ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು. ಇಂಧನ ಭದ್ರತೆ, ವ್ಯಾಪಾರ ಮತ್ತು ರಕ್ಷಣಾ ಒಪ್ಪಂದಗಳ ಕುರಿತು ಚರ್ಚೆ ನಡೆದಿದೆ. ಈ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದೆ, ಆದರೂ ಹಿಂದಿನ ಒಪ್ಪಂದಗಳ ಬಗ್ಗೆ ಭಾರತಕ್ಕೆ ನಷ್ಟದ ವಿಶ್ಲೇಷಣೆಗಳು ಮತ್ತು ಅಮೆರಿಕದ ಒತ್ತಡದ ಹೇಳಿಕೆಗಳ ನಡುವೆ ಭವಿಷ್ಯದ ಅನುಕೂಲಗಳ ಬಗ್ಗೆ ನಿರೀಕ್ಷೆಗಳಿವೆ.
- Gangadhar Saboji
- Updated on: May 23, 2026
- 8:08 pm
ಕೇರಳಂ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ವಿಧಾನಸಭಾ ಚುನಾವಣೆಯ ಮುಖ್ಯ ಚುನಾವಣಾಧಿಕಾರಿಯನ್ನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ಅವರನ್ನು ನೇಮಕ ಮಾಡಿದೆ. ಸದ್ಯ ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Gangadhar Saboji
- Updated on: May 23, 2026
- 10:33 pm
ಜೂನ್ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಕರ್ನಾಟಕ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಮಹತ್ವದ ಕೊಡುಗೆ ನೀಡಿದೆ. ಜೂನ್ ತಿಂಗಳಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಆದೇಶ ಹೊರಡಿಸಿದೆ. ಬೋಧಕರ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, 40 ಸಾವಿರ ಪ್ರಾಥಮಿಕ ಹಾಗೂ 11 ಸಾವಿರ ಪ್ರೌಢಶಾಲೆ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ.
- Gangadhar Saboji
- Updated on: May 23, 2026
- 6:02 pm
ಬೆಂಗಳೂರಲ್ಲಿ ಸಿಎನ್ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಿನಲ್ಲಿ ಸಿಎನ್ಜಿ ದರ 2 ರೂ ಹೆಚ್ಚಾಗಿದ್ದು, ಆಟೋ ಹಾಗೂ ಟ್ಯಾಕ್ಸಿ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರ ಬೆಲೆ ಏರಿಕೆ ಮತ್ತು ಇಂಧನ ಸಿಗಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಯಿಂದ ಚಾಲಕರು ಜೀವನ ನಿರ್ವಹಣೆ ಕಷ್ಟಕರವಾಗಿದೆ ಎನ್ನುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದ್ದು, ರೈತರು ಹಾಗೂ ಗೃಹಬಳಕೆದಾರರಿಗೆ ಸಿಲಿಂಡರ್ ಪೂರೈಕೆಯಲ್ಲಿಯೂ ಸಮಸ್ಯೆ ಎದುರಾಗಿದೆ.
- Gangadhar Saboji
- Updated on: May 23, 2026
- 2:44 pm
Tv9 Kannada News Live: ತ್ವಿಶಾ ಶರ್ಮಾ ಕೇಸ್ಗೆ ಟ್ವಿಸ್ಟ್, ಅಶೋಕ್ಗಿಲ್ಲ ಸೂರು, ಕಾಕ್ರೋಚ್ ಪಾರ್ಟಿಗೆ ಬ್ರೇಕ್: ಈ ಹೊತ್ತಿನ ಮುಖ್ಯ ಸುದ್ದಿಗಳು
ಮಾಡೆಲ್ ತ್ವಿಶಾ ಶರ್ಮಾ ನಿಗೂಢ ಸಾವಿನ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್ ಜಬಲ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನನಗೆ ಇನ್ನೂ ಸರ್ಕಾರಿ ಬಂಗಲೆ ನೀಡಿಲ್ಲ ಎಂದು ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆಲ್ರೌಂಡರ್ ವಿಜಯ್ ಶಂಕರ್ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ.
