AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gopal AS

Gopal AS

Author - TV9 Kannada

gopala.aimanda@tv9.com
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ

ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟ, ಉದ್ಯಾನವನಗಳು ನೀರಿನಲ್ಲಿ ಮುಳುಗಿವೆ. ಭಾಗಮಂಡಲ-ತಲಕಾವೇರಿ ರಸ್ತೆಯು ಮುಳುಗಡೆಯಾಗಿದ್ದು, ಜನರು ಓಡಾಟಕ್ಕೆ ಫ್ಲೈ ಓವರ್ ಬಳಸುತ್ತಿದ್ದಾರೆ. ಹಲವೆಡೆ ರಸ್ತೆ, ಸೇತುವೆಗಳು ನೀರಿನಿಂದ ಆವೃತವಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

  • Gopal AS
  • Updated on: Aug 2, 2026
  • 8:33 am
ಕೊಡಗಿನಲ್ಲಿ ಭಾರೀ‌ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ

ಕೊಡಗಿನಲ್ಲಿ ಭಾರೀ‌ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ

ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ನಗರದ ಮುಳಿಯ ಲೇಔಟ್‌ನಲ್ಲಿ ನಿವೃತ್ತ ಎಎಸ್​ಐ ಬಿದ್ದಪ್ಪ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆ ಭಾಗಶಃ ಕುಸಿದಿದೆ. ಮನೆಗೆ ನಿಗದಿಯಾಗಿದ್ದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಇನ್ನೆರಡು ತಿಂಗಳು ಬಾಕಿ ಇರುವಾಗಲೇ, ಬೃಹತ್ ತಡೆಗೋಡೆ ಸಮೇತ ಪೋರ್ಟಿಕೊ ಕುಸಿದುಬಿದ್ದಿದ್ದು, ಸಂಪೂರ್ಣ ಮನೆ ಕುಸಿಯುವ ಭೀತಿ ಎದುರಾಗಿದೆ.

  • Gopal AS
  • Updated on: Aug 1, 2026
  • 3:34 pm
ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ

ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ

Kodagu Rains: ಕಾವೇರಿ ವಿವಾದ ಜೋರಾಗುತ್ತಿರುವ ಸಂದರ್ಭದಲ್ಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದು ಹರ್ಷಕ್ಕೆ ಕಾರಣವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತಗೊಂಡಿವೆ. ವಿಡಿಯೋ ಇಲ್ಲಿದೆ ನೋಡಿ.

  • Gopal AS
  • Updated on: Aug 1, 2026
  • 2:48 pm
ಪ್ರವಾಸಿಗರ ಸ್ವರ್ಗ ಮಡಿಕೇರಿಯೀಗ ರಸ್ತೆ ಗುಂಡಿಗಳಿಂದ ತುಂಬಿರೋ ನರಕ!: ಆಡಳಿತದ ನಿರ್ಲಕ್ಷ್ಯಕ್ಕೆ ವಾಹನ ಸವಾರರ ಹಿಡಿಶಾಪ

ಪ್ರವಾಸಿಗರ ಸ್ವರ್ಗ ಮಡಿಕೇರಿಯೀಗ ರಸ್ತೆ ಗುಂಡಿಗಳಿಂದ ತುಂಬಿರೋ ನರಕ!: ಆಡಳಿತದ ನಿರ್ಲಕ್ಷ್ಯಕ್ಕೆ ವಾಹನ ಸವಾರರ ಹಿಡಿಶಾಪ

ಪ್ರವಾಸಿಗರ ಸ್ವರ್ಗ ಮಡಿಕೇರಿ ನಗರದ ಪ್ರಮುಖ ರಸ್ತೆಗಳು ನೂರಾರು ಗುಂಡಿಗಳಿಂದ ತುಂಬಿ ನರಕಸದೃಶವಾಗಿದ್ದು, ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಹಾಗೂ ಪ್ರವಾಸಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಳೆಗಾಲ ಆರಂಭಕ್ಕೂ ಮೊದಲು ಈ ರಸ್ತೆಗಳಿಗೆ ಕನಿಷ್ಠ ತೇಪೆ ಹಾಕುವ ಕೆಲಸ ಮಾಡಬೇಕಿತ್ತು. ಆದ್ರೆ ಜೂನ್ ತಿಂಗಳಾಂತ್ಯದವರೆಗೆ ಈ ಬಾರಿ ಬಿಸಿಲಿದ್ದರೂ ಮಡಿಕೇರಿ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಎಚ್ಚೆತ್ತುಕೊಳ್ಳಲಿಲ್ಲ. ಹಾಗಾಗಿ ಇದೀಗ ರಸ್ತೆಗಳೆಲ್ಲ ದುಸ್ಥಿತಿ ತಲುಪಿವೆ ಎನ್ನಲಾಗಿದೆ.

  • Gopal AS
  • Updated on: Jul 27, 2026
  • 4:00 pm
ಮನೆ ಸಿಕ್ಕರೂ ಬೆಳಕಿಲ್ಲ! ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಕತ್ತಲ ಭಾಗ್ಯ

ಮನೆ ಸಿಕ್ಕರೂ ಬೆಳಕಿಲ್ಲ! ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಕತ್ತಲ ಭಾಗ್ಯ

Kodagu CESCOM Power Connection: ಕೊಡಗಿನ ಜಂಬೂರಿನಲ್ಲಿ ಇನ್ಫೋಸಿಸ್ ನಿರ್ಮಿಸಿದ ನೂತನ ಮನೆಗಳನ್ನು 9 ವರ್ಷಗಳ ಬಳಿಕ ಪ್ರವಾಹ ಸಂತ್ರಸ್ತರಿಗೆ ನೀಡಲಾಗಿದೆ. ಆದರೆ ವಿದ್ಯುತ್ ಸಂಪರ್ಕವಿಲ್ಲದೆ ನಿತ್ಯ ಸಂಕಷ್ಟ ಎದುರಿಸುತ್ತಿದ್ದಾರೆ. ಚೆಸ್ಕಾಂ, ಗುತ್ತಿಗೆದಾರರ ನಡುವಿನ ಗೊಂದಲದಿಂದ ಸಂತ್ರಸ್ತರು ಕತ್ತಲಲ್ಲೇ ಜೀವನ ನಡೆಸುವಂತಾಗಿದೆ.

  • Gopal AS
  • Updated on: Jul 24, 2026
  • 3:59 pm
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು

ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಭಾವುಕ ಮಾತು

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರದ ನಂತರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ. ತಮ್ಮ ತಾಯಿ ಸದಾ ಹೃದಯದಲ್ಲಿ ನೆಲೆಸುತ್ತಾರೆ ಎಂದ ಅವರು, ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುವುದು ತಮ್ಮ ಕರ್ತವ್ಯ. ಅರಿತೋ ಅರಿಯದೆಯೋ ಮಾಡಿದ ತಪ್ಪುಗಳಿಗೆ ಅವರ ಬಳಿ ಕ್ಷಮೆಯಾಚಿಸಿರೋದಾಗಿ ಅವರು ತಿಳಿಸಿದ್ದಾರೆ.

  • Gopal AS
  • Updated on: Jul 20, 2026
  • 7:37 pm
ಪ್ರವಾಸಿಗರ ಜೀವದ ಜೊತೆ ಚೆಲ್ಲಾಟ: ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರ

ಪ್ರವಾಸಿಗರ ಜೀವದ ಜೊತೆ ಚೆಲ್ಲಾಟ: ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ನ ವೀಕ್ಷಣಾ ಗೋಪುರ

Kodagu News: ಕೊಡಗಿನ ಪ್ರಖ್ಯಾತ ಅಬ್ಬಿ ಫಾಲ್ಸ್ ವೀಕ್ಷಣಾ ಗೋಪುರ ಸಂಪೂರ್ಣ ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿ ತಲುಪಿದೆ. ಭದ್ರತಾ ತಡೆಬೇಲಿಗಳು ಕುಸಿದು, ಸಣ್ಣ ಮಕ್ಕಳು ಕೆಳಗೆ ಬೀಳುವ ಭೀತಿ ನಿರ್ಮಾಣವಾಗಿದೆ. ಪ್ರತಿದಿನ ಲಕ್ಷಾಂತರ ಆದಾಯ ಗಳಿಸುತ್ತಿದ್ದರೂ, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಗಮನ ನೀಡದೇ ಸ್ಥಳೀಯಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Gopal AS
  • Updated on: Jul 16, 2026
  • 12:57 pm
ಕರೆಯಲ್ಲಿ ಸಿಲುಕಿದ್ದ ಕಾಡಾನೆ ಬಚಾವ್, 2 ದಿನ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಕರೆಯಲ್ಲಿ ಸಿಲುಕಿದ್ದ ಕಾಡಾನೆ ಬಚಾವ್, 2 ದಿನ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕನ್ನಂಬಾಡಿ ಗ್ರಾಮದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಳಿಂದ ಕೆರೆ ಕೆಸರಿನಲ್ಲಿ ಸಿಲುಕಿ ಕಾಲ ನರಳಾಡಿದ್ದು, ಯಾರೂ ಸಹಾಯಕ್ಕೆ ಬಂದಿಲ್ಲ. ಕೊನೆಗೆ ಆನೆ ತಾನಾಗಿಯೇ ಕರೆಯಿಂದ ಹೊರಬಂದಿದೆ. ಹೌದು...ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ದೇವರಪುರ ಗ್ರಾಮದ ಕೆರೆಯ ಕೆಸರಿನಲ್ಲಿ ಕಾಡಾನೆ ಕಳೆದ ಎರಡು ದಿನಗಳಿಂದ ಸಿಲುಕಿ ಒದ್ದಾಡಿದ್ದು, ನೀರು, ಆಹಾರವಿಲ್ಲದೇ ಕೆಸರಿನಿಂದ ಆಚೆ ಬರಲು ಇನ್ನಿಲ್ಲದ ಕಸರತ್ತು ಮಾಡಿತ್ತು. ಅಂತಿಮವಾಗಿ ಎರಡನೇ ದಿನಕ್ಕೆ ಅಂದರೆ ಇಂದು (ಜುಲೈ 08) ತಾನಾಗಿಯೇ ಕರೆಯಿಂದ ಆಚೆ ಬಂದು ನಿಟ್ಟುಸಿರುಬಿಟ್ಟಿದೆ.

