ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಮಂಡ್ಯ: ಆಲಕೆರೆ ಶಾಲೆಯಲ್ಲಿ ಮೊಟ್ಟೆ ಗಲಾಟೆ, ಪರ-ವಿರೋಧ ಶುರುವಾಗಿದ್ದೇಕೆ ನೋಡಿ
ಮಂಡ್ಯದ ಆಲಕೆರೆ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. 120 ಮಕ್ಕಳಿರುವ ಶಾಲೆಯ 80 ಮಂದಿ ಪೋಷಕರಿಂದ ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತವಾಗಿದೆ. ಹಾಗಾದರೆ, ಈ ವಿರೋಧಕ್ಕೆ ಕಾರಣವೇನು? ಮೊಟ್ಟೆ ವಿತರಣೆ ವಿರುದ್ಧ ಇರುವವರ ಹೇಳಿಕೆಗಳೇನು? ವಿಡಿಯೋ ಇಲ್ಲಿದೆ ನೋಡಿ.
- Dileep CP
- Updated on: Jul 23, 2025
- 1:01 pm
112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ
ಈತ ಡಿಎಆರ್ ಪೊಲೀಸ್ ಪೇದೆ. 112 ವಾಹನದ ಚಾಲಕನಾಗಿದ್ದ. ಆದರೆ ರಕ್ಷಣೆ ಕೋರಿ ಮಹಿಳೆಯೊಬ್ಬರು 112ಗೆ ಕರೆ ಮಾಡಿ ದೂರು ಕೊಟ್ಟಿದ್ರು. ದೂರು ಕೊಟ್ಟ ಮಹಿಳೆಯ ರಕ್ಷಣೆಗೆ ನಿಲ್ಲಬೇಕಾದ ಪೊಲೀಸಪ್ಪ, ಆಕೆಯ ನಂಬರ್ ಪಡೆದು ಸಲುಗೆ ಬೆಳಸಿಕೊಂಡು ನಂತರ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಪೊಲಿ ಆಟವಾಡಿದ ಪೊಲೀಸಪ್ಪನ ವಿರುದ್ಧ ಇದೀಗ ಆತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
- Dileep CP
- Updated on: Jul 20, 2025
- 1:22 pm
ಸಾಧನಾ ಸಮಾವೇಶದಿಂದ ವಾಪಸ್ ಬರುತ್ತಿದ್ದ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನವು ಮೈಸೂರಿನಿಂದ ಬೆಂಗಳೂರಿಗೆ ಹೋಗುವಾಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಪಲ್ಟಿಯಾಗಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ.
- Dileep CP
- Updated on: Jul 19, 2025
- 3:50 pm
ಮಂಡ್ಯದಲ್ಲಿ ಗೋಲ್ಡ್ ಲೋನ್ ಹೆಸರಲ್ಲಿ 70ಕ್ಕೂ ಹೆಚ್ಚು ಜನರಿಗೆ ಕೊಟ್ಯಂತರ ರೂ ವಂಚನೆ: ಮೂವರ ಬಂಧನ
ಮಂಡ್ಯ ಜಿಲ್ಲೆಯಲ್ಲಿ ಗೋಲ್ಡ್ ಲೋನ್ ಹೆಸರಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಜಾಲವೊಂದನ್ನು ಪೊಲೀಸರು ಬೇಧಿಸಿದ್ದಾರೆ. ಅನಘ ಗೋಲ್ಡ್ ಎಂಬ ಕಂಪನಿ ಮೂಲಕ 70ಕ್ಕೂ ಹೆಚ್ಚು ಜನರನ್ನು ವಂಚಿಸಿ, 3 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಂಚಿಸಲಾಗಿದೆ. ಸದ್ಯ ಮೂವರನ್ನು ಬಂಧಿಸಲಾಗಿದೆ.
- Dileep CP
- Updated on: Jul 9, 2025
- 7:51 am
ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಮನೆಯಲ್ಲಿನ ಗಲಾಟೆಯಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು. ಇದೀಗ ರಕ್ಷಣೆ ಮಾಡಲಾಗಿದೆ.
