ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಬೆಂಗಳೂರಿನಲ್ಲಿ ಕಸದ ಟೆಂಡರ್ನಲ್ಲಿ ಬಾರೀ ಅಕ್ರಮ ನಡೆದಿದೆ ಎಂದು ವಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದ್ದು, ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ದೂರು ನೀಡಿದೆ. ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಇಂದು (ಜೂನ್ 10) ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದು, ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. 36 ಸಾವಿರ ಕೋಟಿ ರೂಪಾಯಿ ಕಸದ ಟೆಂಡರ್ ನಲ್ಲಿ 10 ಸಾವಿರ ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ.
- Harish GR
- Updated on: Jun 10, 2026
- 3:04 pm
ಕಸದ ಟೆಂಡರ್ನಲ್ಲಿ ಅಕ್ರಮ ಆರೋಪ: ರಾಜ್ಯಪಾಲ ಗೆಹ್ಲೋಟ್ಗೆ ಬಿಜೆಪಿ ನಿಯೋಗದಿಂದ ದೂರು
ಬೆಂಗಳೂರಿನ ಕಸದ ಟೆಂಡರ್ನಲ್ಲಿ 36 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು ನೀಡಿದ್ದು, ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿದೆ. ಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಇಬ್ಬರ ಕೈವಾಡವೂ ಇದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
- Harish GR
- Updated on: Jun 10, 2026
- 2:36 pm
ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪಾರದರ್ಶಕವಾಗಿ, ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕ ಕುಂದುಕೊರತೆಗಳ ನಿವಾರಣೆ, ಸಿಎಸ್ಆರ್ ನಿಧಿಗಳ ಸದ್ಬಳಕೆ ಮತ್ತು ಶಿಕ್ಷಣಕ್ಕೆ ಒತ್ತು ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೊಸ ನೀತಿಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ.
- Harish GR
- Updated on: Jun 4, 2026
- 3:21 pm
ಪದತ್ಯಾಗಕ್ಕೆ ಬಂಪರ್ ಗಿಫ್ಟ್: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್
ಯಾವುದೇ ತಂಟೆ ತಗಾದೆ ತೆಗೆಯದೇ ಒಂದೇ ಮಾತಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಟ್ಟ ಸಿದ್ದರಾಮಯ್ಯನವಿರಗೆ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದೆ. ರಾಜ್ಯಸಭೆ ಆಫರ್ ನಿರಾಕರಿಸಿದ್ದ ಸಿದ್ದರಾಮಯ್ಯನವರಿಗೆ ಎಐಸಿಸಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೆ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಏನಿದು ಹುದ್ದೆ? ಎಷ್ಟು ಮಹತ್ವ ಹೊಂದಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Harish GR
- Updated on: Jun 2, 2026
- 10:59 pm
ಡಿಕೆ ಶಿವಕುಮಾರ್ ಸಂಪುಟಕ್ಕೆ ಹೈಕಮಾಂಡ್ನಿಂದ ‘ಏಜ್ ಬೇಸ್ಡ್ ಫಾರ್ಮುಲಾ’: ಸಚಿವಾಕಾಂಕ್ಷಿಗಳಲ್ಲಿ ಢವಢವ
ಡಿಕೆ ಶಿವಕುಮಾರ್ ನೂತನ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ‘ವಯೋಮಿತಿ ಸೂತ್ರ’ ಪ್ರಕಟಿಸಿದ್ದು, 40 ವರ್ಷದೊಳಗಿನವರಿಗೆ 10 ಸ್ಥಾನ ಹಾಗೂ ಹಿರಿಯರಿಗೆ 20 ಸ್ಥಾನಗಳನ್ನು ಹಂಚಿಕೆ ಮಾಡಲು ಮುಂದಾಗಿದೆ. ಹೈಕಮಾಂಡ್ನ ಈ ‘ಏಜ್ ಬೇಸ್ಡ್ ಫಾರ್ಮುಲಾ’ ಈಗ ಸಚಿವಾಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ.
- Harish GR
- Updated on: Jun 2, 2026
- 1:00 pm
ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?
ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ನಲ್ಲಿ ಭರಪೂರ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತಾ ಸಭೆ ನಡೆಸಲಾಗಿದೆ. ಶಾಸಕಾಂಗ ಪಕ್ಷದ ಸಭೆ ನಾಳೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
- Harish GR
- Updated on: May 29, 2026
- 4:15 pm
ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ
ಪಂಜಾಬ್, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಈ ಹಿಂದೆ ತೆಗೆದುಕೊಂಡಿದ್ದ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಅತ್ಯಂತ ಚಾಣಾಕ್ಷತನದಿಂದ ಬಗೆಹರಿಸಿದೆ. ಸಿದ್ದರಾಮಯ್ಯನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆ ಜೊತೆಗೆ, ಎಲ್ಲ ಸಮುದಾಯಗಳಿಗೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡುವ ನಿರ್ಧಾರ ಮಾಡಿದೆ. ಯಾವುದೇ ರೀತಿಯಲ್ಲಿಯೂ ತಮ್ಮ ನಿರ್ಧಾರ ವೋಟ್ ಬ್ಯಾಂಕ್ ಅಥವಾ ಪಕ್ಷ ನಾಯಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ತಂತ್ರ ರೂಪಿಸಿದೆ.
- Harish GR
- Updated on: May 28, 2026
- 4:21 pm
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯು ಬೆಂಬಲಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಿವಾಸದ ಮುಂದೆ ಜಮಾಯಿಸಿದ ಅಭಿಮಾನಿಗಳು ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಶಕ್ತಿ ಎಂದು ಬಣ್ಣಿಸಿರುವ ಅಹಿಂದ ನಾಯಕರು, ಅವರ ರಾಜೀನಾಮೆಯಿಂದ ಜೆಡಿಎಸ್ಗೆ ಆದ ಗತಿಯೇ ಕಾಂಗ್ರೆಸ್ಗೂ ಆಗಲಿದೆ ಎಂದು ಎಚ್ಚರಿಸಿದ್ದಾರೆ.
- Harish GR
- Updated on: May 27, 2026
- 8:13 pm
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ ಎನ್ನಲಾಗುತ್ತಿದೆಯಾದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತು ಇನ್ನೂ ಮೌನ ಮುರಿದಿಲ್ಲ. ಈ ನಡುವೆ ತಮ್ಮ ಆಪ್ತ ವರ್ಗದ 30ಕ್ಕೂ ಹೆಚ್ಚು ಶಾಸಕರೊಂದಿಗೆ ಅವರು ಸಭೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಈ ವೇಳೆ ಹೈಕಮಾಂಡ್ನ ರಾಜ್ಯ ಸಭೆ ಆಫರ್ ಬಗ್ಗೆಯೂ ತಿಳಿಸಿರುವ ಸಿಎಂ, ತಮಗೆ ರಾಜ್ಯ ರಾಜಕಾರಣದಲ್ಲಿಯೇ ಇರುವ ಇಚ್ಛೆ ಬಗ್ಗೆಯೂ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
- Harish GR
- Updated on: May 27, 2026
- 3:57 pm
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್ಗೆ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅವರ ನಿವಾಸ ಕಾವೇರಿ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬಂದಿರುವ ಅಭಿಮಾನಿಗಳು, ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದಿದ್ದಾರೆ. ಪಕ್ಷದ ಅಧಿಕೃತ ನಿರ್ಧಾರಕ್ಕಾಗಿ ಕಾಯುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
- Harish GR
- Updated on: May 27, 2026
- 3:45 pm
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ
ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿದೆ.
- Harish GR
- Updated on: May 27, 2026
- 3:42 pm
ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ದೆಹಲಿಯಲ್ಲಿ ಹೈಕಮಾಂಡ್ ಸಭೆಯ ಬಳಿಕ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಎಲ್ಲವನ್ನೂ ನಾಳೆ ಅಧಿಕೃತವಾಗಿ ಮಾತನಾಡುವುದಾಗಿ ತಿಳಿಸಿದ್ದಾರೆ. ಉಪಾಹಾರ ಕೂಟದ ನಂತರ ಸಿದ್ದರಾಮಯ್ಯ ಮಾಧ್ಯಮಗೋಷ್ಠಿ ಕರೆಯುವ ಸಾಧ್ಯತೆ ಇದೆ.
- Harish GR
- Updated on: May 27, 2026
- 12:36 pm