ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.
AEEಗಳ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ಹೇಳಿದ್ರೂ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸ ಕೊಟ್ಟಿದ್ದು ಏಕೆ? ಹೆಚ್ಡಿಕೆ ಪ್ರಶ್ನೆ
ಎಇಇಗಳ ನೇಮಕಾತಿಯ ಅಕ್ರಮ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದಾರೆ. AEEಗಳ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದಲ್ಲಿ ಸಿಎಂ ಹೇಳಿದ್ದರು. ಹಾಗಿದ್ದರೂ ತಪ್ಪಿತಸ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸರ್ಕಾರಿ ಕೆಲಸ ಕೊಟ್ಟಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
- Dileep CP
- Updated on: Aug 29, 2026
- 10:46 pm
ಶಾಸಕರಿಗೆ ಕೆಲಸ ಮಾಡ್ತಿದ್ದೀಯಾ, ಜನರಿಗೆ ಮಾಡ್ತಿದ್ದೀಯಾ? ಮಹಿಳಾ ಅಧಿಕಾರಿ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಕೆಂಡ
Mandya News: ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗರಂ ಆದರು. ಕೇಂದ್ರ ಸರ್ಕಾರದ ಯೋಜನೆ ಕಾಮಗಾರಿಗಳ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಜೊತೆಗೆ ಬರದ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಸಾಲ ವಸೂಲಾತಿಗೆ ಒತ್ತಡ ಹೇರಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ.
- Dileep CP
- Updated on: Aug 29, 2026
- 8:32 pm
ಕೆಆರ್ಎಸ್ನಿಂದಲೂ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರ ಆಕ್ರೋಶ
KRS Cauvery Water Release: ತಮಿಳುನಾಡಿಗೆ ನೀರು ಹರಿಸುವ ಆದೇಶವನ್ನು CWMA ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಮತ್ತಷ್ಟು ಸೂಕ್ಷ್ಮವಾಗಿದೆ. ಇದೇ ವೇಳೆ ಕೆಆರ್ಎಸ್ನಿಂದಲೂ ಸುಮಾರು 7 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದು ಮಂಡ್ಯ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
- Dileep CP
- Updated on: Aug 29, 2026
- 10:44 am
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ: 8.5 ಲಕ್ಷದ ಬಳಿಕ ಈಗ ಶ್ರೀರಂಗಪಟ್ಟಣದಲ್ಲೂ 3.5 ಲಕ್ಷ ರೂ. ಜಪ್ತಿ
ಮಂಡ್ಯ ಜಿಲ್ಲೆಯಲ್ಲಿ ಭಿಕ್ಷುಕರ ಮನೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗುತ್ತಿರುವ ಎರಡು ಆಘಾತಕಾರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಗುಟ್ಟಲಿನಲ್ಲಿ ಮೃತ ವೃದ್ಧ ಭಿಕ್ಷುಕಿಯ ಮನೆಯಲ್ಲಿ 8.5 ಲಕ್ಷ ರೂ. ಮತ್ತು ಶ್ರೀರಂಗಪಟ್ಟಣದಲ್ಲಿ ಅನಾರೋಗ್ಯ ಪೀಡಿತ ವೃದ್ಧೆಯ ಮನೆಯಲ್ಲಿ 3.5 ಲಕ್ಷ ರೂ. ಪತ್ತೆಯಾಗಿದೆ. ಇಂತಹ ಘಟನೆಗಳು ಭಿಕ್ಷುಕರ ಸುರಕ್ಷತೆ ಮತ್ತು ಅವರ ಹಣದ ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
- Dileep CP
- Updated on: Aug 28, 2026
- 7:42 pm
ಮಂಡ್ಯದ ಮತ್ತೋರ್ವ ಬಿಕ್ಷುಕಿ ಲಕ್ಷಾಧೀಶೆ, ಅಜ್ಜಿ ಮನೆಯಲ್ಲಿ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?
