ತನ್ನದೇ ಪೊಲೀಸ್, ನ್ಯಾಯಾಲಯ, ಕಾನೂನು: ಬೆಂಗಳೂರಿನಲ್ಲಿ ಹೀಗೊಂದು ಅಪಾರ್ಟ್ಮೆಂಟ್ ರಾಜ್ಯ!
ಬೆಂಗಳೂರಿನ ಅಪಾರ್ಟ್ಮೆಂಟ್ ಅಸೋಸಿಯೇಷನ್ ಒಂದು ತನ್ನದೇ ಕಾನೂನು, ದಂಡ ವ್ಯವಸ್ಥೆ ಜಾರಿಗೆ ತಂದು ಲಕ್ಷಾಂತರ ರೂ. ವಸೂಲಿ ಮಾಡಿದ್ದು, ಇದೀಗ ಪೊಲೀಸ್ ಕೆಂಗಣ್ಣಿಗೆ ಗುರಿಯಾಗಿದೆ. ಅಕ್ರಮ ವಸ್ತು ಸಾಗಾಟ, ಮಾದಕವಸ್ತು ಸೇವನೆ, ನಿವಾಸಿಗಳ ದುರ್ವರ್ತನೆಗಳಿಗೆ ಅಪಾರ್ಟ್ಮೆಂಟೇ ಕಾನೂನುಬಾಹಿರವಾಗಿ ದಂಡ ಸಂಗ್ರಹ ಮಾಡಿದೆ. ಸದ್ಯ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ.
- Ganapathi Sharma
- Updated on: Dec 18, 2025
- 1:51 pm
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಇದೆ ಎಂಬುದನ್ನು ಒಪ್ಪಿಕೊಂಡ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ: ಪಾವತಿ ಬಗ್ಗೆ ಹೇಳಿದ್ದೇನು?
ಶಕ್ತಿ ಯೋಜನೆಗೆ ಸಂಬಂಧಿಸಿದಂತೆ 4000 ಕೋಟಿ ರೂಪಾಯಿ ಬಾಕಿ ಹಣದ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋಟಿ ಅನುದಾನವೇ ಕಾರಣ ಎಂದು ಹೇಳಿದ್ದಾರೆ. ಬಾಕಿ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.
- Ganapathi Sharma
- Updated on: Dec 18, 2025
- 12:24 pm
ಹಣ ಇದ್ದವರ ಮನೆಗೆ ಕರೆದು ಚಕ್ಕಂದ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಪೊಲೀಸ್ ಹಿಂದೆ ಬಿದ್ದಿದ್ದ ಮಹಿಳೆ ಅಂತಿಂಥವಳಲ್ಲಾ ಗೊತ್ತಾ!
ರಾಮಮೂರ್ತಿ ನಗರ ಇನ್ಸ್ಪೆಕ್ಟರ್ ಸತೀಶ್ ಬಳಿ ಪ್ರೀತಿಸುವಂತೆ ದುಂಬಾಲು ಬಿದ್ದು, ಬ್ಲ್ಯಾಕ್ಮೇಲ್ ಮಾಡಿ ಬಂಧಿತಳಾದ ವನಜಾ ಅಲಿಯಾಸ್ ಸಂಜನಾ ಕುರಿತು ಹಲವು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಶ್ರೀಮಂತರನ್ನು ಗುರಿಯಾಗಿಸಿ ಸ್ನೇಹ ಬೆಳೆಸಿ, ಲೈಂಗಿಕ ಸಂಪರ್ಕ ಸಾಧಿಸಿ, ಫೋಟೋ-ವಿಡಿಯೋ ಮೂಲಕ ಹಣ, ಚಿನ್ನಾಭರಣ ವಸೂಲಿ ಮಾಡುತ್ತಿದ್ದಳು ಎಂಬುದು ಈಗ ಬೆಳಕಿಗೆ ಬಂದಿದೆ.
