ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್
ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
- Gopal AS
- Updated on: Apr 22, 2026
- 11:45 am
ಕೊಡಗು: ಸರ್ಕಾರಿ ಕಾಮಗಾರಿ ಟೆಂಡರ್ಗೆ ನಕಲಿ ದಾಖಲೆ; ಲಕ್ಷಾಂತರ ರೂ ಲಪಟಾಯಿಸಲು ಯತ್ನ
ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಕಾಮಗಾರಿ ಟೆಂಡರ್ನಲ್ಲಿ ಬೃಹತ್ ಅಕ್ರಮ ಬಯಲಾಗಿದೆ. ಕೆಲ ಗುತ್ತಿಗೆದಾರರು ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಕಾಮಗಾರಿ ಪಡೆಯಲು ಯತ್ನಿಸಿದ್ದಾರೆ. ಗುತ್ತಿಗೆದಾರರ ಸಂಘದಿಂದ ದೂರು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ತನಿಖೆಗೆ ಆಗ್ರಹಿಸಲಾಗಿದೆ.
- Gopal AS
- Updated on: Apr 19, 2026
- 7:36 pm
ಕೊಡಗು: 3000 ಎಕರೆ ಕಾಫಿ ಎಸ್ಟೇಟ್ ಹರಾಜಿಗೆ ಮುಂದಾದ ಬ್ಯಾಂಕ್ಗಳು; ಆತಂಕದಲ್ಲಿ ಮಾಲೀಕರು, ಆಗಿದ್ದೇನು?
ಸಾಲ ಮರುಪಾವತಿಸದ ಕಾರಣ, ಬ್ಯಾಂಕ್ಗಳು ಮೂರು ಸಾವಿರ ಎಕರೆಗೂ ಹೆಚ್ಚು ಕಾಫಿ ತೋಟಗಳನ್ನು ಹರಾಜು ಹಾಕಲು ಮುಂದಾಗಿವೆ. ಸರ್ಫೇಸಿ ಕಾಯ್ದೆಯಡಿ, ಕಾಫಿ ವಾಣಿಜ್ಯ ಬೆಳೆಯಾಗಿರುವುದರಿಂದ, ಬ್ಯಾಂಕ್ಗಳು ಕಠಿಣ ಕ್ರಮಕ್ಕೆ ಮುಂದಾಗಿವೆ. ಇದೀಗ ತೋಟಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ಬೆಳೆಗಾರರು ಸರ್ಕಾರದಿಂದ ಪರಿಹಾರಕ್ಕೆ ಆಗ್ರಹಿಸುತ್ತಿದ್ದಾರೆ.
- Gopal AS
- Updated on: Apr 13, 2026
- 5:04 pm
ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿಡಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಮಗುವಿಗೆ ಮಡಿಕೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮಗುವನ್ನು ಬಿಟ್ಟು ಹೋದ ಪೋಷಕರಿಗಾಗಿ ತನಿಖೆ ನಡೆಸುತ್ತಿದ್ದಾರೆ.
- Gopal AS
- Updated on: Apr 11, 2026
- 5:50 pm
4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?
ಕೊಡಗಿನ ತಡಿಯಂಡಮೋಳ್ ಅರಣ್ಯದಲ್ಲಿ ನಾಲ್ಕು ದಿನ ದಾರಿ ತಪ್ಪಿ, ನೀರು ಕುಡಿದು ಬದುಕಿದ ಶರಣ್ಯರ ಕಥೆ ಈಗ ವಿವಾದಕ್ಕೆ ತಿರುಗಿದೆ. ಪಬ್ಲಿಸಿಟಿಗಾಗಿ ಈ ಘಟನೆ ಸೃಷ್ಟಿಸಲಾಗಿದೆ ಎಂಬ ಆರೋಪಗಳಿಗೆ, ಶರಣ್ಯ 'ಜೀವ ಉಳಿಸಿಕೊಳ್ಳಲು ಹೋರಾಡಿದೆ, ನಾಟಕವಾಡಿದ್ದಲ್ಲ' ಎಂದು ಉತ್ತರಿಸಿದ್ದಾರೆ. ಈ ಘಟನೆ ಪವಾಡವೋ ಅಥವಾ ಆರೋಪಗಳೇ ಸತ್ಯವೋ ಎಂಬುದು ಚರ್ಚೆಗೆ ಗ್ರಾಸವಾಗಿದೆ, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
- Gopal AS
- Updated on: Apr 9, 2026
- 10:35 am
ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ
ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ ವನವಾಸವನ್ನು ಶರಣ್ಯ ಟಿವಿ9ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Gopal AS
- Updated on: Apr 8, 2026
- 8:39 pm
ಮದುವೆ ಬಳಿಕ ಮೊದಲ ಬಾರಿ ತವರಿಗೆ ಬಂದ ರಶ್ಮಿಕಾ: ಮಗಳಿಗೆ ಬಂಗಲೆ ಗಿಫ್ಟ್ ಕೊಟ್ಟ ತಂದೆ
ನಟಿ ರಶ್ಮಿಕಾ ಮಂದಣ್ಣ ಅವರು ಪತಿ ವಿಜಯ್ ದೇವರಕೊಂಡ ಜೊತೆ ಕೊಡಗಿಗೆ ಬಂದಿದ್ದಾರೆ. ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಗಳಿಗೆ ತಂದೆ ಮದನ್ ಮಂದಣ್ಣ ಅವರು ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಶ್ಮಿಕಾ ಪೋಷಕರಿಂದ ಕುಟುಂಬದ ಸದಸ್ಯರು ಮತ್ತು ಸ್ನೇಹಿತರಿಗೆ ಔತಣಕೂಟ ಏರ್ಪಡಿಸಲಾಗಿದೆ.
- Gopal AS
- Updated on: Apr 6, 2026
- 8:28 pm
ಇರಾನ್ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್: ಅಲ್ಲಿ ಮಕ್ಕಳು, ಇಲ್ಲಿ ಪೋಷಕರು!
ದೀರ್ಘ ರಜೆಯ ಮೇಲೆ ತಮ್ಮ ಮಕ್ಕಳನ್ನ ಬಿಟ್ಟು ಇರಾನ್ನಿಂದ (Iran) ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್ ಆಗಿದ್ದಾರೆ. ವಿಮಾನ ಸೇವೆ ರದ್ದಾದ ಕಾರಣ ಇರಾನ್ಗೆ ಮರಳಲಾಗದೇ ಕೊಡಗಿನಲ್ಲೇ ಉಳಿಯುವಂತಾಗಿದೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಮೂರ್ನಾಡು ಸಮೀಪ ಕಾಂತೂರು ಗ್ರಾಮದ ನಿವಾಸಿಯಾಗಿದ್ದರೂ ಸಹ ನೆಲೆಸಿರುವುದು ಮಾತ್ರ ದೂರದ ಯುದ್ಧಪೀಡಿ ಇರಾನ್ ದೇಶದಲ್ಲಿ. ಮತ್ತೊಂದು ಕಡೆ ದಂಪತಿಯ ಪಾಸ್ಪೋರ್ಟ್ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ ಇರಾನ್ಗೆ ಹೋಗಲು ಸಾಧ್ಯವಾಗುತ್ತೋ ಇಲ್ವೋ ಎನ್ನುವ ಆತಂಕದಲ್ಲಿದ್ದಾರೆ.
- Gopal AS
- Updated on: Apr 6, 2026
- 7:18 pm
ಪಾಳು ಬಿದ್ದ ಬಂಗಲೆಯಲ್ಲಿ ನಾಲ್ಕು ದಿನ ಆಶ್ರಯ ಪಡೆದಿದ್ದ ಶರಣ್ಯ!
ಕೊಡಗು ಜಿಲ್ಲೆಯ ಕಾಡಿನಲ್ಲಿ ನಾಲ್ಕು ದಿನಗಳ ಕಾಲ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಯಿಕೋಡ್ನ ನಿವಾಸಿ ಶರಣ್ಯ ಏಪ್ರಿಲ್ 2ರಂದು ಮಡಿಕೇರಿ ತಾಲೂಕಿನ ಗಡಿಯಂಬಡಮೋಳ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದರು. ಹತ್ತು ಜನರ ತಂಡದಲ್ಲಿದ್ದ ಶರಣ್ಯ ದಾರಿ ತಪ್ಪಿ ದಟ್ಟ ಕಾಡಿನಲ್ಲಿ ಕಣ್ಮರೆಯಾಗಿದ್ದರು.
- Gopal AS
- Updated on: Apr 6, 2026
- 11:10 am
ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ನಿಜವಾಯ್ತು ಮಲೆಕುಡಿಯ ಜನಾಂಗದ ದೈವವಾಣಿ
ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿ ಇಂದು (ಏಪ್ರಿಲ್ 05) ನಗುಮೊಗದಲ್ಲೇ ಕಾಡಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲಿಯೇ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ತಾನು ಹೇಗೆ ದಟ್ಟಾರಣ್ಯದಲ್ಲಿ ಬದುಕುಳಿದೆ ಎಂದು ವಿವರಿಸಿದ್ದಾರೆ. ಅಲ್ಲದೇ ಮಲೆಕುಡಿಯ ಜನಾಂಗದ ದೈವವಾಣಿ ನಿಜವಾದಂತಾಗಿದೆ.
- Gopal AS
- Updated on: Apr 5, 2026
- 9:19 pm
ಕೊಡಗಿನಲ್ಲಿ ಟ್ರೆಕ್ಕಿಂಗ್ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ
ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಕೊನೆಗೂ ಪತ್ತೆ ಆಗಿದ್ದಾರೆ. ಪೊಲೀಸ್, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಶ್ವಾನ ದಳ ಹುಡುಕಾಟ ನಡೆಸಿದರೂ ಶರಣ್ಯಳ ಸುಳಿವೇ ಸಿಕ್ಕಿರಲಿಲ್ಲ. ಇದೀಗ ಪಾಳು ಬಿದ್ದ ಬಂಗಲೆಯೊಂದರಲ್ಲಿ ಯುವತಿ ಪತ್ತೆ ಆಗಿದ್ದಾರೆ.
- Gopal AS
- Updated on: Apr 5, 2026
- 7:15 pm
ಟ್ರೆಕ್ಕಿಂಗ್ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!
ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಈಕೆ 15 ವರ್ಷಗಳ ಚಾರಣ ಅನುಭವವಿದ್ದರೂ ದಾರಿ ತಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅರಣ್ಯ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರಿಂದ ಶೋಧ ಕಾರ್ಯ ನಡೆದಿದ್ದರೂ, ಚೆಕ್ ಪೋಸ್ಟ್ ಬಳಿ ಸಿಸಿಟಿವಿ ಕೆಲಸ ನಿರ್ವಹಿಸದೇ ಇರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
- Gopal AS
- Updated on: Apr 5, 2026
- 8:03 am