ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ: ಆಗಿದ್ದೇನು?
ಮಂಡ್ಯದ ವ್ಯಕ್ತಿಯೋರ್ವ, ಫೇಸ್ಬುಕ್ನಲ್ಲಿ ಪರಿಚವಾದ ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿದ್ದು, ಆಕೆ ಕರೆದಿದ್ದಾಳೆಂದು ಮಡಿಕೇರಿಗೆ ಹೋಗಿದ್ದಾನೆ. ಆದ್ರೆ, ಅಲ್ಲಿ ನಿರೀಕ್ಷೆಮಾಡಿದ್ದೇ ಬೇರೆ.ಸಿಕ್ಕಿದ್ದೇ ಬೇರೆ. ಚೆಲುವೆ ಕೊಟ್ಟ ಏಟಿಗೆ ಆತ ಬೆಳ್ಳಂಬೆಳಗ್ಗೆ ಬೀದಿಯಲ್ಲಿ ಅರೆಬೆತ್ತಲೆ ಯಾಗಿ ಮ್ಯಾರಾಥಾನ್ ಓಟ ಶುರು ಮಾಡಿದ್ದ. ಹೆಣ್ಣೊಬ್ಬಳ ಆಸೆಗೆ ಬಿದ್ದು ರಸ್ತೆಯಲ್ಲಿ ಬೆತ್ತಲಾಗಿದ್ದವನ ಕಥೆ ಇಲ್ಲಿದೆ.
- Gopal AS
- Updated on: Dec 14, 2025
- 3:00 pm
ಮಗು ಸೇರಿ ನಾಲ್ವರನ್ನು ಕೊಚ್ಚಿ ಕೊಂದ ದುರುಳನಿಗೆ ಶಾಕ್: ಕೋರ್ಟ್ ಮಹತ್ವದ ತೀರ್ಪು
ತಾನು ಸಂಬಂಧ ಹೊಂದಿದ್ದ ಮಹಿಳೆ ಮೇಲೆ ಅನುಮಾನ ಮತ್ತು ಕಾಫಿ ತೋಟದ ಆಸೆಗೆ ಮಗು ಸೇರಿ ನಾಲ್ವರನ್ನು ಕೊಚ್ಚಿ ಕೊಂದಿದ್ದ ಆರೋಪಿಗೆ ವಿರಾಜಪೇಟೆ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. 9 ತಿಂಗಳಲ್ಲೇ ವಿಚಾರಣೆ ಪೂರ್ಣಗೊಂಡು ತೀರ್ಪು ಬಂದಿರುವುದು ಗಮನಾರ್ಹ. ಇದೊಂದು ಅಪರೂಪದ ಪ್ರಕರಣ ಎಂದು ಪರಿಗಣಿಸಿ ನ್ಯಾಯಾಲಯ ತೀರ್ಪು ನೀಡಿದೆ.
- Gopal AS
- Updated on: Dec 11, 2025
- 5:28 pm
ಕೊಡಗು: ನೌಕರರಿಲ್ಲದೆ ಸರ್ಕಾರಿ ಕಚೇರಿಗಳು ಭಣ ಭಣ; ಶೇ.80ರಷ್ಟು ಹುದ್ದೆಗಳು ಖಾಲಿ!
ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ನೌಕರರ ತೀವ್ರ ಕೊರತೆ ಎದುರಾಗಿದೆ. ಹಲವು ಇಲಾಖೆಗಳಲ್ಲಿ ಶೇಕಡಾ 80ರಷ್ಟು ಹುದ್ದೆಗಳು ಖಾಲಿ ಇವೆ. ಇದರಿಂದ ಸಾರ್ವಜನಿಕ ಸೇವೆಗಳು ಕುಂಠಿತಗೊಂಡಿದ್ದು, ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹಾಲಿ ಇರುವ ಸಿಬ್ಬಂದಿಗೆ ಅಧಿಕ ಕೆಲಸದ ಒತ್ತಡದ ಜೊತೆಗೆ ಮಾನಸಿಕವಾಗಿಯೂ ಪರಿಣಾಮ ಉಂಟಾಗಿದೆ. ಸರ್ಕಾರ ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
- Gopal AS
- Updated on: Dec 9, 2025
- 6:50 pm
ನಾನು 1 ಸಾವಿರದ ವಾಚು ಕಟ್ತೇನೆ, 10 ಲಕ್ಷ ರೂ ವಾಚು ಕಟ್ತೇನೆ: ಡಿಕೆ ಶಿವಕುಮಾರ್
ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ಗೆ ಸೇರಿದ್ದಾಗ ಇಬ್ಬರ ಕೈಯಲ್ಲೂ ಇದ್ದ ವಾಚ್ ಇದೀಗ ರಾಜ್ಯ ರಾಜಕಾರಣದಲ್ಲಿ ವಾಗ್ಯುದ್ಧಕ್ಕೆ ವೇದಿಕೆ ಹಾಕಿಕೊಟ್ಟಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸಂಘರ್ಷ ಸೃಷ್ಟಿಸಿದೆ. ಸದ್ಯ ಈ ಕುರಿತಾಗಿ ಹಾಸನದಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ನನಗೆ ಎಷ್ಟು ವಾಚ್ ಬೇಕಾದ್ರೂ ಕಟ್ಟುವಷ್ಟು ಶಕ್ತಿ ಇದೆ ಎಂದಿದ್ದಾರೆ.
- Gopal AS
- Updated on: Dec 6, 2025
- 4:25 pm
ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ: ಏನಿದರ ವಿಶೇಷ? ಚಿತ್ರಗಳಲ್ಲಿ ನೋಡಿ
ಕೊಡಗಿನಲ್ಲಿ ಇಂದು ಹುತ್ತರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇದು ಹೊಸ ಅಕ್ಕಿ ಅಥವಾ ಸುಗ್ಗಿಯ ಹಬ್ಬ ಎಂದೇ ಪ್ರಸಿದ್ಧ. ಈ ಹಬ್ಬದಲ್ಲಿ ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ಮನೆಗೆ ಸ್ವಾಗತಿಸಲಾಗುತ್ತದೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಗಾಳಿಯಲ್ಲಿ ಗುಂಡು ಹಾರಿಸಿ ಅದ್ಧೂರಿಯಾಗಿ ಸಂಭ್ರಮಿಸಲಾಗುತ್ತದೆ. ಗೆಣಸಿನ ಖಾದ್ಯಗಳು ಹಾಗೂ ಹುತ್ತರಿ ಕೋಲಾಟದಂತಹ ಜನಪದ ಕಲೆಗಳು ಈ ಹಬ್ಬದ ಪ್ರಮುಖ ಆಕರ್ಷಣೆಯಾಗಿದೆ.
- Gopal AS
- Updated on: Dec 5, 2025
- 2:23 pm
ದಿತ್ವಾ ಚಂಡಮಾರುತ ಪ್ರಭಾವ: ಕೊಡಗು ಜಿಲ್ಲೆಯ ಹಲವೆಡೆ ಭಾರಿ ಮಳೆ
Kodagu Rains Video: ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ದಿತ್ವಾ ಚಂಡಮಾರುತದ ಪ್ರಭಾವದಿಂದ ಭಾರಿ ಮಳೆಯಾಗಿದೆ. ಜಿಲ್ಲಾ ಆಡಳಿತ ಮಳೆ ಸಂಬಂಧಿತ ಎಚ್ಚರಿಕೆ ನೀಡಿದ್ದು, ಜನರು ಜಾಗ್ರತೆಯಿಂದ ಇರಬೇಕೆಂದು ಸೂಚಿಸಿದೆ. ಕೊಡಗಿನಲ್ಲಿ ಸುರಿದ ಮಳೆಯ ವಿಡಿಯೋ ಇಲ್ಲಿದೆ ನೋಡಿ.