- Gangadhar Saboji
- Updated on: May 22, 2026
- 8:35 pm
Tv9 Kannada News Live: ಕರ್ನಾಟಕದಲ್ಲಿ ಮಳೆ ಅಬ್ಬರ, ಸೀಕ್ರೆಟ್ ಮದ್ವೆಗೆ ಕಂಗನಾ ಸ್ಪಷ್ಟನೆ: ಸಂಜೆವರೆಗಿನ ಪ್ರಮುಖ ಸುದ್ದಿಗಳು
ಕರ್ನಾಟಕ ಸರ್ಕಾರವು ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಆದರೆ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತಕ್ಕೆ ಆತಂಕ ಬೇಡ ಎಂದುಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ 1 ವಾರ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ.
- Gangadhar Saboji
- Updated on: May 22, 2026
- 5:25 pm
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಲಾಲ್ಬಾಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಅಬ್ಬರಿಸಿದೆ. ಧಾರಾಕಾರ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿ ದ್ವಿಚಕ್ರ ವಾಹನ ಸವಾರರು ಪರದಾಡಿದ್ದಾರೆ. ರಾಜಾಜಿನಗರದಲ್ಲಿ ಬೃಹತ್ ಮರ ಉರುಳಿ ಕಾರು ಮತ್ತು ಬೈಕ್ಗಳು ಜಖಂಗೊಂಡಿವೆ.
- Gangadhar Saboji
- Updated on: May 21, 2026
- 8:58 pm
Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಏರ್ಇಂಡಿಯಾ ವಿಮಾನವೊಂದು ಲ್ಯಾಂಡಿಂಗ್ ವೇಳೆ ರನ್ವೇಗೆ ಅಪ್ಪಳಿಸಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಡಿಜಿಸಿಎ ತನಿಖೆಗೆ ಆದೇಶಿಸಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ.
- Gangadhar Saboji
- Updated on: May 21, 2026
- 6:08 pm
ಬೆಂಗಳೂರು ಏರ್ಪೋರ್ಟ್ನಲ್ಲಿ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ: ತಪ್ಪಿದ ಭಾರೀ ಅನಾಹುತ
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಡವೊಂದು ತಪ್ಪಿದೆ. ಏರ್ಪೋರ್ಟ್ನಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಏರ್ ಇಂಡಿಯಾ ವಿಮಾನವೊಂದರ ಹಿಂಭಾಗ ಏಕಾಏಕಿ ನೆಲಕ್ಕಪ್ಪಳಿಸಿದೆ. ಇದರಿಂದ ವಿಮಾನದ ಹಿಂಭಾಗಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ವಿಮಾನ ಈ ರೀತಿ ಆಗಲು ಕಾರಣವೇನು? ಅಧಿಕಾರಿಗಳು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
- Gangadhar Saboji
- Updated on: May 21, 2026
- 5:03 pm
TV9 Kannada News Live: ಕರ್ನಾಟಕದಲ್ಲಿ ಮಳೆ, ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು; ಸಾಕಾನೆಗಳ ಕಾದಾಟದಲ್ಲಿ ಮಹಿಳೆ ಸಾವು
ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆಯ ನಿರೀಕ್ಷೆಯಿದೆ. ಇನ್ನೊಂದೆಡೆ, ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಶೀಘ್ರದಲ್ಲೇ ಆರಂಭವಾಗಲಿದೆ. ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಮಹಿಳಾ ಪ್ರವಾಸಿಗರು ಮೃತಪಟ್ಟ ಘಟನೆ ನಡೆದಿದೆ. ಈ ಹೊತ್ತಿನ ಸುದ್ದಿಗಳು ಹೀಗಿವೆ.
- Gangadhar Saboji
- Updated on: May 18, 2026
- 7:22 pm
ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ
ಕರ್ನಾಟಕದ ಹಲವೆಡೆ ಗಾಳಿ ಸಮೇತ ಭಾರಿ ಮಳೆ ಅಬ್ಬರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಸಿಡಿಲು ಬಡಿದು ರಾಯಚೂರಿನ ಲಿಂಗಸಗೂರು ಮತ್ತು ಧಾರವಾಡದ ಕವಲಗೇರಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಕನ್ನಡದಲ್ಲಿ ಮೂರು ಹಸುಗಳು ಬಲಿಯಾಗಿವೆ. ಭಾರೀ ಮಳೆಗೆ ಹಲವೆಡೆ ರಸ್ತೆಗಳು ಜಲಾವೃತಗೊಂಡು, ಮರಗಳು ಉರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.
- Gangadhar Saboji
- Updated on: May 17, 2026
- 10:04 pm
Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?
Monsoon 2026: ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಬೆಂಗಳೂರಿಗೂ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- Gangadhar Saboji
- Updated on: May 17, 2026
- 6:43 pm