ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಕೆಆರ್ಎಸ್ ಡ್ಯಾಂನಲ್ಲಿ ಅನುಮತಿಯಿಲ್ಲದೆ ಖಾಸಗಿ ಕಂಪನಿಯಿಂದ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
ಕೆಆರ್ಎಸ್ ಡ್ಯಾಂನಲ್ಲಿ ಖಾಸಗಿ ಕಂಪನಿಯೊಂದು ಕಾವೇರಿ ನೀರಾವರಿ ನಿಗಮದ ಅನುಮತಿ ಪಡೆಯದೆ ಯಂತ್ರ ಬಳಸಿ ಮಣ್ಣು ಪರೀಕ್ಷೆ ನಡೆಸಿದೆ. ಬೆಂಗಳೂರು ಜಲ ಮಂಡಳಿಯ ಟೆಂಡರ್ ಪಡೆದ ಈ ಕಂಪನಿ ಆರನೇ ಹಂತದ ಯೋಜನೆ ಕಾಮಗಾರಿಗಾಗಿ ಪರೀಕ್ಷೆ ನಡೆಸುತ್ತಿದೆ. ಕೆಆರ್ಎಸ್ನಿಂದ ನೀರು ಪೂರೈಕೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
- Dileep CP
- Updated on: Jul 14, 2026
- 2:23 pm
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್ ಘಾಟ್ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ.
- Dileep CP
- Updated on: Jul 13, 2026
- 7:34 pm
KRS ಡ್ಯಾಂನಿಂದ ನಾಲೆಗಳಿಗೆ ಹರಿಯದ ನೀರು: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ
Mandya News: ಕೆಆರ್ಎಸ್ ಡ್ಯಾಂನಿಂದ ನಾಲೆಗಳಿಗೆ ನೀರು ಬಿಡದ ಹಿನ್ನೆಲೆ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕಬ್ಬು ಬೆಳೆ ಒಣಗುತ್ತಿದ್ದು, ಕೂಡಲೇ ನೀರು ಹರಿಸುವಂತೆ ಆಗ್ರಹಿಸಿ ಜಿಲ್ಲಅಧಿಕಾರಿಗಳ ಕಚೇರಿಗೆ ಮುತ್ತಿಗೆ ಯತ್ನವೂ ನಡೆದಿದೆ. ರೈತರಿಗೇ ನೀರಿಲ್ಲದಿರುವಾಗ 6ನೇ ಹಂತದ ಕುಡಿಯುವ ನೀರಿನ ಯೋಜನೆ ಸರಿಯಲ್ಲ ಎಂಬ ಅಭಿಪ್ರಾಯವೂ ಪ್ರತಿಭಟನಾಕಾರರಿಂದ ವ್ಯಕ್ತವಾಗಿದೆ.
- Dileep CP
- Updated on: Jul 13, 2026
- 4:00 pm
ಹೈದರಾಬಾದ್ನಲ್ಲಿ ಪ್ಯಾಲೇಸ್ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್. ಜಾನಕಿ ಅಂತಿಮ ದಿನಗಳು?
S Janaki Passes Away: ಮೈಸೂರಿನಲ್ಲಿ ನೆಲೆಸಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಕೊನೆಯ ದಿನಗಳ ಬಗ್ಗೆ ಕೇರ್ ಟೇಕರ್ ನವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅರಮನೆಯಂತಹ ಮನೆಯಿದ್ದರೂ ಅವರು ಮೈಸೂರನ್ನೇ ಆಯ್ದುಕೊಂಡಿದ್ದರು. ಜಾನಕಿಯವರಿಗೆ ಕಾಲಿನ ಇನ್ಫೆಕ್ಷನ್ ಆಗಿ ನೋವು ಆರಂಭವಾಗಿತ್ತು. ಹಾಸ್ಪಿಟಲ್ ಅಂದರೆ ಜಾನಕಮ್ಮ ಭಯ ಪಡುತ್ತಿದ್ದ ಕಾರಣ ಮನೆಗೇ ನರ್ಸ್ ಕರೆಸಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಈ ನಡುವೆ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದವರು ತಿಳಿಸಿದ್ದಾರೆ.
- Dileep CP
- Updated on: Jul 13, 2026
- 12:08 pm
ಮಹಿಳೆಯರ ಕಷ್ಟ ಕೇಳೋಕೆ ಎಲ್ಲರೂ ಇರ್ತಾರೆ, ಆದ್ರೆ ಪುರುಷರ ನೋವು ಕೇಳೋರ ಯಾರು?
