ಡಿಕೆ ಶಿವಕುಮಾರ್ ಸರ್ಕಾರದ 2ನೇ ಸಚಿವ ಸಂಪುಟದ ಮಹತ್ವದ ನಿರ್ಣಯಗಳು ಹೀಗಿವೆ
ಮುಖ್ಯಮಂತ್ರಿ ಆದ ಬಳಿಕ ಡಿಕೆ ಶಿವಕುಮಾರ್ ಇಂದು ವಿಧಾನಸೌಧದಲ್ಲಿ ಎರಡನೇ ಸಚಿವ ಸಂಪುಟ ಸಭೆ ಮಾಡಿದರು. ಸಭೆಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಉಪಕರಣ ಖರೀದಿಗೆ 60 ಕೋಟಿ ರೂ, ಬಸ್ ಖರೀದಿಗೆ 235 ಕೋಟಿ ರೂ ಅನುಮೋದನೆ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ಪ್ರಜಾಸೇವೆ ಇಲಾಖೆ ಸ್ಥಾಪನೆಗೆ ಸಚಿವ ಸಂಪುಟ ಅಸ್ತು ಎಂದಿದೆ.
- Harish GR
- Updated on: Jun 20, 2026
- 3:22 pm
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಭರವಸೆ ನೀಡಿ, ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದು, ಅರ್ಹರಿಗೆ ಅನ್ಯಾಯವಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
- Harish GR
- Updated on: Jun 14, 2026
- 11:44 am
ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದು, ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ವೇಳೆ ಬೀದಿ ಬದಿ ತರಕಾರಿ ವ್ಯಾಪಾರಿಗಳೊಂದಿಗೆ ಮಾತನಾಡಿದ ಅವು, ಕೇಂದ್ರ ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿಯನ್ನೂ ನೀಡಿದ್ದಾರೆ.
- Harish GR
- Updated on: Jun 14, 2026
- 11:26 am
ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್
ಕರ್ನಾಟಕದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್ ನಡುವಿನ ಜಟಾಪಟಿಗೆ ಬ್ರೇಕ್ ಹಾಕಲು ಸುಪ್ರೀಂಕೋರ್ಟ್ ಮುಂದಾಗಿದೆ. ಕೆಲ ಕಿವಿ ಮಾತುಗಳನ್ನು ಹೇಳಿ ಇಬ್ಬರು ಅಧಿಕಾರಿಗಳ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ ಈಗ ಸಂಧಾನದ ಹಾದಿ ತೋರಿಸಿದೆ. ಇದಕ್ಕೆ ಸಂಧಾನಕಾರರನ್ನ ಸಹ ನೇಮಕ ಮಾಡಲಾಗಿದೆ.
- Harish GR
- Updated on: Jun 12, 2026
- 9:07 pm
Bidadi Township: ವಿವಾದದ ನಡುವೆಯೂ ಬಿಡದಿ ಟೌನ್ ಶಿಪ್ಗೆ ಅಂತಿಮ ಅಧಿಸೂಚನೆ ಪ್ರಕಟ, ರೈತರ ಮುಂದೆ 2 ಆಯ್ಕೆ
ಬಿಡದಿ ಟೌನ್ ಶಿಪ್ (Bidadi Township) ರಾಜಕೀಯ ಜಟಾಪಟಿ ಹಾಗೂ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ (Karnataka Government) ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಬಿಡದಿ ಟೌನ್ ಶಿಪ್ ವಿವಾದ ಭಾರೀ ಪೈಪೋಟಿಗೆ ಕಾರಣವಾಗಿದೆ. ವಿರೋಧ ಪಕ್ಷದವರು, ರೈತರು ಈ ವಿಚಾರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೂ ಈ ನಡುವೆಯೇ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಮೊದಲ ಹಂತದಲ್ಲಿ 519 ಎಕರೆ ಭೂ ಸ್ವಾಧೀನಕ್ಕೆ ಆದೇಶಿಸಿದೆ.
