ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ.
ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019 ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಕಾವೇರಿ ನೀರು ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್, ಮೇಕೆದಾಟು ಡಿಪಿಆರ್ ವಾಪಸ್
ಬರಗಾಲದ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಲಾಗಿದೆ. ಇದರ ಮಧ್ಯೆ ಇದೀಗ ತಮಿಳುನಾಡು ಹಾಗೂ ಕರ್ನಾಟಕದ ನಡುವಿನ ವಿವಾದದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR)ಯನ್ನು ವಾಪಸ್ ಕಳುಹಿಸಿದೆ. ಇದರಿಂದ ಕರ್ನಾಟಕಕ್ಕಿಂದು ಡಬಲ್ ಆಘಾತವಾಗಿದೆ. ಅಷ್ಟಕ್ಕೂ ಸಿಡಬ್ಲ್ಯೂಸಿ ಹೇಳಿದ್ದೇನು? ಡಿಪಿಆರ್ ಏಕೆ ವಾಪಸ್ ಕಳುಹಿಸಿದ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Harish GR
- Updated on: Jul 30, 2026
- 7:36 pm
‘ಪ್ರಧಾನಿ ಸರ್ ನೀವು ತಕ್ಷಣವೇ ಹಸ್ತಕ್ಷೇಪ ಮಾಡಿ’: ಮೇಕೆದಾಟು ಯೋಜನೆ ವಿರೋಧಿಸಿ ವಿಜಯ್ ಮೋದಿಗೆ ಪತ್ರ
ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಪತ್ರ ಬರೆದಿದ್ದಾರೆ. ಕೆಳಪಾತ್ರದ ರಾಜ್ಯಗಳ ಒಪ್ಪಿಗೆ ಇಲ್ಲದೆ ಯೋಜನೆ ಕೈಗೆತ್ತಿಕೊಳ್ಳುವುದು ಸುಪ್ರೀಂ ತೀರ್ಪಿನ ಉಲ್ಲಂಘನೆ ಎಂದು ವಾದಿಸಿದ್ದಾರೆ. ಇದೀಗ ಸಂಬಂಧ ಪ್ರಧಾನಿ ಮೋದಿ ಅವರು ಮಧ್ಯಸ್ಥಿತಿಗೆ ವಹಿಸಬೇಕು ಎಂದು ಹೇಳಿದ್ದಾರೆ.
- Harish GR
- Updated on: Jul 28, 2026
- 3:34 pm
ಆರ್ಎಸ್ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ: ಸಂವಾದದಲ್ಲಿ ಭಾಗಿಯಾಗಲಿರುವ ಪ್ರಿಯಾಂಕ್ ಖರ್ಗೆ
ಆರ್ಎಸ್ಎಸ್ ನೋಂದಣಿ ಅಭಿಯಾನವು ರಾಷ್ಟ್ರಮಟ್ಟದಲ್ಲಿ ಚುರುಕುಗೊಂಡಿದೆ. ಇದರ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ ಸಮಾಜವಾದಿ ಸಂಗಮ್ ವತಿಯಿಂದ "ಆರ್ಎಸ್ಎಸ್ ನೋಂದಣಿ ಯಾಕೆ ಅಗತ್ಯ?" ಎಂಬ ಸಂವಾದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಎಸ್ಎಸ್ ಹಣಕಾಸು ಮೂಲಗಳ ಕುರಿತು ಚರ್ಚಿಸಲಿದ್ದಾರೆ.
- Harish GR
- Updated on: Jul 28, 2026
- 12:23 pm
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಜಲಶಕ್ತಿ ಸಚಿವಾಲಯ
ಮೇಕೆದಾಟು ಯೋಜನೆ ಕುರಿತು ಕರ್ನಾಟಕಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಯೋಜನೆ ಜಾರಿಗೊಳಿಸಲು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿಂದು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸಂಸದ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದಾರೆ.
- Harish GR
- Updated on: Jul 27, 2026
- 6:56 pm
‘ರಾಜ್ಯದಲ್ಲಿ ಬರದ ನಡುವೆ ಕಾಂಗ್ರೆಸ್ ನಾಯಕರ ಜಾಲಿ ಟ್ರಿಪ್’: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು
Karnataka Politics: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಆರೋಪಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿವೆ. ರೈತರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ತಕ್ಷಣವೇ ಬರ ಪೀಡಿತ ಪ್ರದೇಶಗಳನ್ನು ಘೋಷಿಸಿ ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಪರಿಹಾರ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
- Harish GR
- Updated on: Jul 22, 2026
- 3:02 pm
ಕಾವೇರಿ ಜಲ ವಿವಾದ: ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ; ಜುಲೈ 22ರಂದು CWMA ಮೀಟಿಂಗ್
Cauvery Water Dispute: ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಮತ್ತೊಂದೆಡೆ ತಮಿಳುನಾಡಿನ ಒತ್ತಾಯದ ಮೇರೆಗೆ ಜುಲೈ 22 ರಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮಹತ್ವದ ಸಭೆ ನಿಗದಿಯಾಗಿದೆ.
