ಸರ್ಕಾರಿ ವಾಹನದಲ್ಲೇ ರನ್ಯಾ ಚಿನ್ನ ಸಾಗಾಟ: ತನಿಖೆ ವೇಳೆ ಬಯಲಾಯ್ತು ಸ್ಪೋಟಕ ಮಾಹಿತಿ
ಡಿಆರ್ಐ ಅಧಿಕಾರಿಗಳು ಚಿನ್ನ ಕಳ್ಳಸಾಗಾಣಿಕೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂದು ಪತ್ತೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರೋಟೋಕಾಲ್ ಸಿಬ್ಬಂದಿಗೆ ನೋಟಿಸ್ ಜಾರಿಯಾಗಿದೆ.ರನ್ಯಾ ರಾವ್ ಅವರಿಗೆ ಇಡಿ ಮತ್ತು ಸಿಬಿಐ ತನಿಖೆ ಎದುರಾಗುವ ಸಾಧ್ಯತೆ ಇದೆ.
- Jagadisha B
- Updated on: Mar 15, 2025
- 10:24 am
ಮಹಿಳೆಯೊಂದಿಗೆ ಕಿರಿಕ್: ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್ರು
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳನ್ನು ತಡೆಯಲು ಪೊಲೀಸರು ಹೊಸ ತಂತ್ರ ಅನುಸರಿಸುತ್ತಿದ್ದಾರೆ. ರೋಡ್ ರೇಜ್ನಲ್ಲಿ ಭಾಗಿಯಾದವರನ್ನು ಬಂಧಿಸಿ, ಘಟನೆಯ ಮೊದಲು ಮತ್ತು ನಂತರದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಆರೋಪಿಗಳ ಮರ್ಯಾದೆ ತೆಗೆಯುತ್ತಿದ್ದಾರೆ. ಇತ್ತೀಚೆಗೆ ಕೆ.ಆರ್.ಪುರಂನಲ್ಲಿ ನಡೆದ ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
- Jagadisha B
- Updated on: Mar 14, 2025
- 2:51 pm
ವಕೀಲೆ ಜೀವಾ ಆತ್ಮಹತ್ಯೆ: Dysp ಕನಕಲಕ್ಷ್ಮಿ ಬಂಧನಕ್ಕೆ ಸಿಕ್ಕ ಮಹತ್ವದ ಸಾಕ್ಷ್ಯ ಏನು ಗೊತ್ತಾ?
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ. ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಿದ್ದ ವೀಡಿಯೋ ದೃಶ್ಯಗಳು ಬಂಧನಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಜೀವಾ ಡೆತ್ ನೋಟ್ನಲ್ಲಿ ಆರೋಪಿಸಿದ್ದ ವಿಷಯಗಳು ದೃಢಪಟ್ಟಿವೆ. 15ಕ್ಕೂ ಹೆಚ್ಚು ಜನ ಕನಕಲಕ್ಷ್ಮಿ ಪರವಾಗಿ ಹೇಳಿಕೆ ನೀಡಿದ್ದಾರೆ. ಆದರೆ, ವಿಡಿಯೋದಲ್ಲಿನ ಸಾಕ್ಷ್ಯಗಳು ಕನಕಲಕ್ಷ್ಮಿ ವಿರುದ್ಧವಾಗಿರುವುದು ಪತ್ತೆಯಾಗಿದೆ.
- Jagadisha B
- Updated on: Mar 12, 2025
- 3:09 pm
ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ: ಡೆತ್ನೋಟ್ನಲ್ಲೇನಿದೆ?
ಕರ್ನಾಟಕ ರಾಜ್ಯ ಬಿಜೆಪಿಯ ಮಹಿಳಾ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಿವಾಸದಲ್ಲೇ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನವೇ ಅವರು ಡೆತ್ನೊಟ್ ಬರೆದಿಟ್ಟಿದ್ದಾರೆ. ಹಾಗಾದ್ರೆ, ಮಂಜುಳಾ ಬರೆದಿಟ್ಟ ಡೆತ್ನೋಟ್ನ್ಲಲೇನಿದೆ? ಮಂಜುಳಾ ಏಕೆ ಈ ನಿರ್ಧಾರ ಕೈಗೊಂಡರು? ಆತ್ಮಹತ್ಯೆಗೆ ಕಾರಣವೇನು?
- Jagadisha B
- Updated on: Mar 11, 2025
- 7:08 pm
ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್!
ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಐಡಿ ಡಿವೈಎಸ್ಪಿ ಕಿರುಕುಳದಿಂದಲೇ ವಕೀಲೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರ ಬಂಧನವಾಗಿದೆ. ಈ ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.
- Jagadisha B
- Updated on: Mar 11, 2025
- 3:23 pm
ತಲೆಕೂದಲು ಜೋಪಾನ: ಬೆಂಗಳೂರಲ್ಲಿ ಅದನ್ನೂ ಬಿಡದೆ ಕದ್ದೊಯ್ದ ಕಳ್ಳರು
ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ 27 ಮೂಟೆ ಕೂದಲು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಚೀನಾ, ಬರ್ಮಾ, ಹಾಂಕಾಂಗ್ಗೆ ರಫ್ತು ಮಾಡಲು ಸಂಗ್ರಹಿಸಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೂದಲನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
- Jagadisha B
- Updated on: Mar 6, 2025
- 2:53 pm
ಬೆಂಗಳೂರು: ಯುವತಿ ಜತೆ ಲಿವ್ ಇನ್ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಉತ್ತರ ಪ್ರದೇಶದ ಯುವಕನೊಬ್ಬ ಬೆಂಗಳೂರಿನಲ್ಲಿ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ಬಗ್ಗೆ ಅನೇಕ ಅನುಮಾನಗಳು ವ್ಯಕ್ತವಾಗಿವೆ. ಮೃತ ವ್ಯಕ್ತಿಯನ್ನು ಮಯಾಂಕ್ ರಜನಿ ಎಂದು ಗುರುತಿಸಲಾಗಿದ್ದು, ಆತನ ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
- Jagadisha B
- Updated on: Mar 6, 2025
- 9:15 am
ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎಲ್ಲೆಲ್ಲಿ ದಾಳಿ ನಡೆದಿದೆ, ಯಾವೆಲ್ಲ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.
