AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್​, ಚೌಡಹಳ್ಳಿ

ದಿಲೀಪ್​, ಚೌಡಹಳ್ಳಿ

Author - TV9 Kannada

dileep.chowdhalli@tv9.com

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯ: ಮತ್ತೆ ಮುನ್ನೆಲೆಗೆ ಬಂದ ಜಾಮಿಯಾ ಮಸೀದಿ ವಿವಾದ, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಕಣ್ಗಾವಲು

ಮಂಡ್ಯದ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ಇದೀಗ ಮತ್ತೆ ಮುನ್ನಲೆಗೆ‌ ಬಂದಿದೆ. ಜಾಮಿಯಾ ಮಸೀದಿ‌ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ ಮಾಡುವ ಪ್ರತಿಜ್ಞೆ ಮಾಡಿ ಇಂದು ಹನುಮ ಮಾಲಧಾರಿಗಳು ಬೃಹತ್ ಸಂಕೀರ್ತನಾ ಯಾತ್ರೆಯನ್ನು ಮಾಡುತ್ತಿದ್ದಾರೆ. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಮಂಡ್ಯ: ಪಕ್ಕದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಅರೆಸ್ಟ್

ಮಂಡ್ಯ: ಪಕ್ಕದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಮದ್ದೂರು ಪುರಸಭೆಯ ಮಾಜಿ ಅಧ್ಯಕ್ಷ ಅರೆಸ್ಟ್

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನೆರೆಮನೆಯಲ್ಲಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ. ಮರೀಗೌಡರನ್ನು ಪೊಲೀಸರು ಬಂಧಿಸಿದ್ದಾರೆ. 2000 ಮತ್ತು 2002ರಲ್ಲಿ ಮದ್ದೂರು ಪುರಸಭೆ ಅಧ್ಯಕ್ಷರಾಗಿದ್ದ ಈತ, ಜೂಜಾಟದ ಸಾಲ ತೀರಿಸಲು ಸುಶೀಲಮ್ಮ ಎಂಬುವರ ಮನೆಯಲ್ಲಿ ಮುಸುಕುಧಾರಿ ಕಳ್ಳತನ ನಡೆಸಿದ್ದ. ಸಿಸಿಟಿವಿ ಮತ್ತು ತನಿಖೆಯಿಂದ ಸತ್ಯಾಂಶ ಬಯಲಾಗಿದೆ.

ಮಂಡ್ಯ: ಗಿಳಿ ಶಾಸ್ತ್ರ ಕೇಳಿ ಸಿಎಂ, ಡಿಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಮಂಡ್ಯ: ಗಿಳಿ ಶಾಸ್ತ್ರ ಕೇಳಿ ಸಿಎಂ, ಡಿಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಗಿಳಿ ಶಾಸ್ತ್ರ ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವಿನ ಸಿಎಂ ಕುರ್ಚಿ ಫೈಟ್​​ ಬಗ್ಗೆ ಮಂಡ್ಯ ಬಿಜೆಪಿ ವ್ಯಂಗ್ಯವಾಡಿದೆ. ಅಧಿಕಾರ ಹಂಚಿಕೆ ಬಗ್ಗೆ ಬಿಜೆಪಿಗರು ಗಿಳಿ ಶಾಸ್ತ್ರ ಕೇಳಲಿ ಎಂಬ ಡಿಕೆಶಿ ಹೇಳಿಕೆಗೆ ಕೌಂಟರ್​​ ಕೊಟ್ಟಿರುವ ಬಿಜೆಪಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ? ಇಲ್ವಾ?, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಗಿಳಿ ಶಾಸ್ತ್ರ ಕೇಳಿದ್ದಾರೆ.

