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಂದಾಯ ಅಧಿಕಾರಿಗಳು ನಡೆಸಿದ್ದ ಬಗರ್ಹುಕುಂ ಭೂ ಅಕ್ರಮ ತನಿಖೆ ಚುರುಕುಗೊಂಡಿದ್ದು, ವಂಚನೆಯ ಪ್ರಮಾಣ 1,000 ಎಕರೆಯಷ್ಟಿರುವುದು ತಿಳಿದುಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಹೊರ ರಾಜ್ಯದವರಿಗೂ ಭೂಮಿ ನೀಡಿದ್ದ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಬಿ.ವೀರಪ್ಪ ಕಠಿಣ ಕ್ರಮದ ಮುನ್ಸೂಚನೆ ನೀಡಿದ್ದಾರೆ.
- Dileep CP
- Updated on: May 25, 2026
- 11:33 am
ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ
ಮನೆಯಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಸಹೋದರಿಯರು ನಾಪತ್ತೆಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಆಘಾತಕಾರಿ ಪತ್ರವೊಂದು ಬರೆದಿಟ್ಟು ಹೋಗಿರುವುದು ಕುಟುಂಬದಲ್ಲಿ ಆತಂಕ ಮನೆ ಮಾಡಿದ್ದು, ಗಾಬರಿಗೊಂಡ ಪೋಷಕರು ಪತ್ರದೊಂದಿಗೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಘಟನೆ ನಡೆದಿದ್ದೆಲ್ಲಿ? ಸಹೋದರಿಯರು ಬರೆದ ಪತ್ರದಲ್ಲೇನಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Dileep CP
- Updated on: May 19, 2026
- 3:13 pm
ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷಗಳ ಬಳಿಕ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್!
ಮಂಡ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಬಾಲಕನೋರ್ವ ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಓದಲು ಇಷ್ಟವಿಲ್ಲದೆ ಬೆಂಗಳೂರು ಸೇರಿದ್ದ ಈತ ಹೋಟೆಲ್ಗಳಲ್ಲಿ ಕೆಲಸ ಮಾಡುತ್ತಿದ್ದ. ವಿಶೇಷ ಅಂದರೆ ಆತನ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆ ಹಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕಬಡ್ಡಿ ಟೂರ್ನಮೆಂಟ್ನಲ್ಲಿ ಪರಿಚಿತರ ಕಣ್ಣಿಗೆ ಬಿದ್ದು, ಪೊಲೀಸರು ಆತನನ್ನು ಸುರಕ್ಷಿತವಾಗಿ ಕುಟುಂಬಕ್ಕೆ ಸೇರಿಸಿದ್ದಾರೆ.
- Dileep CP
- Updated on: May 13, 2026
- 3:13 pm
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್ಎಸ್
ಕರ್ನಾಟಕದಲ್ಲಿ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ, ಇದು ಜೀವಜಲದ ಸಂಕಷ್ಟವನ್ನು ಹೆಚ್ಚಿಸಿದೆ. ಕಾವೇರಿ ನದಿಯ ಪ್ರಮುಖ ಜಲಾಶಯವಾದ ಕೆಆರ್ಎಸ್ನಲ್ಲಿ ನೀರಿನ ಮಟ್ಟ ತೀವ್ರ ಕುಸಿದಿದೆ. ಮೈಸೂರಿನ ಆಸ್ಪತ್ರೆಗಳಲ್ಲಿ ನೀರಿನ ಕೊರತೆ, ಬೀದರ್ನಲ್ಲಿ ಗೋಡಂಬಿ ಬೆಳೆಗಾರರಿಗೆ ನಷ್ಟ ಉಂಟಾಗಿದೆ. ಮುಂಗಾರು ಮಳೆ ವಿಳಂಬವಾದರೆ ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಎದುರಾಗಿದೆ.
- Dileep CP
- Updated on: May 12, 2026
- 9:51 pm
ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!
ಮಂಡ್ಯ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲಾಡಳಿತವನ್ನು ಆತಂಕಕ್ಕೀಡು ಮಾಡಿದೆ. ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ನಿಗೂಢತೆ ಮುಂದುವರಿದಿದೆ. ಕೆ.ಆರ್.ಪೇಟೆಯ ಡಯಾಗ್ನೋಸ್ಟಿಕ್ ಸೆಂಟರ್ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ಅಕ್ರಮ ಸ್ಕ್ಯಾನಿಂಗ್ ದಂಧೆ ಬಯಲಾಗಿದೆ.
- Dileep CP
- Updated on: May 1, 2026
- 9:34 am
ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ
ಮಂಡ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮಕ್ಕಾಗಿ ಹಾಕಿದ್ದ ಬೃಹತ್ ವೇದಿಕೆ ಕುಸಿದಿದ್ದು, ಶಾಸಕ ರವಿ ಗಣಿಗ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 20,000 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿತ್ತು.
- Dileep CP
- Updated on: Apr 30, 2026
- 12:06 pm