ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್
ಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಲಕೋಟೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ.ಜಿ.ಸಿ.ಚಂದ್ರಶೇಖರ್ ಸಹ ಈ ವೇಳೆ ಉಪಸ್ಥಿತರಿದ್ದರು. ಮಳೆ ಇಲ್ಲದೆ ಎಷ್ಟು ಬೆಳೆ ಹಾನಿಯಾಗಿದೆ, ಜಮೀನುಗಳ ಪರಿಸ್ಥಿತಿ ಹೇಗಿದೆ ಮತ್ತು ರೈತರ ಸ್ಥಿತಿಗತಿಗಳನ್ನು ಅವರು ವೀಕ್ಷಿಸಿದರು.
- Iranna Basava
- Updated on: Sep 4, 2026
- 3:51 pm
ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ: ಅದ್ಧೂರಿ ಆಚರಣೆಗೆ ಸಿಎಂ ಡಿಕೆಶಿ ಪ್ಲ್ಯಾನ್
ಮೈಸೂರು ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ. ದಕ್ಷಿಣ ಭಾರತದ ಎಲ್ಲ ಸಿಎಂಗಳಿಗೆ ಆಹ್ವಾನ, ಏರ್ಶೋ, ಡ್ರೋನ್ ಶೋ, ಸೇನಾಪಡೆಗಳ ಭಾಗವಹಿಸುವಿಕೆ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಆಯೋಜಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- Iranna Basava
- Updated on: Sep 4, 2026
- 2:21 pm