ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್: ವಿಧಾನ ಪರಿಷತ್ನಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ
ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರೇ ಈ ಮಾಹಿತಿಯನ್ನು ದೃಢಪಡಿಸಿದ್ದು, ಕೆಲ ಪೊಲೀಸರ ನಡೆ ಸಾರ್ವಜನಿಕರು ಅವರ ಮೇಲಿಟ್ಟಿದ್ದ ವಿಶ್ವಾಸಕ್ಕೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ರಕ್ಷಕರೇ ಭಕ್ಷಕರಾದರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.
- Harish GR
- Updated on: Dec 18, 2025
- 12:29 pm
ಬೆಳಗಾವಿ ಅಧಿವೇಶನ: ಪರಿಷತ್ನಲ್ಲಿ ಪ್ರಶ್ನೆ ಕೇಳಿದ್ದ BJP ಎಂಎಲ್ಸಿಗೆ ಕೊಟ್ಟಿದ್ದು ಖಾಲಿ ಪೆನ್ಡ್ರೈವ್!
ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿಪಕ್ಷಗಳು ಆಕ್ರೋಶ ವಕ್ತಪಡಿಸುತ್ತಿರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಪರಿಷತ್ ಬಿಜೆಪಿ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಅಧಿಕಾರಿಗಳು ಬೇಜವಾಬ್ದಾರಿ ತೋರಿರೋದು ಆಡಳಿತ ಪಕ್ಷಕ್ಕೆ ಇರುಸುಮುರುಸು ಉಂಟುಮಾಡಿದೆ.
- Harish GR
- Updated on: Dec 17, 2025
- 4:00 pm
ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವರು: 15 ವರ್ಷ ಮೀರಿದ ವೆಹಿಕಲ್ಸ್ ಜಪ್ತಿ
ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿಧಾನ ಪರಿಷತ್ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಆಯಸ್ಸು ಮೀರಿದ 1.38 ಕೋಟಿ ವಾಹನಗಳನ್ನ ಗುಜರಿಗೆ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು ಎಂದಿದ್ದಾರೆ.
- Harish GR
- Updated on: Dec 17, 2025
- 3:23 pm
ಸಿದ್ದರಾಮಯ್ಯ ಹೆಲಿಕಾಪ್ಟರ್ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸಕ್ಕೆ ಹೆಚ್ಚಾಗಿ ವಿಮಾನ ಮತ್ತು ಹೆಲಿಕಾಪ್ಟರ್ನಲ್ಲೇ ಹೋಗುತ್ತಾರೆ. ಹೀಗಾಗಿ 2023ರಿಂದ 2025ರ ನವೆಂಬರ್ ವರೆಗೂ ಸಿಎಂ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚ ಹುಬ್ಬೇರುವಂತೆ ಮಾಡಿದೆ. ಹಾಗಾದ್ರೆ, ಸಿಎಂ ಆಗಸದಲ್ಲಿ ಪ್ರಯಾಣಕ್ಕೆ ಇಲ್ಲಿಯವರೆಗೂ ಎಷ್ಟು ಸರ್ಕಾರ ಬೊಕ್ಕಸದಿಂದ ಖರ್ಚಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ
- Harish GR
- Updated on: Dec 11, 2025
- 3:11 pm
ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಕುಂಠಿತ: ಪಾತಾಳಕ್ಕೆ ಕುಸಿದ ಬಿಯರ್, ಕಾರಣ ಇಲ್ಲಿದೆ
ಬೆಳಗಾವಿ ಅಧಿವೇಶನದ ಮೊದಲ ದಿನವೇ ವಿಧಾನಪರಿಷತ್ ಕಲಾಪ ಕಾವೇರಿತ್ತು. ಈ ವೇಳೆ ಮದ್ಯಪ್ರಿಯರ ಆರೋಗ್ಯ ಚಿಕಿತ್ಸೆಗೆ ಅಬಕಾರಿ ಆದಾಯದ 20% ಮೀಸಲಿಡುವಂತೆ ಎಂಎಲ್ಸಿ ಎನ್. ರವಿಕುಮಾರ್ ಪ್ರಸ್ತಾಪಿಸಿದರು. ಈ ಕುರಿತಾಗಿ ಉತ್ತರಿಸಿದ ಸಚಿವ ಆರ್.ಬಿ ತಿಮ್ಮಾಪುರ ಪ್ರತ್ಯೇಕವಾಗಿ ಅನುದಾನ ನೀಡಲು ಅಸಾಧ್ಯ. ಕರ್ನಾಟಕದಲ್ಲಿ ಶೇ 19.55ರಷ್ಟು ಮಾರಾಟ ಮಾರಾಟ ಕುಂಠಿತವಾಗಿದೆ ಎಂದರು.
