AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gopal AS

Gopal AS

Author - TV9 Kannada

gopala.aimanda@tv9.com
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಅನಿರೀಕ್ಷಿತವಾಗಿ ಸುರಿದ ಭಾರಿ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ತೇವಾಂಶ ಹೆಚ್ಚಾಗಿ ಕಾಫಿ ಕಾಯಿಗಳು ಉದುರುತ್ತಿವೆ. ಜೂನ್-ಜುಲೈನಲ್ಲಿ ಮಳೆ ಕೊರತೆ ಎದುರಿಸಿದ ನಂತರ ಆಗಸ್ಟ್‌ನಲ್ಲಿ ಭಾರೀ ಮಳೆ ಸುರಿದಿದ್ದು ರೈತರಿಗೆ ಅಪಾರ ನಷ್ಟ ಉಂಟಾಗಿದೆ. ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕೊಡಗು ಜಿಲ್ಲೆಯ ಪಾಲು ಗಣನೀಯವಾಗಿದೆ.

  • Gopal AS
  • Updated on: Aug 21, 2026
  • 12:39 pm
ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು

ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು

Kodagu elephant conflict: ಕಾಫಿಯ ನಾಡು ಕೊಡಗಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮಿತಿಮೀರಿದ್ದು, ನಿತ್ಯವೂ ಜೀವಭಯದಲ್ಲೇ ಜೀವನ ಕಳೆಯುವ ಸ್ಥಿತಿ ಮಲೆನಾಡಿಗರದ್ದಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ ಐವರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. 3 ಪುಂಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

  • Gopal AS
  • Updated on: Aug 19, 2026
  • 10:52 pm
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​:  ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಲಾಗಿದೆ.

  • Gopal AS
  • Updated on: Aug 16, 2026
  • 4:15 pm
ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ

ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ಪ್ರವಾಸಿಗರ ಬಸ್ ಪಲ್ಟಿಯಾಗಿದೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 22ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Gopal AS
  • Updated on: Aug 10, 2026
  • 5:49 pm
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.

  • Gopal AS
  • Updated on: Aug 10, 2026
  • 12:13 pm
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು

ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು

ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿಗರ ಸಾವು ಸಂಭವಿಸಿ ಎರಡೂವರೆ ತಿಂಗಳಾದರೂ, ಅರಣ್ಯ ಇಲಾಖೆ SOP ಜಾರಿಗೊಳಿಸುವಲ್ಲಿ ವಿಳಂಬ ಮಾಡಿದೆ. ಇದರಿಂದ ಶಿಬಿರ ಇನ್ನೂ ಮುಚ್ಚಿರುವುದರಿಂದ ಕೊಡಗಿನ ಪ್ರವಾಸೋದ್ಯಮ ಕುಸಿದಿದೆ. ರಿವರ್ ರಾಫ್ಟಿಂಗ್, ಹೋಟೆಲ್‌ಗಳು ಮತ್ತು ವ್ಯಾಪಾರಿಗಳು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯರು ಕೂಡಲೇ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿ, ದುಬಾರೆಯನ್ನು ಪ್ರವಾಸಿಗರಿಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾರೆ.

  • Gopal AS
  • Updated on: Aug 7, 2026
  • 3:39 pm
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು; ಮುಗಿಬಿದ್ದ ಪ್ರವಾಸಿಗರು

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು; ಮುಗಿಬಿದ್ದ ಪ್ರವಾಸಿಗರು

ಕೊಡಗಿನ ಕುಶಾಲನಗರ ತಾಲೂಕಿನ ಚಿಕ್ಲಿಹೊಳೆ ಕಿರು ಜಲಾಶಯವು ಭಾರೀ ಮಳೆಯಿಂದ ಸಂಪೂರ್ಣ ಭರ್ತಿಯಾಗಿದೆ. ಕ್ರಸ್ಟ್ ಗೇಟ್‌ಗಳಿಲ್ಲದ ಕಾರಣ, ನೀರು ನೈಸರ್ಗಿಕವಾಗಿ ಅರ್ಧ ಚಂದ್ರಾಕೃತಿಯಲ್ಲಿ ಧುಮ್ಮಿಕ್ಕಿ ಸುಂದರ ಜಲಪಾತವನ್ನು ಸೃಷ್ಟಿಸಿದೆ. ಈ ಕೃತಕ ಜಲಪಾತವನ್ನು ವೀಕ್ಷಿಸಲು ನೂರಾರು ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಡಿಯೋ ನೋಡಿ.

  • Gopal AS
  • Updated on: Aug 4, 2026
  • 6:29 pm
ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಪ್ರವಾಹದ ಕಾರಣ ಸ್ನಾನಘಟ್ಟದಲ್ಲಿ ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ.

