ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ.
ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019 ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಸರ್ಕಾರಿ ಮನೆಗಾಗಿ ಸಿದ್ದರಾಮಯ್ಯ ಆಪ್ತರ ಕಿತ್ತಾಟ: ಮಹದೇವಪ್ಪ ಅಸಮಾಧಾನಕ್ಕೆ ಭೈರತಿ ಸುರೇಶ್ ಹೇಳಿದ್ದಿಷ್ಟು
ಮಹದೇವಪ್ಪ, ಸಚಿವ ಭೈರತಿ ಸುರೇಶ್ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. ತೊಂಬತ್ತು ದಿನಗಳ ಒಳಗೆ ನಿವಾಸ ಖಾಲಿ ಮಾಡಬೇಕು ಎನ್ನುವ ನಿಯಮವಿದ್ದರೂ, ಕನಿಷ್ಠ ಸೌಜನ್ಯ ತೋರದೇ ಇರುವುದು ತಪ್ಪು ಎಂದು ಮಹದೇವಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಭೈರತಿ, ಗಲಾಟೆ ಏನೂ ಇಲ್ಲ, ಹೇಗೆ ತಪ್ಪು ಮಾಹಿತಿ ಹೋಯ್ತು ಗೊತ್ತಿಲ್ಲ. ಸಿಎಂಗೆ ಮನೆ ಬೇಕು ಎಂದಾಗ ಕೊಡ್ತಾರೆ, ವಿವಾದ ಏನಿಲ್ಲ. ಮಹದೇವಪ್ಪ ಮನೆಗೆ ನೂರು ಸಲ ಹೋಗಿ ಊಟ ಮಾಡಿದ್ದೇನೆ. ನನ್ನ ಮೇಲೆ ಯಾಕೆ ಅಸಮಾಧಾನ ಬಂದಿದೆಯೋ ಗೊತ್ತಿಲ್ಲ. ನನಗೆ ಮನೆ ಅಲಾಟ್ ಆಗಿದೆ ಎಂದು ಸ್ಪಷ್ಟಪಡಿಸಿದರು.
- Harish GR
- Updated on: Sep 8, 2026
- 3:05 pm
ಕರ್ನಾಟಕದ 4.5 ಲಕ್ಷ ಶಿಕ್ಷಕರಿಗೆ ‘TR’ ಗೌರವ: ಇನ್ಮುಂದೆ ಹೆಸರಿನ ಮೊದಲು ‘ಟೀಚರ್’ ಬಿರುದು
ಕರ್ನಾಟಕ ಸರ್ಕಾರವು 4.5 ಲಕ್ಷ ಶಿಕ್ಷಕರಿಗೆ ಟಿಆರ್ ಗೌರವ ಬಿರುದನ್ನು ಅನುಮೋದಿಸಿದೆ. ವೈದ್ಯರಿಗೆ ಡಿಆರ್ ಇರುವಂತೆಯೇ, ಶಿಕ್ಷಕರ ಹೆಸರಿನ ಮುಂದೆ ಟಿಆರ್ ಎಂದು ಸೇರಿಸಲಾಗುವುದು. ಶಿಕ್ಷಕರ ದಿನಾಚರಣೆಯಂದು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಸೂಕ್ತ ಗೌರವ ಮತ್ತು ಸ್ಥಾನಮಾನ ನೀಡುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ.
- Harish GR
- Updated on: Sep 6, 2026
- 6:53 am
“ಬೆಂಗಳೂರಿನಲ್ಲಿ ಪ್ರತ್ಯೇಕ AI ಯೂನಿವರ್ಸಿಟಿ ಸ್ಥಾಪನೆ ಆಲೋಚನೆ”: ಸಚಿವ ಬಸವರಾಜ ರಾಯರೆಡ್ಡಿ
ಕರ್ನಾಟಕ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅತ್ಯಂತ ಮಹತ್ವ ನೀಡಿದೆ. ₹55,000 ಕೋಟಿ ಬಜೆಟ್, 2,500 ಕೋಟಿ ರೂ. ಬ್ಯಾಂಕ್ ನೆರವಿನೊಂದಿಗೆ 807 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದೆ. ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು, ಬೆಂಗಳೂರಿನಲ್ಲಿ ಪ್ರತ್ಯೇಕ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ನಡೆಸಿದೆ.
