AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಮನೆಯಲ್ಲಿನ ಗಲಾಟೆಯಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು. ಇದೀಗ ರಕ್ಷಣೆ ಮಾಡಲಾಗಿದೆ.

93 ವರ್ಷಗಳ ದಾಖಲೆ ಮುರಿದ KRS: ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದು ಎಷ್ಟನೇ ಬಾರಿ ಗೊತ್ತಾ?

93 ವರ್ಷಗಳ ದಾಖಲೆ ಮುರಿದ KRS: ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದು ಎಷ್ಟನೇ ಬಾರಿ ಗೊತ್ತಾ?

ಕೆಆರ್‌ಎಸ್ ಜಲಾಶಯ 93 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್‌ನಲ್ಲಿಯೇ ತುಂಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್​ ತಿಂಗಳಲ್ಲಿಯೇ ಕಾವೇರಿಗೆ ಬಾಗಿನ ಅರ್ಪಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ಜುಲೈ-ಆಗಸ್ಟ್‌ನಲ್ಲಿ ಭರ್ತಿಯಾಗುವ ಈ ಅಣೆಕಟ್ಟು, ಈ ಬಾರಿ ವಾಡಿಕೆಗಿಂತ ಮುಂಚೆಯೇ ತುಂಬಿದ್ದು, ಹಳೇ ಮೈಸೂರು ಭಾಗದ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಈ ಘಟನೆ ರಾಜ್ಯಕ್ಕೆ ಅಭೂತಪೂರ್ವ ಮಳೆಯ ಸೂಚನೆಯಾಗಿದೆ.

KRS Dam Full: ಕೆಆರ್​ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಭರ್ತಿ!

KRS Dam Full: ಕೆಆರ್​ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಭರ್ತಿ!

ಅವಧಿಪೂರ್ವ ಮುಂಗಾರು ಮಳೆಯ ನೆರವಿನಿಂದ ಈ ವರ್ಷ ಕೆಆರ್​​ಎಸ್ ಡ್ಯಾಂ ಜೂನ್ ಕೊನೆಯ ವಾರದಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಡ್ಯಾಂ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿದೆ. ಇದು ರೈತರು ಸೇರಿದಂತೆ ಡ್ಯಾಂ ಅವಲಂಬಿತರನ್ನು ಹರ್ಷಚಿತ್ತರನ್ನಾಗಿಸಿದೆ. ಅದರೊಂದಿಗೆ, ಸಿಎಂ ಸಿದ್ದರಾಮಯ್ಯಗೂ ದಾಖಲೆಯೊಂದನ್ನು ಬರೆಯುವ ಸುವರ್ಣಾವಕಾಶ ದೊರೆತಿದೆ. ಏನದು? ಇಲ್ಲಿದೆ ವಿವರ.

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಮನೆ ಮಾಡಿದ್ದು, ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಈ ಸಂದರ್ಭದಲ್ಲಿ, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯ ಪ್ರಯೋಜನಗಳ ಬಗ್ಗೆ ದೇಗುಲದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ವಿವರಣೆ ನೀಡಿದ್ದಾರೆ.

ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಆಕೆ ಎರಡು ಮಕ್ಕಳ ತಾಯಿ. ಸಾಮಾಜಿಕ ಜಾಲತಾಣದಲ್ಲಿ ಸ್ಮಾರ್ಟ್​ ಯುವಕ ಸಿಕ್ಕ ಅಂತ ಪರಿಚಯ ಮಾಡಿಕೊಂಡಿದ್ದಾಳೆ.ಆದ್ರೆ, ನಾಲ್ಕೆ‌ ದಿನದಲ್ಲೇ‌ ಚಾಟಿಂಗ್ ಡೇಟಿಂಗ್ ನಡೆದಿದೆ.ಬಳಿಕ ಲಾಂಗ್​ ಡ್ರೈವ್​ ನಲ್ಲಿ ಲೈಂಗಿಕ ಕ್ರೀಯೆಗೆ ಒತ್ತಾಯಿಸಿ ಕೊನೆಗೆ ಭೀಕರವಾಗಿ ಹತ್ಯೆಯಾಗಿದ್ದಾಳೆ. ಅಷ್ಟಕ್ಕೂ ಲಾಂಗ್​ ಡ್ರೈವ್​ ನಲ್ಲಿ ಆಂಟಿ ಹಾಗೂ ಯುವಕನ ಮಧ್ಯೆ ನಡೆದಿದ್ದೇನು? ಆಂಟಿಯನ್ನು ಯುವಕ ಕೊಲೆ ಮಾಡಿದ್ಯಾಕೆ ಎನ್ನುವ ಡಿಟೇಲ್​ ಇಲ್ಲಿದೆ.