- Harish GR
- Updated on: Jul 20, 2026
- 7:44 pm
ಚೆನ್ನಮ್ಮನ ಮೇಲೆ ಆಸಿಡ್ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ ಸಂಬಂಧಿ ಲೋಕೇಶ್ (ಬಸವೇಗೌಡರ ಮಗ) ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದ. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಡೆದಿದ್ದ ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇನ್ನು ಚೆನ್ನಮ್ಮನವರಿಗೆ ಆಸಿಡ್ ಅಟ್ಯಾಕ್ ಆದಾಗ ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಚಂದ್ರಮೌಳಿಯವರು ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Harish GR
- Updated on: Jul 18, 2026
- 9:11 pm
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೆ.ಹೆಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಜಿಪಿಎಸ್ ಆಧಾರಿತ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಗಿ, ಜೋಳ ಮತ್ತು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಲಾಗಿದ್ದು, ರಾಗಿಗೆ ಹೆಚ್ಚಿದ ಬೇಡಿಕೆಯು ರೈತರಿಗೆ ಹೆಚ್ಚಿನ ಲಾಭ ತಂದುಕೊಡಲಿದೆ.
- Harish GR
- Updated on: Jul 16, 2026
- 6:50 pm
ದಸರಾ ಕಂಬಳಕ್ಕೆ 8 ಕೋಟಿ ಕೊಡೋದಾದ್ರೆ, ಕರಾವಳಿ ಕಂಬಳಕ್ಕೆ 25 ಲಕ್ಷ ಕೊಡಿ: ಸುನೀಲ್ ಕುಮಾರ್ ಆಗ್ರಹ
ಮೈಸೂರು ದಸರಾ ಕಂಬಳಕ್ಕೆ 8 ಕೋಟಿ ರೂ. ಖರ್ಚು ಮಾಡುವ ಬದಲು, ದಕ್ಷಿಣ ಕನ್ನಡ ಮತ್ತು ಉಡುಪಿಯ 20ಕ್ಕೂ ಹೆಚ್ಚು ಕರಾವಳಿ ಕಂಬಳಗಳಿಗೆ ತಲಾ 25 ಲಕ್ಷ ರೂ. ಅನುದಾನ ನೀಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
- Harish GR
- Updated on: Jul 16, 2026
- 2:55 pm
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ: ಅಡಿಂಜೆಯಲ್ಲಿ ಪ್ರಿಂಟಿಂಗ್ ಮೆಷಿನ್ ಜಪ್ತಿ
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಬೃಹತ್ ನಕಲಿ ನೋಟು ಮುದ್ರಣ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಏಳು ಆರೋಪಿಗಳನ್ನು ಬಂಧಿಸಲಾಗಿದ್ದು, ನೋಟು ಮುದ್ರಣ ಯಂತ್ರ ಹಾಗೂ ಕಾಗದದ ಬಂಡಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿರ್ಜನ ಪ್ರದೇಶದ ಬಾಡಿಗೆ ಮನೆಯಲ್ಲಿ ಈ ದಂಧೆ ನಡೆಯುತ್ತಿತ್ತು.
- Harish GR
- Updated on: Jul 16, 2026
- 1:14 pm
‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಸಿಎಂ ಡಿಕೆ ಶಿವಕುಮಾರ್
ಬಿಡದಿ ಟೌನ್ಶಿಪ್ ಯೋಜನೆಯು ಹಿಂದಿನ ಸರ್ಕಾರಗಳಿಂದ ಮುಂದುವರಿದ ಪ್ರಕ್ರಿಯೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿಯ ಘಟನೆ ರಾಜಕೀಯ ಪ್ರೇರಿತ ಎಂದಿರುವ ಅವರು, ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಅವಧಿಯ ಮಾರ್ಗದರ್ಶನವನ್ನೂ ಉಲ್ಲೇಖಿಸಿದ್ದಾರೆ.
- Harish GR
- Updated on: Jul 15, 2026
- 3:43 pm
CWRC ಸಭೆ: ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ಪಟ್ಟು; ಸಾಧ್ಯವೇ ಇಲ್ಲ ಎಂದ ಕರ್ನಾಟಕ
Cauvery Water Regulation Committee meeting: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡು ನೀರಿಗಾಗಿ ಪಟ್ಟು ಹಿಡಿದರೆ, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಕ್ ಆಗಿ ಉತ್ತರಿಸಿದೆ. ತಮಿಳುನಾಡಲ್ಲಿ ಮಳೆ ಬೀಳಲಿದೆ, ಆದ್ರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ.
- Harish GR
- Updated on: Jul 15, 2026
- 3:17 pm