ದಸರಾ ಆಚರಣೆಗೆ ಸಿದ್ಧತೆ ಆರಂಭಿಸಿದ ಸರ್ಕಾರ: ವಿಜೃಂಭಣೆಯಿಂದ ಆಚರಣೆ ಎಂದ ಸಿಎಂ ಡಿಕೆ ಶಿವಕುಮಾರ್
Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ದಿನಾಂಕ ಕೂಡ ನಿಗದಿ ಆಗಿದೆ. ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
- Harish GR
- Updated on: Jul 10, 2026
- 7:30 pm
ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ
Mysuru Dasara 2026: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ʻನಾಡಹಬ್ಬ ದಸರಾ - 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ದಸರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
- Harish GR
- Updated on: Jul 10, 2026
- 5:10 pm
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಮವಸ್ತ್ರ, ಶೂ ನೀಡಲು ಕ್ಯಾಬಿನೆಟ್ ಅಸ್ತು
ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಭಾಗ್ಯ, ಬೀಳಗಿ ಏತ ನೀರಾವರಿ ಯೋಜನೆ ಮತ್ತು ಕಲಬುರಗಿಯ ಜವಳಿ ಪಾರ್ಕ್ ಅಭಿವೃದ್ಧಿಗೆ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
- Harish GR
- Updated on: Jul 2, 2026
- 6:43 pm
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡಮತದಾನ ಮಾಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
- Harish GR
- Updated on: Jun 26, 2026
- 3:07 pm
ವನ್ಯಜೀವಿ ಪ್ರಿಯರಿಗೆ ಗುಡ್ನ್ಯೂಸ್: ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಪುನರಾರಂಭ
Jungle Safari: ವನ್ಯಜೀವಿ ಪ್ರಿಯರಿಗೆ ಬಿಗ್ ನ್ಯೂಸ್ ಸಿಕ್ಕಿದ್ದು, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ತಾಂತ್ರಿಕ ಸಮಿತಿಯ ವರದಿ ಆಧರಿಸಿ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಮಾನವ ಮತ್ತು ವನ್ಯಜೀವಿ ಸಂಘರ್ಷದ ಕಾರಣದಿಂದಾಗಿ ಜಂಗಲ್ ಸಫಾರಿಯನ್ನು 2025ರ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ 2026ರ ಫೆಬ್ರವರಿ 19ರಿಂದ ಶೇ.50ರ ಸಾಮರ್ಥ್ಯದಲ್ಲಿ ಮತ್ತು ಕಡಿಮೆ ಅವಧಿಯೊಂದಿಗೆ ಸಫಾರಿ ಪುನರಾರಂಭಕ್ಕೆ ಸರ್ಕಾರ ಅವಕಾಶ ನೀಡಿತ್ತು.
- Harish GR
- Updated on: Jun 26, 2026
- 2:21 pm
ಡಿಕೆ ಶಿವಕುಮಾರ್ ಸರ್ಕಾರದ 2ನೇ ಸಚಿವ ಸಂಪುಟದ ಮಹತ್ವದ ನಿರ್ಣಯಗಳು ಹೀಗಿವೆ
ಮುಖ್ಯಮಂತ್ರಿ ಆದ ಬಳಿಕ ಡಿಕೆ ಶಿವಕುಮಾರ್ ಇಂದು ವಿಧಾನಸೌಧದಲ್ಲಿ ಎರಡನೇ ಸಚಿವ ಸಂಪುಟ ಸಭೆ ಮಾಡಿದರು. ಸಭೆಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಉಪಕರಣ ಖರೀದಿಗೆ 60 ಕೋಟಿ ರೂ, ಬಸ್ ಖರೀದಿಗೆ 235 ಕೋಟಿ ರೂ ಅನುಮೋದನೆ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ಪ್ರಜಾಸೇವೆ ಇಲಾಖೆ ಸ್ಥಾಪನೆಗೆ ಸಚಿವ ಸಂಪುಟ ಅಸ್ತು ಎಂದಿದೆ.
