AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್​.

Author - TV9 Kannada

harish.rajegowda@tv9.com
ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಭರಪೂರ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತಾ ಸಭೆ ನಡೆಸಲಾಗಿದೆ. ಶಾಸಕಾಂಗ ಪಕ್ಷದ ಸಭೆ ನಾಳೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಪಂಜಾಬ್, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಈ ಹಿಂದೆ ತೆಗೆದುಕೊಂಡಿದ್ದ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಅತ್ಯಂತ ಚಾಣಾಕ್ಷತನದಿಂದ ಬಗೆಹರಿಸಿದೆ. ಸಿದ್ದರಾಮಯ್ಯನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆ ಜೊತೆಗೆ, ಎಲ್ಲ ಸಮುದಾಯಗಳಿಗೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡುವ ನಿರ್ಧಾರ ಮಾಡಿದೆ. ಯಾವುದೇ ರೀತಿಯಲ್ಲಿಯೂ ತಮ್ಮ ನಿರ್ಧಾರ ವೋಟ್​​ ಬ್ಯಾಂಕ್​​ ಅಥವಾ ಪಕ್ಷ ನಾಯಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ತಂತ್ರ ರೂಪಿಸಿದೆ.

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯು ಬೆಂಬಲಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಿವಾಸದ ಮುಂದೆ ಜಮಾಯಿಸಿದ ಅಭಿಮಾನಿಗಳು ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಶಕ್ತಿ ಎಂದು ಬಣ್ಣಿಸಿರುವ ಅಹಿಂದ ನಾಯಕರು, ಅವರ ರಾಜೀನಾಮೆಯಿಂದ ಜೆಡಿಎಸ್‌ಗೆ ಆದ ಗತಿಯೇ ಕಾಂಗ್ರೆಸ್‌ಗೂ ಆಗಲಿದೆ ಎಂದು ಎಚ್ಚರಿಸಿದ್ದಾರೆ.

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ ಎನ್ನಲಾಗುತ್ತಿದೆಯಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತು ಇನ್ನೂ ಮೌನ ಮುರಿದಿಲ್ಲ. ಈ ನಡುವೆ ತಮ್ಮ ಆಪ್ತ ವರ್ಗದ 30ಕ್ಕೂ ಹೆಚ್ಚು ಶಾಸಕರೊಂದಿಗೆ ಅವರು ಸಭೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಈ ವೇಳೆ ಹೈಕಮಾಂಡ್​​ನ ರಾಜ್ಯ ಸಭೆ ಆಫರ್​​ ಬಗ್ಗೆಯೂ ತಿಳಿಸಿರುವ ಸಿಎಂ, ತಮಗೆ ರಾಜ್ಯ ರಾಜಕಾರಣದಲ್ಲಿಯೇ ಇರುವ ಇಚ್ಛೆ ಬಗ್ಗೆಯೂ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅವರ ನಿವಾಸ ಕಾವೇರಿ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬಂದಿರುವ ಅಭಿಮಾನಿಗಳು, ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದಿದ್ದಾರೆ. ಪಕ್ಷದ ಅಧಿಕೃತ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದೆ.

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ದೆಹಲಿಯಲ್ಲಿ ಹೈಕಮಾಂಡ್ ಸಭೆಯ ಬಳಿಕ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಎಲ್ಲವನ್ನೂ ನಾಳೆ ಅಧಿಕೃತವಾಗಿ ಮಾತನಾಡುವುದಾಗಿ ತಿಳಿಸಿದ್ದಾರೆ. ಉಪಾಹಾರ ಕೂಟದ ನಂತರ ಸಿದ್ದರಾಮಯ್ಯ ಮಾಧ್ಯಮಗೋಷ್ಠಿ ಕರೆಯುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಮೇ 28 ಗುರುವಾರ) ಬೆಳಗ್ಗೆ ರಾಜೀನಾಮೆ ನೀಡಲಿದ್ದು, ಅದಕ್ಕೂ ಮುನ್ನ ಸಚಿವರಿಗೆ ವಿದಾಯದ ಉಪಾಹಾರ ಕೂಟ ಆಯೋಜಿಸಿದ್ದಾರೆ. ರಾಜೀನಾಮೆ ನೀಡುವ ಸಂಬಂಧ ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಿಎಂ ಸಿದ್ದರಾಮಯ್ಯ ಸಮಯಾವಕಾಶ ಕೋರಿದ್ದಾರೆ.

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

Mekedatu project: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರೈತರ ಹಿತಾಸಕ್ತಿ ಹಾಗೂ ಕಾವೇರಿ ನೀರಿನ ಹಕ್ಕು ರಕ್ಷಿಸಲು ಕಾನೂನು ಹೋರಾಟ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದ್ರೆ, ಮತ್ತೊಂದೆಡೆ ಸುಪ್ರೀಂಕೋರ್ಟ್​​​ನಲ್ಲಿ ತಮಿಳುನಾಡು ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಇದರೊಂದಿಗೆ ಇದು CM ವಿಜಯ್‌ ಗೆ ಮೊದಲ ಶಾಕ್.

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ?

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ?

ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ರಾಜ್ಯದಲ್ಲಿನ ಎರಡು ಕ್ಷೇತ್ರಗಳ ಉಪ ಚುನಾವಣೆಯ ಕಾರಣಕ್ಕೆ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಮತ್ತು ಸಂ‍ಪುಟ ಪುನರ್‌ ರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಹಾಗಾದ್ರೆ, ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗಳು ಆಗುತ್ತಿವೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ

ವಿಧಾನಸೌಧದ ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್​ಜಿ ಕಮಾಂಡೋ ಮಾಕ್ ಡ್ರಿಲ್​​ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ

ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​

ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಅರಣ್ಯ ಇಲಾಖೆ ರಾಜ್ಯಾದ್ಯಂತ ವನ್ಯಜೀವಿ ಸಂಚಾರವಿರುವ ಚಾರಣಪಥಗಳಲ್ಲಿ ಟ್ರೆಕ್ಕಿಂಗ್‌ ನಿಷೇಧಿಸಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಹುಲಿ, ಆನೆ, ಚಿರತೆ ಸಂಘರ್ಷ ಇರುವ ಪ್ರದೇಶಗಳಲ್ಲಿ ಮುಂದಿನ ಆದೇಶದವರೆಗೆ ಚಾರಣ ಬಂದ್ ಆಗಿದೆ. ಹೊಸ ಸುರಕ್ಷತಾ ನಿಯಮಾವಳಿಗಳು (SOPs) ಜಾರಿಯಾಗುವವರೆಗೆ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ.