ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
ಬೆಂಗಳೂರಿನ ಹಾಕಿ ಕ್ಲಬ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ, ಕೊಳೆತ ತರಕಾರಿ, ಎಕ್ಸ್ಪೈರಿ ಕೂಲ್ಡ್ರಿಂಕ್ಸ್ ಪತ್ತೆ
ಇಂದು ಬೆಳಿಗ್ಗೆ ಬೆಂಗಳೂರಿನ 64 ಪಿಜಿಗಳ ಮೇಲೆ ದಾಳಿ ಮಾಡಿದ್ದ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ರಾತ್ರಿ ಆಗುತ್ತಿದ್ದಂತೆ ಪ್ರತಿಷ್ಠಿತ ವಿವೇಕನಗರ ಹಾಕಿ ಕ್ಲಬ್ ಮೇಲೆ ದಾಳಿ ಮಾಡಿದ್ದಾರೆ. ತಪಾಸಣೆಯಲ್ಲಿ ತೀವ್ರ ಅನೈರ್ಮಲ್ಯ, ಅವಧಿ ಮೀರಿದ ತಂಪು ಪಾನೀಯಗಳು, ಹಾಳಾದ ತರಕಾರಿಗಳು ಹಾಗೂ ಕೀಟಗಳ ಹಾವಳಿ ಪತ್ತೆಯಾಗಿದೆ.
- Gangadhar Saboji
- Updated on: Sep 5, 2026
- 11:02 pm
ಪ್ರಜಾಸೇವಾ: ಜನರ ಸಮಸ್ಯೆ ಆಲಿಸಿದ ಸಿಎಂ; ಮಗುವಿನ ಆರೋಗ್ಯ ಸಮಸ್ಯೆ ಹೇಳಿ ಕಣ್ಣೀರಿಟ್ಟ ಮಹಿಳೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆಯ ವೆಬ್ಸೈಟ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಚೆಕ್ಗಳನ್ನು ವಿತರಿಸಲಾಯಿತು. ವೇದಿಕೆ ಬಳಿಯೇ ಜನರ ಅಹವಾಲುಗಳನ್ನು ಆಲಿಸಿದ ಸಿಎಂ, ಕಣ್ಣೀರಿಡುತ್ತಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿ ಶಾಸಕರಿಗೆ ಪರಿಹಾರ ನೀಡುವಂತೆ ಸೂಚಿಸಿದರು.
- Gangadhar Saboji
- Updated on: Sep 5, 2026
- 4:40 pm
ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ
ಸಿಎಂ ಡಿಕೆ ಶಿವಕುಮಾರ್ ಇಂದು ವಿಜಯನಗರದ ಕೂಡ್ಲಿಗಿಯಲ್ಲಿ 'ಪ್ರಜಾಸೇವಾ ಅಭಿಯಾನ'ಕ್ಕೆ ಚಾಲನೆ ನೀಡಿದರು. ‘ಮನೆಬಾಗಿಲಿಗೆ ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಘೋಷವಾಕ್ಯದಡಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಶೇ. 7ರಷ್ಟು ಆಂತರಿಕ ಮೀಸಲಾತಿ, ಶಿಕ್ಷಕರಿಗೆ 'TR' ಬಿರುದು ಮತ್ತು ಹಕ್ಕು ಪತ್ರ ವಿತರಣೆ ಸೇರಿ ಹಲವು ಜನಪರ ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ.
- Gangadhar Saboji
- Updated on: Sep 5, 2026
- 3:28 pm
ಏಲಕ್ಕಿ ಮಾಲೆಗೆ ದೇಶ ವಿದೇಶಗಳಿಂದಲೂ ಡಿಮ್ಯಾಂಡ್: ಏಲಕ್ಕಿ ನಗರಿ ಎಂದು ಹಾವೇರಿಗೆ ಕರೆಯೋದ್ಯಾಕೆ?
