ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?
ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಗಡಿಭಾಗದ ಕನ್ನಡ ಶಾಲೆಯ ಮಕ್ಕಳಿಗೆ ಎದುರಾಗಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೀಗ ಗಡಿಭಾಗದ ಕಾಸರಗೋಡಿನಲ್ಲಿ ಮಕ್ಕಳ ಮೇಲೆ ಮಲಯಾಳ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಮತ್ತೆ ಕೇಳಿಬಂದಿದೆ. ಇದಕ್ಕೆ ಕಾರಣ ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆ. ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ? ಉತ್ತರ ಕಂಡುಕೊಳ್ಳುವ ಯತ್ನ ಇಲ್ಲಿದೆ.
- Ganapathi Sharma
- Updated on: Jan 9, 2026
- 2:56 pm
ಕೋಗಿಲು ಬೆನ್ನಲ್ಲೇ ನಾಗವಾರ ಬಳಿ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆ, ಶೆಡ್, ಗ್ಯಾರೇಜ್ ಧ್ವಂಸ
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಬೆನ್ನಲ್ಲೇ ಮತ್ತೊಂದು ಸುತ್ತಿನ ಕಾರ್ಯಾಚರಣೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ನಾಗವಾರ ಬಳಿಯ ಸಾರಾಯಿ ಪಾಳ್ಯದಲ್ಲಿ ಕೂಡ ಬಿಡಿಎಗೆ ಸೇರಿದ ಭೂಮಿಯನ್ನು ಮರುಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಸಿಬಿಗಳು ಗರ್ಜಿಸಿವೆ. ಹೀಗಾಗಿ ಬಿಡಿಎ ಜಾಗ ಒತ್ತುವರಿ ಮಾಡಿಕೊಂಡವರೀಗ ಬೀದಿಪಾಲಾಗಿದ್ದಾರೆ.
- Ganapathi Sharma
- Updated on: Jan 9, 2026
- 7:33 am
ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್
ಆರ್ಸಿಬಿ ವಿಜಯೋತ್ಸವ ಸಂದರ್ಭ 11 ಜನರ ಸಾವಿಗೆ ಕಾರಣವಾದ ಘಟನೆಯಿಂದ ಚಿನ್ನಸ್ವಾಮಿ ಸ್ಟೇಡಿಯಂಗೆ ಚೇತರಿಸಿಕೊಳ್ಳಲಾಗಿಲ್ಲ. ಮಾರ್ಗಸೂಚಿಗಳ ಪಾಲನೆಯಾಗದ ಕಾರಣಕ್ಕೆ ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ಕೂಡ ಕೊನೇ ಕ್ಷಣದಲ್ಲಿ ಸ್ಥಳಾಂತರಗೊಂಡಿತ್ತು. ಇದೀಗ ಲೋಪದೋಷಗಳನ್ನು ಸರಿಮಾಡಿಕೊಂಡು ಮತ್ತೆ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಸ್ಟೇಡಿಯಂ ಸಿದ್ದವಾಗುತ್ತಿದೆ.
- Ganapathi Sharma
- Updated on: Jan 9, 2026
- 7:06 am
ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್ಗೆ ಖಡಕ್ ಸಂದೇಶ
ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಡಿದ್ದ ಒಂದು ಎಕ್ಸ್ ಸಂದೇಶಕ್ಕೆ ತಕ್ಷಣ ಪ್ರತಿಕ್ರಿಯಿಸಿ ಕ್ರಮಕ್ಕೆ ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಕಾಸರಗೋಡು ಕನ್ನಡಿಗರ ವಿಚಾರದಲ್ಲಿ ಕೇರಳ ಸಿಎಂಗೆ ಖಡಕ್ ಸಂದೇಶ ಕಳುಹಿಸಿದ್ದಾರೆ. ಕೇರಳ ಸರ್ಕಾರ ಜಾರಿಗೆ ತರಲು ಹೊರಟಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ಆಗುವ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದಾರೆ.
- Ganapathi Sharma
- Updated on: Jan 9, 2026
- 6:40 am
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿ ಮುಂದೆಯೇ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಡೆ ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ವಿರಾಮ ನೀಡುವ ಪರೋಕ್ಷ ಸಂದೇಶ ಇರಬಹುದೆಂಬ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆದಿವೆ.
- Ganapathi Sharma
- Updated on: Jan 8, 2026
- 2:28 pm
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ!
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಆಯುಕ್ತರೇ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದ ಮೇಲೆ ಇದನ್ನು ರಾಜಕೀಯ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದರು.
