ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ
ಕೊಡಗಿನಲ್ಲಿ ದೈವ ಮತ್ತು ದೈವನರ್ತಕರಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೊಕ್ಲು ಠಾಣೆಯಲ್ಲಿ ಯುವಕರ ವಿರುದ್ಧ ದೂರು ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದಾರೆ. ಮದುವೆ ವಿಡಿಯೋದಲ್ಲಿ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.
- Gopal AS
- Updated on: Mar 31, 2026
- 11:52 am
ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ
ಮಡಿಕೇರಿಯಲ್ಲಿ ಮುಸ್ಲಿಂ ಯುವಕನ ಮದುವೆ ವೇಳೆ ದೈವ ನರ್ತನವನ್ನು ಹೋಲುವ ವೇಷ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಕೊಡಗು ಮತ್ತು ತುಳುನಾಡಿನ ದೈವ ಸಂಸ್ಕೃತಿಗೆ ಅವಮಾನ ಎಂದು ಆರೋಪಿಸಲಾಗಿದೆ. ವೈರಲ್ ವಿಡಿಯೋದಿಂದ ಆಕ್ರೋಶ ಭುಗಿಲೆದ್ದಿದ್ದು, ದೈವ ನರ್ತಕರ ಸಂಘ ಪೊಲೀಸರಿಗೆ ದೂರು ನೀಡಿದೆ. ಈ ಘಟನೆ ಕೊಡಗು ಜಿಲ್ಲೆಯಲ್ಲಿ ಧಾರ್ಮಿಕ ಸಂಘರ್ಷದ ಕಿಡಿ ಹೊತ್ತಿಸಿದೆ.
- Gopal AS
- Updated on: Mar 30, 2026
- 5:29 pm
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು, ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಕೂಂಬಿಂಗ್
ಹುಲಿಯೊಂದು ಮಡಿಕೇರಿ ನಗರದ ಹೊರವಲಯದಲ್ಲಿ ಸಂಚರಿಸುತ್ತಿರುವುದು ಕಾಣಿಸಿದ ಬೆನ್ನಲ್ಲೇ ಅರಣ್ಯ ಇಲಾಖೆ ಕೂಂಬಿಂಗ್ ಆರಂಭಿಸಿದೆ. ಸ್ಥಳೀಯರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ರಾತ್ರಿ ವೇಳೆ ಅನಾವಶ್ಯಕವಾಗಿ ಹೊರಗೆ ಹೋಗಬಾರದು ಹಾಗೂ ಕಾಡು ಪ್ರದೇಶಗಳಿಗೆ ತೆರಳಬಾರದು ಎಂದು ಸೂಚಿಸಲಾಗಿದೆ. ಹುಲಿ ಸೆರೆಗೆ ಅರಣ್ಯ ಇಲಾಖೆ ಸಮಗ್ರ ಕಾರ್ಯತಂತ್ರ ರೂಪಿಸಿದ್ದು, ಶೀಘ್ರದಲ್ಲೇ ಅದನ್ನು ಸುರಕ್ಷಿತವಾಗಿ ಸೆರೆ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದೆ.
- Gopal AS
- Updated on: Mar 26, 2026
- 9:41 am
ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಎಡವಟ್ಟಿನಿಂದ ಕಣ್ಣೀರಿಡುವಂತಾಗಿದೆ. ಈ ಶಾಲೆಯ 17 ಮಕ್ಕಳು ಇಂದು ಪರೀಕ್ಷೆ ಬರೆಯಬೇಕಿತ್ತು. ಅದ್ರಂತೆ ನಿನ್ನೆ ಎಲ್ಲರಿಗೂ ಹಾಲ್ ಟಿಕೆಟ್ ಬಂದಿತ್ತು. ಆದರೆ ಇಬ್ಬರಿಗೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಪರೀಕ್ಷೆ ಹಾಜರಾಗಲು ಸಾಧ್ಯವಾಗದಕ್ಕೆ ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟಿದ್ದಾರೆ.
- Gopal AS
- Updated on: Mar 18, 2026
- 6:23 pm
ಮಡಿಕೇರಿ ಡಬಲ್ ಮರ್ಡರ್ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ
ಅಣ್ಣನ ಪ್ರೀತಿಗೆ ಬೆಲೆ ಕಟ್ಟಲು ಆಗುವುದಿಲ್ಲ. ಅಕ್ಷರ ರೂಪದಲ್ಲಿ ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ತಂಗಿಯ ಪಾಲಿಗೆ ಅಣ್ಣ ಎಲ್ಲವೂ ಆಗಿರುತ್ತಾನೆ. ಅವಳ ನೋವಿಗೆ ಮಿಡಿಯುತ್ತಾನೆ, ಕಣ್ಣೀರಿಗೆ ಬೆರಳುಗಳಾಗುತ್ತಾನೆ. ಸುಖದಲ್ಲಿ ನಕ್ಕು, ದುಃಖದಲ್ಲಿ ಸಾಂತ್ವನದ ನುಡಿಗಳಾಗುತ್ತಾನೆ. ಹೀಗೆ ಅಣ್ಣ ತಂಗಿ ಸಂಬಂಧ ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಆದ್ರೆ, ಮಡಿಕೇರಿಯಲ್ಲಿ ಅಣ್ಣ ತಂಗಿ ನಡುವೆ ಪ್ರೀತಿ ಚಿಗುರಿದ್ದು, ಅದು ಲಿವಿಂಗ್ ರಿಲೇಶನ್ ಶಿಪ್ ಹಂತಕ್ಕೂ ಹೋಗಿದೆ. ಆದ್ರೆ, ಇದೀಗ ದುರಂತವೇ ನಡೆದುಹೋಗಿದೆ.