- Ganapathi Sharma
- Updated on: Dec 18, 2025
- 10:09 am
ಸುಧಾಮೂರ್ತಿ, ಸುಧಾಕರ್ ಸೇರಿ ಇತರ ಜನಪ್ರತಿನಿಧಿಗಳನ್ನು ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಸದಸ್ಯರ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿಧೇಯಕ ಮಂಡನೆ ಮಾಡಿ ಮಾಹಿತಿ ನೀಡಿದರು.
- Ganapathi Sharma
- Updated on: Dec 18, 2025
- 8:50 am
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕ್ಷಮೆಗೆ ಪ್ರತಿಪಕ್ಷ ಪಟ್ಟು
ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಣ ಬೇರೆಡೆಗೆ ವರ್ಗಾಯಿಸಿಲ್ಲ ಎಂದು ಸ್ಪಷ್ಟಪಡಿಸಿ, ಯಾವುದೇ ತಪ್ಪು ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ.
- Ganapathi Sharma
- Updated on: Dec 17, 2025
- 1:30 pm
ಗೃಹಲಕ್ಷ್ಮೀ ಬಗ್ಗೆ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ಕಾಂಗ್ರೆಸ್ನಿಂದ ಸಂಧಾನ ಯತ್ನ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ತೀವ್ರ ಚರ್ಚೆ ನಡೆಯಲಿದೆ. ಫೆಬ್ರವರಿ-ಮಾರ್ಚ್ ತಿಂಗಳ 5,500 ಕೋಟಿ ರೂ. ಅನುದಾನದ ಬಗ್ಗೆ ಬಿಜೆಪಿ ಪ್ರಶ್ನಿಸಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿದೆ. ತಾಂತ್ರಿಕ ದೋಷಗಳನ್ನು ಸರಿಪಡಿಸುವುದಾಗಿ ಸರ್ಕಾರ ಹೇಳಿದೆ.
- Ganapathi Sharma
- Updated on: Dec 17, 2025
- 10:25 am
Love U ಚಿನ್ನಿ: ಲವ್ ಮಾಡುವಂತೆ ಇನ್ಸ್ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ, ಆಮೇಲೇನಾಯ್ತು?
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಪೆಕ್ಟರ್ಗೆ ಮಹಿಳೆಯೊಬ್ಬರ ಅತಿರೇಕದ ಪ್ರೇಮ ಕಾಟ ದೊಡ್ಡ ತಲೆನೋವಾಗಿದೆ. ‘‘Chinni Love u...’’ ಎಂದು ಬೆದರಿಕೆ ಹಾಕಿದ್ದಲ್ಲದೆ, ಆತ್ಮಹತ್ಯೆ ಬೆದರಿಕೆ ಹಾಗೂ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದಾಳೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆ ಬೆದರಿಕೆಯ ಆರೋಪದಡಿ ಕೊನೆಗೆ ಇನ್ಸ್ಪೆಕ್ಟರ್ ಎಫ್ಐಆರ್ ದಾಖಲಿಸಿದ್ದಾರೆ.
- Ganapathi Sharma
- Updated on: Dec 17, 2025
- 9:51 am
Karnataka Winter Session: ವಿಧಾನ ಪರಿಷತ್ತಿನಲ್ಲೂ ‘ಆಜಾನ್’ ಕೂಗು! ನಡೆಯಿತು ಬಿಸಿಬಿಸಿ ಚರ್ಚೆ
ಮಸೀದಿಗಳಲ್ಲಿ ‘ಆಜಾನ್’ ಧ್ವನಿವರ್ಧಕಗಳ ಡೆಸಿಬಲ್ ಮಿತಿ ಕುರಿತು ವಿಧಾನ ಪರಿಷತ್ನಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಬಿಜೆಪಿಯ ಡಿಎಸ್ ಅರುಣ್ ಶಬ್ದ ಮಾಲಿನ್ಯ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿದಾಗ, ಸಚಿವ ಈಶ್ವರ್ ಖಂಡ್ರೆ ರಾಜಕೀಯ ಆರೋಪ ಮಾಡಿರುವುದಾಗಿ ಆಕ್ಷೇಪಿಸಿದರು. ಕೇಳಿದ ಪ್ರಶ್ನೆಗೆ ಉತ್ತರ ಕೊಡಿ ಎಂದು ಸಭಾಪತಿ ಹೇಳಿದ ಬಳಿಕ ಖಂಡ್ರೆ ಉತ್ತರ ಕೊಟ್ಟರು. ಆಗ ಸದನದಲ್ಲಿ ಕಾವೇರಿತು.