ಇನ್‌ಸ್ಟಾಗ್ರಾಮ್​​ನಲ್ಲಿ ಪರಿಚಯವಾಗಿ ಹತ್ತೇ ದಿನಕ್ಕೆ ಕೊಲೆಯಾದ ವಿವಾಹಿತ ಮಹಿಳೆ: ಹತ್ಯೆಗೈದು ಚಿನ್ನಾಭರಣ ದೋಚಿದ ಯುವಕ

ಇನ್‌ಸ್ಟಾಗ್ರಾಮ್​​ನಲ್ಲಿ ಪರಿಚಯವಾಗಿ ಹತ್ತೇ ದಿನಕ್ಕೆ ಕೊಲೆಯಾದ ವಿವಾಹಿತ ಮಹಿಳೆ: ಹತ್ಯೆಗೈದು ಚಿನ್ನಾಭರಣ ದೋಚಿದ ಯುವಕ

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನೊಬ್ಬ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಮಹಿಳೆಯ ಮೇಲಿದ್ದ ಚಿನ್ನಾಭರಣವನ್ನು ದೋಚಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಕನ್ನಡಿಗರ ಜೀವನಾಡಿ ಕನ್ನಂಬಾಡಿ ಭರ್ತಿಯತ್ತ ಸಾಗುತ್ತಿದ್ದಂತೆ ಮಂಡ್ಯ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಂಡ್ಯ ಜಿಲ್ಲೆಯ ಅನ್ನದಾತರ ಜೀವನಾಡಿ ಮೈಶುಗರ್ ಕಾರ್ಖಾನೆ ಕಬ್ಬು ನುರಿಯಲು ಸನ್ನದ್ದವಾಗಿರೋದು ಈ ಭಾಗದ ರೈತರ ಸಂತಸ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಇಂದು ಸಂಪ್ರದಾಯದಂತೆ ಕಾರ್ಖಾನೆ ಬಾಯ್ಲರ್‌ಗೆ ಅಗ್ನಿ ಸ್ಪರ್ಶ ಮಾಡುವ ಫ್ಯಾಕ್ಟರಿ ಕಾರ್ಯಾರಂಭಕ್ಕೆ ಮುನ್ನುಡಿ ಬರೆಯಲಾಯ್ತು.

ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ

ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ

ತಾಯಿಯನ್ನ ತ್ಯಾಗಮಯಿ ಅಂತಾರೆ. ಹೆತ್ತು, ಹೊತ್ತು ತನ್ನ ಆಸೆಗಳನ್ನೆಲ್ಲಾ ಬದಿಗಿಟ್ಟು ಮಕ್ಕಳನ್ನು ಸಾಕಿರ್ತಾಳೆ. ಬೆಳೆದು ದೊಡ್ಡವರಾದ ಮಕ್ಕಳು ಹೆತ್ತವರ ವೃದ್ಧಾಪ್ಯದಲ್ಲಿ ಆಸರೆಯಾಗಬೇಕು. ಆದರೆ ಮಂಡ್ಯದಲ್ಲೊಬ್ಬ ಮಗ ತನ್ನ ತಾಯಿ ಮಾನಸಿಕ ಅಸ್ವಸ್ಥೆ ಅನ್ನೋ ಕಾರಣಕ್ಕೆ ರಸ್ತೆಯಲ್ಲಿ ಬಿಟ್ಟುಹೋಗಿದ್ದಾನೆ. ಇದೀಗ ಅಜ್ಜಿಯ ಮಗನನ್ನು ಹುಡುಕಿ ವಿಚಾರಿಸಲಾಗಿದ್ದು, ಮಗನ ಸ್ಥಿತಿ ಕೇಳಿದರೆ ಕರಳು ಚುರುಕ್ ಎನ್ನುತ್ತೆ.

ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಹೆತ್ತ ತಾಯಿಯನ್ನೇ ಮಗನೊಬ್ಬ ಅನಾಥಳನ್ನಾಗಿ ಮಾಡಿ ರಸ್ತೆಯಲ್ಲಿ ಬಿಟ್ಟುಹೋದ ದಾರುಣ ಘಟನೆ ಮಂಡ್ಯ ಜಿಲ್ಲೆಯಿಂದ ವರದಿಯಾಗಿದೆ. ಮಾನಸಿಕ ಅಸ್ವಸ್ಥೆಯಾಗಿರುವ ವೃದ್ಧೆ ಬೀದಿಯಲ್ಲಿ ಅಲೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಕೆಯನ್ನು ರಕ್ಷಿಸಿದೆ. ವಿಡಿಯೋ ಇಲ್ಲಿದೆ.

ವಸತಿ ಯೋಜನೆಯಲ್ಲಿ ನಡೆದ 2137.44 ಕೋಟಿ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಿ: ಆರ್ ಅಶೋಕ್​

ವಸತಿ ಯೋಜನೆಯಲ್ಲಿ ನಡೆದ 2137.44 ಕೋಟಿ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಿ: ಆರ್ ಅಶೋಕ್​

ವಸತಿ ಯೋಜನೆಯಲ್ಲಿ 2137.44 ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಆರ್​ ಅಶೋಕ್​ ಆರೋಪ ಮಾಡಿದ್ದಾರೆ. ಸತ್ಯಾಂಶ ಬಯಲಾಗಲು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾವೇರಿ ಆರತಿಯ ಹೆಸರಿನಲ್ಲಿ ಹಣ ದುರುಪಯೋಗವಾಗುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.

ಶಾಲೆ ನಡೆಸಲಾಗದ್ದಷ್ಟು ಬಡವಾಯ್ತೆ ಸರ್ಕಾರ: ಮೈಶುಗರ್ ಶಾಲೆ ಕಾಂಗ್ರೆಸ್ ಮುಖಂಡನ ತೆಕ್ಕೆಗೆ?

ಶಾಲೆ ನಡೆಸಲಾಗದ್ದಷ್ಟು ಬಡವಾಯ್ತೆ ಸರ್ಕಾರ: ಮೈಶುಗರ್ ಶಾಲೆ ಕಾಂಗ್ರೆಸ್ ಮುಖಂಡನ ತೆಕ್ಕೆಗೆ?

ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಕಳೆದ ಬಿಜೆಪಿ ಸರ್ಕಾರದ ಉದ್ದೇಶಿಸಿತ್ತು.ಆದ್ರೆ ರೈತರ ಹೋರಾಟದ ಬಳಿಕ ಕೈಬಿಟ್ಟಿತ್ತು. ಇದೀಗ ಮೈಶುಗರ್ ಕಾರ್ಖಾನೆಯ ಇನ್ನೊಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಾಂಗ್ರೆಸ್ ಮುಖಂಡನಿಗೆ ಲೀಸ್ ಗೆ ನೀಡಲು ತೆರೆಮರೆಯ ಸರ್ಕಸ್ ನಡೆಯುತ್ತಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಈ ವರ್ಷ ಮುಂಗಾರು ಮಳೆಯ ಅಬ್ಬರ ಅವಧಿಗೂ ಮುನ್ನವೇ ಕೆಆರ್​​ಎಸ್ ಡ್ಯಾಂ ಭರ್ತಿಯಾಗುವತ್ತ ಕೊಮಡೊಯ್ದಿದೆ. ಪರಿಣಾಮವಾಗಿ ಡ್ಯಾಂ ಭರ್ತಿಯಾಗಲು ಇನ್ನು 7 ಅಡಿ ಅಷ್ಟೇ ಬಾಕಿ ಇದೆ. ಹೀಗಾಗಿ ಡ್ಯಾಂನಿಂದ ನದಿಗೆ ನೀರು ಬಿಡುವ ಸಂದರ್ಭ ಬರುವ ಮುನ್ಸೂಚನೆ ಇದ್ದು, ಕಾವೇರಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.