- Gopal AS
- Updated on: Mar 12, 2026
- 3:11 pm
ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ವಿರಾಜಪೇಟೆಯ ಸಿದ್ದಾಪುರದಲ್ಲಿ ಕಾಫಿ ಬೆಳೆಗಾರನೋರ್ವ ದಾಳಿಗೆ ಬಲಿಯಾಗಿದ್ದಾರೆ. ಇದು ಕೆಲವೇ ದಿನಗಳಲ್ಲಿ ನಡೆದ ಮೂರನೇ ಸಾವಾಗಿದ್ದು, ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಹಾಗೂ ಮಾಜಿ ಪಂಚಾಯತ್ ಸದಸ್ಯೆ ಜಲಜಾಕ್ಷಿ ಕೂಡ ಆನೆ ದಾಳಿಗೆ ಬಲಿಯಾಗಿದ್ದರು. ಸಾಲು ಸಾಲು ಸಾವುಗಳಿಂದ ಜನರು ತೀವ್ರ ಆತಂಕಗೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- Gopal AS
- Updated on: Mar 12, 2026
- 2:15 pm
ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್ ಮರ್ಡರ್ಗೆ ಬೆಚ್ಚಿಬಿದ್ದ ಭಾಗಮಂಡಲ
ಕೊಡಗಿನ ಭಾಗಮಂಡಲದಲ್ಲಿ ಮದ್ಯದ ನಶೆಯಲ್ಲಿದ್ದ 65 ವರ್ಷದ ಚಂದು ಎಂಬಾತ ಅಣ್ಣ-ತಂಗಿಯರನ್ನು ಕೊಲೆ ಮಾಡಿದ್ದಾನೆ. ಇತ್ತ, ಚಿಕ್ಕಮಗಳೂರಿನಲ್ಲಿ 2019ರ ಡಬಲ್ ಮರ್ಡರ್ ಪ್ರಕರಣದ ಆರೋಪಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದಿದ್ದ ಈ ಕೃತ್ಯಕ್ಕೆ ತಕ್ಕ ಶಿಕ್ಷೆ ಲಭಿಸಿದೆ.
- Gopal AS
- Updated on: Mar 12, 2026
- 9:02 am
10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು
ಕೊಡಗಿನ ವಾಲ್ನೂರಿನಲ್ಲಿ ಗ್ರಾ.ಪಂ. ಮಾಜಿ ಸದಸ್ಯೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆ ಮೂಲಕ ಕೇವಲ 10 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿ ಜಿಲ್ಲೆಯಲ್ಲಿ ಆದಂತಾಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Gopal AS
- Updated on: Mar 9, 2026
- 1:09 pm
ನಿಲ್ಲದ ಮಾನವ-ಆನೆ ಸಂಘರ್ಷ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ, ಭುಗಿಲೆದ್ದ ಆಕ್ರೋಶ
ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ತಂದೆ-ತಾಯಿ ಜತೆ ಬೈಕ್ನಲ್ಲಿ ಬರುವಾಗ ಆನೆ ದಾಳಿ ಮಾಡಿದ್ದು, ಈ ವೇಳೆ 19 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಈ ಘಟನೆ ಜನರ ಆಕ್ರೋಶ ಕಾರಣವಾಗಿದೆ.
- Gopal AS
- Updated on: Mar 1, 2026
- 6:02 pm
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಹಿಂದೂ ಸಂಗಮ ಯಾತ್ರೆ ಸಿದ್ಧತೆ ವೇಳೆ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆಯಾಗಿದೆ. ಸುಹೈಲ್, ಸಿದ್ಧಿಕ್ ಎಂಬ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಗೊಂಡ ಗೌತಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಹಿಂದೂ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
- Gopal AS
- Updated on: Feb 27, 2026
- 9:17 pm
ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ: ಬೈಕ್ ಸವಾರ ಸಾವು, ಪತ್ನಿ ಗಂಭೀರ
ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು, ಆತನ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬಸ್ಗಳು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸುಮಾರು ಐದು ಮಂದಿ ಗಾಯಗೊಂಡಿದ್ದಾರೆ.
- Gopal AS
- Updated on: Feb 19, 2026
- 9:47 am
ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ
ರಾಜ್ಯದ ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದಿನ ಬಿಜೆಪಿಗಿಂತಲೂ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ಹೆಚ್ಚಾಗಿದೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ. 37,000 ಕೋಟಿ ರೂ. ಬಾಕಿ ಬಿಲ್ ಪಾವತಿಯಾಗಿಲ್ಲ, ಮುಖ್ಯಮಂತ್ರಿ ಸ್ಪಂದಿಸಿಲ್ಲ ಎಂದು ಗುತ್ತಿಗೆದಾರರ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Gopal AS
- Updated on: Feb 12, 2026
- 2:54 pm