AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಶಾಲೆ ನಡೆಸಲಾಗದ್ದಷ್ಟು ಬಡವಾಯ್ತೆ ಸರ್ಕಾರ: ಮೈಶುಗರ್ ಶಾಲೆ ಕಾಂಗ್ರೆಸ್ ಮುಖಂಡನ ತೆಕ್ಕೆಗೆ?

ಶಾಲೆ ನಡೆಸಲಾಗದ್ದಷ್ಟು ಬಡವಾಯ್ತೆ ಸರ್ಕಾರ: ಮೈಶುಗರ್ ಶಾಲೆ ಕಾಂಗ್ರೆಸ್ ಮುಖಂಡನ ತೆಕ್ಕೆಗೆ?

ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಕಳೆದ ಬಿಜೆಪಿ ಸರ್ಕಾರದ ಉದ್ದೇಶಿಸಿತ್ತು.ಆದ್ರೆ ರೈತರ ಹೋರಾಟದ ಬಳಿಕ ಕೈಬಿಟ್ಟಿತ್ತು. ಇದೀಗ ಮೈಶುಗರ್ ಕಾರ್ಖಾನೆಯ ಇನ್ನೊಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಾಂಗ್ರೆಸ್ ಮುಖಂಡನಿಗೆ ಲೀಸ್ ಗೆ ನೀಡಲು ತೆರೆಮರೆಯ ಸರ್ಕಸ್ ನಡೆಯುತ್ತಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಈ ವರ್ಷ ಮುಂಗಾರು ಮಳೆಯ ಅಬ್ಬರ ಅವಧಿಗೂ ಮುನ್ನವೇ ಕೆಆರ್​​ಎಸ್ ಡ್ಯಾಂ ಭರ್ತಿಯಾಗುವತ್ತ ಕೊಮಡೊಯ್ದಿದೆ. ಪರಿಣಾಮವಾಗಿ ಡ್ಯಾಂ ಭರ್ತಿಯಾಗಲು ಇನ್ನು 7 ಅಡಿ ಅಷ್ಟೇ ಬಾಕಿ ಇದೆ. ಹೀಗಾಗಿ ಡ್ಯಾಂನಿಂದ ನದಿಗೆ ನೀರು ಬಿಡುವ ಸಂದರ್ಭ ಬರುವ ಮುನ್ಸೂಚನೆ ಇದ್ದು, ಕಾವೇರಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಮಂಡ್ಯ ಮೈಶುಗರ್ ಶಾಲೆ ಮೇಲೆ ಖಾಸಗಿ ಕಣ್ಣು: ಕೋಟ್ಯಂತರ ರೂ ಆಸ್ತಿ ಕಬಳಿಸಲು ಹುನ್ನಾರ ಆರೋಪ

ಮಂಡ್ಯ ಮೈಶುಗರ್ ಶಾಲೆ ಮೇಲೆ ಖಾಸಗಿ ಕಣ್ಣು: ಕೋಟ್ಯಂತರ ರೂ ಆಸ್ತಿ ಕಬಳಿಸಲು ಹುನ್ನಾರ ಆರೋಪ

ಮೈಶುಗರ್ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಗುತ್ತಿಗೆ ನೀಡಲು ಆಡಳಿತ ಮಂಡಳಿ ತೀರ್ಮಾನಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸುವ ಹುನ್ನಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರೈತರು ಮತ್ತು ಹಳೇ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

KRS Dam Water Level: ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: ಭರ್ತಿಯಾಗಲು 9 ಅಡಿ ಅಷ್ಟೇ ಬಾಕಿ

KRS Dam Water Level: ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: ಭರ್ತಿಯಾಗಲು 9 ಅಡಿ ಅಷ್ಟೇ ಬಾಕಿ

ಈ ವರ್ಷ ಮುಂಗಾರು ಮಳೆ ರೈತರಿಗೆ ಭರ್ಜರಿ ಖುಷಿಕೊಟ್ಟಿದೆ. ಅವಧಿಗೂ ಬಹಳಷ್ಟು ಮುನ್ನವೇ ಕೆಆರ್​ಎಸ್ ಡ್ಯಾಂ ಭರ್ತಿಯಾಗುವತ್ತ ಸಾಗಿದೆ. ಸದ್ಯ 37.947 ಟಿಎಂಸಿ ನೀರು ಸಂಗ್ರವಾಗಿದ್ದು, ಇನ್ನು 9 ಅಡಿ ನೀರು ತುಂಬಿದರೆ ಜಲಾಶಯ ಭರ್ತಿಯಾಗಲಿದೆ. ಕೆಆರ್​ಎಸ್ ಡ್ಯಾಂನಲ್ಲಿ ನೀರಿನ ಹರಿವಿನ ವಿಡಿಯೋ ಇಲ್ಲಿದೆ ನೋಡಿ.