ನೋಡ ನೋಡ್ತಿದ್ದಂತೆಯೇ ಹೃದಯಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು: ಸಿಸಿಟಿವಿಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ನೋಡ ನೋಡ್ತಿದ್ದಂತೆಯೇ ಹೃದಯಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು: ಸಿಸಿಟಿವಿಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಮನಕಲಕುವಂಥ ಘಟನೆಯೊಂದು ನಡೆದಿದ್ದು, ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿಯೊಬ್ಬರು ಹಾರ್ಟ್ ಅಟ್ಯಾಕ್​ನಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಹುಲ್ಲಾಗಾಲ ಗ್ರಾಮದ ಈರಣ್ಣಯ್ಯ (58) ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ: ಮಂಡ್ಯ ಪೊಲೀಸರಿಂದ ಮೂವರು ಅರೆಸ್ಟ್​

ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ: ಮಂಡ್ಯ ಪೊಲೀಸರಿಂದ ಮೂವರು ಅರೆಸ್ಟ್​

ಬಸ್​​ಗಾಗಿ ಕಾಯುವವರನ್ನು ಟಾರ್ಗೆಟ್​​ ಮಾಡಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಹತ್ತಿಸಿಕೊಳ್ಳುತ್ತಿದ್ದ ಗ್ಯಾಂಗ್, ಮಂಡ್ಯದ ನಿರ್ಜನ ಪ್ರದೇಶದ ಬಳಿ ಬರ್ತಿದ್ದಂತೆ ಕತ್ತಿಗೆ ಹಗ್ಗ ಹಾಕಿ ಬೆದರಿಸಿ ರಾಬರಿ ಮಾಡುತ್ತಿತ್ತು.

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಭಕ್ತರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಂಡ್ಯದಲ್ಲಿ ರೈತ ಮಂಜೇಗೌಡ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್​: ಮಹತ್ವದ ದಾಖಲೆ ಬಹಿರಂಗ​

ಮಂಡ್ಯದಲ್ಲಿ ರೈತ ಮಂಜೇಗೌಡ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್​: ಮಹತ್ವದ ದಾಖಲೆ ಬಹಿರಂಗ​

ತಮ್ಮಿಂದ ಸರ್ಕಾರ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಿಲ್ಲವೆಂದು ಆರೋಪಿಸಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಹತ್ವದ ದಾಖಲೆ ಬಹಿರಂಗಗೊಂಡಿದೆ. ಆ ಮೂಲಕ ಮೃತ ರೈತ ಮಾಡಿದ್ದ ಆರೋಪ ಹಾಗಿದ್ದರೆ ಸುಳ್ಳಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಕುಟುಂಬಸ್ಥರು ತಮ್ಮ ಆರೋಪಗಳಿಗೆ ಸೂಕ್ತ ದಾಖಲೆ ನೀಡಿಲ್ಲ ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು

ಮಂಡ್ಯ ಜಿಲ್ಲೆಯ ರೈತ ಮಂಜೇಗೌಡ, 2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಸ್ಪಂದನೆ ಸಿಗದೆ, ಲಂಚದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ರೈತ ಮನವಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಲೇ ತಂದೆ ಸಾವನ್ನಪ್ಪಿದ್ದಾರೆಂದು ಅವರ ಪುತ್ರ ಆರೋಪಿಸಿದ್ದಾರೆ.

7 ವರ್ಷದಲ್ಲಿ 40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ: ವಿಸಿ ನಾಲೆಗೆ ತಡೆಗೋಡೆ ಯಾವಾಗ?

7 ವರ್ಷದಲ್ಲಿ 40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ: ವಿಸಿ ನಾಲೆಗೆ ತಡೆಗೋಡೆ ಯಾವಾಗ?

ತಡೆಗೋಡೆ ಇಲ್ಲದ ಕಾರಣಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ನಾಲೆ ಸಾವಿನ ಕೂಪವಾಗಿ ಮಾರ್ಪಟ್ಟಿದೆ. ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ಅವಘಡಗಳು ನಡೆದಾಗೆಲ್ಲ ತಡೆಗೋಡೆ ನಿರ್ಮಿಸುವ ಭರವಸೆ ನೀಡುತ್ತಾರೆ. ಆದರೆ, ಮತ್ತೆ ಆ ಬಗ್ಗೆ ಸುದ್ದಿಯೇ ಇರುವುದಿಲ್ಲ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

ಮಂಡ್ಯದ ಯರಹಳ್ಳಿ ಬಳಿ ವಿಸಿ ನಾಲೆಗೆ ಬಿದ್ದ ಕಾರು: ಚಾಲಕ ಜಸ್ಟ್ ಬಚಾವ್!