- Harish GR
- Updated on: Sep 5, 2026
- 9:11 pm
SC ನಾನೇ, ST ಸಹ ನಾನೆಂದು 17 ಎಕರೆ ಜಮೀನು ಪಡೆದ ಭೂಪ: KIADB ಗೋಲ್ಮಾಲ್ ಬಯಲಿಗೆಳೆದ ಛಲವಾದಿ
ರಾಜ್ಯದಲ್ಲಿ ಮತ್ತೊಂದು ಭ್ರಷ್ಟಾಚಾರದ ಆರೋಪ ಹೇಳಿಬಂದಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಇದೊಂದು ಕರಪ್ಷನ್ ಹಬ್ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೇರೆ ಬೇರೆ ರೂಪದಲ್ಲಿ ಓರ್ವ ವ್ಯಕ್ತಿ 17 ಎಕರೆ ಜಮೀನು ಪಡೆದುಕೊಂಡಿರುವುದನ್ನು ಛಲವಾದಿ ಬಯಲಿಗೆಳೆದಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
- Harish GR
- Updated on: Sep 4, 2026
- 5:25 pm
ಕೇಂದ್ರ ಸಂಪುಟ ಪುನಾರಚನೆ: ಮೋದಿ ಹೊಸ ಟೀಂನಲ್ಲಿ HDK ಇರಲ್ವಾ? ಮಾನದಂಡ ಏನು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂದಿನ ವಾರವೇ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು 70 ವರ್ಷ ದಾಟಿದ ಸುಮಾರು 14 ಸಚಿವರಿಗೆ ಕೋಕ್ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
- Harish GR
- Updated on: Sep 3, 2026
- 10:22 pm
ಜನರ ಸಮಸ್ಯೆಗಳಿಗೆ ಬುಧವಾರವೇ ಸ್ಪಾಟ್ ಪರಿಹಾರ: ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ ‘ಪ್ರಜಾಸೇವಾ’ ಕಲ್ಪನೆ
ಸರ್ಕಾರಿ ಕಚೇರಿಗಳಲ್ಲಿನ ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸಲು ಕರ್ನಾಟಕ ಸರ್ಕಾರವು ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸಿದೆ. ಸೆಪ್ಟೆಂಬರ್ 5ರಿಂದ ಆರಂಭವಾಗಲಿರುವ ಈ ಯೋಜನೆಯಡಿ, ಪ್ರತಿ ಶನಿವಾರ ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಭೆಗಳು ನಡೆದು, ಅಧಿಕಾರಿಗಳು ನಾಗರಿಕರ ಅರ್ಜಿಗಳನ್ನು ಸ್ವೀಕರಿಸುತ್ತಾರೆ. ತಹಶೀಲ್ದಾರ್, ಎಸಿ ಮತ್ತು ಡಿಸಿ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತದೆ.
- Harish GR
- Updated on: Sep 1, 2026
- 11:16 pm
ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಅಭಿಯಾನ’, ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ
ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ ತ್ವರಿತ ಪರಿಹಾರ ಒದಗಿಸಲು ಕರ್ನಾಟಕ ಸರ್ಕಾರ ಮಹತ್ವದ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡುತ್ತಿದೆ. ಸೆಪ್ಟೆಂಬರ್ 5 ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಅಭಿಯಾನ ಆರಂಭವಾಗಲಿದೆ. ಹಾಗಾದ್ರೆ, 'ಪ್ರಜಾಸೇವಾ ಅಭಿಯಾನ' ಸಭೆಗಳ ಆಯೋಜನೆಯ ಪ್ರಮುಖ ಅಂಶಗಳೇನು? ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಹೇಗೆ ಅರ್ಜಿ ಸಲ್ಲಿಸಬೇಕೆನ್ನುವ ವಿವರ ಇಲ್ಲಿದೆ.