ಕಾವೇರಿ ಆರತಿ ಕಿಚ್ಚು: ಡಿಕೆ ಶಿವಕುಮಾರ್​ ಕನಸಿನ‌ ಯೋಜನೆ ಪರನಿಂತ ಹಿಂದೂ ಸಂಘಟನೆಗಳು

ಕಾವೇರಿ ಆರತಿ ಕಿಚ್ಚು: ಡಿಕೆ ಶಿವಕುಮಾರ್​ ಕನಸಿನ‌ ಯೋಜನೆ ಪರನಿಂತ ಹಿಂದೂ ಸಂಘಟನೆಗಳು

ಮಂಡ್ಯದಲ್ಲಿ ಕಾವೇರಿ ಆರತಿ ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧ‌ಗಳು ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ರೈತ ಸಂಘಟನೆ, ಪ್ರಗತಿಪರರು ವಿರೋಧಿಸಿರುವ ಯೋಜನೆಗೆ ಇದೀಗ ಅಚ್ಚರಿ ಎಂಬಂತೆ ಹಿಂದೂ ಸಂಘಟನೆಗಳು ಮತ್ತು ಮುಖಂಡರು ಬೆಂಬಲ ಸೂಚಿಸಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವವಕುಮಾರ್​ ಕನಸಿನ‌ ಯೋಜನೆ ಪರ ನಿಂತಿದ್ದಾರೆ.

ಮಂಡ್ಯ ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್

ಮಂಡ್ಯ ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್

ವಿಶ್ವಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯದಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಾಗಿದೆ. ಅಪರಿಚಿತ ಯುವಕರು ಕ್ರಸ್ಟ್ ಗೇಟ್ ಬಳಿಯ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ವೀಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಕೈಗಾರಿಕಾ ಭದ್ರತಾ ಪಡೆಯ ಕಾರ್ಯ ವೈಖರಿ ಬಗ್ಗೆ ಅನುಮಾನ ಮೂಡಿವೆ.

ಮಂಡ್ಯ ಕಾವೇರಿ ಆರತಿ ಕಿಚ್ಚು: ವಿರೋಧದ ಮಧ್ಯೆ ರಾತ್ರೋರಾತ್ರಿ ಕದ್ದು ಮುಚ್ಚಿ ಕಾಮಗಾರಿ

ಮಂಡ್ಯ ಕಾವೇರಿ ಆರತಿ ಕಿಚ್ಚು: ವಿರೋಧದ ಮಧ್ಯೆ ರಾತ್ರೋರಾತ್ರಿ ಕದ್ದು ಮುಚ್ಚಿ ಕಾಮಗಾರಿ

ಮಂಡ್ಯದ ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ಕಾವೇರಿ ಆರತಿ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಆದರೆ, ರೈತ ಸಂಘಟನೆಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಚಿವರು ತಾತ್ಕಾಲಿಕ ತಡೆ ನೀಡುವುದಾಗಿ ಹೇಳಿದ್ದರೂ, ರಾತ್ರಿಯ ವೇಳೆ ಕಾಮಗಾರಿ ಮುಂದುವರಿದಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ರಹಸ್ಯ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಕಾವೇರಿ ಆರತಿಗೆ 100 ಕೋಟಿ ರೂ. ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ: ಹೆಚ್​ಡಿ ಕುಮಾರಸ್ವಾಮಿ

ಕಾವೇರಿ ಆರತಿಗೆ 100 ಕೋಟಿ ರೂ. ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ: ಹೆಚ್​ಡಿ ಕುಮಾರಸ್ವಾಮಿ

ಮಂಡ್ಯದಲ್ಲಿ ನಡೆದ ಮೈಶುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಹೆಚ್‌.ಡಿ. ಕುಮಾರಸ್ವಾಮಿ ಅವರು, ದೇಶಾದ್ಯಂತ 14,000 ವಿದ್ಯುತ್ ಬಸ್‌ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಬೆಂಗಳೂರಿಗೆ 4500 ಮತ್ತು ಇತರ ರಾಜ್ಯಗಳಿಗೆ 2000 ಬಸ್‌ಗಳನ್ನು ನೀಡುವುದಾಗಿ ಹೇಳಿದ್ದಾರೆ. ಮಂಡ್ಯದ ಅಭಿವೃದ್ಧಿ, ಕೈಗಾರಿಕಾ ಸ್ಥಾಪನೆ, ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಅವರು ಭರವಸೆ ನೀಡಿದ್ದಾರೆ. ಮೈಶುಗರ್ ಶಿಕ್ಷಣ ಸಂಸ್ಥೆ ಮತ್ತು ಎಚ್ಎಂಟಿ ಕಾರ್ಖಾನೆಯನ್ನು ಉಳಿಸುವುದಕ್ಕೆ ತಮ್ಮ ಬದ್ಧತೆಯನ್ನು ಸಹ ಅವರು ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ, ಅಮ್ಯೂಸ್​ಮೆಂಟ್ ಪಾರ್ಕ್​ಗೆ ಬೀಳುತ್ತಾ ಬ್ರೇಕ್? ರೈತರಿಂದ ತೀವ್ರ ವಿರೋಧ

ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ, ಅಮ್ಯೂಸ್​ಮೆಂಟ್ ಪಾರ್ಕ್​ಗೆ ಬೀಳುತ್ತಾ ಬ್ರೇಕ್? ರೈತರಿಂದ ತೀವ್ರ ವಿರೋಧ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸಿನ ಯೋಜನೆಯಾಗಿರುವ ಕಾವೇರಿ ಆರತಿ ಮತ್ತು ಅಮ್ಯೂಸ್​​ಮೆಂಟ್ ಪಾರ್ಕ್ ಯೋಜನೆಗೆ ಮಂಡ್ಯ ಜಿಲ್ಲೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಶನಿವಾರ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರನ್ನು ರೈತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

4 ವರ್ಷಗಳಿಂದ ಯುವತಿಗೆ ನಿರಂತರ ಕಿರುಕುಳ, 7 ಮದುವೆ ರದ್ದು! ಹಿಂದೂ ಮುಖಂಡನ ವಿರುದ್ಧ ಮಂಡ್ಯದಲ್ಲಿ ಎಫ್​ಐಆರ್

4 ವರ್ಷಗಳಿಂದ ಯುವತಿಗೆ ನಿರಂತರ ಕಿರುಕುಳ, 7 ಮದುವೆ ರದ್ದು! ಹಿಂದೂ ಮುಖಂಡನ ವಿರುದ್ಧ ಮಂಡ್ಯದಲ್ಲಿ ಎಫ್​ಐಆರ್

ಮಂಡ್ಯದಲ್ಲಿ ಯುವತಿಯೊಬ್ಬರು ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣನಿಂದ ನಾಲ್ಕು ವರ್ಷಗಳಿಂದ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಎಫ್​ಐಆರ್ ದಾಖಲಿಸಲಾಗಿದೆ. ಮದುವೆಯಾಗಲು ನಿರಾಕರಿಸಿದ್ದಕ್ಕೆ ಆರೋಪಿ ಚಿಕ್ಕಬಳ್ಳಿ ಬಾಲಕೃಷ್ಣ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆರೋಪಿಯು ಆಕೆಯ ಮದುವೆಗಳನ್ನು ರದ್ದುಗೊಳಿಸಿದ್ದು, ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಂಡ್ಯ: ಮಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ

ಮಂಡ್ಯ: ಮಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ

ಒಂದೇ ವಾರ ಮಂಡ್ಯದಲ್ಲಿ ಇಬ್ಬರು ಮಕ್ಕಳ ಬಲಿಯಾಗಿದೆ. ಸೋಮವಾರವಷ್ಟೇ ಸಂಚಾರಿ ಪೊಲೀಸರ ಎಡವಟ್ಟಿನಿಂದ ಮಗುವೊಂದು ಮೃತಪಟ್ಟಿತ್ತು. ಇದೀಗ ಕಾಲು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಮಿಮ್ಸ್ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಅಷ್ಟಕ್ಕೂ ಆ ಮಗು ಸಾವಿಗೆ ಕಾರಣ ಏನು? ಮಗು ಸಾವಿನ ಬಗ್ಗೆ ಪೋಷಕರು ಹೇಳುವುದೇನು? ವೈದ್ಯರು ಕೊಡುವ ಕಾರಣ ಏನು? ಇಲ್ಲಿದೆ ವಿವರ.

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ, ಡಿಜಿಪಿ ಸೂಚನೆ

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ, ಡಿಜಿಪಿ ಸೂಚನೆ

ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ತಪಾಸಣೆ ವೇಳೆ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ, ಹೊಸ ಸೂಚನೆಗಳನ್ನು ಹೊರಡಿಸಿದೆ. ವಾಹನ ತಪಾಸಣೆ ವೇಳೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂರಿಂದ ಸುತ್ತೋಲೆ ಹೊರಡಿಸುವ ಮೂಲಕ ಖಡಕ್​ ಸೂಚನೆ ನೀಡಲಾಗಿದೆ.