ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್ ವಿಶೇಷತೆ ಏನು?
ಅಮೆರಿಕ (America) , ಇಸ್ರೆಲ್ (Israel) ಮತ್ತು ಇರಾನ್ (Iran) ನಡುವಿನ ಯುದ್ಧ 30ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಅಮೆರಿಕದ ಎಚ್ಚರಿಕೆಗೂ ಇರಾನ್ ಬಗ್ಗುತ್ತಿಲ್ಲ. ಬದಲಾಗಿ ಪ್ರತಿದಾಳಿ ಮುಂದುವರೆಸಿದೆ. ಇದರಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನ (US B-52 Bomber) ಮೂಲಕ ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿದ್ದಾರೆ.
- Harish GR
- Updated on: Mar 29, 2026
- 5:39 pm
ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್ನಲ್ಲಿ 6 ಲಕ್ಷ ರೂ. ಪತ್ತೆ: ದುಡ್ಡು ತಂದಿದ್ಯಾಕೆ?
ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್ನಲ್ಲಿ 6 ಲಕ್ಷ ರೂಪಾಯಿ ಪತ್ತೆಯಾಗಿದೆ. ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಭೇಟಿಗೆಂದು ವಿಧಾನಸೌಧಕ್ಕೆ ಆಗಮಿಸಿದ್ದು, ಈ ವೇಳೆ ಪೊಲೀಸರು ತಪಾಸಣೆ ನಡೆಸಿದಾಗ ವ್ಯಕ್ತಿಯ ಬ್ಯಾಗ್ನಲ್ಲಿ ಹಣ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಫೋಟಕ ಮಾಹಿತಿ ಲಭ್ಯವಾಗಿದೆ.
- Harish GR
- Updated on: Mar 25, 2026
- 8:05 pm
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ ನೋಡಿ
ಕೆ.ಸಿ. ವೇಣುಗೋಪಾಲ್ ಅವರ ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲ ಶಾಸಕರಿಂದ ಮಂತ್ರಿ ಸ್ಥಾನದ ಬೇಡಿಕೆ ವಿಚಾರ ಸಂಬಂಧಿತ ಪ್ರಶ್ನೆಗೂ ಉತ್ತರಿಸಿದ ಅವರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಕೆಲವರು ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರೋದಾಗಿ ಹೇಳಿದ್ದಾರೆ.
- Harish GR
- Updated on: Mar 19, 2026
- 3:36 pm
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಕೋಗಿಲು ಬಡಾವಣೆಯಲ್ಲಿ 30 ಅರ್ಹ ನಿರಾಶ್ರಿತರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 61 ಕುಟುಂಬಗಳನ್ನು ಗುರುತಿಸಲಾಗಿದ್ದು, 12 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ದಾಖಲೆ ಸಲ್ಲಿಕೆ ಪ್ರಕ್ರಿಯೆಯಲ್ಲಿರುವ 19 ಕುಟುಂಬಗಳು ಮತ್ತು ಇನ್ನೂ ಮುಂದೆ ಬರದ 30 ಕುಟುಂಬಗಳಿಗೆ ವಸತಿ ಇಲಾಖೆ ಮನವಿ ಮಾಡಿದೆ. 189 ಸಾಮಾನ್ಯ ಅರ್ಜಿದಾರರಿಗೂ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ.
- Harish GR
- Updated on: Mar 18, 2026
- 4:35 pm
ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರು ಶುಲ್ಕವಿಲ್ಲದೆ ಪ್ರಯಾಣ ಮರುನಿಗದಿಪಡಿಸಲು ಅಥವಾ ಪೂರ್ಣ ಹಣ ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
- Harish GR
- Updated on: Mar 16, 2026
- 3:01 pm
ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ: ಹೊರಟ್ಟಿ ಆಕ್ರೋಶ
ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ ಸೇರಿದಂತೆ ಹಲವು ಬೋಧಕೇತರ ಕೆಲಸಗಳಲ್ಲಿ ಈಗಾಗಲೇ ತೊಡಗಿರುವ ಶಿಕ್ಷಕರಿಗೆ ನಾಯಿ ಕಾಯುವ ಜವಾಬ್ದಾರಿ ವಹಿಸುವುದು ಅವಮಾನಕಾರಿ. ಶಿಕ್ಷಕರ ಕೊರತೆಯ ನಡುವೆ ಈ ಕ್ರಮದಿಂದ ಮಕ್ಕಳ ಕಲಿಕೆಯ ಗುಣಮಟ್ಟ ಕುಸಿಯುತ್ತದೆ, ಕೂಡಲೇ ನಿರ್ಧಾರ ಕೈಬಿಡಬೇಕೆಂದು ಅವರು ಆಗ್ರಹಿಸಿದ್ದಾರೆ.
- Harish GR
- Updated on: Mar 10, 2026
- 6:59 pm
ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್ಗೆ 1 ಸೀಟು!
ಕರ್ನಾಟಕದಲ್ಲಿ ಮತ್ತೆ ಚುನಾವಣೆಗಳು ಶುರುವಾಗಲಿದೆ. ಕರ್ನಾಟಕ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ವಿಧಾನಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆದ್ರೆ ಯಾವುದಕ್ಕೂ ಎಲೆಕ್ಷನ್ ದಿನಾಂಕ ಘೋಷಣೆಯಾಗಿಲ್ಲ. ಅದಕ್ಕೂ ಮೊದಲೇ ನಾಲ್ಕು ಪರಿಷತ್ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ. ಹಾಗಾದ್ರೆ, ಯಾವ ಕ್ಷೇತ್ರಕ್ಕೆ ಯಾರು? ಜೆಡಿಎಸ್ಗೆ ಎಷ್ಟು ಸೀಟು ಎನ್ನುವ ವಿವರ ಇಲ್ಲಿದೆ.
