AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ?

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ?

ಮಂಡ್ಯದ ಕೆ.ಆರ್.ಪೇಟೆ ಬೊಮ್ಮಲಾಪುರದಲ್ಲಿ ಪ್ರೀತಿ ವಿವಾಹಕ್ಕೆ ನೆರವಾದ ವ್ಯಕ್ತಿಯ ಕಾಲನ್ನು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಸಂತ್ರಸ್ತ ಪ್ರಕಾಶ್‌ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ಯುವತಿಯ ತಂದೆ ಹಾಗೂ ಇತರೆ ಆರೋಪಿಗಳು ಈ ಹಲ್ಲೆ ನಡೆಸಿದ್ದು, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಮಂಡ್ಯದಲ್ಲೊಂದು ಅಮಾನುಷ ಕೃತ್ಯ: ಕೈಮುಗಿದು ಬೇಡಿದ್ರೂ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ

ಐವರ ಗುಂಪೊಂದು ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ. ಕಿರಾತಕರು ಕ್ರೌರ್ಯವನ್ನು ವಿಡಿಯೋ ಕೂಡ ಮಾಡಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 14 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ!

ಮಂಡ್ಯ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ!

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ ಭಾನು ಜನ್ಮ ನೀಡಿದ್ದು, ವೈದ್ಯರ ಆರೈಕೆಯಿಂದ ತಾಯಿ ಮತ್ತು ಮೂವರು ಶಿಶುಗಳು ಸುರಕ್ಷಿತವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಒಂದು ಮಗುವನ್ನು ಸಾಕುವುದೇ ಕಷ್ಟಕರ ಎನಿಸುವ ಈ ದಿನಗಳಲ್ಲಿ, ದಂಪತಿಗೆ ಒಂದೇ ಬಾರಿಗೆ ಮೂರು ಮಕ್ಕಳಾಗಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆಮಾಡಿದೆ.

ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ

ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ

ನಟ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. 'ಹಯಗ್ರೀವ' ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದರ್ಶನ್ ಜೈಲಿನಲ್ಲಿ ತುಂಬಾ ಚೆನ್ನಾಗಿದ್ದಾರೆ ಮತ್ತು ಮಾನಸಿಕವಾಗಿ ಬಲಿಷ್ಠರಾಗಿದ್ದಾರೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. "ಅದಕ್ಕೆಲ್ಲಾ ಕಾರಣ ನೀವೇ" ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಧೈರ್ಯ ತುಂಬಿದ್ದಾರೆ.

ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್​​ ಆದ ಮಾಲೀಕ

ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್​​ ಆದ ಮಾಲೀಕ

ಮಂಡ್ಯದ ಕ್ಯಾತನಹಳ್ಳಿಯಲ್ಲಿ ಚಿನ್ನದಂಗಡಿ ಮಾಲೀಕನೋರ್ವ ಸಾಲಗಾರರು ಮತ್ತು ಚಿನ್ನ ಅಡವಿಟ್ಟವರಿಂದ ತಪ್ಪಿಸಿಕೊಳ್ಳಲು ತನ್ನ ಮೇಲೆ ಆ್ಯಸಿಡ್ ದಾಳಿ ಹಾಗೂ ಅಂಗಡಿ ದರೋಡೆಯ ನಾಟಕವಾಡಿ ಸಿಕ್ಕಿಬಿದ್ದಿದ್ದಾನೆ. ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಿ, ಆತನನ್ನು ಬಂಧಿಸಲಾಗಿದೆ. ಬಂಗಾರಕ್ಕೆ ಬಳಸುವ ರಾಸಾಯನಿಕ ಬಳಸಿ ಡ್ರಾಮಾ ಮಾಡಿದ್ದ ಈತನ ಯೋಜನೆ ಕೊನೆಗೂ ವಿಫಲಗೊಂಡಿದೆ.