- Ganapathi Sharma
- Updated on: Jan 8, 2026
- 11:37 am
ಮಹಿಳೆಯರ ಉದ್ಯೋಗ, ವಾಸಕ್ಕೆ ಬೆಂಗಳೂರೇ ಬೆಸ್ಟ್! ಸಿಲಿಕಾನ್ ಸಿಟಿ ದೇಶದಲ್ಲೇ ನಂ.1 ಎಂದ ಸಮೀಕ್ಷೆ
ಉದ್ಯೋಗ ಮತ್ತು ವಾಸಕ್ಕೆ ಬೆಂಗಳೂರು ಮಹಿಳೆಯರಿಗೆ ದೇಶದಲ್ಲೇ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ತಂತ್ರಜ್ಞಾನ, ಸೇವಾ ಕ್ಷೇತ್ರಗಳಲ್ಲಿನ ಅವಕಾಶಗಳು, ಸುರಕ್ಷತೆ ಮತ್ತು ವೃತ್ತಿ ಅಭಿವೃದ್ಧಿ ಅಂಶಗಳನ್ನು ಪರಿಗಣಿಸಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಮಹಿಳಾ ಸ್ನೇಹಿ ವಾತಾವರಣಕ್ಕೆ ಬೆಂಗಳೂರು ಮಾದರಿಯಾಗಿದೆ ಎಂದು ವರದಿ ತಿಳಿಸಿದೆ.
- Ganapathi Sharma
- Updated on: Jan 8, 2026
- 9:01 am
ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನಲ್ಲಿ ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವ ವಿಚಾರ ಇದೀಗ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರ ಕನ್ನಡ ಪರ ಸಂಘಟನೆಗಳು, ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯ ವಿಡಿಯೋ ಇಲ್ಲಿದೆ.
- Ganapathi Sharma
- Updated on: Jan 5, 2026
- 1:17 pm
ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ! ಸಹೋದರತ್ವ, ಗೌರವದ ಸಂಕೇತ ಎಂದ ಲಾಲ್ ಸಾಬ್
ಎನ್ಡಬ್ಲ್ಯುಕೆಎಸ್ಆರ್ಟಿಸಿ ಭದ್ರತಾ ವಿಭಾಗದ ಮುಸ್ಲಿಂ ಕಾನ್ಸ್ಟೆಬಲ್ ಲಾಲ್ ಸಾಬ್, ವಿರೋಧದ ನಡುವೆಯೂ ಧಾರವಾಡ ಬಸ್ ಡಿಪೋ ಆವರಣದಲ್ಲಿ ಹನುಮಾನ್ ಗುಡಿ ನಿರ್ಮಿಸಿ ಸೌಹಾರ್ದತೆ ಮೆರೆದಿದ್ದಾರೆ. ಸ್ವಂತ ಹಣ, ಸಹೋದ್ಯೋಗಿಗಳ ನೆರವಿನಿಂದ ಈ ಗುಡಿ ಕಟ್ಟಿದ ಇವರು, ಇತರ ಧರ್ಮಗಳ ಬಗ್ಗೆ ಗೌರವ ಮತ್ತು ಸಹೋದರತ್ವದ ಸಂಕೇತವಾಗಿ ಇದನ್ನು ಮಾಡಿದ್ದಾಗಿ ಹೇಳಿದ್ದಾರೆ.
- Ganapathi Sharma
- Updated on: Jan 5, 2026
- 11:02 am
Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2026: ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು kseab.karnataka.gov.in ನಿಂದ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರಾಕ್ಟಿಕಲ್ ನಂತರ, ಮುಖ್ಯ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿವೆ.
- Ganapathi Sharma
- Updated on: Jan 5, 2026
- 8:59 am
ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್
ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮೆರೆದಿದ್ದಾನೆ. ಕ್ಯಾಮರಾ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಪೊಲೀಸರು ಯುವಕನನ್ನು ವಶಕ್ಕೆ ಪಡೆದು, ಆತನ ಉದ್ದೇಶ ಹಾಗೂ ಹಿಂದಿನ ಕೃತ್ಯಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
- Ganapathi Sharma
- Updated on: Jan 5, 2026
- 6:56 am
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ವಿಡಿಯೋ ತೋರಿಸಿ ಆರೋಪ ಮಾಡಿದ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರು ನಾರಾ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಾಂಜಾ ಪೆಡ್ಲರ್ ದೌಲ ಜೊತೆ ಭರತ್ ರೆಡ್ಡಿ ಸಂಬಂಧ ಹೊಂದಿದ್ದಾರೆ ಎಂಬುದಕ್ಕೆ ವಿಡಿಯೋ ಸಾಕ್ಷಿ ಇದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ಸತೀಶ್ ರೆಡ್ಡಿ ಮತ್ತು ಅವರ ಅಂಗರಕ್ಷಕರ ಬಂಧನಕ್ಕೆ ಆಗ್ರಹಿಸಿದ್ದಾರೆ.
- Ganapathi Sharma
- Updated on: Jan 3, 2026
- 3:44 pm