- Harish GR
- Updated on: Mar 10, 2026
- 6:47 pm
ಟ್ರಾನ್ಸ್ಫಾರ್ಮರ್ ಖರೀದಿಗೂ ಕೇರಳಕ್ಕೆ ಮಣೆ: ಸಚಿವ ಜಾರ್ಜ್ ಕೊಟ್ಟ ಸಮಜಾಯಿಶಿ ಏನು ಗೊತ್ತೇ?
ಕೇರಳದ ವಯನಾಡಿನಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಾಗ ಹಣಕಾಸು ಪರಿಹಾರ ಘೋಷಿಸಿದ್ದು ಹಾಗೂ ಕೇರಳ ಸಿಎಂ ಮಾಡಿದ ಒಂದೇ ಎಕ್ಸ್ ಸಂದೇಶಕ್ಕೆ ಮಣಿದು ಕೋಗಿಲು ಲೇಔಟ್ ನಿರಾಶ್ರಿತರಿಗೆ ಮನೆ ಕೊಡಲು ಸಮ್ಮತಿಸಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ರಾಜ್ಯಕ್ಕೆ ಅಗತ್ಯವಿರುವ ಟ್ರಾನ್ಸ್ಫಾರ್ಮರ್ ಖರೀದಿಗೂ ಕೇರಳಕ್ಕೆ ಆರ್ಡರ್ ನೀಡಿರುವ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಇದಕ್ಕೆ ಸಚಿವ ಕೆಜೆ ಜಾರ್ಜ ಸ್ಪಷ್ಟನೆ ಕೊಟ್ಟಿದ್ದಾರೆ.
- Harish GR
- Updated on: Mar 9, 2026
- 12:22 pm
Karnataka Budget 2026: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !
ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆಗೆ, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಹೊಸದುರ್ಗ-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸುವ ಯೋಜನೆಗಳನ್ನೂ ಪ್ರಕಟಿಸಲಾಗಿದೆ. ಈ ಕ್ರಮಗಳು ರಾಜ್ಯದ ಆರೋಗ್ಯ ಮೂಲಸೌಕರ್ಯ ಬಲಪಡಿಸುವ ಗುರಿ ಹೊಂದಿವೆ.
- Harish GR
- Updated on: Mar 6, 2026
- 11:52 am
Karnataka Budget 2026:16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ
ಕರ್ನಾಟಕ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಮೊಬೈಲ್ ಹಾಗೂ ಡಿಜಿಟಲ್ ವ್ಯಸನದಿಂದ ಮಕ್ಕಳ ಆರೋಗ್ಯ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಆಪ್ರಾಪ್ತ ಮಕ್ಕಳಿಗೆ ಸೋಶಿಯಲ್ ಮೀಡಿಯಾ ದುರುಪಯೋಗ ತಪ್ಪಿಸಿ, ಅವರ ಆರೋಗ್ಯ ಹಾಗೂ ಭವಿಷ್ಯ ಕಾಪಾಡುವುದು ಸರ್ಕಾರದ ಮುಖ್ಯ ಉದ್ದೇಶ. ಇದು ಅಂತರಾಷ್ಟ್ರೀಯ ಮಾದರಿಯನ್ನು ಆಧರಿಸಿದ ಬಹುಮುಖ್ಯ ಹೆಜ್ಜೆಯಾಗಿದೆ.
- Harish GR
- Updated on: Mar 6, 2026
- 11:23 am
‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ
ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸ್ವಪಕ್ಷೀಯರಿಂದಲೇ ಸಂಕಷ್ಟ ಎದುರಾಗಿದೆ. 56 ಸಾವಿರ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿರುವ ಬೆನ್ನಲ್ಲೇ, ಒಳ ಮೀಸಲಾತಿ ಜಾರಿ ಮಾಡದ ಸರ್ಕಾರದ ನಡೆಯ ವಿರುದ್ಧ ದಲಿತ ಎಡಗೈ ನಾಯಕರು ಕೆಂಡಾಮಂಡಲವಾಗಿದ್ದಾರೆ. ಇಂದು ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಲಿದ್ದು, ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
- Harish GR
- Updated on: Mar 5, 2026
- 5:51 pm
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ
ಮಾಗಡಿ ಶಾಸಕ ಬಾಲಕೃಷ್ಣ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ. ಶ್ರೀಮಂತರಿಗೂ ಉಚಿತ ಸೌಲಭ್ಯಗಳು ಸಿಗುತ್ತಿರುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಬಡವರಿಗೆ ಮಾತ್ರ ಯೋಜನೆಯ ಲಾಭ ತಲುಪುವಂತೆ ಮಾನದಂಡಗಳನ್ನು ರೂಪಿಸಿ, ಉಳಿತಾಯವಾದ ಹಣವನ್ನು ಅಭಿವೃದ್ಧಿಗೆ ಬಳಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
- Harish GR
- Updated on: Mar 2, 2026
- 12:34 pm