  • Gopal AS
  • Updated on: Aug 3, 2026
  • 10:09 am
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ

ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟ, ಉದ್ಯಾನವನಗಳು ನೀರಿನಲ್ಲಿ ಮುಳುಗಿವೆ. ಭಾಗಮಂಡಲ-ತಲಕಾವೇರಿ ರಸ್ತೆಯು ಮುಳುಗಡೆಯಾಗಿದ್ದು, ಜನರು ಓಡಾಟಕ್ಕೆ ಫ್ಲೈ ಓವರ್ ಬಳಸುತ್ತಿದ್ದಾರೆ. ಹಲವೆಡೆ ರಸ್ತೆ, ಸೇತುವೆಗಳು ನೀರಿನಿಂದ ಆವೃತವಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

  • Gopal AS
  • Updated on: Aug 2, 2026
  • 8:33 am
ಕೊಡಗಿನಲ್ಲಿ ಭಾರೀ‌ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ

ಕೊಡಗಿನಲ್ಲಿ ಭಾರೀ‌ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ನಗರದ ಮುಳಿಯ ಲೇಔಟ್‌ನಲ್ಲಿ ನಿವೃತ್ತ ಎಎಸ್​ಐ ಬಿದ್ದಪ್ಪ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆ ಭಾಗಶಃ ಕುಸಿದಿದೆ. ಮನೆಗೆ ನಿಗದಿಯಾಗಿದ್ದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಇನ್ನೆರಡು ತಿಂಗಳು ಬಾಕಿ ಇರುವಾಗಲೇ, ಬೃಹತ್ ತಡೆಗೋಡೆ ಸಮೇತ ಪೋರ್ಟಿಕೊ ಕುಸಿದುಬಿದ್ದಿದ್ದು, ಸಂಪೂರ್ಣ ಮನೆ ಕುಸಿಯುವ ಭೀತಿ ಎದುರಾಗಿದೆ.

  • Gopal AS
  • Updated on: Aug 1, 2026
  • 3:34 pm
ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ

ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ

Kodagu Rains: ಕಾವೇರಿ ವಿವಾದ ಜೋರಾಗುತ್ತಿರುವ ಸಂದರ್ಭದಲ್ಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದು ಹರ್ಷಕ್ಕೆ ಕಾರಣವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.

  • Gopal AS
  • Updated on: Aug 1, 2026
  • 2:48 pm
ಪ್ರವಾಸಿಗರ ಸ್ವರ್ಗ ಮಡಿಕೇರಿಯೀಗ ರಸ್ತೆ ಗುಂಡಿಗಳಿಂದ ತುಂಬಿರೋ ನರಕ!: ಆಡಳಿತದ ನಿರ್ಲಕ್ಷ್ಯಕ್ಕೆ ವಾಹನ ಸವಾರರ ಹಿಡಿಶಾಪ

ಪ್ರವಾಸಿಗರ ಸ್ವರ್ಗ ಮಡಿಕೇರಿಯೀಗ ರಸ್ತೆ ಗುಂಡಿಗಳಿಂದ ತುಂಬಿರೋ ನರಕ!: ಆಡಳಿತದ ನಿರ್ಲಕ್ಷ್ಯಕ್ಕೆ ವಾಹನ ಸವಾರರ ಹಿಡಿಶಾಪ

ಪ್ರವಾಸಿಗರ ಸ್ವರ್ಗ ಮಡಿಕೇರಿ ನಗರದ ಪ್ರಮುಖ ರಸ್ತೆಗಳು ನೂರಾರು ಗುಂಡಿಗಳಿಂದ ತುಂಬಿ ನರಕಸದೃಶವಾಗಿದ್ದು, ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಹಾಗೂ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಳೆಗಾಲ ಆರಂಭಕ್ಕೂ ಮೊದಲು ಈ ರಸ್ತೆಗಳಿಗೆ ಕನಿಷ್ಠ ತೇಪೆ ಹಾಕುವ ಕೆಲಸ ಮಾಡಬೇಕಿತ್ತು. ಆದ್ರೆ ಜೂನ್ ತಿಂಗಳಾಂತ್ಯದವರೆಗೆ ಈ ಬಾರಿ ಬಿಸಿಲಿದ್ದರೂ ಮಡಿಕೇರಿ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಎಚ್ಚೆತ್ತುಕೊಳ್ಳಲಿಲ್ಲ. ಹಾಗಾಗಿ ಇದೀಗ ರಸ್ತೆಗಳೆಲ್ಲ ದುಸ್ಥಿತಿ ತಲುಪಿವೆ ಎನ್ನಲಾಗಿದೆ.

  • Gopal AS
  • Updated on: Jul 27, 2026
  • 4:00 pm
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