- Gopal AS
- Updated on: Dec 4, 2025
- 8:25 am
ನಾಪತ್ತೆಯಾಗಿದ್ದ ಮಗುವನ್ನು ಹುಡುಕಿಕೊಟ್ಟ ಶ್ವಾನ, ಪೋಷಕರು ಫುಲ್ ಖುಷ್
ನಾಪತ್ತೆಯಾಗಿದ್ದ 2 ವರ್ಷದ ಮಗುವನ್ನು ಶ್ವಾನ ಹುಡುಕಿಕೊಟ್ಟಿರುವ ಘಟನೆ ಕೊಡಗಿನ (Kodagu) ಬಿ.ಶೆಟ್ಟಿಗೇರಿ ಬಳಿಯ ಕೊಂಗಣ ಗ್ರಾಮದಲ್ಲಿ ನಡೆದಿದೆ. ಕಾಫಿ ಕೊಯ್ಲು ಹಿನ್ನೆಲೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಂಗಣ ಗ್ರಾಮದಲ್ಲಿ ಕಾರ್ಮಿಕ ದಂಪತಿ ಸುನಿಲ್ ಮತ್ತು ನಾಗಿಣಿ ತಮ್ಮ ಇಬ್ಬರು ಮಕ್ಕಳನ್ನು ಜೊತೆಯೇ ಕರೆದೊಯ್ದಿದ್ದರು. ಕಾಫಿ ತೋಟದಲ್ಲಿ ಕೆಲಸ ನಿರತರಾಗಿದ್ದ ಅವರು ಸಂಜೆ ವೇಳೆ ಗಮನಿಸಿದಾಗ ಇಬ್ಬರು ಮಕ್ಕಳ ಪೈಕಿ 2 ವರ್ಷದ ಮಗು ಸುಕನ್ಯಾ ನಾಪತ್ತೆಯಾಗಿರೋದು ಗೊತ್ತಾಗಿದೆ. ಮಗಳಿಗಾಗಿ ಒಂದಿಷ್ಟು ಹುಡುಕಾಡಿದ್ದಾರೆ. ಅದರೆ ಮಗು ಪತ್ತೆಯಾದ ಕಾರಣ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಟ್ಟಿಸಿದ್ದಾರೆ. ತಕ್ಷಣ ಅವರೂ ಕೂಡ ಸ್ಥಳಕ್ಕೆ ಬಂದಿದ್ದು, ಸುಕನ್ಯಾಗಾಗಿ ಕಾಫಿ ತೋಟದ ತುಂಬ ಜಾಲಾಡಿದ್ದಾರೆ. ಆದರೆ, ಮಧ್ಯರಾತ್ರಿವರೆಗೆ ಹುಡುಕಿದರೂ ಮಗು ಪತ್ತೆಯಾಗಿರಲಿಲ್ಲ.
- Gopal AS
- Updated on: Dec 1, 2025
- 7:32 pm
Kodagu: ಕಾಫಿ ತೋಟದಲ್ಲಿ ಮಗು ನಾಪತ್ತೆ; 2 ವರ್ಷದ ಕಂದಮ್ಮನನ್ನು ಹುಡುಕಿದ್ದು ಶ್ವಾನ!