- Dileep CP
- Updated on: Jul 4, 2025
- 10:38 am
93 ವರ್ಷಗಳ ದಾಖಲೆ ಮುರಿದ KRS: ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದು ಎಷ್ಟನೇ ಬಾರಿ ಗೊತ್ತಾ?
ಕೆಆರ್ಎಸ್ ಜಲಾಶಯ 93 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ನಲ್ಲಿಯೇ ತುಂಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ತಿಂಗಳಲ್ಲಿಯೇ ಕಾವೇರಿಗೆ ಬಾಗಿನ ಅರ್ಪಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸಾಮಾನ್ಯವಾಗಿ ಜುಲೈ-ಆಗಸ್ಟ್ನಲ್ಲಿ ಭರ್ತಿಯಾಗುವ ಈ ಅಣೆಕಟ್ಟು, ಈ ಬಾರಿ ವಾಡಿಕೆಗಿಂತ ಮುಂಚೆಯೇ ತುಂಬಿದ್ದು, ಹಳೇ ಮೈಸೂರು ಭಾಗದ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಈ ಘಟನೆ ರಾಜ್ಯಕ್ಕೆ ಅಭೂತಪೂರ್ವ ಮಳೆಯ ಸೂಚನೆಯಾಗಿದೆ.
- Dileep CP
- Updated on: Jun 30, 2025
- 6:58 pm
KRS Dam Full: ಕೆಆರ್ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ನಲ್ಲೇ ಭರ್ತಿ!
ಅವಧಿಪೂರ್ವ ಮುಂಗಾರು ಮಳೆಯ ನೆರವಿನಿಂದ ಈ ವರ್ಷ ಕೆಆರ್ಎಸ್ ಡ್ಯಾಂ ಜೂನ್ ಕೊನೆಯ ವಾರದಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಡ್ಯಾಂ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿದೆ. ಇದು ರೈತರು ಸೇರಿದಂತೆ ಡ್ಯಾಂ ಅವಲಂಬಿತರನ್ನು ಹರ್ಷಚಿತ್ತರನ್ನಾಗಿಸಿದೆ. ಅದರೊಂದಿಗೆ, ಸಿಎಂ ಸಿದ್ದರಾಮಯ್ಯಗೂ ದಾಖಲೆಯೊಂದನ್ನು ಬರೆಯುವ ಸುವರ್ಣಾವಕಾಶ ದೊರೆತಿದೆ. ಏನದು? ಇಲ್ಲಿದೆ ವಿವರ.
- Dileep CP
- Updated on: Jun 27, 2025
- 10:15 am
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಮನೆ ಮಾಡಿದ್ದು, ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಈ ಸಂದರ್ಭದಲ್ಲಿ, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯ ಪ್ರಯೋಜನಗಳ ಬಗ್ಗೆ ದೇಗುಲದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ವಿವರಣೆ ನೀಡಿದ್ದಾರೆ.
- Dileep CP
- Updated on: Jun 27, 2025
- 8:54 am
ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್ ಡ್ರೈವ್ ಕೊಲೆ ರಹಸ್ಯ ಬಯಲು
ಆಕೆ ಎರಡು ಮಕ್ಕಳ ತಾಯಿ. ಸಾಮಾಜಿಕ ಜಾಲತಾಣದಲ್ಲಿ ಸ್ಮಾರ್ಟ್ ಯುವಕ ಸಿಕ್ಕ ಅಂತ ಪರಿಚಯ ಮಾಡಿಕೊಂಡಿದ್ದಾಳೆ.ಆದ್ರೆ, ನಾಲ್ಕೆ ದಿನದಲ್ಲೇ ಚಾಟಿಂಗ್ ಡೇಟಿಂಗ್ ನಡೆದಿದೆ.ಬಳಿಕ ಲಾಂಗ್ ಡ್ರೈವ್ ನಲ್ಲಿ ಲೈಂಗಿಕ ಕ್ರೀಯೆಗೆ ಒತ್ತಾಯಿಸಿ ಕೊನೆಗೆ ಭೀಕರವಾಗಿ ಹತ್ಯೆಯಾಗಿದ್ದಾಳೆ. ಅಷ್ಟಕ್ಕೂ ಲಾಂಗ್ ಡ್ರೈವ್ ನಲ್ಲಿ ಆಂಟಿ ಹಾಗೂ ಯುವಕನ ಮಧ್ಯೆ ನಡೆದಿದ್ದೇನು? ಆಂಟಿಯನ್ನು ಯುವಕ ಕೊಲೆ ಮಾಡಿದ್ಯಾಕೆ ಎನ್ನುವ ಡಿಟೇಲ್ ಇಲ್ಲಿದೆ.
