ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಹಣೆಗೆ ಬಾಸಿಂಗ, ತಲೆಗೆ ಪೇಟ: ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು
ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ ಮದುವೆಯಾಗದೆ ಸಾವಿರಾರು ಯುವಕರು ಉಳಿದುಕೊಂಡಿದ್ದು, ಅವರ ಪರವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿನೂತ ಪ್ರತಿಭಟನೆ ಮಾಡಲಾಯಿತು. ಶಾದಿ ಭಾಗ್ಯ ಮಾದರಿ ಹೊಸ ಯೋಜನೆ ಜಾರಿಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
- Dileep CP
- Updated on: Dec 12, 2025
- 9:37 pm
ಮಂಡ್ಯ: ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಅಪಘಾತವೊಂದು ಸಂಭವಿಸಿದ್ದು, ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತೆ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.
- Dileep CP
- Updated on: Dec 7, 2025
- 6:14 pm
‘ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ ಎಂದು ಹೇಳಿದ್ದೇನೆ ಹೊರತು ಮತಾಂತರ ಮಾಡಿ ಎಂದಿಲ್ಲ’: ಸಿಎಂಗೆ ಹೆಚ್ಡಿಕೆ ಟಾಂಗ್
ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆಗೆ ಹೆಚ್ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯ, ಬದುಕಿನ ನಿಯಮ ಕಲಿಸಲು ಇದು ಅಗತ್ಯ ಎಂದಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂವಿಧಾನದ ಪೀಠಿಕೆ ಪ್ರಮುಖ ಎಂದರು. ಕುಮಾರಸ್ವಾಮಿ ಬಿಜೆಪಿ ಸೇರಿ ಮನುವಾದಿಯಾಗಿದ್ದಾರೆಂದು ಸಿಎಂ ಟೀಕಿಸಿದರೆ, ಇದೀಗ ಕುಮಾರಸ್ವಾಮಿ ಸಿದ್ದರಾಮಯ್ಯರ ಅಹಿಂದ ಕೊಡುಗೆ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.
- Dileep CP
- Updated on: Dec 6, 2025
- 9:33 pm
ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು
ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಜಾಮಿಯಾ ಮಸೀದಿ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಇಂದು ಹನುಮ ಮಾಲಧಾರಿಗಳು ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
- Dileep CP
- Updated on: Dec 3, 2025
- 6:57 am
ಮಂಡ್ಯ: ಪಕ್ಕದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಅರೆಸ್ಟ್
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೆರೆಮನೆಯಲ್ಲಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ. ಮರೀಗೌಡರನ್ನು ಪೊಲೀಸರು ಬಂಧಿಸಿದ್ದಾರೆ. 2000 ಮತ್ತು 2002ರಲ್ಲಿ ಮದ್ದೂರು ಪುರಸಭೆ ಅಧ್ಯಕ್ಷರಾಗಿದ್ದ ಈತ, ಜೂಜಾಟದ ಸಾಲ ತೀರಿಸಲು ಸುಶೀಲಮ್ಮ ಎಂಬುವರ ಮನೆಯಲ್ಲಿ ಮುಸುಕುಧಾರಿ ಕಳ್ಳತನ ನಡೆಸಿದ್ದ. ಸಿಸಿಟಿವಿ ಮತ್ತು ತನಿಖೆಯಿಂದ ಸತ್ಯಾಂಶ ಬಯಲಾಗಿದೆ.
- Dileep CP
- Updated on: Nov 26, 2025
- 9:11 am
ಮಂಡ್ಯ: ಗಿಳಿ ಶಾಸ್ತ್ರ ಕೇಳಿ ಸಿಎಂ, ಡಿಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ
ಗಿಳಿ ಶಾಸ್ತ್ರ ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಸಿಎಂ ಕುರ್ಚಿ ಫೈಟ್ ಬಗ್ಗೆ ಮಂಡ್ಯ ಬಿಜೆಪಿ ವ್ಯಂಗ್ಯವಾಡಿದೆ. ಅಧಿಕಾರ ಹಂಚಿಕೆ ಬಗ್ಗೆ ಬಿಜೆಪಿಗರು ಗಿಳಿ ಶಾಸ್ತ್ರ ಕೇಳಲಿ ಎಂಬ ಡಿಕೆಶಿ ಹೇಳಿಕೆಗೆ ಕೌಂಟರ್ ಕೊಟ್ಟಿರುವ ಬಿಜೆಪಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ? ಇಲ್ವಾ?, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಗಿಳಿ ಶಾಸ್ತ್ರ ಕೇಳಿದ್ದಾರೆ.