ಕಾಫಿ ಕೊಯ್ಲು ಕೆಲಸಕ್ಕೆ ಹೋಗುವ ಕಾರ್ಮಿಕ ದಂಪತಿ ತಮ್ಮ ಇಬ್ಬರು ಮಕ್ಕಳನ್ನೂ ಕರೆದೊಯ್ದಿದ್ದರು. ಮಕ್ಕಳೂ ಕಾಫಿ ತೋಟದಲ್ಲಿ ಆಟ ಆಡಿಕೊಂಡು ಖುಷಿಯಾಗಿದ್ದರು. ಆದರೆ ಸಂಜೆ ವೇಳೆ ಕೆಲಸ ಮುಗಿಸಿ ಹೊರಡುವಾಗ ಮಕ್ಕಳಿಬ್ಬರ ಪೈಕಿ 2 ವರ್ಷದ ಹೆನ್ಣು ಮಗು ನಾಪತ್ತೆಯಾಗಿರೋದು ಪೋಷಕರಿಗೆ ಗೊತ್ತಾಗಿದೆ. ಕೂಡಲೇ ಅವರು ಪೂರ್ತಿ ಕಾಫಿ ತೋಟ ಹುಡುಕಾಡಿದ್ದಾರೆ. ಅರಣ್ಯ ಇಲಾಖೆಯವರೂ ಸ್ಥಳಕ್ಕೆ ಬಂದು ಜಾಲಾಡಿದ್ದಾರೆ. ಆದರೆ ಮಗುವನ್ನು ಹುಡುಕಿದ್ದು ಮಾತ್ರ ನೀಯತ್ತಿಗೆ ಹೆಸರಾದ ಪ್ರಾಣಿ.
- Gopal AS
- Updated on: Dec 1, 2025
- 3:10 pm
ಕೊಡಗಿನಲ್ಲೊಂದು ಭಯಾನಕ ಘಟನೆ: ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡು ಸತ್ತ ಪತಿ
ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ ಲೈವ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅತ್ಯಂತ ದಾರುಣ, ಭಯಾನಕ ಘಟನೆಯೊಂದು ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ನಡೆದಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
- Gopal AS
- Updated on: Nov 16, 2025
- 10:37 pm
ಭುಜನೋವೆಂದು ಕ್ಲಿನಿಕ್ಗೆ ಹೋದಾತ ಹೆಣವಾದ: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದನಾ ಯುವಕ?
ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವಿಗೆ ಚಿಕಿತ್ಸೆ ಪಡೆದ ವಿನೋದ್ ಎಂಬ ಯುವಕ ಎರಡು ಇಂಜೆಕ್ಷನ್ಗಳ ನಂತರ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ಖಾಗಿ ಕ್ಲಿನಿಕ್ ವೈದ್ಯ ಯಶೋಧರ್ ಪೂಜಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.
- Gopal AS
- Updated on: Nov 7, 2025
- 9:24 am
Cauvery Theerthodbhava: ತಲಕಾವೇರಿಯಲ್ಲಿ ತೀರ್ಥೋದ್ಭವದ ಇತಿಹಾಸ ಗೊತ್ತೇ? ಇಲ್ಲಿದೆ ಮಾಹಿತಿ
ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಶ್ರೀಮಂತ ಇತಿಹಾಸವಿದೆ. ಅಗಸ್ತ್ಯ ಮುನಿಗಳ ಕಮಂಡಲದಿಂದ ಗಣೇಶನಿಂದಾಗಿ ಜಲರೂಪಿಣಿಯಾಗಿ ಹೊರಹೊಮ್ಮಿದ ಕಾವೇರಿ ದೇವಿಯ ಪೌರಾಣಿಕ ಕಥೆ ಇದು. ಪ್ರತಿ ವರ್ಷವೂ ಭಕ್ತರಿಗೆ ದರ್ಶನ ನೀಡುವ ಪವಿತ್ರ ನದಿಯ ಮೂಲ ಹಾಗೂ ಆಚರಣೆಗಳನ್ನು ಗುರುರಾಜ್ ಆಚಾರ್ ವಿವರಿಸಿದ್ದಾರೆ.
- Gopal AS
- Updated on: Oct 17, 2025
- 12:02 pm
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ
ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕಾವೇರಿ ತಾಯಿಯ ದರ್ಶನ ಪಡೆಯಲು ತಲಕಾವೇರಿಯತ್ತ ಭಕ್ತ ಸಾಗರವೇ ಹರಿದು ಬರ್ತಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.
- Gopal AS
- Updated on: Oct 17, 2025
- 11:30 am