ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಕಾರ್ಯನಿರ್ವಹಣೆ.
ಉಗ್ರರ ಲಿಂಕ್, ಭಾರತ ವಿರೋಧಿ ಚಟುವಟಿಕೆ: 23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ
ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿರುವ ಜೈಶ್-ಎ-ಮೊಹಮ್ಮದ್ (JeM), ಲಷ್ಕರ್-ಎ-ತೊಯ್ಬಾ (LeT) ಸೇರಿದಂತೆ ವಿವಿಧ ಸಂಘಟನೆಗಳ 23 ಉಗ್ರರನ್ನು ಕೇಂದ್ರ ಗೃಹ ಸಚಿವಾಲಯವು ಯುಎಪಿಎ (UAPA) ಕಾಯ್ದೆಯಡಿ ‘ಘೋಷಿತ ಭಯೋತ್ಪಾದಕರು’ ಎಂಬ ಪಟ್ಟಿಗೆ ಸೇರಿಸಿದೆ. ಇವರಲ್ಲಿ 17 ಜನ ಪಾಕಿಸ್ತಾನಿ ಪ್ರಜೆಗಳಾಗಿದ್ದಾರೆ.
- Ganapathi Sharma
- Updated on: Jul 4, 2026
- 2:56 pm
ಕರ್ನಾಟಕ SIR ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಿದ್ಧತೆ
ಕರ್ನಾಟಕದಲ್ಲಿ SIR ಪ್ರಕ್ರಿಯೆಯಲ್ಲಿನ ಲೋಪಗಳು ರಾಜಕೀಯ ಬಿರುಗಾಳಿ ಎಬ್ಬಿಸಿವೆ. ಮನೆ ಮನೆಗೆ ತೆರಳಿ ಮತದಾರರ ಪರಿಷ್ಕರಣೆ ನಡೆಸುವ ಬದಲು ಸಾಮೂಹಿಕವಾಗಿ ಜನರನ್ನು ಸೇರಿಸಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಸರ್ಕಾರವನ್ನು ಟೀಕಿಸಿವೆ. ಈ ವಿಷಯವನ್ನು ಪ್ರಮುಖ ಅಸ್ತ್ರವಾಗಿ ಪರಿಗಣಿಸಿ, ಎರಡೂ ಪಕ್ಷಗಳು ಜಂಟಿ ಹೋರಾಟಕ್ಕೆ ಸಜ್ಜಾಗಿವೆ.
- Ganapathi Sharma
- Updated on: Jul 4, 2026
- 11:30 am
ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು
Eknath shinde hospitalized: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಶಿವಸೇನೆ ಶಿಂಧೆ ಬಣದ ಮುಖ್ಯಸ್ಥ ಏಕನಾಥ್ ಶಿಂಧೆ ತೀವ್ರ ಜ್ವರ ಮತ್ತು ಸುಸ್ತು ಹಿನ್ನೆಲೆಯಲ್ಲಿ ಶನಿವಾರ ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದ್ದಾರೆ.
- Ganapathi Sharma
- Updated on: Jul 4, 2026
- 11:09 am
ಬೆಂಗಳೂರು: ರೌಡಿಶೀಟರ್ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಬೆಂಗಳೂರಿನಲ್ಲಿ ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ 30ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆದಿದೆ. ಇಂದಿರಾನಗರದ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಅಪರಾಧ ಹಿನ್ನೆಲೆ ಇರೋರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ತಂಡ, ಸಮಾಜದ ಸ್ವಾಸ್ಥ್ಯ ಕೆಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
- Ganapathi Sharma
- Updated on: Jul 4, 2026
- 9:17 am
ಕರ್ನಾಟಕ ಬರ: ವಿದ್ಯುತ್ ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಮಳೆ ಕೊರತೆ ಹಾಗೂ ಎಲ್ ನಿನೋ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂಧನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತುರ್ತು ಕಾರ್ಯಯೋಜನೆ ರೂಪಿಸಿ, ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಗಮನ ಹರಿಸಲು ಅವರು ನಿರ್ದೇಶಿಸಿದ್ದಾರೆ.
- Ganapathi Sharma
- Updated on: Jul 4, 2026
- 8:26 am
ಮಲಗಿದ್ದ ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು! ಪ್ರಾಣಾಪಾಯದಿಂದ ಪುಟ್ಟ ಮಕ್ಕಳು ಜಸ್ಟ್ ಮಿಸ್
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಸಮೀಪದ ಗ್ರಾಮವೊಂದರಲ್ಲಿ ಮನೆಯೊಳಗೆ ಮಕ್ಕಳು ಮಲಗಿದ್ದ ಚಾಪೆಯಡಿಯೇ ಬೃಹತ್ ನಾಗರಹಾವೊಂದು ಆಶ್ರಯ ಪಡೆದಿದ್ದ ಆಘಾತಕಾರಿ ಘಟನೆ ನಡೆದಿದೆ. ಸಕಾಲದಲ್ಲಿ ಹಾವನ್ನು ಗಮನಿಸಿದ ಪೋಷಕರು ಉರಗ ರಕ್ಷಕರ ನೆರವು ಪಡೆದಿದ್ದರಿಂದ ಪುಟ್ಟ ಮಕ್ಕಳು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
- Ganapathi Sharma
- Updated on: Jul 4, 2026
- 7:36 am
ಬೆಂಗಳೂರು ಡೇ ಕೇರ್ನಲ್ಲಿ ಮಕ್ಕಳ ಮೇಲಿನ ಕ್ರೌರ್ಯ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ NHRC, ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್
ಬೆಂಗಳೂರಿನ ಐಟಿ ಕಂಪನಿಯೊಂದರ ಶಿಶುವಿಹಾರದಲ್ಲಿ ಪುಟ್ಟ ಮಕ್ಕಳ ಮೇಲೆ ನಡೆಸಿರುವ ಅಮಾನವೀಯ ಕ್ರೌರ್ಯದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಖಡಕ್ ಸೂಚನೆ ನೀಡಿದೆ.
