ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ: ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ 8 ಅಡಿ ಏರಿಕೆಯಾಗಿದ್ದು, ರೈತರಿಗೆ ತಾತ್ಕಾಲಿಕ ಸಮಾಧಾನ ತಂದಿದೆ. ಆದರೂ, ಮಂಡ್ಯ ಜಿಲ್ಲೆಯಲ್ಲಿ ಮಳೆ ಕೊರತೆ ಮುಂದುವರಿದಿರುವುದು ಮಳೆ ಆಶ್ರಿತ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.
- Dileep CP
- Updated on: Aug 3, 2026
- 9:40 am
ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಭುಜ ತಟ್ಟಿ ಕೈಹಿಡಿದ ಮೋದಿ: ಪ್ರಧಾನಿ ಕಿವಿಯಲ್ಲಿ ಸಿಎಂ ಹೇಳಿದ್ದೇನು?
ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ರಾಮಕೃಷ್ಣ ಆಶ್ರಮದಲ್ಲಿರುವ ಈ ಸ್ಮಾರಕವು ದೇವರಾಜ ಮೊಹಲ್ಲಾದ ನಾರಾಯಣಶಾಸ್ತ್ರಿ ರಸ್ತೆಯಲ್ಲಿದೆ. ಕಾರ್ಯಕ್ರಮದ ನಂತರ, ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆತ್ಮೀಯವಾಗಿ ಮಾತುಕತೆ ನಡೆಸಿದರು. ಮೋದಿ ಅವರು ಡಿಕೆ ಶಿವಕುಮಾರ್ ಅವರ ಭುಜ ತಟ್ಟಿ, ಕೈ ಹಿಡಿದು ವೇದಿಕೆಯಿಂದ ಕರೆದುಕೊಂಡು ಹೋದರು.
- Dileep CP
- Updated on: Aug 1, 2026
- 8:23 pm
ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಡಿಕೆಶಿಯಿಂದ ಸ್ವಾಗತ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲರು ಮತ್ತು ಬೊವ್ವ ವಿಜಯೇಂದ್ರ ಅವರು ಉಪಸ್ಥಿತರಿದ್ದರು. ಓವಲ್ ಹೆಲಿಪ್ಯಾಡ್ನಿಂದ ರಾಮಕೃಷ್ಣ ಆಶ್ರಮಕ್ಕೆ ತೆರಳಲಿರುವ ಪ್ರಧಾನಿ, ವಿವೇಕ ಸ್ಮಾರಕಕ್ಕೂ ಭೇಟಿ ನೀಡುವ ನಿರೀಕ್ಷೆಯಿದೆ.
- Dileep CP
- Updated on: Aug 1, 2026
- 4:43 pm
12 ಲಕ್ಷ ಸಾಲಬಾಧೆಯಿಂದ ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
Mandya News: ಮಂಡ್ಯ ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ 11-12 ಲಕ್ಷ ರೂಪಾಯಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಪತಿ ಮೀಸೆ ಪುಟ್ಟಸ್ವಾಮಿ ಹಾಗೂ ಪತ್ನಿ ನಾಗಮ್ಮ ಅವರ ಕುಟುಂಬಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಂದ ಸಾಲದ ಬಗ್ಗೆ ಮಾಹಿತಿ ಪಡೆದರು.
- Dileep CP
- Updated on: Jul 31, 2026
- 7:09 pm
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್ಎಸ್ ಬಳಿ ಬಿಜೆಪಿಗರಿಂದ ಬೃಹತ್ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ ಆದೇಶವನ್ನು ಖಂಡಿಸಿ ಮಂಡ್ಯದ ಕೆಆರ್ಎಸ್ (KRS) ಜಲಾಶಯದ ಬಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ ಸರ್ಕಲ್ನಲ್ಲಿ ರೈತರು ಮತ್ತು ಕನ್ನಡ ಸಂಘಟನೆಗಳ ಧರಣಿ ನಡೆಸಿದ್ದರೆ, ಕಾವೇರಿ ಹೋರಾಟಕ್ಕೆ ಪಡಿತರ ವಿತರಕರ ಸಂಘವೂ ಬೆಂಬಲ ನೀಡಿದೆ.
