AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಪಾಲ್​ ಸೋಮಯ್ಯ

ಗೋಪಾಲ್​ ಸೋಮಯ್ಯ

ಜಿಲ್ಲಾ ವರದಿಗಾರ - TV9 Kannada

gopala.aimanda@tv9.com
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ರಾಮಪುರಂ ಕುಟುಂಬ ತಮ್ಮ ಎಸ್ಟೇಟ್ ಕಾರ್ಮಿಕರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದೆ. ಮೂಲಸೌಕರ್ಯ ವಂಚಿತ ಸರ್ಕಾರಿ ಶಾಲೆಗಳ ದುಃಸ್ಥಿತಿ ಅರಿತು, 2019ರಲ್ಲಿ ಈ ಕುಟುಂಬ ಸ್ವಂತ ಶಾಲೆಯೊಂದನ್ನು ಆರಂಭಿಸಿತು. ಇಲ್ಲಿ ಮಕ್ಕಳಿಗೆ ಸಮವಸ್ತ್ರ, ಊಟ ಸೇರಿದಂತೆ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಉಚಿತವಾಗಿ ಲಭ್ಯವಿದೆ.

  • Gopal AS
  • Updated on: Sep 8, 2026
  • 10:26 pm
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರದ ಆರೋಪ: ಮಾಕುಟ್ಟ ಚೆಕ್‌ಪೋಸ್ಟ್‌ ವಿಡಿಯೋ ವೈರಲ್

ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರದ ಆರೋಪ: ಮಾಕುಟ್ಟ ಚೆಕ್‌ಪೋಸ್ಟ್‌ ವಿಡಿಯೋ ವೈರಲ್

ಕೊಡಗು-ಕೇರಳ ಗಡಿಯ ಮಾಕುಟ್ಟ ಚೆಕ್‌ಪೋಸ್ಟ್‌ನಲ್ಲಿ ವಾಹನ ಚಾಲಕರಿಂದ ಲಂಚ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ ಆರೋಪಿಸಿದ್ದಾರೆ. ಹಣ ಪಡೆಯುತ್ತಿರುವ ವಿಡಿಯೋ ಪ್ರದರ್ಶಿಸಿ ಆರೋಪ ಮಾಡಿದ್ದಾರೆ. ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • Gopal AS
  • Updated on: Sep 2, 2026
  • 11:12 am
ಕೊಡಗಿನಲ್ಲಿ ಮಳೆ ಅಬ್ಬರ: ಮಡಿಕೇರಿಯಲ್ಲಿ ಗುಡ್ಡ ಕುಸಿತ, ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಕೊಡಗಿನಲ್ಲಿ ಮಳೆ ಅಬ್ಬರ: ಮಡಿಕೇರಿಯಲ್ಲಿ ಗುಡ್ಡ ಕುಸಿತ, ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಕೊಡಗಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದಲ್ಲಿ ಗುಡ್ಡದ ಮಣ್ಣು ರಸ್ತೆಗೆ ಕುಸಿದು ಆತಂಕ ಸೃಷ್ಟಿಸಿದೆ. ಘಟನೆಯ ಕೆಲವೇ ಸೆಕೆಂಡ್‌ಗಳ ಮೊದಲು ಸ್ಥಳದಿಂದ ತೆರಳಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮಂಗಳಾದೇವಿ ನಗರದಲ್ಲೂ ಮಳೆ ನೀರು ರಸ್ತೆಗೆ ಹರಿದಿದೆ.

  • Gopal AS
  • Updated on: Aug 26, 2026
  • 1:31 pm
Heavy Rain: ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

Heavy Rain: ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ತಲಕಾವೇರಿ ಸುತ್ತಮುತ್ತ ಬಿರುಸಿನ ಮಳೆಯಿಂದ ನಾಪೋಕ್ಲು ರಸ್ತೆ ಒಂದು ಅಡಿಗೂ ಹೆಚ್ಚು ಜಲಾವೃತಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮವು ಮತ್ತೊಮ್ಮೆ ಮುಳುಗಡೆಯಾಗಿದೆ. ಮಡಿಕೇರಿ ರಸ್ತೆಯ ಮೇಲೂ ನೀರು ಹರಿಯುವ ಭೀತಿ ಎದುರಾಗಿದ್ದು, ಪಾದಚಾರಿಗಳು ಮೇಲ್ಸೇತುವೆಗಳನ್ನು ಬಳಸುತ್ತಿದ್ದಾರೆ.