  • Gopal AS
  • Updated on: Jul 8, 2026
  • 5:56 pm
ಕೊಡಗು: 24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

ಕೊಡಗು: 24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕನ್ನಂಬಾಡಿ ಗ್ರಾಮದ ಕೆರೆಯಲ್ಲಿ ಕಾಡಾನೆ ಸಿಲುಕಿ 24 ಗಂಟೆಗೂ ಹೆಚ್ಚು ಸಮಯದಿಂದ ಪರದಾಡುತ್ತಿದೆ. ಅರಣ್ಯ ಇಲಾಖೆ ರಕ್ಷಣೆಗೆ ಧಾವಿಸದ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಯು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಹಸಿವು-ನಿರ್ಜಲೀಕರಣದಿಂದ ಬಳಲುತ್ತಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

  • Gopal AS
  • Updated on: Jul 8, 2026
  • 12:39 pm
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!

ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!

ಮಡಿಕೇರಿಯಲ್ಲಿ ಎಂಟು ತಿಂಗಳ ಮಗುವೊಂದು ಆಟವಾಡುತ್ತಾ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದೆ. ಮಗು ತೀವ್ರವಾಗಿ ಅಳಲಾರಂಭಿಸಿದಾಗ ಗಾಬರಿಗೊಂಡ ಪೋಷಕರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಲ್ಬ್ ಅನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಯಶಸ್ವಿಯಾಗಿ ಹೊರತೆಗೆದರು. ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಪೋಷಕರು ಹಾಗೂ ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ.

  • Gopal AS
  • Updated on: Jun 27, 2026
  • 12:08 pm
ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ

ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ

ಕೊಡಗು ಜಿಲ್ಲೆಯಲ್ಲೊಂದು ಅಮಾನುಷ ಕೃತ್ಯ ನಡೆದಿದೆ. 9 ವರ್ಷದ ಮಗನನ್ನು ತಾಯಿಯೇ ಬಲವಂತವಾಗಿ ಮತಾಂತರ ಹಾಗೂ ಸುನ್ನತ್ ಮಾಡಿಸಿದ ಆರೋಪ ಕೇಳಿಬಂದಿದೆ. ಅನ್ಯಧರ್ಮದ ವ್ಯಕ್ತಿಗಳ ಜೊತೆ ಸೇರಿ ಕೇರಳದ ಮಸೀದಿಯಲ್ಲಿ ಕೃತ್ಯ ಎಸಗಲಾಗಿದೆ. ಸದ್ಯ ತಂದೆ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

  • Gopal AS
  • Updated on: Jun 19, 2026
  • 7:16 pm
ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಕಾವೇರಿ ನದಿಯು ಕೊಡಗಿನಲ್ಲಿ ತೀವ್ರ ಬರ ಎದುರಿಸುತ್ತಿದೆ. ಜೂನ್‌ನಲ್ಲಿ ಸಾಮಾನ್ಯವಾಗಿ 10-15 ಅಡಿ ಹರಿಯಬೇಕಿದ್ದ ನದಿ ಈಗ ಕೇವಲ ಒಂದು ಅಡಿ ನೀರಿಗೆ ಸೀಮಿತವಾಗಿದೆ. ಶೇಕಡ 60ರಷ್ಟು ಮಳೆ ಕೊರತೆಯಿಂದ ಕುಡಿಯುವ ನೀರು, ಕೃಷಿ ಹಾಗೂ ಕರ್ನಾಟಕ-ತಮಿಳುನಾಡು ನಡುವೆ ಜಲ ವಿವಾದದ ಭೀತಿ ಹೆಚ್ಚಿದೆ. ಕೆಆರ್‌ಎಸ್, ಹಾರಂಗಿ ಜಲಾಶಯಗಳಲ್ಲೂ ನೀರಿನ ಕೊರತೆಯಿದೆ.

  • Gopal AS
  • Updated on: Jun 18, 2026
  • 6:26 pm