ಹಾವೇರಿಯ ಏಲಕ್ಕಿ ಕಂಪಿನ ನಗರಿಯೆಂಬ ಹೆಸರು ಅದರ ಸುಪ್ರಸಿದ್ಧ ಏಲಕ್ಕಿ ಮಾಲೆಗಳಿಂದ ಬಂದಿದೆ. ಪಟೇಗಾರ್ ಕುಟುಂಬದ ಶತಮಾನಗಳ ಪರಂಪರೆಯ ಈ ಮಾಲೆಗಳು, ತಮ್ಮ ನೈಸರ್ಗಿಕ ಸುವಾಸನೆ ಮತ್ತು ಬಾಳಿಕೆಗೆ ಹೆಸರಾಗಿವೆ. ಗಣೇಶ ಚತುರ್ಥಿಯಂದು ದೇಶಾದ್ಯಂತ ಅಪಾರ ಬೇಡಿಕೆ ಇರುವ ಇವು, ಹಿಂದೂ-ಮುಸ್ಲಿಂ ಸೌಹಾರ್ದದ ಪ್ರತೀಕವೂ ಹೌದು.
- Gangadhar Saboji
- Updated on: Sep 3, 2026
- 10:27 pm
ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ ಭೂ ಗ್ಯಾರಂಟಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ವಿಧಾನಸೌಧದಲ್ಲಿಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧಿಕಾರಿಗಳು ಜೊತೆಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಭೆ ಮಾಡಿದರು. ಸಭೆಯಲ್ಲಿ ಕೆಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬಳಿಕ ಸರ್ಕಾರದ 6ನೇ ಗ್ಯಾರಂಟಿಯಾದ ಭೂ ಗ್ಯಾರಂಟಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಇಲ್ಲಿದೆ ಮಾಹಿತಿ.
- Gangadhar Saboji
- Updated on: Aug 31, 2026
- 6:13 pm
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೆಪಿಎಸ್ಸಿ ಅಕ್ರಮದ ಕುರಿತು ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ನೇಮಕಾತಿ ಅಕ್ರಮ, ಓಎಂಆರ್ ಶೀಟ್ ವಿಷಯ, ಹಾಗೂ ಆರೋಪಿ ಜ್ಞಾನೇಂದ್ರ ಕುಮಾರ್ ವಿಚಾರದಲ್ಲಿ ಖರ್ಗೆ ಅವರ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಿಸಿದ ಕುಮಾರಸ್ವಾಮಿ, ಖರ್ಗೆ ಸತ್ಯ ಮರೆಮಾಚುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
- Gangadhar Saboji
- Updated on: Aug 31, 2026
- 3:38 pm
ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ್ದ ರೈತರಿಗೆ ಗುಡ್ನ್ಯೂಸ್: ನಿವೇಶನ ದರ ಪ್ರತಿ ಚ.ಅಡಿಗೆ 20ರೂ
Shivaram Karanth Layout: ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ್ದ ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ. ಬಿಡಿಎ ಅಧಿಕಾರಿಗಳು ಮತ್ತು ರೈತರೊಂದಿಗೆ ಸಭೆ ನಡೆಸಿ, ನಿವೇಶನದ ಪ್ರತಿ ಚದರ ಅಡಿ ದರವನ್ನು 50 ರೂ.ನಿಂದ 20 ರೂ.ಗೆ ಇಳಿಸಲು ಸೂಚಿಸಿದ್ದಾರೆ.
