ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್ ಆರಂಭಿಸಲಿದೆ. 2018ರ ತೀರ್ಪನ್ನು ಮರುಪರಿಶೀಲಿಸಲು ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನು ರಚಿಸಲಾಗಿದೆ. ಈ ವಿಚಾರಣೆಯು ಏಪ್ರಿಲ್ 22ರವರೆಗೆ ನಡೆಯಲಿದ್ದು, ವಾದಿ-ಪ್ರತಿವಾದಿಗಳಿಗೆ ವಾದ ಮಂಡಿಸಲು ಕಾಲಾವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರವೂ ಮರುಪರಿಶೀಲನೆಗೆ ಬೆಂಬಲ ನೀಡಿದೆ.
- Harish GR
- Updated on: Feb 16, 2026
- 12:54 pm
ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್ಮ್ಯಾನ್ ಅಲ್ಲ ಫೈರ್ಫೈಟರ್
ರಾಜ್ಯ ಸರ್ಕಾರವು ಅಗ್ನಿಶಾಮಕ ಇಲಾಖೆಯಲ್ಲಿ 'ಫೈರ್ಮ್ಯಾನ್' ಹುದ್ದೆಯನ್ನು 'ಫೈರ್ ಫೈಟರ್' ಎಂದು ಮರುನಾಮಕರಣ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಲ್ಲಿ ಅವಕಾಶ ಕಲ್ಪಿಸುವ ಉದ್ದೇಶ ಹಿನ್ನೆಲೆ ಕ್ರಮಕೈಗೊಳ್ಳಲಾಗಿದೆ. ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ, ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲು ಸಿದ್ಧತೆ ನಡೆಸಲಾಗಿದೆ.
- Harish GR
- Updated on: Feb 15, 2026
- 3:10 pm
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್
ರಾಜ್ಯ ರಾಜಕಾರಣದಲ್ಲಿ ಈಗ ವರ್ಗಾವಣೆ ಪತ್ರವೊಂದು ಭಾರಿ ಸಂಚಲನ ಮೂಡಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಎನ್ನಲಾದ ಸಹಿ ಇರುವ ಶಿಫಾರಸ್ಸು ಪತ್ರ ಈಗ ವಿರೋಧ ಪಕ್ಷಗಳ ಕೈಗೆ ಅಸ್ತ್ರವಾಗಿ ಸಿಕ್ಕಿದೆ. ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡುವಂತೆ ಸೂಚಿಸಿರುವ ಈ ಪತ್ರ, ಆಡಳಿತ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಎಂದು ಬಿಜೆಪಿ ಕಿಡಿಕಾರಿದೆ.
- Harish GR
- Updated on: Feb 13, 2026
- 4:50 pm
ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕೆಎಸ್ಸಿಎ ಸಂಸ್ಥೆಯೂ ನ್ಯಾಯಮೂರ್ತಿ ಕುನ್ನ ವರದಿಯ ಶಿಫಾರಸುಗಳನ್ನು ಪಾಲಿಸುವ ಭರವಸೆ ನೀಡಿದೆ ಎನ್ನಲಾಗಿದೆ.
- Harish GR
- Updated on: Feb 12, 2026
- 2:04 pm
ಆಳಂದದ ದರ್ಗಾದಲ್ಲಿ ನಡೆಯುತ್ತೆ ಶಿವರಾತ್ರಿ ಪೂಜೆ: ದರ್ಗಾ ಸಮಿತಿಗೆ ಸುಪ್ರೀಂನಲ್ಲೂ ಶಾಕ್
ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ. ಶಾಂತಿ ಕಾಪಾಡಲು ಕಲಬುರಗಿ ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕೈಗೊಳ್ಳಲಿದೆ.
- Harish GR
- Updated on: Feb 12, 2026
- 2:23 pm
ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎಸ್ ಶಿವಲಿಂಗೇಗೌಡರ ವರ್ತನೆಯನ್ನು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದು, ಸಂಸದೀಯ ಮೌಲ್ಯಗಳಿಗೆ ಧಕ್ಕೆ ತಂದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿದೆ.