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು

ಕಾರ್ಖಾನೆ ಸ್ಥಳಾಂತರದ ವೇಳೆ ಅವಘಡ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು

ಮಂಡ್ಯದ ಕೀರ್ತಿ ಕೆಮಿಕಲ್ಸ್ ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರೆಕಟ್ಟೆ ಬಳಿ ನಡೆದ ಈ ದುರಂತದಲ್ಲಿ ಮುಂಜಾಗ್ರತಾ ಕ್ರಮಗಳ ಕೊರತೆ ಎದ್ದು ಕಾಣುತ್ತಿದೆ. ನಾಲ್ಕು ವರ್ಷಗಳ ಹಿಂದೆಯೂ ಇದೇ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಬೆಳೆ ಹಾನಿಯಾಗಿತ್ತು. ಮತ್ತೊಮ್ಮೆ ನಡೆದಿರುವ ಈ ಅವಘಡ ಕಾರ್ಖಾನೆ ಸುರಕ್ಷತಾ ನಿಯಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಗಾರೆ ಕೆಲಸಕ್ಕೆ ಬಳಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಮಕ್ಕಳನ್ನು ಕೂಲಿ ಆಳುಗಳಂತೆ ದುಡಿಸಿಕೊಳ್ಳುತ್ತಿರುವ ಶಿಕ್ಷಕರ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಕ್ಕಳಿಂದ ಈ ರೀತಿ ಕೆಲಸ ಮಾಡಿಸುವುದು ತಪ್ಪು ಎಂದು ಆಕ್ರೋಶ ಹೊರಹಾಕಿದ್ದಾರೆ.

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ

ಮಂಡ್ಯದಿಂದ ಪಾಂಡವಪುರಕ್ಕೆ ಹೋಗುವ ಮೂರು ಕೋಟಿ ರೂಪಾಯಿ ವೆಚ್ಚದ ರಸ್ತೆ ಮೂರೇ ತಿಂಗಳಲ್ಲಿ ಸಂಪೂರ್ಣವಾಗಿ ಹಾಳಾಗಿದೆ. ಗುಂಡಿಗಳನ್ನು ಮುಚ್ಚಿದರೂ ಪದೇ ಪದೇ ಕಿತ್ತು ಬರುತ್ತಿದ್ದು, ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಹಲವರು ಬಿದ್ದು ಗಾಯಗೊಂಡಿದ್ದು, ಹೊಸ ರಸ್ತೆ ನಿರ್ಮಾಣಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ

ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು: ಮಾರ್ಚ್ 5ರಂದು ಬೃಹತ್ ಹೋರಾಟಕ್ಕೆ ಕರೆ

ರಾಜ್ಯ ಸರ್ಕಾರ ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡ ವಿಚಾರವಾಗಿ ಇದೀಗ ಗುತ್ತಿಗೆದಾರರು ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ತಿರುಗಿಬಿದಿದ್ದು, ಮಾರ್ಚ್ 5 ರಂದು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಮಂಡ್ಯದಲ್ಲಿ ನಡೆದ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​:  ಬಲಿಯಾಗಿದ್ದು 2 ಜೀವ

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​: ಬಲಿಯಾಗಿದ್ದು 2 ಜೀವ

ಅವರಿಬ್ಬರೂ ತಾಯಿ ಮತ್ತು ಮಗಳು. ಒಟ್ಟೊಟ್ಟಿಗೆ ಇವರಿಬ್ಬರ ಆತ್ಮಹತ್ಯೆ ಗ್ರಾಮಕ್ಕೆ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಕಾರಣ ಹುಡುಕಿ ಹೊರಟಾಗ ವಿಷಯ ತಿಳಿದು ಸ್ಥಳೀಯರು ಹೌಹಾರಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಷ್ಟಕ್ಕೂ ಇವರಿಬ್ಬರ ಸಾವಿಗೆ ಕಾರಣ ಏನು ಎಂಬ ಮಾಹಿತಿ ಇಲ್ಲಿದೆ.

ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ-ಜೆಡಿಎಸ್ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಕುರಿತು ಈಗಲೇ ಪೈಪೋಟಿ ಶುರುವಾಗಿದ್ದು, ಬಿಜೆಪಿ ನಾಯಕರು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್​ಪಾಸ್ ಸಾಧ್ಯತೆ

ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್​ಪಾಸ್ ಸಾಧ್ಯತೆ

ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ. ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದು, ಕಾಂಗ್ರೆಸ್‌ ಪಕ್ಷದಿಂಧ ಗೇಟ್‌ಪಾಸ್ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.

ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?