ಮಂಡ್ಯದ ಯರಹಳ್ಳಿ ಬಳಿ ವಿಸಿ ನಾಲೆಗೆ ಬಿದ್ದ ಕಾರು: ಚಾಲಕ ಜಸ್ಟ್ ಬಚಾವ್!

ಮಂಡ್ಯದ ಯರಹಳ್ಳಿ ಬಳಿ ವಿಸಿ ನಾಲೆಗೆ ಕಾರೊಂದು ಪತನಗೊಂಡಿದೆ. ಅದೃಷ್ಟವಶಾತ್ ಚಾಲಕ ಕೃಷ್ಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮಯಪ್ರಜ್ಞೆಯಿಂದ ಅವರು ಬಚಾವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಚಿಕ್ಕ ರಸ್ತೆಗಳು ಹಾಗೂ ತಡೆಗೋಡೆಗಳ ಕೊರತೆ ಇಂತಹ ಘಟನೆಗಳಿಗೆ ಕಾರಣವೆಂದು ಹೇಳಲಾಗಿದೆ. ಘಟನಾ ಸ್ಥಳ ಮತ್ತು ಕಾರಿನ ರಕ್ಷಣೆ ಮಾಡುತ್ತಿರುವ ವಿಡಿಯೋ ಇಲ್ಲಿದೆ.

ಮಂಡ್ಯ: ಪ್ರವಾಸಕ್ಕೆ ಬಂದಿದ್ದ ವೇಳೆ ಭಾರೀ ದುರಂತ; ನಾಲ್ವರು ಮಕ್ಕಳು ಸಾವು, ಓರ್ವ ಬಾಲಕನ ರಕ್ಷಣೆ

ಮಂಡ್ಯ: ಪ್ರವಾಸಕ್ಕೆ ಬಂದಿದ್ದ ವೇಳೆ ಭಾರೀ ದುರಂತ; ನಾಲ್ವರು ಮಕ್ಕಳು ಸಾವು, ಓರ್ವ ಬಾಲಕನ ರಕ್ಷಣೆ

ಪ್ರವಾಸಕ್ಕೆ ಬಂದಿದ್ದ ವೇಳೆ ನಾಲೆಯಲ್ಲಿ ಐವರು ಮಕ್ಕಳು ಕೊಚ್ಚಿಕೊಂಡು ಹೋಗಿದ್ದ ದುರಂತ ಘಟನೆಯೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಮಸ್ವಾಮಿ ನಾಲೆಯಲ್ಲಿ ಶನಿವಾರ ನಡೆದಿದೆ. ಐವರ ಪೈಕಿ ನಾಲ್ವರ ಮೃತದೇಹಗಳು ಸದ್ಯ ಪತ್ತೆ ಆಗಿವೆ. ಓರ್ವ ಬಾಲಕನಿಗೆ ಚಿಕಿತ್ಸೆ ಮುಂದುವರೆದಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಡ್ಯ ಮನೆಯಲ್ಲಿ ನೆತ್ತರ ಕಲೆಯ ಪ್ರಕರಣ; ಲ್ಯಾಬ್ ವರದಿ ಬಹಿರಂಗ

ಮಂಡ್ಯ ಮನೆಯಲ್ಲಿ ನೆತ್ತರ ಕಲೆಯ ಪ್ರಕರಣ; ಲ್ಯಾಬ್ ವರದಿ ಬಹಿರಂಗ

ಮಂಡ್ಯದ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿ ಮನೆಯಲ್ಲಿ ನಿಗೂಢವಾಗಿ ಕಾಣಿಸಿಕೊಂಡ ರಕ್ತದ ಕಲೆಗಳು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ. ಲ್ಯಾಬ್ ವರದಿಯಲ್ಲಿ ಅವು ಮನುಷ್ಯನ ರಕ್ತ ಎಂದು ದೃಢಪಟ್ಟಿದೆ. ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಹಾಲ್, ಬಾತ್‌ರೂಂ ಸೇರಿದಂತೆ ಮನೆಯ ಹಲವೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಇದು ಯಾರ ರಕ್ತ, ಹೇಗೆ ಬಂತು ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.