- Dileep CP
- Updated on: Jul 31, 2026
- 1:00 pm
ಕಾವೇರಿ ವಿವಾದ: KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಖಂಡಿಸಿ ಮಂಡ್ಯದ ಕೆಆರ್ಎಸ್ ಜಲಾಶಯದ ಬಳಿ ಭಾರೀ ಪ್ರತಿಭಟನೆ ನಡೆಯಿತು. ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ರಕ್ಷಣಾ ವೇದಿಕೆ ಮತ್ತು ರೈತರು ಈ ಆದೇಶದಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದರು.
- Dileep CP
- Updated on: Jul 31, 2026
- 10:31 am
ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಬಿಜೆಪಿ ನಾಯಕರು ಇಂದು ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಅಹಿತಕರ ಘಟನೆ ತಡೆಯಲು ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.
- Dileep CP
- Updated on: Jul 31, 2026
- 10:32 am
ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ವಿವಾದದ ಆಕ್ರೋಶ: ತಮಿಳುನಾಡು ಸಿಎಂ ವಿಜಯ್ ಸಿನಿಮಾ ಜನನಾಯಗನ್ ಪ್ರದರ್ಶನ ತಡೆಗೆ ಯತ್ನ
ಮಂಡ್ಯದಲ್ಲಿ ಕಾವೇರಿ ವಿವಾದ ಸಂಬಂಧ ಪ್ರತಿಭಟನೆ ಭುಗಿಲೆದ್ದಿದ್ದು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ‘ಜನನಾಯಗನ್’ ಸಿನಿಮಾ ಪ್ರದರ್ಶನ ವೇಳೆ ಥಿಯೇಟರ್ಗೆ ಮುತ್ತಿಗೆ ಹಾಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಹರಿದು ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವಂತೆ CWRC ಆದೇಶದ ಹಿನ್ನೆಲೆ ಮಂಡ್ಯ ಮಾತ್ರವಲ್ಲದೆ, ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ಜೋರಾಗಿವೆ.
- Dileep CP
- Updated on: Jul 30, 2026
- 12:39 pm
ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ CWRC ನೀಡಿರುವ ಆದೇಶಕ್ಕೆ ಮಂಡ್ಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನೀರಿಲ್ಲದಿದ್ದರೂ ಆದೇಶ ಹೊರಡಿಸುವುದು ಗ್ರೌಂಡ್ ರಿಯಾಲಿಟಿ ಅರ್ಥ ಮಾಡಿಕೊಳ್ಳದ ಕ್ರಮ. ಕರ್ನಾಟಕದಲ್ಲಿ ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರಿಲ್ಲ, ಬರ ಪರಿಸ್ಥಿತಿಯಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಸರ್ಕಾರ ಕಾನೂನು ಹೋರಾಟ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
- Dileep CP
- Updated on: Jul 29, 2026
- 10:04 am
ತಮಿಳುನಾಡಿಗೆ ನೀರು ಬಿಡಲು CWRC ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ: ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ತಮಿಳುನಾಡಿಗೆ ನೀರು ಬಿಡುವಂತೆ CWRC ನೀಡಿದ ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂಮಿ ತಾಯಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ರಾತ್ರಿ ಇಡೀ ಪ್ರತಿಭಟಿಸಿದರು. ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ, ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದೆಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
- Dileep CP
- Updated on: Jul 29, 2026
- 7:12 am
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು: ಮಹತ್ವದ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ
Cauvery Row:ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವ ಬೆನ್ನಲ್ಲೇ, ತಮಿಳುನಾಡಿನ ಚಿದಂಬರಂ ಬಳಿ ಕಾವೇರಿ ನದಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಸ್ಫೋಟಕ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
- Dileep CP
- Updated on: Jul 28, 2026
- 4:54 pm
ಮಂಡ್ಯ: ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ, ಅಧ್ಯಕ್ಷರ ವಿರುದ್ಧ ಆಕ್ರೋಶ!
ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ನ 'ಸಂಘಟನಾ ಸೃಜನ ಅಭಿಯಾನ' ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ತಾಲೂಕಿನಲ್ಲಿ ಸ್ಪಂದಿಸುವ ನಾಯಕರೇ ಇಲ್ಲ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ನಾಯಕರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.
- Dileep CP
- Updated on: Jul 28, 2026
- 2:44 pm