- Harish GR
- Updated on: Aug 31, 2026
- 4:58 pm
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಜನ ಕನ್ನಡಿಗರು, ಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇನ್ನೂ 13 ಜನರು ಪತ್ತೆಯಾಗಿಲ್ಲ. ಅಧಿಕಾರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಸಚಿವಾಯಲದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ರಾಜ್ಯದ ಪ್ರತಿನಿಧಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದ್ದು, ದೆಹಲಿಯಲ್ಲೂ ಚರ್ಚೆ ನಡೆಸಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
- Harish GR
- Updated on: Aug 31, 2026
- 2:00 pm
ಸರಣಿ ಸಾವು, ನಾಪತ್ತೆ ಪ್ರಕರಣ ಹೆಚ್ಚಳ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್: ಟ್ರಕ್ಕಿಂಗ್ ಬಿಗಿಕ್ರಮ
ಪಶ್ಚಿಮ ಘಟ್ಟ ಮತ್ತು ಅರಣ್ಯ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಚಾರಣ ಅವಘಡಗಳ ಬೆನ್ನಲ್ಲೇ ರಾಜ್ಯ ಅರಣ್ಯ ಇಲಾಖೆ ಹೊಸ ಸುರಕ್ಷತಾ ನಿಯಮಾವಳಿಗಳನ್ನು ಜಾರಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆ 39 ಚಾರಣ ಮಾರ್ಗಗಳಿಗೆ ಕ್ಯಾರಿಯಿಂಗ್ ಕೆಪಾಸಿಟಿ, ಜಿಪಿಎಸ್ ಟ್ರ್ಯಾಕಿಂಗ್, ಸ್ಥಳೀಯ ಮಾರ್ಗದರ್ಶಕರು ಮತ್ತು ತುರ್ತು ರಕ್ಷಣಾ ತಂಡಗಳನ್ನು ನಿಯೋಜಿಸಲು ನಿರ್ಧರಿಸಿದೆ.
- Harish GR
- Updated on: Aug 30, 2026
- 5:02 pm
ಕುಡಿಯುವ ನೀರಿನ ಆಸ್ತಿಗಳ ನಿರ್ವಹಣೆಗೆ ಡಿಜಿಟಲ್ ಸ್ಪರ್ಶ: ‘ಜಲ ಆಸ್ತಿ’ ಆ್ಯಪ್ ಲೋಕಾರ್ಪಣೆ
'Jala Asthi' App: ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿ 'ಜಲ ಆಸ್ತಿ' ಆಸ್ತಿ ನಿರ್ವಹಣಾ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಈ ವೆಬ್ ಅಪ್ಲಿಕೇಶನ್, ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಯೋಜನೆಗಳಡಿ ಬರುವ 3 ಲಕ್ಷಕ್ಕೂ ಹೆಚ್ಚು ಕುಡಿಯುವ ನೀರಿನ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
- Harish GR
- Updated on: Aug 27, 2026
- 5:52 pm
ಸೂಕ್ತ ಸ್ಥಾನಮಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ ಲಾಬಿ: ದೆಹಲಿಗೆ ತೆರಳಲು ಸಜ್ಜಾದ 12 ಮಂದಿ
ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗಳಿಗಾಗಿ ಕರ್ನಾಟಕ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದು, ರಾಜ್ಯ ರಾಜಕಾರಣದ ಚಟುವಟಿಕೆಗಳು ಮತ್ತೆ ದೆಹಲಿಗೆ ರವಾನೆಯಾಗುವ ಲಕ್ಷಣಗಳು ಗೋಚರಿಸಿದೆ. ಮತ್ತೊಂದೆಡೆ ಸಿಎಂ ಡಿಕೆಶಿ ದೆಹಲಿ ಭೇಟಿ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು ಈಗ ಕಲಬುರಗಿಯಲ್ಲಿದ್ದೇನೆ, ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.
- Harish GR
- Updated on: Aug 27, 2026
- 7:18 pm
ಮುಂಗಾರು ಮಳೆ ಅಭಾವ: ಕರ್ನಾಟಕದ ಬರೋಬ್ಬರಿ 101 ತಾಲೂಕುಗಳಲ್ಲಿ ಬರದ ಛಾಯೆ!
ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವದಿಂದಾಗಿ 101 ತಾಲೂಕುಗಳು ಬರಪೀಡಿತ ಎಂದು ಘೋಷಿಸಲು ಅರ್ಹವಾಗಿವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದು, ಕೇಂದ್ರದಿಂದ ಎನ್ಡಿಆರ್ಎಫ್ ಪರಿಹಾರಕ್ಕಾಗಿ ಮನವಿ ಮಾಡಲು ಸರ್ಕಾರ ನಿರ್ಧರಿಸಿದೆ. ಬರ ಹಿನ್ನೆಲೆ ಜನರು ಗುಳೆ ಹೋಗುತ್ತಿದ್ದಾರೆ ಎಂಬ ವರದಿ ಇದ್ದು, ಅಂತವರನ್ನು ತಡೆದು ಮನವೊಲಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದವರು ತಿಳಿಸಿದ್ದಾರೆ.
- Harish GR
- Updated on: Aug 27, 2026
- 1:25 pm