ಮಂಡ್ಯದಲ್ಲಿ ಭಿಕ್ಷುಕಿಯರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗುತ್ತಿರುವ ಪ್ರಕರಣಗಳು ಒಂದರ ಹಿಂದೆ ಒಂದಾಗಿ ಬೆಳಕಿಗೆ ಬರುತ್ತಿವೆ. ಮೊನ್ನೆಷ್ಟೇ ಮಂಡ್ಯದ ಹೂರ್ ಎಂಬ ಬಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ಲಕ್ಷಾಂತರ ಹಣ ಪತ್ತೆಯಾಗಿತ್ತು. ಇದೀಗಾ ಶ್ರೀರಂಗಪಟ್ಟಣ ಬಿಕ್ಷುಕಿ ಮನೆಯಲ್ಲು ಅಂತದೆ ಪ್ರಕರಣ ಬೆಳಕಿಗೆ ಬಂದಿದೆ.
- Dileep CP
- Updated on: Aug 27, 2026
- 7:32 pm
ಕೈದಿಗಳ ವಿಶೇಷ ಆತಿಥ್ಯಕ್ಕೆ ರೇಟ್ ಫಿಕ್ಸ್: ಮಂಡ್ಯ ಜೈಲಾಧಿಕಾರಿಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ
Mandya Jail Scandal: ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ವಿಶೇಷ ಆತಿಥ್ಯ ನೀಡಲು ರೇಟ್ ಫಿಕ್ಸ್ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಜೈಲು ಅಧೀಕ್ಷಕಿ ಶಾಂತಮ್ಮ ಹಾಗೂ ಸಿಬ್ಬಂದಿ ವಿರುದ್ಧ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲಧಿಕಾರಿಗಳು ವಸೂಲಿ ಜತೆಗೆ ಕ್ಯಾಟರಿಂಗ್ ವ್ಯವಸ್ಥೆ ಕೂಡ ಮಾಡುತ್ತಾರೆಂದು ದೂರಿರೋದು ಭಾರಿ ಚರ್ಚೆಗೆ ಗ್ರಾಸವಾಗಿದೆ.
- Dileep CP
- Updated on: Aug 27, 2026
- 7:16 pm
ವಿಚಾರಣಾಧೀನ ಕೈದಿಗೆ ಆಸ್ಪತ್ರೆಯಲ್ಲಿ ರಾಜ್ಯಾತಿಥ್ಯ ಪ್ರಕರಣ; ಪೊಲೀಸ್ ಪೇದೆ ಸಸ್ಪೆಂಡ್
ಮಂಡ್ಯದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಬೆನ್ನುನೋವಿನ ನೆಪದಲ್ಲಿ ಆಸ್ಪತ್ರೆಯ ವಿಶೇಷ ಕೊಠಡಿಯಲ್ಲಿ ತನ್ನ ಗೆಳತಿಯೊಂದಿಗೆ ಇದ್ದ ಪ್ರಕರಣ ಬೆಳಕಿಗೆ ಬಂದಿದೆ. ನ್ಯಾಯಾಧೀಶರ ದಿಢೀರ್ ಭೇಟಿಯಿಂದ ಈ ಕರ್ತವ್ಯ ಲೋಪ ಬಯಲಾಗಿದೆ. ಘಟನೆ ಸಂಬಂಧ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಡಿಜಿಪಿ ಅಲೋಕ್ ಕುಮಾರ್ ಅವರು ತನಿಖೆಗೆ ಆದೇಶಿಸಿದ್ದಾರೆ. ಇದು ಕಾರಾಗೃಹ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ.
- Dileep CP
- Updated on: Aug 26, 2026
- 12:53 pm
ಪಿಎಸ್ಐ ಮೇಲೆ ಶಾಸಕ ಸುರೇಶ್ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; 10 ದಿನಗಳ ಬಳಿಕ ವೀಡಿಯೋ ವೈರಲ್
ಶ್ರೀರಂಗಪಟ್ಟಣದಲ್ಲಿ ಭೀಮನ ಅಮಾವಾಸ್ಯೆ ದಿನದಂದು ಬಿಜೆಪಿ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಪಿಎಸ್ಐ ಸವಿತಾ ಅವರಿಗೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗರ್ಭಗುಡಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ವೀಡಿಯೋಗಳು ವೈರಲ್ ಆಗಿದ್ದು, ಶಾಸಕ ಸುರೇಶ್ ಗೌಡರು ತಮ್ಮ ಮಗಳ ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ.