- Ganapathi Sharma
- Updated on: Jul 4, 2026
- 10:25 am
SIR: ಬಿಎಲ್ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಖಡಕ್ ಸೂಚನೆ
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್ಒಗಳು ಮನೆ ಮನೆಗೆ ತೆರಳಿ ಫಾರಂ ವಿತರಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
- Ganapathi Sharma
- Updated on: Jul 3, 2026
- 12:42 pm
ಭೀಕರ ಬರದ ಛಾಯೆ: ಜಿಲ್ಲೆಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಲು ಸಚಿವರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ
ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಲ್ಲಾ ಜಿಲ್ಲೆಗಳ ಪ್ರವಾಸ ಕೈಗೊಂಡು ಪರಿಸ್ಥಿತಿ ಅವಲೋಕಿಸುವಂತೆ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಲಾಶಯಗಳಲ್ಲಿ ನೀರಿನ ಒಳಹರಿವು ಶೇ 20 ಕ್ಕೆ ಕುಸಿದಿದ್ದು, ಕೇವಲ ಜಲಾಶಯದ ನೀರನ್ನು ನಂಬಿ ಬೆಳೆ ಬಿತ್ತನೆ ಮಾಡಬೇಡಿ ಎಂದು ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
- Ganapathi Sharma
- Updated on: Jul 3, 2026
- 8:55 am
ಫುಟ್ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್: ಮುಖ್ಯ ರಸ್ತೆಗಳಲ್ಲಿ ವ್ಯಾಪಾರ ಬೇಡ
ಸಚಿವ ಕೃಷ್ಣ ಭೈರೇಗೌಡರು ಬೆಂಗಳೂರಿನಲ್ಲಿ ರಸ್ತೆಗುಂಡಿ, ಚರಂಡಿ ಮತ್ತು ಫುಟ್ಪಾತ್ ಒತ್ತುವರಿ ಕುರಿತು ತಡರಾತ್ರಿ ಪರಿಶೀಲನೆ ನಡೆಸಿದರು. ಪಾದಚಾರಿಗಳ ಜೀವಕ್ಕೆ ಅಪಾಯ ತರುತ್ತಿರುವ ಫುಟ್ಪಾತ್ ಅತಿಕ್ರಮಣವನ್ನು ತೆರವುಗೊಳಿಸಲು ಕಟ್ಟುನಿಟ್ಟಾಗಿ ಸೂಚಿಸಿದ ಸಚಿವರು, ಮುಖ್ಯರಸ್ತೆ ಬಿಟ್ಟು ಪಕ್ಕದ ರಸ್ತೆಗಳಲ್ಲಿ ವ್ಯಾಪಾರ ಮಾಡುವಂತೆ ಬೀದಿಬದಿ ವ್ಯಾಪಾರಿಗಳಿಗೆ ಮತ್ತೆ ಎಚ್ಚರಿಕೆ ನೀಡಿದರು.
- Ganapathi Sharma
- Updated on: Jul 3, 2026
- 7:54 am
ಮೂರು ತಿಂಗಳಿಂದ ನಮ್ಮ ಕ್ಲಿನಿಕ್ ಸಿಬ್ಬಂದಿಗಿಲ್ಲ ಸಂಬಳ: ಬಂದ್ ಎಚ್ಚರಿಕೆ ನೀಡಿದ ವೈದ್ಯರು, ನರ್ಸ್ಗಳು
ಬೆಂಗಳೂರಿನ ಬಡವರು ಮತ್ತು ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರಂಭವಾದ ‘ನಮ್ಮ ಕ್ಲಿನಿಕ್’ ಯೋಜನೆ ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಅನುದಾನದ ಹಗ್ಗಜಗ್ಗಾಟದಿಂದಾಗಿ ಕಳೆದ ಮೂರು ತಿಂಗಳಿಂದ ವೈದ್ಯರು, ನರ್ಸ್ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಸಂಬಳ ಸಿಕ್ಕಿಲ್ಲ.
- Ganapathi Sharma
- Updated on: Jul 3, 2026
- 7:31 am
ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ನೈಟ್ ರೌಂಡ್ಸ್: ಇಂಜಿನಿಯರ್ಗಳಿಗೆ ಕ್ಲಾಸ್
ಬೆಂಗಳೂರಿನ ಔಟರ್ ರಿಂಗ್ ರೋಡ್ನಲ್ಲಿ ರಸ್ತೆ, ಫುಟ್ಪಾತ್ ಒತ್ತುವರಿ ಹಾಗೂ ಚರಂಡಿ ಅವ್ಯವಸ್ಥೆ ಪರಿಶೀಲಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ರಾತ್ರಿ ವೇಳೆ ದಿಢೀರ್ ರೌಂಡ್ಸ್ ಕೈಗೊಂಡರು. ಇದೇ ವೇಳೆ ಫುಟ್ಪಾತ್ ಒತ್ತುವರಿ ತೆರವನ್ನು ಬಲವಾಗಿ ಸಮರ್ಥಿಸಿಕೊಂಡ ಅವರು, ಫುಟ್ಪಾತ್ ಸಮಸ್ಯೆಯಿಂದಾಗಿ ನಗರದಲ್ಲಿ ವರ್ಷಕ್ಕೆ 300 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.
- Ganapathi Sharma
- Updated on: Jul 3, 2026
- 9:30 am