Love U ಚಿನ್ನಿ: ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ, ಆಮೇಲೇನಾಯ್ತು?
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಪೆಕ್ಟರ್ಗೆ ಮಹಿಳೆಯೊಬ್ಬರ ಅತಿರೇಕದ ಪ್ರೇಮ ಕಾಟ ದೊಡ್ಡ ತಲೆನೋವಾಗಿದೆ. ‘‘Chinni Love u...’’ ಎಂದು ಬೆದರಿಕೆ ಹಾಕಿದ್ದಲ್ಲದೆ, ಆತ್ಮಹತ್ಯೆ ಬೆದರಿಕೆ ಹಾಗೂ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದಾಳೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆ ಬೆದರಿಕೆಯ ಆರೋಪದಡಿ ಕೊನೆಗೆ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲಿಸಿದ್ದಾರೆ.
- Ganapathi Sharma
- Updated on: Dec 17, 2025
- 9:47 am
Karnataka Winter Sssion: ವಿಧಾನ ಪರಿಷತ್ತಿನಲ್ಲೂ ‘ಆಜಾನ್’ ಕೂಗು! ನಡೆಯಿತು ಬಿಸಿಬಿಸಿ ಚರ್ಚೆ
ಮಸೀದಿಗಳಲ್ಲಿ ‘ಆಜಾನ್’ ಧ್ವನಿವರ್ಧಕಗಳ ಡೆಸಿಬಲ್ ಮಿತಿ ಕುರಿತು ವಿಧಾನ ಪರಿಷತ್ನಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಬಿಜೆಪಿಯ ಡಿಎಸ್ ಅರುಣ್ ಶಬ್ದ ಮಾಲಿನ್ಯ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿದಾಗ, ಸಚಿವ ಈಶ್ವರ್ ಖಂಡ್ರೆ ರಾಜಕೀಯ ಆರೋಪ ಮಾಡಿರುವುದಾಗಿ ಆಕ್ಷೇಪಿಸಿದರು. ಕೇಳಿದ ಪ್ರಶ್ನೆಗೆ ಉತ್ತರ ಕೊಡಿ ಎಂದು ಸಭಾಪತಿ ಹೇಳಿದ ಬಳಿಕ ಖಂಡ್ರೆ ಉತ್ತರ ಕೊಟ್ಟರು. ಆಗ ಸದನದಲ್ಲಿ ಕಾವೇರಿತು.
- Ganapathi Sharma
- Updated on: Dec 17, 2025
- 8:20 am
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ನಡೆಯಿತು ಸ್ವಾರಸ್ಯಕರ ಚರ್ಚೆ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ, ಶಾಸಕ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದ ಕುರಿತು ಲೇವಡಿ ಮಾಡಿದ್ದಾರೆ. ಈ ಹಿಂದೆ ನಾನು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಈಗ ನಾವು ಎಂದು ಬಹುವಚನದಲ್ಲಿ ಮಾತನಾಡುತ್ತಿದ್ದಾರೆ ಎಂದು ಸುರೇಶ್ ಕುಮಾರ್ ಟೀಕಿಸಿದ್ದಾರೆ.
- Ganapathi Sharma
- Updated on: Dec 16, 2025
- 1:00 pm
ನಾನು ಹಳ್ಳಿಯವನು, ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್ ಅವರು ಮೋಹನ್ ದಾಸ್ ಪೈ ಅವರ ‘ಮಂತ್ರಿ ಹೊರತು ಮಾಸ್ಟರ್ ಅಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಾವು ಹಳ್ಳಿಯವರಾಗಿದ್ದು, ನಮ್ರತೆ ಕಲಿಯುವುದಾಗಿ ತಿಳಿಸಿದ್ದಾರೆ. ಬ್ಲಾಕ್ಮೇಲ್ಗೆ ಮಣಿಯುವುದಿಲ್ಲ, ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದು, ಕಾರ್ಯಕರ್ತರ ನಿಷ್ಠೆಯನ್ನು ಶ್ಲಾಘಿಸಿದರು.
- Ganapathi Sharma
- Updated on: Dec 16, 2025
- 12:29 pm
ಲಾಭದ ಹಣ ದಾನ ಮಾಡುವುದಕ್ಕೆಂದು ಹೂಡಿಕೆ ಮಾಡಿದ ಉದ್ಯಮಿಗೆ ಕಾದಿತ್ತು ಶಾಕ್: 8 ಕೋಟಿ ರೂ. ಖತಂ!
ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ಹೇಗೆ? ವಂಚನೆ ಬೆಳಕಿಗೆ ಬಂದಿದ್ಹೇಗೆ? ಇಲ್ಲಿದೆ ಮಾಹಿತಿ.