- Dileep CP
- Updated on: Aug 25, 2026
- 1:18 pm
ತಮಿಳುನಾಡಿಗೆ ಮತ್ತೆ 9 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಕರವೇ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಿಡಬ್ಲ್ಯುಆರ್ಸಿ ಆದೇಶ ಖಂಡಿಸಿ ಮಂಡ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಬರ ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
- Dileep CP
- Updated on: Aug 25, 2026
- 11:41 am
ಜೈಲಲ್ಲಿರಬೇಕಿದ್ದ ಆರೋಪಿಗೆ ಮಿಮ್ಸ್ನಲ್ಲಿ ರಾಜಾತಿಥ್ಯ: ಜಿಲ್ಲಾ ನ್ಯಾಯಾಧೀಶರ ದಿಢೀರ್ ದಾಳಿ ವೇಳೆ ಯುವತಿ ಜತೆ ಸಿಕ್ಕಿಬಿದ್ದ ಆರೋಪಿ!
Mandya News: ಜೈಲಿನಲ್ಲಿರಬೇಕಿದ್ದ ಭೂ ದಾಖಲೆಗಳ ಪ್ರಕರಣದ ಆರೋಪಿ ಮೊಹಮ್ಮದ್ ಹುಸೇನ್ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಜಿಲ್ಲಾ ನ್ಯಾಯಾಧೀಶರ ದಿಢೀರ್ ತಪಾಸಣೆಯಲ್ಲಿ ಪತ್ತೆಯಾಗಿದೆ. ರೋಗ ಇಲ್ಲದಿದ್ದರೂ ದಾಖಲಿಸಿದ್ದೇಕೆ ಎಂದು ಪ್ರಶ್ನಿಸಿ, ಜೈಲಾಧಿಕಾರಿ ಮತ್ತು ವೈದ್ಯಾಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ.
- Dileep CP
- Updated on: Aug 25, 2026
- 8:54 am
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರಿಂದ ತೀವ್ರಗೊಂಡ ಪ್ರತಿಭಟನೆ
ಕಾವೇರಿ ನೀರು ವಿವಾದ ಮತ್ತೆ ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕರವೇ ಹಾಗೂ ರೈತ ಹೋರಾಟಗಾರರು ಮಳೆ ಕೊರತೆ ಎದುರಿಸುತ್ತಿರುವ ಕರ್ನಾಟಕದ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿದ್ದಾರೆ. ತಕ್ಷಣ ನೀರು ಹರಿಸುವುದನ್ನು ನಿಲ್ಲಿಸಿ, ರಾಜ್ಯದ ರೈತರ ಹಿತ ಕಾಯುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.
- Dileep CP
- Updated on: Aug 24, 2026
- 1:32 pm
ಮಂಡ್ಯ: ಇಡಿ ಊರಿಗೂರೇ ಶಾಕ್! ಮೃತ ಭಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ನಾಣ್ಯ, ನೋಟುಗಳು ಪತ್ತೆ
Mandya News: ಬದುಕಿದ್ದಾಗ ಯಾರೊಬ್ಬರೂ ಆಸರೆಯಾಗದೆ, ಬೀದಿ ಬೀದಿಯಲ್ಲಿ ಭಿಕ್ಷಾಟನೆ ಮಾಡಿ ಜೀವನ ನಡೆಸಿದ್ದ ಮಂಡ್ಯದ ವೃದ್ಧೆ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆದರೆ ಅವರ ಮನೆಯಲ್ಲಿ ಮೂಟೆಗಟ್ಟಲೆ ನೋಟು ಹಾಗೂ ನಾಣ್ಯಗಳ ರೂಪದಲ್ಲಿದ್ದ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಮೊತ್ತದ ಹಣ ಪತ್ತೆಯಾಗಿದ್ದು ಎಲ್ಲರನ್ನೂ ದಂಗುಬಡಿಸಿದೆ.
- Dileep CP
- Updated on: Aug 23, 2026
- 7:26 pm