- Harish GR
- Updated on: Dec 8, 2025
- 9:41 pm
ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ
ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ.
- Harish GR
- Updated on: Dec 8, 2025
- 11:52 am
ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. 20 ಕ್ವಿಂಟಾಲ್ನಿಂದ 50 ಕ್ವಿಂಟಾಲ್ಗೆ ಖರೀದಿಯ ಗರಿಷ್ಠ ಮಿತಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಇದು ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಲಾಭವಾಗಲಿದೆ.
- Harish GR
- Updated on: Dec 7, 2025
- 6:52 pm
GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಕೇಂದ್ರ ಜಿಎಸ್ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸೆಸ್ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.
- Harish GR
- Updated on: Dec 5, 2025
- 10:36 pm
ಡಿಕೆಶಿ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಡಕ್ಕೂ ಬಂದಿದೆ.
- Harish GR
- Updated on: Dec 5, 2025
- 9:38 pm
ಇ-ಸ್ಟ್ಯಾಂಪ್ ಹೋಯ್ತು, ಡಿಜಿಟಲ್ ಇ-ಸ್ಟ್ಯಾಂಪ್ ಬಂತು: ಅಗ್ರಿಮೆಂಟ್ಗೆ ಇದೇ ಕಡ್ಡಾಯ
ಇ-ಸ್ಟಾಂಪಿಂಗ್ ಎನ್ನುವುದು ವಿವಿಧ ವಹಿವಾಟುಗಳು ಮತ್ತು ಒಪ್ಪಂದಗಳ ಮೇಲೆ ನ್ಯಾಯಾಂಗವಲ್ಲದ ಪುರಾವೆಯಾಗಿದ್ದು, ಆಸ್ತಿ ಖರೀದಿ ಅಥವಾ ಮಾರಾಟದ ಪ್ರತಿಯೊಂದು ವಹಿವಾಟಿಗೆ, ವ್ಯವಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಹಾಗೂ ಒಪ್ಪಂದಕ್ಕಾಗಿ ಇ ಸ್ಟ್ಯಾಂಪ್ ಮುಖ್ಯವಾಗಿದೆ. ಆದರೆ, ಇದೀಗ ಇ-ಸ್ಟ್ಯಾಂಪ್ ಮರೆಯಾಗಲಿದ್ದು, ಡಿಜಿಟಲ್ ಇ ಸ್ಟ್ಯಾಂಪ್ ಬಂದಿದೆ. ಏನಿದು ಡಿಜಿಟಲ್ ಇ-ಸ್ಟ್ಯಾಂಪ್? ಏಕೆ ಇ-ಸ್ಟ್ಯಾಂಪ್ ಅನ್ನು ಏಕೆ ರದ್ದು ಮಾಡಲಾಗಿದೆ. ಎಲ್ಲಾ ವಿವರ ಈ ಕೆಳಗಿನಂತಿದೆ.
- Harish GR
- Updated on: Dec 1, 2025
- 9:15 pm
ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳೊಂದಿಗೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಮತ್ತು ರಾಜ್ಯದ ಜನರ ಸೇವೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನೀರಾವರಿ, ನಗರಾಭಿವೃದ್ಧಿ, ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಜಂಟಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿದ್ದಾರೆ.
- Harish GR
- Updated on: Nov 29, 2025
- 3:38 pm
ಕಾಂಗ್ರೆಸ್ ನಾಯಕರ ಬಗ್ಗೆ ಛಲವಾದಿ ಬಿಗ್ ಬಾಂಬ್: ಸಿಎಂ ಸ್ಥಾನಕ್ಕಾಗಿ ‘ಕೈ’ ಪಾಳಯದಲ್ಲಿ ಕುದುರೆ ವ್ಯಾಪಾರ?
ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕಾಗಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ, ಮಂತ್ರಿ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್ ಮಾಡಲಾಗುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸುವ ಪರಿಸ್ಥಿತಿಗೆ ಕಾಂಗ್ರೆಸ್ ಬಂದಿದೆ ಎಂದಿರುವ ಅವರು, ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ದೂರು ನೀಡುವುದಾಗಿ ತಿಳಿಸಿದ್ದಾರೆ. ಇದು ಜನರ ಹಣದ ದುರುಪಯೋಗ ಎಂದು ಅವರು ಟೀಕಿಸಿದ್ದಾರೆ.
- Harish GR
- Updated on: Nov 23, 2025
- 1:44 pm