ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಕಾರ್ಯನಿರ್ವಹಣೆ.
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಿಎಂ ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿ ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು.
- Ganapathi Sharma
- Updated on: Jun 13, 2026
- 1:26 pm
ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್
ದುಬೈ ಎಮಿರೇಟ್ಸ್ ರಸ್ತೆ ಅಪಘಾತದ ಸಂತ್ರಸ್ತರ ಕುಟುಂಬಗಳಿಗೆ ಬುರ್ಜೀಲ್ ಹೋಲ್ಡಿಂಗ್ಸ್ ಚೇರ್ಮನ್, ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಧನಸಹಾಯವು ಮೃತರ ಕುಟುಂಬಗಳಿಗೆ ತಲಾ 26 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆ ಮತ್ತು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಲಿದೆ.
- Ganapathi Sharma
- Updated on: Jun 13, 2026
- 10:17 am
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮುಂಗಾರು ಮಳೆಗೆ ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್ ಬೋರ್ಡ್ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.
- Ganapathi Sharma
- Updated on: Jun 13, 2026
- 9:20 am
ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ: ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಪ್ರಮುಖ ಜಲಾಶಯಗಳು
ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಕಬಿನಿ, ಹೇಮಾವತಿ ಹಾಗೂ ಆಲಮಟ್ಟಿ ಡ್ಯಾಂಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ ಕುಸಿದಿದೆ. ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಕುಡಿಯುವ ನೀರಿನ ಸಂಕಷ್ಟದ ಜೊತೆಗೆ ಕೃಷಿ ಬಿತ್ತನೆ ಕಾರ್ಯ ಸಂಪೂರ್ಣ ಕುಂಠಿತಗೊಂಡಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.
- Ganapathi Sharma
- Updated on: Jun 13, 2026
- 8:55 am
ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ
ಮುಂಗಾರು ಮಳೆಯ ಅವಾಂತರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯ ನಡುವೆ ನೂತನ ಸಿಎಂ ಡಿಕೆ ಶಿವಕುಮಾರ್ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿ, ಎಸ್ಪಿ ಮತ್ತು ಸಿಇಒಗಳ ತುರ್ತು ಸಭೆ ಕರೆದಿರುವ ಸಿಎಂ, ರಸಗೊಬ್ಬರ ಕೊರತೆ ನೀಗಿಸಲು ಹಾಗೂ ನೆರೆ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಕ್ಕೆ ಸೂಚಿಸಲಿದ್ದಾರೆ.
- Ganapathi Sharma
- Updated on: Jun 13, 2026
- 7:34 am
ಮತ್ತೊಂದು ಬೆಲೆ ಏರಿಕೆ ಬಿಸಿ: ಗ್ಯಾಸ್ ಬೆನ್ನಲ್ಲೇ ಗಗನಕ್ಕೇರಿದ ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ
Rice Price Hike Karnataka 2026; ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆ ಹಾಗೂ ರಫ್ತು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಕಿ ದರ ಪ್ರತಿ ಕೆಜಿಗೆ 10 ರಿಂದ 20 ರೂ.ವರೆಗೆ ದುಬಾರಿಯಾಗಿದೆ. ನವೆಂಬರ್ನಲ್ಲಿ ಹೊಸ ಬೆಳೆ ಬರುವವರೆಗೆ ಈ ಪೂರೈಕೆ ಕೊರತೆ ಮುಂದುವರಿಯಲಿದ್ದು, ಸದ್ಯಕ್ಕಂತೂ ಅಕ್ಕಿ ಬೆಲೆ ಇಳಿಕೆ ಅಸಾಧ್ಯ ಎಂದು ವರ್ತಕರು ತಿಳಿಸಿದ್ದಾರೆ.
- Ganapathi Sharma
- Updated on: Jun 13, 2026
- 6:45 am
ಹೆಸರು ಪ್ರಸ್ತಾಪವಾದರೆ ಕ್ರಿಮಿನಲ್ ಆಗಲ್ಲ: ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಫಸ್ಟ್ ರಿಯಾಕ್ಷನ್
ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್ಗೆ ಸಂಬಂಧಿಸಿದ ಚಿನ್ನಯ್ಯ ರಿಟ್ ಅರ್ಜಿ ಕುರಿತು ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯವು ಎಸ್ಐಟಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದು, ಎಸ್ಐಟಿ ಮುಖ್ಯಸ್ಥರು ನ್ಯಾಯಾಲಯಕ್ಕೆ ಉತ್ತರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪ್ರಕಾಶ್ ರಾಜ್ ಕುರಿತು ಚಿನ್ನಯ್ಯನ ಹೇಳಿಕೆಗಳ ಸತ್ಯಾಸತ್ಯತೆ ಮತ್ತು 200 ಕೋಟಿ ರೂಪಾಯಿ ಆರೋಪದ ಕುರಿತು ಪರಿಶೀಲನೆ ಅಗತ್ಯವಿದೆ ಎಂದು ಖರ್ಗೆ ಹೇಳಿದ್ದಾರೆ.
