ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ.
ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019 ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ವಿಧಾನ ಪರಿಷತ್ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್ ಘೋಷಣೆ: ಸಂವಿಧಾನ ಪ್ರತಿ ಪ್ರದರ್ಶಿಸಿ ವಿಪಕ್ಷಗಳಿಗೆ ಸಚಿವರ ಕೌಂಟರ್
ವಿಧಾನ ಪರಿಷತ್ ಅಧಿವೇಶನಕ್ಕೆ ಸಚಿವ ಬಿ. ನಾಗೇಂದ್ರ ಆಗಮಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ನಾಗೇಂದ್ರ ಗೋ ಬ್ಯಾಕ್ ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸಚಿವ ನಾಗೇಂದ್ರ ನಗುತ್ತಲೇ ವಿಪಕ್ಷ ಸದಸ್ಯರಿಗೆ ಕೈಮುಗಿದು ಸಂವಿಧಾನವನ್ನು ಪ್ರದರ್ಶಿಸಿದರು. ವಾಲ್ಮೀಕಿ ನಿಗಮದ ಹಗರಣ ಸಂಬಂಧ ವಿಪಕ್ಷಗಳು ಉಭಯ ಸದನಗಳಲ್ಲಿಯೂ ಹೋರಾಟ ನಡೆಸುತ್ತಿದ್ದು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿವೆ.
- Harish GR
- Updated on: Aug 19, 2026
- 4:41 pm
ಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ಸೂಚನೆ ಪಾಲಿಸಲು ಸುಪ್ರೀಂ ಆದೇಶ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
- Harish GR
- Updated on: Aug 17, 2026
- 12:30 pm
ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ: ಘಟನೆಯ ಸ್ಫೋಟಕ ಅಂಶ ಬಿಚ್ಚಿಟ್ಟ ಅರಣ್ಯ ಸಚಿವ ರಾಮಲಿಂಗಾರೆಡ್ಡಿ
Forest Staff Shootout: ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಜಿಂಕೆ ಬೇಟೆಗಾರರು ಬಲಿಯಾಗಿದ್ದು, ಈ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿಗಳು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಮಧ್ಯಂತರ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
- Harish GR
- Updated on: Aug 15, 2026
- 4:50 pm
ಕಾವೇರಿ ವಿವಾದ: ಸುಪ್ರೀಂ ಕೋರ್ಟ್ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ಸಂಬಂಧ Cauvery Dispute: ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ಸುದೀರ್ಘ ಪ್ರತ್ಯುತ್ತರ ಸಲ್ಲಿಕೆ ಮಾಡಿದೆ. ರಾಜ್ಯದಲ್ಲಿ 'ಎಲ್ ನಿನೋ' ಪರಿಣಾಮದಿಂದಾಗಿ ಭೀಕರ ಮಳೆ ಕೊರತೆ ಎದುರಾಗಿದ್ದರೂ ಸಿಡಬ್ಲ್ಯೂಎಂಎ (CWMA) ಶಿಫಾರಸಿಗಿಂತ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.
- Harish GR
- Updated on: Aug 12, 2026
- 1:00 pm
ಕಾವೇರಿ ನೀರು ವಿವಾದ: CWRC ಶಿಫಾರಸ್ಸು ಎತ್ತಿಹಿಡಿದ CWMA, ಕರ್ನಾಟಕಕ್ಕೆ ಮತ್ತೆ ಬರೆ
ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮೇಲಿಂದ ಮೇಲೆ ಹಿನ್ನಡೆಯಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಕುಂಠಿತಗೊಂಡಿದ್ದರಿಂದ ಕಾವೇರಿ ಜಲಾಶದಲ್ಲಿ ನಿರೀಕ್ಷೆಯಷ್ಟು ನೀರು ಸಂಗ್ರಹವಾಗಿಲ್ಲ. ಇದರ ಮಧ್ಯೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶಿಸಿದ್ದು, ಇದರ ಬೆನ್ನಲ್ಲೇ ಇದೀಗ CWMA ಸಹ CWRC ಆದೇಶವನ್ನು ಎತ್ತಿ ಹಿಡಿದಿದೆ.
- Harish GR
- Updated on: Aug 11, 2026
- 5:34 pm
ನಾವು ರೈತರ ಹಿತ ಕಾಪಾಡಬೇಕು, ಕೋರ್ಟ್ ಆದೇಶ ಪಾಲಿಸಬೇಕು: ಕಾವೇರಿ ನದಿ ನೀರಿನ ಬಗ್ಗೆ ಸಿಎಂ ಹೇಳಿದ್ದಿಷ್ಟು
ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆಗೆ CWRC ಆದೇಶಿಸಿದೆ. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು, ರೈತರ ಹಿತ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. ಜಲಾಶಯಗಳ ನೀರಿನ ಲಭ್ಯತೆ ಪರಿಶೀಲಿಸಿ, ಕೋರ್ಟ್ ಆದೇಶ ಗೌರವಿಸುತ್ತಲೇ ರಾಜ್ಯದ ರೈತರ ಬೆಳೆಗಳನ್ನು ಉಳಿಸಿಕೊಳ್ಳಲು ಕಾನೂನು ಮತ್ತು ರಾಜಕೀಯ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಸಭೆ ಕರೆಯಲಾಗಿದೆ.