- Jagadisha B
- Updated on: Mar 6, 2025
- 9:08 am
ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ: ಕಚೇರಿಗೆ ಕರೆಸಿ ಮನಬಂದಂತೆ ಹಲ್ಲೆ
ನೋಡಿ, ಇಲ್ನೋಡಿ, ಬಾಲಕಿಯ ಬೆನ್ನು, ಕಪಾಳಕ್ಕೆ ಹೊಡೀತಿದ್ದಾನೆ. ತಲೆ ಜುಟ್ಟು ಹಿಡಿದು ಎಳೆಯುತ್ತಿದ್ದಾನೆ. ಮೇಲೇಳಲು ಯತ್ನಿಸ್ತಿರೋ ಬಾಲಕಿಯನ್ನು ಕಾಲಿನಿಂದ ಒದೀತಿದ್ದಾನೆ. ಈ ಎಲ್ಲ ದೃಶ್ಯಗಳು ಬೆಂಗಳೂರಿನ ಮದರಸಾವೊಂದರಲ್ಲಿ ಬಾಲಕಿಯರ ಮೆಲೆ ಪಾಪಿಯೊಬ್ಬ ಕ್ರೌರ್ಯ ಮೆರೆಯುತ್ತಿರುವುದಕ್ಕೆ ಸಂಬಂಧಿಸಿದ್ದಾಗಿದೆ. ಸದ್ಯ ಈ ಸಿಟಿಟಿವಿ ದೃಶ್ಯ ವೈರಲ್ ಆಗುತ್ತಿದೆ.
- Jagadisha B
- Updated on: Feb 20, 2025
- 12:41 pm
ಬೆಂಗಳೂರು: ಅತ್ತೆಯನ್ನು ಸಾಯಿಸಲು ಮಾತ್ರೆ ಹೇಳಿ ಡಾಕ್ಟ್ರೇ: ವೈದ್ಯನಿಗೆ ಸೊಸೆ ಸಂದೇಶ
ಮಹಿಳೆಯೊಬ್ಬರು ತನ್ನ ಅತ್ತೆಯನ್ನು ಕೊಲ್ಲಲು ಮಾತ್ರೆಗಳ ಬಗ್ಗೆ ಹೇಳಿ ಅಂತ ಬೆಂಗಳೂರಿನ ವೈದ್ಯರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಈ ಘಟನೆಯಿಂದ ವೈದ್ಯರು ಆಘಾತಕ್ಕೊಳಗಾಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಮಹಿಳೆ ಮೆಸೆಜ್ ಡಿಲೀಟ್ ಮಾಡಿ, ವೈದ್ಯರ ದೂರವಾಣಿ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದಾರೆ. ವೈದ್ಯರು ಸಾಮಾಜಿಕ ಮತ್ತು ರಾಜಕೀಯವಾಗಿ ಸಕ್ರಿಯರಾಗಿದ್ದು, ಇದು ಷಡ್ಯಂತ್ರವೂ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
- Jagadisha B
- Updated on: Feb 19, 2025
- 10:42 am
10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ?
ಟೈಮ್ ಕೆಟ್ಟರೆ ಹಗ್ಗ ಕೂಡ ಹಾವಾಗುತ್ತೆ ಎನ್ನುವ ಮಾತು ಇವನಿಗೆ ಪಕ್ಕ ಸೂಟ್ ಆಗುತ್ತೆ. ಅರೆಸ್ಟ್ ಆಗಿ ಬೇಲ್ ಪಡೆದು ನಂತರ ಕೋರ್ಟ್ ಕಡೆ ಮುಖ ಹಾಕಿರಲಿಲ್ಲ. ಪೊಲೀಸರಿಗೆ ಹುಡುಕಿ ಹುಡುಕಿ ಸಾಕಾಗಿತ್ತು. ಆದರೆ ಇದೀಗ ಕೊನೆಗೆ ತಾನೇ ಹೋಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಐನಾತಿ ಚೋರ AI ಕ್ಯಾಮರಾದಿಂದ ಸಿಕ್ಕಿಬಿದ್ದಿದ್ದಾನೆ. ಹಾಗಾದ್ರೆ, ಏನಿದು ಪ್ರಕರಣ? ಯಾರದು ಐನಾತಿ ಚೋರಾ? ಸಿಕ್ಕಿಬಿದ್ದಿದ್ಹೇಗೆ ಎನ್ನುವ ವಿವರ ಇಲ್ಲಿದೆ.
- Jagadisha B
- Updated on: Feb 18, 2025
- 10:14 pm
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಪ್ರಮುಖ ಪ್ರದೇಶವಾದ ಅರಮನೆ ಮೈದಾನದಲ್ಲಿ ಭಾನುವಾರ ಮಧ್ಯಾನ್ನ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ಅವಘಡ ಸಂಭವಿಸಿಲ್ಲ ಎನ್ನಲಾಗಿದೆ. ಬೆಂಕಿಯ ತೀವ್ರತೆಯಿಂದ ಸ್ಥಳದಲ್ಲಿ ದಟ್ಟ ಹೋಗಿ ಆವರಿಸಿತ್ತು.
- Jagadisha B
- Updated on: Feb 16, 2025
- 4:51 pm