- Ganapathi Sharma
- Updated on: Dec 17, 2025
- 11:13 am
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ನಡೆಯಿತು ಸ್ವಾರಸ್ಯಕರ ಚರ್ಚೆ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ, ಶಾಸಕ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದ ಕುರಿತು ಲೇವಡಿ ಮಾಡಿದ್ದಾರೆ. ಈ ಹಿಂದೆ ನಾನು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಈಗ ನಾವು ಎಂದು ಬಹುವಚನದಲ್ಲಿ ಮಾತನಾಡುತ್ತಿದ್ದಾರೆ ಎಂದು ಸುರೇಶ್ ಕುಮಾರ್ ಟೀಕಿಸಿದ್ದಾರೆ.
- Ganapathi Sharma
- Updated on: Dec 16, 2025
- 1:00 pm
ನಾನು ಹಳ್ಳಿಯವನು, ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್ ಅವರು ಮೋಹನ್ ದಾಸ್ ಪೈ ಅವರ ‘ಮಂತ್ರಿ ಹೊರತು ಮಾಸ್ಟರ್ ಅಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಾವು ಹಳ್ಳಿಯವರಾಗಿದ್ದು, ನಮ್ರತೆ ಕಲಿಯುವುದಾಗಿ ತಿಳಿಸಿದ್ದಾರೆ. ಬ್ಲಾಕ್ಮೇಲ್ಗೆ ಮಣಿಯುವುದಿಲ್ಲ, ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದು, ಕಾರ್ಯಕರ್ತರ ನಿಷ್ಠೆಯನ್ನು ಶ್ಲಾಘಿಸಿದರು.
- Ganapathi Sharma
- Updated on: Dec 16, 2025
- 12:29 pm
ಲಾಭದ ಹಣ ದಾನ ಮಾಡುವುದಕ್ಕೆಂದು ಹೂಡಿಕೆ ಮಾಡಿದ ಉದ್ಯಮಿಗೆ ಕಾದಿತ್ತು ಶಾಕ್: 8 ಕೋಟಿ ರೂ. ಖತಂ!
ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ಹೇಗೆ? ವಂಚನೆ ಬೆಳಕಿಗೆ ಬಂದಿದ್ಹೇಗೆ? ಇಲ್ಲಿದೆ ಮಾಹಿತಿ.
- Ganapathi Sharma
- Updated on: Dec 15, 2025
- 1:06 pm
ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ? ಚರ್ಚೆಗೆ ಗ್ರಾಸವಾದ ಪರಮೇಶ್ವರ್ ಹೇಳಿಕೆ
ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಸ್ತೆ-ಚರಂಡಿ ನಿರ್ಮಾಣದಿಂದ ಜನ ಉದ್ದಾರ ಆಗ್ತಾರಾ ಎಂದು ಪ್ರಶ್ನಿಸಿದ್ದಾರೆ. 58 ಸಾವಿರ ಕೋಟಿ ರೂಪಾಯಿ ವೆಚ್ಚದ ಗ್ಯಾರಂಟಿ ಯೋಜನೆಗಳು ಬಡವರ ಶೋಷಣೆ ನಿಲ್ಲಿಸಲು ಮುಖ್ಯವೆಂದು ಅವರು ಸಮರ್ಥಿಸಿಕೊಂಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳು ನಿಧಾನವಾದರೂ ನಿಲ್ಲುವುದಿಲ್ಲ, ಆದರೆ ಮಾನವನ ಜೀವನದ ಸುಧಾರಣೆಯೇ ಪ್ರಮುಖ ಗುರಿ ಎಂದರು.
- Ganapathi Sharma
- Updated on: Dec 15, 2025
- 9:33 am