- Harish GR
- Updated on: Jun 12, 2026
- 4:05 pm
ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ
ಕರ್ನಾಟಕ ಸರ್ಕಾರವು 2026-27ನೇ ಸಾಲಿನ ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳವಿಲ್ಲದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ನೀಟ್ ಮರುಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಭರ್ಜರಿ ರಿಲೀಫ್ ನೀಡಿದೆ. ಖಾಸಗಿ ಕಾಲೇಜುಗಳ ಶುಲ್ಕ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದ್ದು, ಹಳೆಯ ಶುಲ್ಕ ರಚನೆಯೇ ಈ ವರ್ಷವೂ ಅನ್ವಯಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಘೋಷಿಸಿದ್ದಾರೆ.
- Harish GR
- Updated on: Jun 12, 2026
- 3:20 pm
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಜನಜಂಗುಳಿಯ ನಡುವೆ ಖರ್ಗೆ ಅವರು ಸಹಿ ಮಾಡಿ ಪ್ರಮಾಣಪತ್ರ ಪಡೆದರು.
- Harish GR
- Updated on: Jun 12, 2026
- 2:26 pm
ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಬೆಂಗಳೂರಿನಲ್ಲಿ ಕಸದ ಟೆಂಡರ್ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ ರೂಪಾಯಿ ಕಸದ ಟೆಂಡರ್ ನಲ್ಲಿ 10 ಸಾವಿರ ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.
- Harish GR
- Updated on: Jun 10, 2026
- 3:04 pm
ಕಸದ ಟೆಂಡರ್ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್ಗೆ ಬಿಜೆಪಿ ನಿಯೋಗದಿಂದ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ 36 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು ನೀಡಿದ್ದು, ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿದೆ. ಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಇಬ್ಬರ ಕೈವಾಡವೂ ಇದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
- Harish GR
- Updated on: Jun 10, 2026
- 2:36 pm
ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪಾರದರ್ಶಕವಾಗಿ, ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕ ಕುಂದುಕೊರತೆಗಳ ನಿವಾರಣೆ, ಸಿಎಸ್ಆರ್ ನಿಧಿಗಳ ಸದ್ಬಳಕೆ ಮತ್ತು ಶಿಕ್ಷಣಕ್ಕೆ ಒತ್ತು ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೊಸ ನೀತಿಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ.
- Harish GR
- Updated on: Jun 4, 2026
- 3:21 pm
ಪದತ್ಯಾಗಕ್ಕೆ ಬಂಪರ್ ಗಿಫ್ಟ್: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್
ಯಾವುದೇ ತಂಟೆ ತಗಾದೆ ತೆಗೆಯದೇ ಒಂದೇ ಮಾತಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಟ್ಟ ಸಿದ್ದರಾಮಯ್ಯನವಿರಗೆ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದೆ. ರಾಜ್ಯಸಭೆ ಆಫರ್ ನಿರಾಕರಿಸಿದ್ದ ಸಿದ್ದರಾಮಯ್ಯನವರಿಗೆ ಎಐಸಿಸಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೆ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಏನಿದು ಹುದ್ದೆ? ಎಷ್ಟು ಮಹತ್ವ ಹೊಂದಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Harish GR
- Updated on: Jun 2, 2026
- 10:59 pm
ಡಿಕೆ ಶಿವಕುಮಾರ್ ಸಂಪುಟಕ್ಕೆ ಹೈಕಮಾಂಡ್ನಿಂದ ‘ಏಜ್ ಬೇಸ್ಡ್ ಫಾರ್ಮುಲಾ’: ಸಚಿವಾಕಾಂಕ್ಷಿಗಳಲ್ಲಿ ಢವಢವ
ಡಿಕೆ ಶಿವಕುಮಾರ್ ನೂತನ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ‘ವಯೋಮಿತಿ ಸೂತ್ರ’ ಪ್ರಕಟಿಸಿದ್ದು, 40 ವರ್ಷದೊಳಗಿನವರಿಗೆ 10 ಸ್ಥಾನ ಹಾಗೂ ಹಿರಿಯರಿಗೆ 20 ಸ್ಥಾನಗಳನ್ನು ಹಂಚಿಕೆ ಮಾಡಲು ಮುಂದಾಗಿದೆ. ಹೈಕಮಾಂಡ್ನ ಈ ‘ಏಜ್ ಬೇಸ್ಡ್ ಫಾರ್ಮುಲಾ’ ಈಗ ಸಚಿವಾಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ.
- Harish GR
- Updated on: Jun 2, 2026
- 1:00 pm