- Ganapathi Sharma
- Updated on: Jun 12, 2026
- 2:03 pm
ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು: ಈ ದಾಖಲೆಗಳು ಕಡ್ಡಾಯ
ರಾಜ್ಯದಲ್ಲಿ ಗಂಡು ಮಕ್ಕಳ ಉಚಿತ ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಇಂದಿನಿಂದ ಚಾಲನೆ ಸಿಕ್ಕಿದ್ದು, ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಧಾರ್ ಕಾರ್ಡ್, ಕಾಲೇಜು ರಶೀದಿ ಮತ್ತು ಕಾಲೇಜು ಪ್ರಾಂಶುಪಾಲರ ಸಹಿ-ಸೀಲ್ ಇರುವ ಅರ್ಜಿಯೊಂದಿಗೆ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅಪ್ಲೈ ಮಾಡಬಹುದಾಗಿದ್ದು, ಅನುಮೋದನೆ ಸಿಕ್ಕ ಬಳಿಕ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪಾಸ್ ವಿತರಿಸಲಾಗುತ್ತದೆ.
- Ganapathi Sharma
- Updated on: Jun 12, 2026
- 9:07 am
ಸಿಎಂ ಡಿಕೆ ಶಿವಕುಮಾರ್ಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸದ್ಯಕ್ಕೆ ಯಾವುದೇ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತುಮಕೂರಿನಲ್ಲಿ ಹೇಳಿದ್ದಾರೆ. ಗುರುವಿನ ಆಶೀರ್ವಾದ ಸದಾ ಡಿಕೆ ಶಿವಕುಮಾರ್ ಅವರಿಗೆ ರಕ್ಷಾಕವಚವಾಗಿದೆ. ಡಿಕೆ ಶಿವಕುಮಾರ್ ಅವರ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಲಿವೆ ಎಂದು ಸ್ವಾಮೀಜಿ ಅಭಯ ನೀಡಿದ್ದಾರೆ.
- Ganapathi Sharma
- Updated on: Jun 11, 2026
- 12:57 pm
Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ
ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್, ಕೆ.ಜಿ. ರಸ್ತೆ ಹಾಗೂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಟ್ರಾಫಿಕ್ ಪೊಲೀಸರು ನೀಡಿರುವ ಸಲಹೆ ಇಲ್ಲಿದೆ.
- Ganapathi Sharma
- Updated on: Jun 11, 2026
- 8:49 am
ಲಾಲ್ಬಾಗ್ನಲ್ಲಿ ಸಜ್ಜಾಯ್ತು ನೂತನ ಬೋನ್ಸಾಯ್ ಪಾರ್ಕ್: ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ!
ಬೆಂಗಳೂರಿನ ಲಾಲ್ಬಾಗ್ನಲ್ಲಿ ನೂತನ ಬೋನ್ಸಾಯ್ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಸಜ್ಜಾಗಿದೆ. ಆದರೆ, ತೋಟಗಾರಿಕೆ ಇಲಾಖೆಗೆ ಸಚಿವರ ನೇಮಕಾತಿ ತಡವಾಗಿರುವುದರಿಂದ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನದ ಥೀಮ್ ಆಯ್ಕೆ ಪ್ರಕ್ರಿಯೆ ವಿಳಂಬವಾಗಿದ್ದು, ಸಿದ್ಧತೆಗಳಿಗೆ ಭಾರಿ ಹಿನ್ನಡೆಯುಂಟಾಗಿದೆ. ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಗಿದು ಸಚಿವರ ಆಯ್ಕೆಯಾಗುವ ವರೆಗೂ ಥೀಮ್ ಆಯ್ಕೆಗೆ ಕಾಯಬೇಕಾಗಿದೆ.
- Ganapathi Sharma
- Updated on: Jun 11, 2026
- 7:42 am
ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ!
ಮೊದಲ ಮಗು ಹೆಣ್ಣು ಮಗುವಾದರೆ ಅದು ಅದೃಷ್ಟದ ಸಂಕೇತವೆಂದು ನಮ್ಮ ಧರ್ಮಗ್ರಂಥಗಳು ಹೇಳುತ್ತವೆ. ಇದು ಮಹಾಲಕ್ಷ್ಮಿ ಸ್ವರೂಪವಾಗಿದ್ದು, ಕುಟುಂಬಕ್ಕೆ ಅದರಲ್ಲೂ ತಂದೆಗೆ ಅಪಾರ ಅದೃಷ್ಟವನ್ನು ತರುತ್ತದೆ. ಹೆಣ್ಣು ಮಗು ಪೂರ್ವಿಕರ ಆಶೀರ್ವಾದದೊಂದಿಗೆ ಬಂದು, ಮನೆಯಲ್ಲಿ ಚಂದ್ರ ಮತ್ತು ಶುಕ್ರ ಗ್ರಹಗಳ ಬಲವನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ.
- Ganapathi Sharma
- Updated on: Jun 11, 2026
- 6:26 am