ಮಂಡ್ಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ರಚನೆಯಾಗಿದ್ದು, ಹೆಣ್ಣುಮಕ್ಕಳಿಗೆ ಸಿಗುವಷ್ಟು ಪ್ರಾಮುಖ್ಯತೆ ಗಂಡಸರಿಗೆ ಸಿಗುತ್ತಿಲ್ಲ ಎಂದು ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. ಪುರುಷರ ವಿರುದ್ಧ ನಡೆಯುವ ದೌರ್ಜನ್ಯ, ಕಿರುಕುಳಗಳನ್ನು ಪರಿಹರಿಸಲು ಸಮಿತಿ ಕಾರ್ಯನಿರ್ವಹಿಸಲಿದೆ. ಮಾಧ್ಯಮಗಳು ಮತ್ತು ಸಾರ್ವಜನಿಕರು ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿದೆ.
- Dileep CP
- Updated on: Jul 4, 2026
- 8:37 pm
ಮಂಡ್ಯ ಫೈರಿಂಗ್ ಪ್ರಕರಣ: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್ಪಿ ಶೋಭಾರಾಣಿ? ಭಾರೀ ಚರ್ಚೆ
ಮಂಡ್ಯ ಟ್ರಕ್ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಪ್ರಭಾವಿ ಪುತ್ರ ರೋಹನ್ ಗೌಡನಿಗೆ ಮಂಡ್ಯ ಎಸ್ಪಿ ಡಾ. ಶೋಭಾರಾಣಿ ಬೆಂಬಲವಾಗಿ ನಿಂತ ಆರೋಪ ಎದುರಾಗಿದೆ. ಎಫ್ಐಆರ್ನಲ್ಲಿ ಪ್ರಮುಖ ಸೆಕ್ಷನ್ಗಳನ್ನು ಕೈಬಿಟ್ಟಿರುವುದು, ವೈದ್ಯಕೀಯ ಪರೀಕ್ಷೆಯಲ್ಲಿ ವಿಳಂಬ ಮತ್ತು ಆರೋಪಿ ಜೊತೆಗಿನ ಆಪ್ತ ಸಂಬಂಧಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅನುಮಾನಗಳು ವ್ಯಕ್ತವಾಗಿವೆ.
- Dileep CP
- Updated on: Jul 4, 2026
- 10:04 am
ಮಂಡ್ಯ: ಹೈವೇಯಲ್ಲಿ ಕಂಟೇನರ್ ಲಾರಿ ಅಡ್ಡಗಟ್ಟಿ ಉದ್ಯಮಿ ಪುತ್ರನ ಅಟ್ಟಹಾಸ, ಫೈರಿಂಗ್
ಮಂಡ್ಯ ಸಮೀಪದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಐಷಾರಾಮಿ ಕಾರಿನಲ್ಲಿ ಬಂದ ಪ್ರಭಾವಿ ಉದ್ಯಮಿಯೊಬ್ಬರ ಪುತ್ರ ಹಾಗೂ ಆತನ ಗ್ಯಾಂಗ್, ಔಷಧ ತುಂಬಿದ್ದ ಕಂಟೇನರ್ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಗುಂಡು ಹಾರಿಸಿ ದರೋಡೆಗೆ ಯತ್ನಿಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಂಡ್ಯ ಗ್ರಾಮಾಂತರ ಪೊಲೀಸರು ಉದ್ಯಮಿ ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Dileep CP
- Updated on: Jul 3, 2026
- 10:29 am
ಮಂಡ್ಯ: ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ; ಕೋರ್ಟ್ ಆದೇಶದೊಂದಿಗೆ ಬಂದು ಪೀಠೋಪಕರಣ ಹೊತ್ತೊಯ್ದ ರೈತರು
ಮಂಡ್ಯದಲ್ಲಿ ಭೂ ಪರಿಹಾರ ಸಿಗದೆ 15 ವರ್ಷಗಳಿಂದ ಕಾಯುತ್ತಿದ್ದ ರೈತರು ಸರ್ಕಾರಿ ಕಚೇರಿಯನ್ನೇ ಜಪ್ತಿ ಮಾಡಿದ್ದಾರೆ. ಹೇಮಾವತಿ ನಾಲೆ ಕಾಮಗಾರಿಗಾಗಿ ವಶಪಡಿಸಿಕೊಂಡ ಭೂಮಿಗೆ ಸೂಕ್ತ ಪರಿಹಾರ ನೀಡದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತರು, ನ್ಯಾಯಾಲಯದ ಆದೇಶದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯನ್ನು ವಶಪಡಿಸಿಕೊಂಡು ಪೀಠೋಪಕರಣಗಳನ್ನು ಹೊರಹಾಕಿದ್ದಾರೆ. ಈ ಘಟನೆ ಅಧಿಕಾರಿಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.