- Harish GR
- Updated on: Jun 20, 2026
- 3:22 pm
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಭರವಸೆ ನೀಡಿ, ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದು, ಅರ್ಹರಿಗೆ ಅನ್ಯಾಯವಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
- Harish GR
- Updated on: Jun 14, 2026
- 11:44 am
ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದು, ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ವೇಳೆ ಬೀದಿ ಬದಿ ತರಕಾರಿ ವ್ಯಾಪಾರಿಗಳೊಂದಿಗೆ ಮಾತನಾಡಿದ ಅವು, ಕೇಂದ್ರ ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿಯನ್ನೂ ನೀಡಿದ್ದಾರೆ.
- Harish GR
- Updated on: Jun 14, 2026
- 11:26 am
ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್
ಕರ್ನಾಟಕದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್ ನಡುವಿನ ಜಟಾಪಟಿಗೆ ಬ್ರೇಕ್ ಹಾಕಲು ಸುಪ್ರೀಂಕೋರ್ಟ್ ಮುಂದಾಗಿದೆ. ಕೆಲ ಕಿವಿ ಮಾತುಗಳನ್ನು ಹೇಳಿ ಇಬ್ಬರು ಅಧಿಕಾರಿಗಳ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ ಈಗ ಸಂಧಾನದ ಹಾದಿ ತೋರಿಸಿದೆ. ಇದಕ್ಕೆ ಸಂಧಾನಕಾರರನ್ನ ಸಹ ನೇಮಕ ಮಾಡಲಾಗಿದೆ.
- Harish GR
- Updated on: Jun 12, 2026
- 9:07 pm
Bidadi Township: ವಿವಾದದ ನಡುವೆಯೂ ಬಿಡದಿ ಟೌನ್ ಶಿಪ್ಗೆ ಅಂತಿಮ ಅಧಿಸೂಚನೆ ಪ್ರಕಟ, ರೈತರ ಮುಂದೆ 2 ಆಯ್ಕೆ
ಬಿಡದಿ ಟೌನ್ ಶಿಪ್ (Bidadi Township) ರಾಜಕೀಯ ಜಟಾಪಟಿ ಹಾಗೂ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ (Karnataka Government) ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಬಿಡದಿ ಟೌನ್ ಶಿಪ್ ವಿವಾದ ಭಾರೀ ಪೈಪೋಟಿಗೆ ಕಾರಣವಾಗಿದೆ. ವಿರೋಧ ಪಕ್ಷದವರು, ರೈತರು ಈ ವಿಚಾರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೂ ಈ ನಡುವೆಯೇ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಮೊದಲ ಹಂತದಲ್ಲಿ 519 ಎಕರೆ ಭೂ ಸ್ವಾಧೀನಕ್ಕೆ ಆದೇಶಿಸಿದೆ.
- Harish GR
- Updated on: Jun 12, 2026
- 4:05 pm
ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ
ಕರ್ನಾಟಕ ಸರ್ಕಾರವು 2026-27ನೇ ಸಾಲಿನ ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ನೀಟ್ ಮರುಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಭರ್ಜರಿ ರಿಲೀಫ್ ನೀಡಿದೆ. ಖಾಸಗಿ ಕಾಲೇಜುಗಳ ಶುಲ್ಕ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದ್ದು, ಹಳೆಯ ಶುಲ್ಕ ರಚನೆಯೇ ಈ ವರ್ಷವೂ ಅನ್ವಯಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಘೋಷಿಸಿದ್ದಾರೆ.
- Harish GR
- Updated on: Jun 12, 2026
- 3:20 pm
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಜನಜಂಗುಳಿಯ ನಡುವೆ ಖರ್ಗೆ ಅವರು ಸಹಿ ಮಾಡಿ ಪ್ರಮಾಣಪತ್ರ ಪಡೆದರು.
- Harish GR
- Updated on: Jun 12, 2026
- 2:26 pm