- Harish GR
- Updated on: Aug 11, 2026
- 3:48 pm
ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್ ಕೊಟ್ಟ CWRC; ತಮಿಳುನಾಡಿಗೆ ಮುಂದಿನ 15ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ
ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಮತ್ತೆ ಆಘಾತ ನೀಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸು ಮಾಡಿದೆ. ರಾಜ್ಯದಲ್ಲಿ ಬರಸ್ಥಿತಿ ಇರುವಾಗ ನೀರು ಬಿಡಲು ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ನೀರು ಹರಸಿವ ಸಂಬಂಧ ಈ ಹಿಂದೆ CWMA ನೀಡಿದ್ದ ಆದೇಶವನ್ನು ಸಂಕಷ್ಟದ ಸಮಯದಲ್ಲಿಯೂ ಕರ್ನಾಟಕ ಸರ್ಕಾರ ಪಾಲನೆ ಮಾಡಿದೆ. 15 ದಿನಗಳಲ್ಲಿ 4.5 ಟಿಎಂಸಿ ನೀರು ಹರಿಸುವಂತೆ ತಿಳಿಸಿದ್ದ ಹಿನ್ನೆಲೆ ಕಳೆದ 15 ದಿನಗಳಲ್ಲಿ ಅದಕ್ಕಿಂತಲೂ ಹೆಚ್ಚು ನೀರು ಹರಿಸಲಾಗಿದೆ.
- Harish GR
- Updated on: Aug 11, 2026
- 4:47 pm
ಆ. 14ರ ಬದಲು ಇಂದೇ ರಾಜೀನಾಮೆ ನೀಡಿದ್ದೇಕೆ ಸಭಾಪತಿ?: ಸತ್ಯ ಬಿಚ್ಚಿಟ್ಟ ಬಸವರಾಜ ಹೊರಟ್ಟಿ
ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಆಗಸ್ಟ್ 14ರಂದು ರಾಜೀನಾಮೆ ನೀಡಬೇಕಿದ್ದ ಬಸವರಾಜ ಹೊರಟ್ಟಿ ಅವರು, ಇದ್ದಕ್ಕಿದ್ದಂತೆ ಇಂದೇ (ಆಗಸ್ಟ್ 7) ರಾಜೀನಾಮೆ ನೀಡಲು ಕಾರಣವೇನು ಎಂಬ ಕುರಿತು ಮಾಧ್ಯಮಗಳ ಮುಂದೆ ಸತ್ಯ ಬಿಚ್ಚಿಟ್ಟಿದ್ದಾರೆ. ಸಿಎಂ ಮತ್ತುಕೆಪಿಸಿಸಿ ಅಧ್ಯಕ್ಷರು ಇವತ್ತೇ ರಾಜೀನಾಮೆ ಕೊಡಿ ಎಂದ ಕಾರಣ ಕೊಟ್ಟಿದ್ದೇನೆ. ಯಾವಾಗ ಕೊಟ್ರು ಒಂದೇ, ಹಾಗಾಗಿ ಇಂದೇ ರಾಜೀನಾಮೆ ಕೊಟ್ಟೆ ಎಂದವರು ತಿಳಿಸಿದ್ದಾರೆ.
- Harish GR
- Updated on: Aug 7, 2026
- 5:33 pm
ಕರ್ನಾಟಕ ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
Gayatri Shantegowda: ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಮಹತ್ವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
- Harish GR
- Updated on: Aug 7, 2026
- 2:36 pm
ಕಾಂಗ್ರೆಸಿಗರ ಮನವೊಲಿಕೆಗೆ ಮಣಿದ ಬಸವರಾಜ ಹೊರಟ್ಟಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ
Basavaraj Horatti: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನದ ಸುತ್ತ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದ್ದು, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಸುದೀರ್ಘ ಮನವೊಲಿಕೆಯ ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸ್ವ ಇಚ್ಛೆಯಿಂದ ಹುದ್ದೆ ತೊರೆಯುತ್ತಿರೋದಾಗಿ ಅವರು ತಿಳಿಸಿದ್ದಾರೆ.
- Harish GR
- Updated on: Aug 7, 2026
- 2:42 pm
Cauvery Dispute: ಮೇಕೆದಾಟು ಯೋಜನೆ ವಿರುದ್ಧ ತುರ್ತು ಚರ್ಚೆಗೆ ಡಿಎಂಕೆ ಆಗ್ರಹ, ರಾಜ್ಯಸಭೆಯಲ್ಲಿ ನಿಲುವಳಿ ಮಂಡನೆ
ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿದೆ. ಡಿಎಂಕೆ ಸಂಸದರು ನಿಯಮ 267ರ ಅಡಿಯಲ್ಲಿ ತುರ್ತು ಚರ್ಚೆಗೆ ಒತ್ತಾಯಿಸಿದ್ದಾರೆ. ಇದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘನೆ ಎಂದು ಆರೋಪಿಸಿ, ಮೇಕೆದಾಟು ಯೋಜನೆ ತಡೆಯಲು ಮಧ್ಯಸ್ಥಿಕೆ ಮಂಡಳಿ ರಚಿಸುವಂತೆ ಆಗ್ರಹಿಸಿದ್ದಾರೆ.
- Harish GR
- Updated on: Aug 5, 2026
- 12:02 pm
ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ಮಹತ್ವದ ರಿಲೀಫ್ ಸಿಕ್ಕಿದೆ. ಅವರ ಶಾಸಕ ಸ್ಥಾನದ ಅನರ್ಹತೆಯನ್ನು ವಿಧಾನಸಭೆ ಸಚಿವಾಲಯ ರದ್ದುಗೊಳಿಸಿದ್ದು, ಅವರು ಮತ್ತೆ ಶಾಸಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲೂ ಹೈಕೋರ್ಟ್, ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ, ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ಈ ಬೆಳವಣಿಗೆಯಿಂದ ಧಾರವಾಡದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ.
- Harish GR
- Updated on: Aug 3, 2026
- 8:51 pm