  • Gopal AS
  • Updated on: Aug 25, 2026
  • 11:45 am
ಕಾಡಾನೆ ದಾಳಿಗೆ ಮತ್ತೊಂದು ಬಲಿ: ವಾಯು ವಿಹಾರಕ್ಕೆ ತೆರಳಿದ್ದ ಬೆಂಗಳೂರಿಗ ದುರಂತ ಸಾವು

ಕಾಡಾನೆ ದಾಳಿಗೆ ಮತ್ತೊಂದು ಬಲಿ: ವಾಯು ವಿಹಾರಕ್ಕೆ ತೆರಳಿದ್ದ ಬೆಂಗಳೂರಿಗ ದುರಂತ ಸಾವು

Kodagu elephant attack: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಾಯು ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗ ಕಾಡಾನೆ ದಾಳಿಗೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಈ ಕುರಿತಾಗಿ ಶ್ರೀಮಂಗಲ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

  • Gopal AS
  • Updated on: Aug 22, 2026
  • 8:28 pm
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು: ಕಾಫಿ ಬೆಳೆ ಹಾನಿ ಭೀತಿ

ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಅನಿರೀಕ್ಷಿತವಾಗಿ ಸುರಿದ ಭಾರಿ ಮಳೆಯಿಂದಾಗಿ ಕಾಫಿ ಗಿಡಗಳಲ್ಲಿ ತೇವಾಂಶ ಹೆಚ್ಚಾಗಿ ಕಾಫಿ ಕಾಯಿಗಳು ಉದುರುತ್ತಿವೆ. ಜೂನ್-ಜುಲೈನಲ್ಲಿ ಮಳೆ ಕೊರತೆ ಎದುರಿಸಿದ ನಂತರ ಆಗಸ್ಟ್‌ನಲ್ಲಿ ಭಾರೀ ಮಳೆ ಸುರಿದಿದ್ದು ರೈತರಿಗೆ ಅಪಾರ ನಷ್ಟ ಉಂಟಾಗಿದೆ. ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕೊಡಗು ಜಿಲ್ಲೆಯ ಪಾಲು ಗಣನೀಯವಾಗಿದೆ.

  • Gopal AS
  • Updated on: Aug 21, 2026
  • 12:39 pm
ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು

ಕೊಡಗಿನಲ್ಲಿ ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು

Kodagu elephant conflict: ಕಾಫಿಯ ನಾಡು ಕೊಡಗಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮಿತಿಮೀರಿದ್ದು, ನಿತ್ಯವೂ ಜೀವಭಯದಲ್ಲೇ ಜೀವನ ಕಳೆಯುವ ಸ್ಥಿತಿ ಮಲೆನಾಡಿಗರದ್ದಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ ಐವರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. 3 ಪುಂಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

  • Gopal AS
  • Updated on: Aug 19, 2026
  • 10:52 pm
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​:  ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಲಾಗಿದೆ.

  • Gopal AS
  • Updated on: Aug 16, 2026
  • 4:15 pm
ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ

ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ಪ್ರವಾಸಿಗರ ಬಸ್ ಪಲ್ಟಿಯಾಗಿದೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 22ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Gopal AS
  • Updated on: Aug 10, 2026
  • 5:49 pm
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.

  • Gopal AS
  • Updated on: Aug 10, 2026
  • 12:13 pm
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು

ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು

ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿಗರ ಸಾವು ಸಂಭವಿಸಿ ಎರಡೂವರೆ ತಿಂಗಳಾದರೂ, ಅರಣ್ಯ ಇಲಾಖೆ SOP ಜಾರಿಗೊಳಿಸುವಲ್ಲಿ ವಿಳಂಬ ಮಾಡಿದೆ. ಇದರಿಂದ ಶಿಬಿರ ಇನ್ನೂ ಮುಚ್ಚಿರುವುದರಿಂದ ಕೊಡಗಿನ ಪ್ರವಾಸೋದ್ಯಮ ಕುಸಿದಿದೆ. ರಿವರ್ ರಾಫ್ಟಿಂಗ್, ಹೋಟೆಲ್‌ಗಳು ಮತ್ತು ವ್ಯಾಪಾರಿಗಳು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯರು ಕೂಡಲೇ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿ, ದುಬಾರೆಯನ್ನು ಪ್ರವಾಸಿಗರಿಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾರೆ.

  • Gopal AS
  • Updated on: Aug 7, 2026
  • 3:39 pm
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು; ಮುಗಿಬಿದ್ದ ಪ್ರವಾಸಿಗರು

ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು; ಮುಗಿಬಿದ್ದ ಪ್ರವಾಸಿಗರು

ಕೊಡಗಿನ ಕುಶಾಲನಗರ ತಾಲೂಕಿನ ಚಿಕ್ಲಿಹೊಳೆ ಕಿರು ಜಲಾಶಯವು ಭಾರೀ ಮಳೆಯಿಂದ ಸಂಪೂರ್ಣ ಭರ್ತಿಯಾಗಿದೆ. ಕ್ರಸ್ಟ್ ಗೇಟ್‌ಗಳಿಲ್ಲದ ಕಾರಣ, ನೀರು ನೈಸರ್ಗಿಕವಾಗಿ ಅರ್ಧ ಚಂದ್ರಾಕೃತಿಯಲ್ಲಿ ಧುಮ್ಮಿಕ್ಕಿ ಸುಂದರ ಜಲಪಾತವನ್ನು ಸೃಷ್ಟಿಸಿದೆ. ಈ ಕೃತಕ ಜಲಪಾತವನ್ನು ವೀಕ್ಷಿಸಲು ನೂರಾರು ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಡಿಯೋ ನೋಡಿ.

  • Gopal AS
  • Updated on: Aug 4, 2026
  • 6:29 pm