- Harish GR
- Updated on: Feb 5, 2026
- 2:40 pm
ವಿರೋಧದ ಮಧ್ಯೆ ಜಿ ರಾಮ್ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ
ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅಂಗೀಕಾರವೂ ಆಗಿದೆ. ಸರ್ಕಾರ ತಂದಿರುವ ಈ ನಿರ್ಣಯ ಅಕ್ರಮ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.
- Harish GR
- Updated on: Feb 4, 2026
- 9:52 pm
ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಹಿನ್ನಡೆ
ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಮಾತುಕತೆ ವಾದವನ್ನು ತಿರಸ್ಕರಿಸಿ, ತಮಿಳುನಾಡಿನ ನ್ಯಾಯಾಧಿಕರಣ ರಚನೆ ಬೇಡಿಕೆಯನ್ನು ಪುರಸ್ಕರಿಸಲಾಗಿದೆ.
- Harish GR
- Updated on: Feb 2, 2026
- 1:45 pm
ಕೇಂದ್ರದ ಬಜೆಟ್ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ವರ್ಷದ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದು, ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಈ ಬಜೆಟ್ ಪಂಚರಾಜ್ಯಗಳ ಚುನಾವಣಾ ತಂತ್ರಗಾರಿಗೆ ಸೀಮಿತಗಲಿದೆಯಾ ಅಥವಾ ದಕ್ಷಿಣದ ಆರ್ಥಿಕ ಶಕ್ತಿ ಕರ್ನಾಟಕದ ಪಾಲಿಗೆ ಉತ್ತಮ ಕೊಡುಗೆ ಸಿಗಲಿದೆಯಾ ಎಂಬ ಕುತೂಹಲ ಮೂಡಿಸಿದೆ. ಮೂಲಸೌಕರ್ಯದ ಬಗ್ಗೆ ರಾಜ್ಯ ಸರ್ಕಾರ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದೆ. ಕೇಂದ್ರದ ಬಜೆಟ್ನಿಂದ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು?
- Harish GR
- Updated on: Jan 30, 2026
- 7:16 am
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಅದರಲ್ಲಿರುವುದು ಯಾವ ಮ್ಯಾಟರ್ ಗೊತ್ತಾ?
ವಿಪಕ್ಷ ನಾಯಕ ಅಶೋಕ್ ಅವರು ಸದನದಲ್ಲಿ ಪೆನ್ಡ್ರೈವ್ ಪ್ರದರ್ಶಿಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ್ದಾರೆ. ಬಳ್ಳಾರಿಯನ್ನು ಸುಡುವ ಬೆದರಿಕೆ ಹಾಕಿದ ಶಾಸಕರಿಗೆ ಡಿಕೆ ಶಿವಕುಮಾರ್ ಬೆಂಬಲ ಸೂಚಿಸಿದ್ದನ್ನು ಅವರು ಖಂಡಿಸಿದ್ದಾರೆ. ಬಳ್ಳಾರಿ ಘಟನೆಯಲ್ಲಿ ಪೊಲೀಸರ ನಡೆ ಮತ್ತು ಎಫ್ಐಆರ್ ದಾಖಲಾತಿಯಲ್ಲಿನ ವಿಳಂಬವನ್ನೂ ಅಶೋಕ್ ಪ್ರಸ್ತಾಪಿಸಿದ್ದಾರೆ.
- Harish GR
- Updated on: Jan 29, 2026
- 6:25 pm
ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ
ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆ ಏಪ್ರಿಲ್ 24ರಿಂದ ಜಾರಿಗೆ ಬರಲಿದೆ.
- Harish GR
- Updated on: Jan 29, 2026
- 4:22 pm
ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು
ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಡಳಿತರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ವೇಳೆ ಹೆಚ್ಕೆ ಪಾಟೀಲ್ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ವತಃ ಹೆಚ್ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
- Harish GR
- Updated on: Jan 28, 2026
- 5:55 pm