- Dileep CP
- Updated on: Nov 23, 2025
- 11:21 am
ನೋಡ ನೋಡ್ತಿದ್ದಂತೆಯೇ ಹೃದಯಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು: ಸಿಸಿಟಿವಿಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಮನಕಲಕುವಂಥ ಘಟನೆಯೊಂದು ನಡೆದಿದ್ದು, ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ಹಾರ್ಟ್ ಅಟ್ಯಾಕ್ನಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಹುಲ್ಲಾಗಾಲ ಗ್ರಾಮದ ಈರಣ್ಣಯ್ಯ (58) ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.
- Dileep CP
- Updated on: Nov 22, 2025
- 2:46 pm
ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ: ಮಂಡ್ಯ ಪೊಲೀಸರಿಂದ ಮೂವರು ಅರೆಸ್ಟ್
ಬಸ್ಗಾಗಿ ಕಾಯುವವರನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಹತ್ತಿಸಿಕೊಳ್ಳುತ್ತಿದ್ದ ಗ್ಯಾಂಗ್, ಮಂಡ್ಯದ ನಿರ್ಜನ ಪ್ರದೇಶದ ಬಳಿ ಬರ್ತಿದ್ದಂತೆ ಕತ್ತಿಗೆ ಹಗ್ಗ ಹಾಕಿ ಬೆದರಿಸಿ ರಾಬರಿ ಮಾಡುತ್ತಿತ್ತು.
- Dileep CP
- Updated on: Nov 20, 2025
- 9:44 am
ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು
ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಭಕ್ತರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
- Dileep CP
- Updated on: Nov 18, 2025
- 9:42 pm
ಮಂಡ್ಯದಲ್ಲಿ ರೈತ ಮಂಜೇಗೌಡ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್: ಮಹತ್ವದ ದಾಖಲೆ ಬಹಿರಂಗ
ತಮ್ಮಿಂದ ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಹತ್ವದ ದಾಖಲೆ ಬಹಿರಂಗಗೊಂಡಿದೆ. ಆ ಮೂಲಕ ಮೃತ ರೈತ ಮಾಡಿದ್ದ ಆರೋಪ ಹಾಗಿದ್ದರೆ ಸುಳ್ಳಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಕುಟುಂಬಸ್ಥರು ತಮ್ಮ ಆರೋಪಗಳಿಗೆ ಸೂಕ್ತ ದಾಖಲೆ ನೀಡಿಲ್ಲ ಎಂಬ ವಿಷಯವೂ ಬೆಳಕಿಗೆ ಬಂದಿದೆ.
- Dileep CP
- Updated on: Nov 5, 2025
- 3:19 pm
ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು
ಮಂಡ್ಯ ಜಿಲ್ಲೆಯ ರೈತ ಮಂಜೇಗೌಡ, 2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಸ್ಪಂದನೆ ಸಿಗದೆ, ಲಂಚದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ರೈತ ಮನವಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಲೇ ತಂದೆ ಸಾವನ್ನಪ್ಪಿದ್ದಾರೆಂದು ಅವರ ಪುತ್ರ ಆರೋಪಿಸಿದ್ದಾರೆ.
- Dileep CP
- Updated on: Nov 5, 2025
- 2:55 pm
7 ವರ್ಷದಲ್ಲಿ 40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ: ವಿಸಿ ನಾಲೆಗೆ ತಡೆಗೋಡೆ ಯಾವಾಗ?
ತಡೆಗೋಡೆ ಇಲ್ಲದ ಕಾರಣಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ನಾಲೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ್ಲ ತಡೆಗೋಡೆ ನಿರ್ಮಿಸುವ ಭರವಸೆ ನೀಡುತ್ತಾರೆ. ಆದರೆ, ಮತ್ತೆ ಆ ಬಗ್ಗೆ ಸುದ್ದಿಯೇ ಇರುವುದಿಲ್ಲ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
- Dileep CP
- Updated on: Nov 5, 2025
- 12:26 pm