- Dileep CP
- Updated on: Jun 25, 2025
- 6:51 pm
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿ ಹತ್ತೇ ದಿನಕ್ಕೆ ಕೊಲೆಯಾದ ವಿವಾಹಿತ ಮಹಿಳೆ: ಹತ್ಯೆಗೈದು ಚಿನ್ನಾಭರಣ ದೋಚಿದ ಯುವಕ
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನೊಬ್ಬ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಮಹಿಳೆಯ ಮೇಲಿದ್ದ ಚಿನ್ನಾಭರಣವನ್ನು ದೋಚಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
- Dileep CP
- Updated on: Jun 25, 2025
- 9:49 am
ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!
ಕನ್ನಡಿಗರ ಜೀವನಾಡಿ ಕನ್ನಂಬಾಡಿ ಭರ್ತಿಯತ್ತ ಸಾಗುತ್ತಿದ್ದಂತೆ ಮಂಡ್ಯ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಂಡ್ಯ ಜಿಲ್ಲೆಯ ಅನ್ನದಾತರ ಜೀವನಾಡಿ ಮೈಶುಗರ್ ಕಾರ್ಖಾನೆ ಕಬ್ಬು ನುರಿಯಲು ಸನ್ನದ್ದವಾಗಿರೋದು ಈ ಭಾಗದ ರೈತರ ಸಂತಸ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಇಂದು ಸಂಪ್ರದಾಯದಂತೆ ಕಾರ್ಖಾನೆ ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡುವ ಫ್ಯಾಕ್ಟರಿ ಕಾರ್ಯಾರಂಭಕ್ಕೆ ಮುನ್ನುಡಿ ಬರೆಯಲಾಯ್ತು.
- Dileep CP
- Updated on: Jun 23, 2025
- 8:11 pm
ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ
ತಾಯಿಯನ್ನ ತ್ಯಾಗಮಯಿ ಅಂತಾರೆ. ಹೆತ್ತು, ಹೊತ್ತು ತನ್ನ ಆಸೆಗಳನ್ನೆಲ್ಲಾ ಬದಿಗಿಟ್ಟು ಮಕ್ಕಳನ್ನು ಸಾಕಿರ್ತಾಳೆ. ಬೆಳೆದು ದೊಡ್ಡವರಾದ ಮಕ್ಕಳು ಹೆತ್ತವರ ವೃದ್ಧಾಪ್ಯದಲ್ಲಿ ಆಸರೆಯಾಗಬೇಕು. ಆದರೆ ಮಂಡ್ಯದಲ್ಲೊಬ್ಬ ಮಗ ತನ್ನ ತಾಯಿ ಮಾನಸಿಕ ಅಸ್ವಸ್ಥೆ ಅನ್ನೋ ಕಾರಣಕ್ಕೆ ರಸ್ತೆಯಲ್ಲಿ ಬಿಟ್ಟುಹೋಗಿದ್ದಾನೆ. ಇದೀಗ ಅಜ್ಜಿಯ ಮಗನನ್ನು ಹುಡುಕಿ ವಿಚಾರಿಸಲಾಗಿದ್ದು, ಮಗನ ಸ್ಥಿತಿ ಕೇಳಿದರೆ ಕರಳು ಚುರುಕ್ ಎನ್ನುತ್ತೆ.
- Dileep CP
- Updated on: Jun 23, 2025
- 6:07 pm