- Gangadhar Saboji
- Updated on: Aug 31, 2026
- 3:03 pm
ಸರ್ಕಾರಿ ನೌಕರರಿಗೆ ಶಾಕ್: ಹೆಂಡತಿ-ಮಕ್ಕಳಿಗೆ ಜೀವನಾಂಶ ಕೊಡದಿದ್ರೆ ಸಂಬಳದಲ್ಲೇ ಹಣ ಕಟ್
Odisha Government: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಜೀವನಾಂಶ ಪಾವತಿಸದೆ ನಿರ್ಲಕ್ಷ್ಯ ತೋರುವ ಸರ್ಕಾರಿ ನೌಕರರ ವೇತನದಿಂದಲೇ ಹಣ ಕಡಿತಗೊಳಿಸಿ ಫಲಾನುಭವಿಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ. ಜನಸ್ಪಂದನ ಸಭೆಗಳಲ್ಲಿ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
- Gangadhar Saboji
- Updated on: Aug 30, 2026
- 9:36 pm
ಬೀದಿ ದೀಪ ಲೋಪ: ಸಚಿವರ ಸೂಚನೆಗೂ ಡೋಂಟ್ ಕೇರ್; ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೃಷ್ಣಬೈರೇಗೌಡ
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಸಚಿವರು ಸೂಚನೆ ನೀಡಿದರೂ ಡೋಂಟ್ ಕೇರ್ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮುಂದಾಗಿದ್ದಾರೆ. ಕಠಿಣ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
- Gangadhar Saboji
- Updated on: Aug 30, 2026
- 4:11 pm
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ: ಮತ್ತೊಂದು ಪ್ಲ್ಯಾನ್ ರೆಡಿ!
ಸಚಿವ ಕೃಷ್ಣ ಬೈರೇಗೌಡರು ಬೆಂಗಳೂರಿನ ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೂರು ತಿಂಗಳಲ್ಲಿ ಬೃಹತ್ ಬೆಂಗಳೂರು ಪ್ರಾಧಿಕಾರ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಕಸ ನಿರ್ವಹಣೆ, ರಸ್ತೆಗಳ ಡಾಂಬರೀಕರಣಕ್ಕೆ ಒತ್ತು ನೀಡಿದ್ದು, ಅಧಿಕಾರಿಗಳಿಗೆ ಕೆಲಸ ಮಾಡಿ, ಇಲ್ಲವೇ ನಿರ್ಗಮಿಸಿ ಎಂಬ ಸಂದೇಶ ರವಾನಿಸಿದ್ದಾರೆ. ಇದು ಸಾರ್ವಜನಿಕರಲ್ಲಿ ಹೊಸ ಭರವಸೆ ಮೂಡಿಸಿದೆ.
- Gangadhar Saboji
- Updated on: Aug 29, 2026
- 5:38 pm
ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ಸಮರ: ಕೇಂದ್ರದ ಅಧಿಸೂಚನೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ
Kasturirangan Report: ಕೇಂದ್ರದ ಕಸ್ತೂರಿರಂಗನ್ ವರದಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಬಲವಾಗಿ ಖಂಡಿಸಿದೆ. ಪಶ್ಚಿಮ ಘಟ್ಟದ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಿರುವ ಈ ನಿರ್ಧಾರ ಲಕ್ಷಾಂತರ ಕುಟುಂಬಗಳಿಗೆ ಆತಂಕ ತಂದಿದೆ. ಕೇಂದ್ರದ ಈ ಜನವಿರೋಧಿ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Gangadhar Saboji
- Updated on: Aug 28, 2026
- 6:24 pm
ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಸಚಿವ ಜೋಶಿ ಕಸರತ್ತು: ಹಿರಿಯ ಅಧಿಕಾರಿಗಳ ಜತೆ ಸರಣಿ ಸಭೆ
ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಶೈಕ್ಷಣಿಕ ಉಪಕ್ರಮಗಳ ಅನುಷ್ಠಾನವನ್ನು ಪರಿಶೀಲಿಸಿದರು. ಪ್ರತಿ ಹಂತದಲ್ಲೂ ಶಿಕ್ಷಣ ಸುಧಾರಣೆ, ಯೋಜನೆಗಳ ಸಮಯೋಚಿತ ಅನುಷ್ಠಾನ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗೆ ಅವರು ಆದ್ಯತೆ ನೀಡುತ್ತಿದ್ದಾರೆ.
- Gangadhar Saboji
- Updated on: Aug 26, 2026
- 10:48 pm