- Dileep CP
- Updated on: Jun 30, 2026
- 8:57 pm
ಟೌನ್ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ
ಬಿಡದಿ ಟೌನ್ಶಿಪ್ ಯೋಜನೆ ಪರ, ವಿರುದ್ಧ ರೈತರು ರಣಕಹಳೆ ಮೊಳಗಿಸಿದ್ದಾರೆ. ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಅದರಲ್ಲೂ ಹೆಚ್ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಜಟಾಪಟಿ ಜೋರಾಗಿದೆ. ರೈತರ ಜೊತೆ ಚರ್ಚಿಸೋಣ ಎಂದು ಸವಾಲು ಹಾಕಿದ್ದ ಕುಮಾರಸ್ವಾಮಿ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟಿದ್ದರು. ಈ ವೇಳೆ ಯೋಜನೆ ಪರ ಪ್ರತಿಭಟನಾನಿರತ ರೈತರಿಂದ ಹೈಡ್ರಾಮವೇ ನಡೆದಿದೆ.
- Dileep CP
- Updated on: Jun 27, 2026
- 3:39 pm
ಮುತ್ತತ್ತಿ ಕಾವೇರಿ ನದಿಯಲ್ಲಿ ಐವರು ಜಲಸಮಾಧಿ: ಕೊನೇ ಕ್ಷಣದ ವಿಡಿಯೋ ವೈರಲ್
Mandya News: ಮಂಡ್ಯದ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಜಲಕ್ರೀಡೆಗೆ ಇಳಿದಿದ್ದ ನಾಲ್ವರು ಮಹಿಳೆಯರು ಮತ್ತು ಅವರನ್ನು ರಕ್ಷಿಸಲು ಯತ್ನಿಸಿದ ಚಾಲಕ ಸೇರಿ ಐವರು ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಸಾವಿಗೂ ಮುನ್ನ ಖುಷಿಯಿಂದ ನೀರಿಗೆ ಇಳಿದಿದ್ದ ದೃಶ್ಯಗಳು ವೈರಲ್ ಆಗಿದ್ದು, ಜಿಲ್ಲಾಧಿಕಾರಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
- Dileep CP
- Updated on: Jun 25, 2026
- 2:16 pm
ಕಾವೇರಿ ನದಿಯಲ್ಲಿ ಐವರು ಜಲಸಮಾಧಿ ಕೇಸ್: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
Mandya News: ಮಂಡ್ಯದ ಮುತ್ತತ್ತಿ ಕಾವೇರಿ ನದಿಯಲ್ಲಿ ಕಾಲು ಜಾರಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಜಲಸಮಾಧಿಯಾದ ದಾರುಣ ಘಟನೆ ಮುತ್ತತ್ತಿಯಲ್ಲಿ ನಡೆದಿತ್ತು. ಈ ವೇಳೆ ಸ್ಥಳೀಯರ ಸಮಯಪ್ರಜ್ಞೆಯಿಂದ ಬದುಕುಳಿದ ಏಕೈಕ ವ್ಯಕ್ತಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆ ಕ್ಷಣ ಅಲ್ಲಿ ಆಗಿದ್ದೇನೆಂಬ ಬಗ್ಗೆ ವಿವರಿಸಿದ್ದಾರೆ.
- Dileep CP
- Updated on: Jun 25, 2026
- 11:46 am
ಡೆಡ್ ಸ್ಟೋರೇಜ್ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್ಎಸ್ನಿಂದ ಮಾತ್ರ ನೀರು
ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುತ್ತಿವೆ. ಕಬಿನಿ ಡ್ಯಾಂ ಡೆಡ್ ಸ್ಟೋರೇಜ್ ಹಂತ ತಲುಪಿದ್ದು, ಕೆಆರ್ಎಸ್ನಲ್ಲಿ ಕೇವಲ 6 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಬೆಂಗಳೂರು, ಮೈಸೂರು, ಮಂಡ್ಯ ನಗರಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಬೆಳೆಗಳಿಗೆ ನೀರಾವರಿಗಾಗಿ ಭಾರೀ ಒತ್ತಡ ಎದುರಾಗಿದೆ.
- Dileep CP
- Updated on: Jun 25, 2026
- 9:01 am