- Ganapathi Sharma
- Updated on: Dec 15, 2025
- 1:06 pm
ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ? ಚರ್ಚೆಗೆ ಗ್ರಾಸವಾದ ಪರಮೇಶ್ವರ್ ಹೇಳಿಕೆ
ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಸ್ತೆ-ಚರಂಡಿ ನಿರ್ಮಾಣದಿಂದ ಜನ ಉದ್ದಾರ ಆಗ್ತಾರಾ ಎಂದು ಪ್ರಶ್ನಿಸಿದ್ದಾರೆ. 58 ಸಾವಿರ ಕೋಟಿ ರೂಪಾಯಿ ವೆಚ್ಚದ ಗ್ಯಾರಂಟಿ ಯೋಜನೆಗಳು ಬಡವರ ಶೋಷಣೆ ನಿಲ್ಲಿಸಲು ಮುಖ್ಯವೆಂದು ಅವರು ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳು ನಿಧಾನವಾದರೂ ನಿಲ್ಲುವುದಿಲ್ಲ, ಆದರೆ ಮಾನವನ ಜೀವನದ ಸುಧಾರಣೆಯೇ ಪ್ರಮುಖ ಗುರಿ ಎಂದರು.
- Ganapathi Sharma
- Updated on: Dec 15, 2025
- 9:33 am
ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ಕೊಟ್ಟ ನ್ಯಾಯಮೂರ್ತಿ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲೆ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಜಡ್ಜ್ ವಿರುದ್ಧ ಪದಚ್ಯುತಿಗೆ ಸಹಿ ಹಾಕಿದ ಕಾಂಗ್ರೆಸ್ ಸಂಸದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸಹಿಷ್ಣುತೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಜಡ್ಜ್, ನ್ಯಾಯಾಂಗದ ಮೇಲೆಯೇ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.
- Ganapathi Sharma
- Updated on: Dec 13, 2025
- 2:39 pm
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು
ಸಚಿವ ಜಮೀರ್ ಅಹಮದ್ ಖಾನ್ ಸಿದ್ದರಾಮಯ್ಯನವರ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಕರೆದಿದ್ದರೂ, ತಾವು ಸ್ನೇಹಿತರ ಮನೆಯ ಊಟಕ್ಕೆ ತೆರಳಿದ್ದರಿಂದ ಡಿನ್ನರ್ಗೆ ಹಾಜರಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಜಮೀರ್ ಒತ್ತಿಹೇಳಿದ್ದಾರೆ.
- Ganapathi Sharma
- Updated on: Dec 12, 2025
- 12:56 pm
ಆರ್ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ
ಆರ್ಸಿಬಿ ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಘಟನೆಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನು ಮುಂದೆ ಐಪಿಎಲ್ ಪಂದ್ಯಗಳೇ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ರಾಜ್ಯ ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಸಂಜೆ ಗುಡ್ ನ್ಯೂಸ್ ಕೊಟ್ಟಿತ್ತು. ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ.
- Ganapathi Sharma
- Updated on: Dec 12, 2025
- 11:26 am
ಬಗೆದಷ್ಟು ಬಯಲಾಗ್ತಿದೆ ಮುಡಾ ರಹಸ್ಯ: 22 ಕೋಟಿ ರೂ. ಲಂಚ ಪಡೆದಿದ್ದ ಮಾಜಿ ಆಯುಕ್ತ, ಇಡಿ ತನಿಖೆಯಲ್ಲಿ ಬಟಾಬಯಲು
ಮುಡಾ ಹಗರಣ ಸಂಬಧ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಂಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ಬರೋಬ್ಬರಿ 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬ ಸ್ಫೋಟಕ ಮಾಹಿತಿ ಈಗ ಹೊರಬಿದ್ದಿದೆ. 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲು ಅವರು ಈ ಲಂಚ ಪಡೆದಿದ್ದರು ಎನ್ನಲಾಗಿದೆ.
- Ganapathi Sharma
- Updated on: Dec 12, 2025
- 10:24 am
ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳು ವಿಳಂಬವಾಗ್ತಿರೋದೇಕೆ? ಕೇಂದ್ರ ಸರ್ಕಾರ ಕೊಟ್ಟ ಕಾರಣ ಇಲ್ಲಿದೆ
ಕೇಂದ್ರ ಸರ್ಕಾರವು ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬೃಹತ್ ಅನುದಾನ ನೀಡಿದ್ದರೂ, ರಾಜ್ಯ ಸರ್ಕಾರದ ಭೂಸ್ವಾಧೀನ ವಿಳಂಬದಿಂದಾಗಿ ಹಲವು ಯೋಜನೆಗಳು ಸ್ಥಗಿತಗೊಂಡಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ ಎಂದು ಅವರು ಹೇಳಿದ್ದಾರೆ.
- Ganapathi Sharma
- Updated on: Dec 12, 2025
- 8:58 am
Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್
ಬೆಂಗಳೂರಿನಲ್ಲಿ ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ತಾಣ ಎಂದರೆ ಅದು ಇಂದಿರಾ ಕ್ಯಾಂಟೀನ್. ತಿಂಡಿ, ಊಟ ಕೊಡುವ ಸಮಯ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಇಂದಿರಾ ಕ್ಯಾಂಟೀನ್ ಖಾಲಿ ಹೊಡೆಯುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕೊಡೋಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿಂತನೆ ನಡೆಸಿದೆ.
- Ganapathi Sharma
- Updated on: Dec 12, 2025
- 7:37 am